Homeಅಂಕಣಗಳುಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

ಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

- Advertisement -
- Advertisement -

ಸದನದಲ್ಲಿ ಕುಮಾರಣ್ಣನ ಕೂಗಾಟ ನೋಡಿದ ಕರ್ನಾಟಕದ ಜನ ಲೊಚಗರಿದು ಈ ಮಟ್ಟಕ್ಕೆ ಇಳಿಯಿತೇ ಕರ್ನಾಟಕದ ಸಂಸ್ಕೃತಿಯ ಪ್ರತೀಕವಾದ ವಿಧಾನಸೌಧದ ವಾಗ್ವಾದ ಎಂದು ಉದ್ಘಾರ ತೆಗೆದಿದ್ದಾರಲ್ಲಾ. ಕುಮಾರಣ್ಣ ಕೆರಳಿರವುದಕ್ಕೆ ಹಲವಾರು ಕಾರಣಗಳಿವೆ. ಮುಖ್ಯವಾಗಿ ಅವರ ಪರಮವೈರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾದದು. ಎರಡನೆಯದು ತಮ್ಮ ಅಭಿಮಾನಿಗಳಂತಿದ್ದ ನಾಲ್ಕು ಜನ ಹಿಂಬಾಲಕರು ಈಗ ಸಿದ್ದು ಜೊತೆ ಇರುವುದಲ್ಲದೆ, ಅದರಲ್ಲೊಬ್ಬರು ಕೃಷಿಮಂತ್ರಿಯಾಗಿರುವುದು. ಸಾಮಾನ್ಯ ವ್ಯಕ್ತಿಯಾದ ಕುಮಾರಣ್ಣನಿಗೆ ಇಂತಹ ಅನಾಹುತಗಳನ್ನು ಸಹಿಸಲು ಸಾಧ್ಯವೇ? ಹಾಗಾಗಿ ಆ ಕೃಷಿಮಂತ್ರಿಯ ಕ್ಷೇತ್ರಕ್ಕೆ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ಸಾರಿಗೆ ನೌಕರನ ಸಮಸ್ಯೆಯನ್ನು ಕೈಗೆತ್ತಿಕೊಂಡು ಏನಾದರೂ ಮಾಡಿ ಚಲುವರಾಯಸ್ವಾಮಿ ರಾಜೀನಾಮೆ ಕೊಡಿಸಲು ಯತ್ನಿಸಿದರು. ಆದರೇನು ಇಡೀ ಸದನವೇ ಕುಮಾರಣ್ಣನ ಎದುರು ತಿರುಗಿಬಿದ್ದಾಗ ವಿಧಾನಸಭೆಯ ಗಲಭೆ ಕಲಾಸಿಪಾಳ್ಯದ ಗಲಭೆ ರೂಪ ಪಡೆದುಕೊಂಡಾಗ, ಇನ್ನೂ ಕೆರಳಿದ ಕುಮಾರಣ್ಣ ವಿಧಾನಸೌಧ ನಿಮ್ಮಪ್ಪನದ್ದಲ್ಲ ಎಂದು ಅಬ್ಬರಿಸಿದರಂತಲ್ಲಾ, ಥೂತ್ತೇರಿ.

*****

ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಣ್ಣನನ್ನು ನಾವು ಸಾಮಾನ್ಯರೆಂದು ಕರೆದುದಕ್ಕೆ ಸ್ಪಷ್ಟನೆ ಕೊಡಬೇಡವೇ! ಮುಖ್ಯವಾಗಿ ಕುಮಾರಣ್ಣ ದೇವೇಗೌಡರ ನಾಲ್ವರು ಮಕ್ಕಳಲ್ಲೊಬ್ಬರು. ವಿದ್ವತ್ತಿನಲ್ಲಿ ಸಾಮಾನ್ಯ ವ್ಯಕ್ತಿ. ಆಡುವ ಮಾತಿನ ಮತ್ತು ಭಾಷಣ ಬಳಕೆ ವಿಷಯದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯ. ಏಕೆಂದರೆ ಅವರ ಮಾತು ಭಾಷಣ ಇತ್ಯಾದಿಗಳಲ್ಲಿ ಕೇವಲ ನಲವತ್ತೈದು ಪದಗಳೇ ಸುತ್ತುತ್ತವೆ. ಈ ಸಾಮಾನ್ಯತನ ಸಮಸ್ಯೆ ಅಲ್ಲವಾದರೂ, ಅವರ ಸುತ್ತ ಸಾಮಾನ್ಯವಾಗಿರುತ್ತಿದ್ದ ಗೆಳೆಯರು ಇವತ್ತು ಯಾರೂ ಅವರ ಬಳಿ ಇಲ್ಲ. ಎಲ್ಲಾ ಹೊರಟುಹೋಗುತ್ತಿದ್ದಾರೆ. ಇಂತಹ ಹತಾಶೆಯ ಸಮಯದಲ್ಲಿ, ತಮ್ಮ ವೈರಿಗಳೆಂದುಕೊಂಡವರು ಈಗ ಅಧಿಕಾರದ ಕುರ್ಚಿ ಮೇಲೆ ಕುಳಿತುಕೊಂಡಿರುವುದು ಸಹಿಸಲಸಾಧ್ಯ ಸಂಗತಿಯಾಗಿಹೋಗಿದೆ. ಇಂತಹ ಸಮಯದಲ್ಲಿ ಕುಮಾರಣ್ಣ ಕೆರಳಿ ಕೆಂಡವಾಗುವುದರ ಬದಲು ಸನ್ನಿವೇಶ ನಿಭಾಯಿಸುವ ಚಾಣಾಕ್ಷತೆ ತೋರಬೇಕಾಗಿದೆಯಲ್ಲಾ, ಥೂತ್ತೇರಿ.

*****

ಕೆಂಗಲ್ ಹನುಮಂತಯ್ಯನವರ ಕಾಲದಲ್ಲಿ ಕಟ್ಟಿಸಿದ ವಿಧಾನಸೌಧಕ್ಕೆ ಮೆರಗು ಬರಬೇಕಾದರೆ ಅಲ್ಲಿ ಸಾರ್ವಜನಿಕವಾಗಿ ಶಾಸಕರು ಆಡುವ ಎಲ್ಲ ಮಾತನ್ನೂ ಕೇಳುವಂತಿರಬೇಕು ಮತ್ತು ಅದು ತಿಳಿವಳಿಕೆಯಿಂದ ಕೂಡಿರಬೇಕು. ಅಲ್ಲಿ ನಡೆದ ಚರ್ಚೆಯ ಇತಿಹಾಸ ನೋಡಿದರೆ ಮಾನ್ಯ ದೇವೇಗೌಡರು ಅರಸು ಎದುರು ಸಮರ್ಥವಾಗಿ ವಿರೋಧಪಕ್ಷದ ಕೆಲಸ ನಿರ್ವಹಿಸಿದ ದಾಖಲೆ ಸಿಗುತ್ತದೆ. ಅವರೆಂದೂ ಹಗುರ ಭಾಷೆ ಬಳಸಿದವರಲ್ಲ. ಕುಮಾರಣ್ಣ ಹಳೆಯ ದಾಖಲೆಗಳನ್ನ ವಿಧಾನಸೌಧದ ಲೈಬ್ರರಿಯಲ್ಲಿ ಹುಡುಕಿ ಓದಿದರೆ, ಈ ವಿಧಾನಸೌಧ ನಮ್ಮಪ್ಪುಂದೂ ಅಲ್ಲ, ನಿಮ್ಮಪ್ಪುಂದೂ ಅಲ್ಲ ಎಂಬ ಮಾತು ಹೊರಬರಲಾರದಂತಲ್ಲಾ, ಥೂತ್ತೇರಿ.

*****

ವಿಧಾನಸೌಧದ ಒಳಗೆ ಒಂಥರದ ಗಲಭೆ ನಡೆದಿದ್ದರೆ ಹೊರಗಿನ ಗಲಭೆ ತುಂಬ ಅವ್ಯಕ್ತವಾಗಿದೆಯಂತಲ್ಲಾ. ಮುಖ್ಯವಾಗಿ ಹೊಸ ಸರಕಾರ ನೇಮಿಸಲಿರುವ ಅಕಾಡೆಮಿಗಳು, ನಿಗಮ ಮಂಡಲಿಗಳ ಕುರ್ಚಿಯ ಮೇಲೆ ಕೂರುವ ಸಂಚು ನಡೆಸಿರುವ ಜನ, ಅದರಲ್ಲೂ ಸಾಹಿತ್ಯ, ನಾಟಕ, ಪತ್ರಿಕಾ ಅಕಾಡೆಮಿಗಳನ್ನು ಕುರಿತು ಯೋಚಿಸಿರುವ ಜನರಲ್ಲಿ ಇದು ಕಾಣುತ್ತಿದೆಯಂತಲ್ಲ. ಮಂತ್ರಿ ಶಾಸಕರಿಗೆ ಮುತ್ತಿಕೊಂಡಿರುವುದಲ್ಲದೆ ಪ್ರಭಾವಿಗಳು ಮುಖ್ಯಮಂತ್ರಿ ಕಣ್ಣಿಗೆ ಬೀಳಲು ಹರಸಾಹಸ ಪಡುತ್ತಿರುವುದನ್ನು ನೋಡಿದರೆ ಸಾಮಾನ್ಯರಿಗೆ ಕನಿಕರವಾಗುತ್ತಿದೆಯಂತಲ್ಲಾ. ಏಕೆಂದರೆ ಈ ಮೇಧಾವಿಗಳು ಬಿಜೆಪಿ ಸರಕಾರದಲ್ಲಿ ಇದ್ದಾರೊ ಇಲ್ಲವೊ ಎಂಬಂತೆ ಅವಿತುಕೊಂಡಿದ್ದರು. ಬಿಜೆಪಿಗಳು ನೇರವಾಗಿ ಮುಸ್ಲಿಂ ಸಂಸ್ಕೃತಿ ಮೇಲೆ ದಾಳಿ ಮಾಡಿದಾಗ ಪಠ್ಯಪುಸ್ತಕವನ್ನು ತಿದ್ದಿದಾಗ ಮನೆಯೊಳಗಿದ್ದವರು, ಯಾವತ್ತು ಕಾಂಗ್ರೆಸ್ ಅಧಿಕಾರ ಹಿಡಿಯಿತೊ ಆ ಕೂಡಲೇ ವಿಧಾನಸೌಧದ ಕಾರಿಡಾರಿನಲ್ಲಿ ಸುತ್ತುತ್ತಿರುವುದಲ್ಲದೆ ಬಿಜೆಪಿ ಕಾಲದ ಅನಾಹುತಗಳನ್ನು ದನಿ ಎತ್ತರಿಸಿ ಚರ್ಚಿಸುತ್ತಿದ್ದಾರಲ್ಲಾ, ಥೂತ್ತೇರಿ.

*****

ಸರಕಾರ ಈಗ ಮಾಡಬೇಕಾದದ್ದು ಇಷ್ಟೆ. ಈ ಅಕಾಡೆಮಿ ನಿಗಮಮಂಡಲಿಗಳ ನೇಮಕ ನಿಧಾನವಾಗಿ ಆಗಲಿ ಎಂದು ನಿರ್ಧರಿಸುವುದು; ಇವುಗಳಿಗೆ ನೇಮಕ ತಡವಾಗುವುದರಿಂದ ಯಾವ ಅನಾಹುತಗಳೇನೂ ಸಂಭವಿಸುವುದಿಲ್ಲ. ಆ ಸಮಯದಲ್ಲಿ ಕೋಮುವಾದಿ ಸರಕಾರ ಸೃಷ್ಟಿಸಿದ ಸಮಸ್ಯೆಗಳು ಮತ್ತು ದುರಂತಗಳ ವಿರದ್ಧ ಬರೆದವರು, ಪ್ರತಿಭಟಿಸಿದವರು, ಜಾಥ ತೆಗೆದವರು ಇತ್ಯಾದಿ ಜನಗಳ ಇತಿಹಾಸ ತೆಗೆದರೆ ಯೋಗ್ಯರು ಸಿಗಬಹುದು. ಈ ಹಿಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಸ್ಥಾನಮಾನ ಪಡೆದ ಕಾರಣಕ್ಕಾಗಿಯಾದರು ಕೋಮುವಾದ ಮತ್ತು ದ್ವೇಷದ ವಾತಾವರಣದ ವಿರುದ್ಧ ಹೋರಾಡದೆ, ಹೊಟ್ಟೆತುಂಬ ಕುಡಿದುಕೊಂಡು ಕಾಲಹಾಕಿದವರು ಈಗಲೂ ವಿಧಾನಸೌಧದ ಕಾರಿಡಾರಿನಲ್ಲಿ ಹೊಸವೇಶದೊಂದಿಗೆ ಪ್ರತ್ಯಕ್ಷವಾಗಿವೆಯಲ್ಲಾ, ಥೂತ್ತೇರಿ.


ಇದನ್ನೂ ಓದಿ: ಮೋದಿಗೂ ಅರ್ಜುನನಿಗೂ ಯಾವ ಸಂಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...