Homeಅಂಕಣಗಳುಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

ಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

- Advertisement -
- Advertisement -

ಸದನದಲ್ಲಿ ಕುಮಾರಣ್ಣನ ಕೂಗಾಟ ನೋಡಿದ ಕರ್ನಾಟಕದ ಜನ ಲೊಚಗರಿದು ಈ ಮಟ್ಟಕ್ಕೆ ಇಳಿಯಿತೇ ಕರ್ನಾಟಕದ ಸಂಸ್ಕೃತಿಯ ಪ್ರತೀಕವಾದ ವಿಧಾನಸೌಧದ ವಾಗ್ವಾದ ಎಂದು ಉದ್ಘಾರ ತೆಗೆದಿದ್ದಾರಲ್ಲಾ. ಕುಮಾರಣ್ಣ ಕೆರಳಿರವುದಕ್ಕೆ ಹಲವಾರು ಕಾರಣಗಳಿವೆ. ಮುಖ್ಯವಾಗಿ ಅವರ ಪರಮವೈರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾದದು. ಎರಡನೆಯದು ತಮ್ಮ ಅಭಿಮಾನಿಗಳಂತಿದ್ದ ನಾಲ್ಕು ಜನ ಹಿಂಬಾಲಕರು ಈಗ ಸಿದ್ದು ಜೊತೆ ಇರುವುದಲ್ಲದೆ, ಅದರಲ್ಲೊಬ್ಬರು ಕೃಷಿಮಂತ್ರಿಯಾಗಿರುವುದು. ಸಾಮಾನ್ಯ ವ್ಯಕ್ತಿಯಾದ ಕುಮಾರಣ್ಣನಿಗೆ ಇಂತಹ ಅನಾಹುತಗಳನ್ನು ಸಹಿಸಲು ಸಾಧ್ಯವೇ? ಹಾಗಾಗಿ ಆ ಕೃಷಿಮಂತ್ರಿಯ ಕ್ಷೇತ್ರಕ್ಕೆ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ಸಾರಿಗೆ ನೌಕರನ ಸಮಸ್ಯೆಯನ್ನು ಕೈಗೆತ್ತಿಕೊಂಡು ಏನಾದರೂ ಮಾಡಿ ಚಲುವರಾಯಸ್ವಾಮಿ ರಾಜೀನಾಮೆ ಕೊಡಿಸಲು ಯತ್ನಿಸಿದರು. ಆದರೇನು ಇಡೀ ಸದನವೇ ಕುಮಾರಣ್ಣನ ಎದುರು ತಿರುಗಿಬಿದ್ದಾಗ ವಿಧಾನಸಭೆಯ ಗಲಭೆ ಕಲಾಸಿಪಾಳ್ಯದ ಗಲಭೆ ರೂಪ ಪಡೆದುಕೊಂಡಾಗ, ಇನ್ನೂ ಕೆರಳಿದ ಕುಮಾರಣ್ಣ ವಿಧಾನಸೌಧ ನಿಮ್ಮಪ್ಪನದ್ದಲ್ಲ ಎಂದು ಅಬ್ಬರಿಸಿದರಂತಲ್ಲಾ, ಥೂತ್ತೇರಿ.

*****

ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಣ್ಣನನ್ನು ನಾವು ಸಾಮಾನ್ಯರೆಂದು ಕರೆದುದಕ್ಕೆ ಸ್ಪಷ್ಟನೆ ಕೊಡಬೇಡವೇ! ಮುಖ್ಯವಾಗಿ ಕುಮಾರಣ್ಣ ದೇವೇಗೌಡರ ನಾಲ್ವರು ಮಕ್ಕಳಲ್ಲೊಬ್ಬರು. ವಿದ್ವತ್ತಿನಲ್ಲಿ ಸಾಮಾನ್ಯ ವ್ಯಕ್ತಿ. ಆಡುವ ಮಾತಿನ ಮತ್ತು ಭಾಷಣ ಬಳಕೆ ವಿಷಯದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯ. ಏಕೆಂದರೆ ಅವರ ಮಾತು ಭಾಷಣ ಇತ್ಯಾದಿಗಳಲ್ಲಿ ಕೇವಲ ನಲವತ್ತೈದು ಪದಗಳೇ ಸುತ್ತುತ್ತವೆ. ಈ ಸಾಮಾನ್ಯತನ ಸಮಸ್ಯೆ ಅಲ್ಲವಾದರೂ, ಅವರ ಸುತ್ತ ಸಾಮಾನ್ಯವಾಗಿರುತ್ತಿದ್ದ ಗೆಳೆಯರು ಇವತ್ತು ಯಾರೂ ಅವರ ಬಳಿ ಇಲ್ಲ. ಎಲ್ಲಾ ಹೊರಟುಹೋಗುತ್ತಿದ್ದಾರೆ. ಇಂತಹ ಹತಾಶೆಯ ಸಮಯದಲ್ಲಿ, ತಮ್ಮ ವೈರಿಗಳೆಂದುಕೊಂಡವರು ಈಗ ಅಧಿಕಾರದ ಕುರ್ಚಿ ಮೇಲೆ ಕುಳಿತುಕೊಂಡಿರುವುದು ಸಹಿಸಲಸಾಧ್ಯ ಸಂಗತಿಯಾಗಿಹೋಗಿದೆ. ಇಂತಹ ಸಮಯದಲ್ಲಿ ಕುಮಾರಣ್ಣ ಕೆರಳಿ ಕೆಂಡವಾಗುವುದರ ಬದಲು ಸನ್ನಿವೇಶ ನಿಭಾಯಿಸುವ ಚಾಣಾಕ್ಷತೆ ತೋರಬೇಕಾಗಿದೆಯಲ್ಲಾ, ಥೂತ್ತೇರಿ.

*****

ಕೆಂಗಲ್ ಹನುಮಂತಯ್ಯನವರ ಕಾಲದಲ್ಲಿ ಕಟ್ಟಿಸಿದ ವಿಧಾನಸೌಧಕ್ಕೆ ಮೆರಗು ಬರಬೇಕಾದರೆ ಅಲ್ಲಿ ಸಾರ್ವಜನಿಕವಾಗಿ ಶಾಸಕರು ಆಡುವ ಎಲ್ಲ ಮಾತನ್ನೂ ಕೇಳುವಂತಿರಬೇಕು ಮತ್ತು ಅದು ತಿಳಿವಳಿಕೆಯಿಂದ ಕೂಡಿರಬೇಕು. ಅಲ್ಲಿ ನಡೆದ ಚರ್ಚೆಯ ಇತಿಹಾಸ ನೋಡಿದರೆ ಮಾನ್ಯ ದೇವೇಗೌಡರು ಅರಸು ಎದುರು ಸಮರ್ಥವಾಗಿ ವಿರೋಧಪಕ್ಷದ ಕೆಲಸ ನಿರ್ವಹಿಸಿದ ದಾಖಲೆ ಸಿಗುತ್ತದೆ. ಅವರೆಂದೂ ಹಗುರ ಭಾಷೆ ಬಳಸಿದವರಲ್ಲ. ಕುಮಾರಣ್ಣ ಹಳೆಯ ದಾಖಲೆಗಳನ್ನ ವಿಧಾನಸೌಧದ ಲೈಬ್ರರಿಯಲ್ಲಿ ಹುಡುಕಿ ಓದಿದರೆ, ಈ ವಿಧಾನಸೌಧ ನಮ್ಮಪ್ಪುಂದೂ ಅಲ್ಲ, ನಿಮ್ಮಪ್ಪುಂದೂ ಅಲ್ಲ ಎಂಬ ಮಾತು ಹೊರಬರಲಾರದಂತಲ್ಲಾ, ಥೂತ್ತೇರಿ.

*****

ವಿಧಾನಸೌಧದ ಒಳಗೆ ಒಂಥರದ ಗಲಭೆ ನಡೆದಿದ್ದರೆ ಹೊರಗಿನ ಗಲಭೆ ತುಂಬ ಅವ್ಯಕ್ತವಾಗಿದೆಯಂತಲ್ಲಾ. ಮುಖ್ಯವಾಗಿ ಹೊಸ ಸರಕಾರ ನೇಮಿಸಲಿರುವ ಅಕಾಡೆಮಿಗಳು, ನಿಗಮ ಮಂಡಲಿಗಳ ಕುರ್ಚಿಯ ಮೇಲೆ ಕೂರುವ ಸಂಚು ನಡೆಸಿರುವ ಜನ, ಅದರಲ್ಲೂ ಸಾಹಿತ್ಯ, ನಾಟಕ, ಪತ್ರಿಕಾ ಅಕಾಡೆಮಿಗಳನ್ನು ಕುರಿತು ಯೋಚಿಸಿರುವ ಜನರಲ್ಲಿ ಇದು ಕಾಣುತ್ತಿದೆಯಂತಲ್ಲ. ಮಂತ್ರಿ ಶಾಸಕರಿಗೆ ಮುತ್ತಿಕೊಂಡಿರುವುದಲ್ಲದೆ ಪ್ರಭಾವಿಗಳು ಮುಖ್ಯಮಂತ್ರಿ ಕಣ್ಣಿಗೆ ಬೀಳಲು ಹರಸಾಹಸ ಪಡುತ್ತಿರುವುದನ್ನು ನೋಡಿದರೆ ಸಾಮಾನ್ಯರಿಗೆ ಕನಿಕರವಾಗುತ್ತಿದೆಯಂತಲ್ಲಾ. ಏಕೆಂದರೆ ಈ ಮೇಧಾವಿಗಳು ಬಿಜೆಪಿ ಸರಕಾರದಲ್ಲಿ ಇದ್ದಾರೊ ಇಲ್ಲವೊ ಎಂಬಂತೆ ಅವಿತುಕೊಂಡಿದ್ದರು. ಬಿಜೆಪಿಗಳು ನೇರವಾಗಿ ಮುಸ್ಲಿಂ ಸಂಸ್ಕೃತಿ ಮೇಲೆ ದಾಳಿ ಮಾಡಿದಾಗ ಪಠ್ಯಪುಸ್ತಕವನ್ನು ತಿದ್ದಿದಾಗ ಮನೆಯೊಳಗಿದ್ದವರು, ಯಾವತ್ತು ಕಾಂಗ್ರೆಸ್ ಅಧಿಕಾರ ಹಿಡಿಯಿತೊ ಆ ಕೂಡಲೇ ವಿಧಾನಸೌಧದ ಕಾರಿಡಾರಿನಲ್ಲಿ ಸುತ್ತುತ್ತಿರುವುದಲ್ಲದೆ ಬಿಜೆಪಿ ಕಾಲದ ಅನಾಹುತಗಳನ್ನು ದನಿ ಎತ್ತರಿಸಿ ಚರ್ಚಿಸುತ್ತಿದ್ದಾರಲ್ಲಾ, ಥೂತ್ತೇರಿ.

*****

ಸರಕಾರ ಈಗ ಮಾಡಬೇಕಾದದ್ದು ಇಷ್ಟೆ. ಈ ಅಕಾಡೆಮಿ ನಿಗಮಮಂಡಲಿಗಳ ನೇಮಕ ನಿಧಾನವಾಗಿ ಆಗಲಿ ಎಂದು ನಿರ್ಧರಿಸುವುದು; ಇವುಗಳಿಗೆ ನೇಮಕ ತಡವಾಗುವುದರಿಂದ ಯಾವ ಅನಾಹುತಗಳೇನೂ ಸಂಭವಿಸುವುದಿಲ್ಲ. ಆ ಸಮಯದಲ್ಲಿ ಕೋಮುವಾದಿ ಸರಕಾರ ಸೃಷ್ಟಿಸಿದ ಸಮಸ್ಯೆಗಳು ಮತ್ತು ದುರಂತಗಳ ವಿರದ್ಧ ಬರೆದವರು, ಪ್ರತಿಭಟಿಸಿದವರು, ಜಾಥ ತೆಗೆದವರು ಇತ್ಯಾದಿ ಜನಗಳ ಇತಿಹಾಸ ತೆಗೆದರೆ ಯೋಗ್ಯರು ಸಿಗಬಹುದು. ಈ ಹಿಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಸ್ಥಾನಮಾನ ಪಡೆದ ಕಾರಣಕ್ಕಾಗಿಯಾದರು ಕೋಮುವಾದ ಮತ್ತು ದ್ವೇಷದ ವಾತಾವರಣದ ವಿರುದ್ಧ ಹೋರಾಡದೆ, ಹೊಟ್ಟೆತುಂಬ ಕುಡಿದುಕೊಂಡು ಕಾಲಹಾಕಿದವರು ಈಗಲೂ ವಿಧಾನಸೌಧದ ಕಾರಿಡಾರಿನಲ್ಲಿ ಹೊಸವೇಶದೊಂದಿಗೆ ಪ್ರತ್ಯಕ್ಷವಾಗಿವೆಯಲ್ಲಾ, ಥೂತ್ತೇರಿ.


ಇದನ್ನೂ ಓದಿ: ಮೋದಿಗೂ ಅರ್ಜುನನಿಗೂ ಯಾವ ಸಂಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...