Homeಅಂಕಣಗಳುಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

ಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

- Advertisement -
- Advertisement -

ಸದನದಲ್ಲಿ ಕುಮಾರಣ್ಣನ ಕೂಗಾಟ ನೋಡಿದ ಕರ್ನಾಟಕದ ಜನ ಲೊಚಗರಿದು ಈ ಮಟ್ಟಕ್ಕೆ ಇಳಿಯಿತೇ ಕರ್ನಾಟಕದ ಸಂಸ್ಕೃತಿಯ ಪ್ರತೀಕವಾದ ವಿಧಾನಸೌಧದ ವಾಗ್ವಾದ ಎಂದು ಉದ್ಘಾರ ತೆಗೆದಿದ್ದಾರಲ್ಲಾ. ಕುಮಾರಣ್ಣ ಕೆರಳಿರವುದಕ್ಕೆ ಹಲವಾರು ಕಾರಣಗಳಿವೆ. ಮುಖ್ಯವಾಗಿ ಅವರ ಪರಮವೈರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾದದು. ಎರಡನೆಯದು ತಮ್ಮ ಅಭಿಮಾನಿಗಳಂತಿದ್ದ ನಾಲ್ಕು ಜನ ಹಿಂಬಾಲಕರು ಈಗ ಸಿದ್ದು ಜೊತೆ ಇರುವುದಲ್ಲದೆ, ಅದರಲ್ಲೊಬ್ಬರು ಕೃಷಿಮಂತ್ರಿಯಾಗಿರುವುದು. ಸಾಮಾನ್ಯ ವ್ಯಕ್ತಿಯಾದ ಕುಮಾರಣ್ಣನಿಗೆ ಇಂತಹ ಅನಾಹುತಗಳನ್ನು ಸಹಿಸಲು ಸಾಧ್ಯವೇ? ಹಾಗಾಗಿ ಆ ಕೃಷಿಮಂತ್ರಿಯ ಕ್ಷೇತ್ರಕ್ಕೆ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ಸಾರಿಗೆ ನೌಕರನ ಸಮಸ್ಯೆಯನ್ನು ಕೈಗೆತ್ತಿಕೊಂಡು ಏನಾದರೂ ಮಾಡಿ ಚಲುವರಾಯಸ್ವಾಮಿ ರಾಜೀನಾಮೆ ಕೊಡಿಸಲು ಯತ್ನಿಸಿದರು. ಆದರೇನು ಇಡೀ ಸದನವೇ ಕುಮಾರಣ್ಣನ ಎದುರು ತಿರುಗಿಬಿದ್ದಾಗ ವಿಧಾನಸಭೆಯ ಗಲಭೆ ಕಲಾಸಿಪಾಳ್ಯದ ಗಲಭೆ ರೂಪ ಪಡೆದುಕೊಂಡಾಗ, ಇನ್ನೂ ಕೆರಳಿದ ಕುಮಾರಣ್ಣ ವಿಧಾನಸೌಧ ನಿಮ್ಮಪ್ಪನದ್ದಲ್ಲ ಎಂದು ಅಬ್ಬರಿಸಿದರಂತಲ್ಲಾ, ಥೂತ್ತೇರಿ.

*****

ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಣ್ಣನನ್ನು ನಾವು ಸಾಮಾನ್ಯರೆಂದು ಕರೆದುದಕ್ಕೆ ಸ್ಪಷ್ಟನೆ ಕೊಡಬೇಡವೇ! ಮುಖ್ಯವಾಗಿ ಕುಮಾರಣ್ಣ ದೇವೇಗೌಡರ ನಾಲ್ವರು ಮಕ್ಕಳಲ್ಲೊಬ್ಬರು. ವಿದ್ವತ್ತಿನಲ್ಲಿ ಸಾಮಾನ್ಯ ವ್ಯಕ್ತಿ. ಆಡುವ ಮಾತಿನ ಮತ್ತು ಭಾಷಣ ಬಳಕೆ ವಿಷಯದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯ. ಏಕೆಂದರೆ ಅವರ ಮಾತು ಭಾಷಣ ಇತ್ಯಾದಿಗಳಲ್ಲಿ ಕೇವಲ ನಲವತ್ತೈದು ಪದಗಳೇ ಸುತ್ತುತ್ತವೆ. ಈ ಸಾಮಾನ್ಯತನ ಸಮಸ್ಯೆ ಅಲ್ಲವಾದರೂ, ಅವರ ಸುತ್ತ ಸಾಮಾನ್ಯವಾಗಿರುತ್ತಿದ್ದ ಗೆಳೆಯರು ಇವತ್ತು ಯಾರೂ ಅವರ ಬಳಿ ಇಲ್ಲ. ಎಲ್ಲಾ ಹೊರಟುಹೋಗುತ್ತಿದ್ದಾರೆ. ಇಂತಹ ಹತಾಶೆಯ ಸಮಯದಲ್ಲಿ, ತಮ್ಮ ವೈರಿಗಳೆಂದುಕೊಂಡವರು ಈಗ ಅಧಿಕಾರದ ಕುರ್ಚಿ ಮೇಲೆ ಕುಳಿತುಕೊಂಡಿರುವುದು ಸಹಿಸಲಸಾಧ್ಯ ಸಂಗತಿಯಾಗಿಹೋಗಿದೆ. ಇಂತಹ ಸಮಯದಲ್ಲಿ ಕುಮಾರಣ್ಣ ಕೆರಳಿ ಕೆಂಡವಾಗುವುದರ ಬದಲು ಸನ್ನಿವೇಶ ನಿಭಾಯಿಸುವ ಚಾಣಾಕ್ಷತೆ ತೋರಬೇಕಾಗಿದೆಯಲ್ಲಾ, ಥೂತ್ತೇರಿ.

*****

ಕೆಂಗಲ್ ಹನುಮಂತಯ್ಯನವರ ಕಾಲದಲ್ಲಿ ಕಟ್ಟಿಸಿದ ವಿಧಾನಸೌಧಕ್ಕೆ ಮೆರಗು ಬರಬೇಕಾದರೆ ಅಲ್ಲಿ ಸಾರ್ವಜನಿಕವಾಗಿ ಶಾಸಕರು ಆಡುವ ಎಲ್ಲ ಮಾತನ್ನೂ ಕೇಳುವಂತಿರಬೇಕು ಮತ್ತು ಅದು ತಿಳಿವಳಿಕೆಯಿಂದ ಕೂಡಿರಬೇಕು. ಅಲ್ಲಿ ನಡೆದ ಚರ್ಚೆಯ ಇತಿಹಾಸ ನೋಡಿದರೆ ಮಾನ್ಯ ದೇವೇಗೌಡರು ಅರಸು ಎದುರು ಸಮರ್ಥವಾಗಿ ವಿರೋಧಪಕ್ಷದ ಕೆಲಸ ನಿರ್ವಹಿಸಿದ ದಾಖಲೆ ಸಿಗುತ್ತದೆ. ಅವರೆಂದೂ ಹಗುರ ಭಾಷೆ ಬಳಸಿದವರಲ್ಲ. ಕುಮಾರಣ್ಣ ಹಳೆಯ ದಾಖಲೆಗಳನ್ನ ವಿಧಾನಸೌಧದ ಲೈಬ್ರರಿಯಲ್ಲಿ ಹುಡುಕಿ ಓದಿದರೆ, ಈ ವಿಧಾನಸೌಧ ನಮ್ಮಪ್ಪುಂದೂ ಅಲ್ಲ, ನಿಮ್ಮಪ್ಪುಂದೂ ಅಲ್ಲ ಎಂಬ ಮಾತು ಹೊರಬರಲಾರದಂತಲ್ಲಾ, ಥೂತ್ತೇರಿ.

*****

ವಿಧಾನಸೌಧದ ಒಳಗೆ ಒಂಥರದ ಗಲಭೆ ನಡೆದಿದ್ದರೆ ಹೊರಗಿನ ಗಲಭೆ ತುಂಬ ಅವ್ಯಕ್ತವಾಗಿದೆಯಂತಲ್ಲಾ. ಮುಖ್ಯವಾಗಿ ಹೊಸ ಸರಕಾರ ನೇಮಿಸಲಿರುವ ಅಕಾಡೆಮಿಗಳು, ನಿಗಮ ಮಂಡಲಿಗಳ ಕುರ್ಚಿಯ ಮೇಲೆ ಕೂರುವ ಸಂಚು ನಡೆಸಿರುವ ಜನ, ಅದರಲ್ಲೂ ಸಾಹಿತ್ಯ, ನಾಟಕ, ಪತ್ರಿಕಾ ಅಕಾಡೆಮಿಗಳನ್ನು ಕುರಿತು ಯೋಚಿಸಿರುವ ಜನರಲ್ಲಿ ಇದು ಕಾಣುತ್ತಿದೆಯಂತಲ್ಲ. ಮಂತ್ರಿ ಶಾಸಕರಿಗೆ ಮುತ್ತಿಕೊಂಡಿರುವುದಲ್ಲದೆ ಪ್ರಭಾವಿಗಳು ಮುಖ್ಯಮಂತ್ರಿ ಕಣ್ಣಿಗೆ ಬೀಳಲು ಹರಸಾಹಸ ಪಡುತ್ತಿರುವುದನ್ನು ನೋಡಿದರೆ ಸಾಮಾನ್ಯರಿಗೆ ಕನಿಕರವಾಗುತ್ತಿದೆಯಂತಲ್ಲಾ. ಏಕೆಂದರೆ ಈ ಮೇಧಾವಿಗಳು ಬಿಜೆಪಿ ಸರಕಾರದಲ್ಲಿ ಇದ್ದಾರೊ ಇಲ್ಲವೊ ಎಂಬಂತೆ ಅವಿತುಕೊಂಡಿದ್ದರು. ಬಿಜೆಪಿಗಳು ನೇರವಾಗಿ ಮುಸ್ಲಿಂ ಸಂಸ್ಕೃತಿ ಮೇಲೆ ದಾಳಿ ಮಾಡಿದಾಗ ಪಠ್ಯಪುಸ್ತಕವನ್ನು ತಿದ್ದಿದಾಗ ಮನೆಯೊಳಗಿದ್ದವರು, ಯಾವತ್ತು ಕಾಂಗ್ರೆಸ್ ಅಧಿಕಾರ ಹಿಡಿಯಿತೊ ಆ ಕೂಡಲೇ ವಿಧಾನಸೌಧದ ಕಾರಿಡಾರಿನಲ್ಲಿ ಸುತ್ತುತ್ತಿರುವುದಲ್ಲದೆ ಬಿಜೆಪಿ ಕಾಲದ ಅನಾಹುತಗಳನ್ನು ದನಿ ಎತ್ತರಿಸಿ ಚರ್ಚಿಸುತ್ತಿದ್ದಾರಲ್ಲಾ, ಥೂತ್ತೇರಿ.

*****

ಸರಕಾರ ಈಗ ಮಾಡಬೇಕಾದದ್ದು ಇಷ್ಟೆ. ಈ ಅಕಾಡೆಮಿ ನಿಗಮಮಂಡಲಿಗಳ ನೇಮಕ ನಿಧಾನವಾಗಿ ಆಗಲಿ ಎಂದು ನಿರ್ಧರಿಸುವುದು; ಇವುಗಳಿಗೆ ನೇಮಕ ತಡವಾಗುವುದರಿಂದ ಯಾವ ಅನಾಹುತಗಳೇನೂ ಸಂಭವಿಸುವುದಿಲ್ಲ. ಆ ಸಮಯದಲ್ಲಿ ಕೋಮುವಾದಿ ಸರಕಾರ ಸೃಷ್ಟಿಸಿದ ಸಮಸ್ಯೆಗಳು ಮತ್ತು ದುರಂತಗಳ ವಿರದ್ಧ ಬರೆದವರು, ಪ್ರತಿಭಟಿಸಿದವರು, ಜಾಥ ತೆಗೆದವರು ಇತ್ಯಾದಿ ಜನಗಳ ಇತಿಹಾಸ ತೆಗೆದರೆ ಯೋಗ್ಯರು ಸಿಗಬಹುದು. ಈ ಹಿಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಸ್ಥಾನಮಾನ ಪಡೆದ ಕಾರಣಕ್ಕಾಗಿಯಾದರು ಕೋಮುವಾದ ಮತ್ತು ದ್ವೇಷದ ವಾತಾವರಣದ ವಿರುದ್ಧ ಹೋರಾಡದೆ, ಹೊಟ್ಟೆತುಂಬ ಕುಡಿದುಕೊಂಡು ಕಾಲಹಾಕಿದವರು ಈಗಲೂ ವಿಧಾನಸೌಧದ ಕಾರಿಡಾರಿನಲ್ಲಿ ಹೊಸವೇಶದೊಂದಿಗೆ ಪ್ರತ್ಯಕ್ಷವಾಗಿವೆಯಲ್ಲಾ, ಥೂತ್ತೇರಿ.


ಇದನ್ನೂ ಓದಿ: ಮೋದಿಗೂ ಅರ್ಜುನನಿಗೂ ಯಾವ ಸಂಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...