Homeಕರ್ನಾಟಕಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

- Advertisement -
- Advertisement -

ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ವೈರಸ್‌ನಿಂದ ಉಂಟಾದ ಸಂಕಷ್ಟಗಳು ಮುಗಿಯುತ್ತಿವೆ ಎನ್ನುವಾಗಲೇ ಮತ್ತೆ ಸೋಂಕಿತ ಪ್ರಕರಣಗಳ ಸಂಖ್ಯೆ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಮಹಾರಾಷ್ಟ್ರದ ಹಲವು ಜಿಲ್ಲಾಕೇಂದ್ರಗಳು ಮತ್ತೆ ಲಾಕ್‌ಡೌನ್‌ ಆಗುತ್ತಿವೆ. ದೇಶದಲ್ಲಿ ಒಂದೇ ದಿನ ೪೦ ಸಾವಿರ ಪ್ರಕರಣಗಳು ದಾಖಲಾಗಿವೆ. ಇದು ಸರ್ಕಾರಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ನಡುವೆ, ರಾಜ್ಯದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಸಂಖ್ಯೆ ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ, ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯ ಮಾಡಬೇಕಾಗಿದೆ ಎಂಬ ಕುಂಟು ನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಸಿಎಂ ಯಡಿಯೂರಪ್ಪನವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲವೇ? ಯಾಕೆ ನಿಯಂತ್ರಣ ತಪ್ಪಿದೆ? ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ: ಸಿದ್ದರಾಮಯ್ಯ

ಕೊರೊನಾ ನಿರ್ವಹಣೆಗಾಗಿ 5,372 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ ಎಂದು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ. ಆದರೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, 2ನೇ ಅಲೆಯ ಆತಂಕ ಹೆಚ್ಚಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 1,488 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 11,359 ಜನರು ನಿನ್ನೆ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 341 ಜನರು ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರೊಂದರಲ್ಲೇ ನಿನ್ನೆ 925 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...