Homeಅಂಕಣಗಳುಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

ಈ ಐದು ವರ್ಷದಲ್ಲಿ ಇವರೆಲ್ಲಾ ಎಲ್ಲಿದ್ದರು ಅಂತ!

- Advertisement -
- Advertisement -

ಸದನದಲ್ಲಿ ಕುಮಾರಣ್ಣನ ಕೂಗಾಟ ನೋಡಿದ ಕರ್ನಾಟಕದ ಜನ ಲೊಚಗರಿದು ಈ ಮಟ್ಟಕ್ಕೆ ಇಳಿಯಿತೇ ಕರ್ನಾಟಕದ ಸಂಸ್ಕೃತಿಯ ಪ್ರತೀಕವಾದ ವಿಧಾನಸೌಧದ ವಾಗ್ವಾದ ಎಂದು ಉದ್ಘಾರ ತೆಗೆದಿದ್ದಾರಲ್ಲಾ. ಕುಮಾರಣ್ಣ ಕೆರಳಿರವುದಕ್ಕೆ ಹಲವಾರು ಕಾರಣಗಳಿವೆ. ಮುಖ್ಯವಾಗಿ ಅವರ ಪರಮವೈರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾದದು. ಎರಡನೆಯದು ತಮ್ಮ ಅಭಿಮಾನಿಗಳಂತಿದ್ದ ನಾಲ್ಕು ಜನ ಹಿಂಬಾಲಕರು ಈಗ ಸಿದ್ದು ಜೊತೆ ಇರುವುದಲ್ಲದೆ, ಅದರಲ್ಲೊಬ್ಬರು ಕೃಷಿಮಂತ್ರಿಯಾಗಿರುವುದು. ಸಾಮಾನ್ಯ ವ್ಯಕ್ತಿಯಾದ ಕುಮಾರಣ್ಣನಿಗೆ ಇಂತಹ ಅನಾಹುತಗಳನ್ನು ಸಹಿಸಲು ಸಾಧ್ಯವೇ? ಹಾಗಾಗಿ ಆ ಕೃಷಿಮಂತ್ರಿಯ ಕ್ಷೇತ್ರಕ್ಕೆ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ಸಾರಿಗೆ ನೌಕರನ ಸಮಸ್ಯೆಯನ್ನು ಕೈಗೆತ್ತಿಕೊಂಡು ಏನಾದರೂ ಮಾಡಿ ಚಲುವರಾಯಸ್ವಾಮಿ ರಾಜೀನಾಮೆ ಕೊಡಿಸಲು ಯತ್ನಿಸಿದರು. ಆದರೇನು ಇಡೀ ಸದನವೇ ಕುಮಾರಣ್ಣನ ಎದುರು ತಿರುಗಿಬಿದ್ದಾಗ ವಿಧಾನಸಭೆಯ ಗಲಭೆ ಕಲಾಸಿಪಾಳ್ಯದ ಗಲಭೆ ರೂಪ ಪಡೆದುಕೊಂಡಾಗ, ಇನ್ನೂ ಕೆರಳಿದ ಕುಮಾರಣ್ಣ ವಿಧಾನಸೌಧ ನಿಮ್ಮಪ್ಪನದ್ದಲ್ಲ ಎಂದು ಅಬ್ಬರಿಸಿದರಂತಲ್ಲಾ, ಥೂತ್ತೇರಿ.

*****

ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಣ್ಣನನ್ನು ನಾವು ಸಾಮಾನ್ಯರೆಂದು ಕರೆದುದಕ್ಕೆ ಸ್ಪಷ್ಟನೆ ಕೊಡಬೇಡವೇ! ಮುಖ್ಯವಾಗಿ ಕುಮಾರಣ್ಣ ದೇವೇಗೌಡರ ನಾಲ್ವರು ಮಕ್ಕಳಲ್ಲೊಬ್ಬರು. ವಿದ್ವತ್ತಿನಲ್ಲಿ ಸಾಮಾನ್ಯ ವ್ಯಕ್ತಿ. ಆಡುವ ಮಾತಿನ ಮತ್ತು ಭಾಷಣ ಬಳಕೆ ವಿಷಯದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯ. ಏಕೆಂದರೆ ಅವರ ಮಾತು ಭಾಷಣ ಇತ್ಯಾದಿಗಳಲ್ಲಿ ಕೇವಲ ನಲವತ್ತೈದು ಪದಗಳೇ ಸುತ್ತುತ್ತವೆ. ಈ ಸಾಮಾನ್ಯತನ ಸಮಸ್ಯೆ ಅಲ್ಲವಾದರೂ, ಅವರ ಸುತ್ತ ಸಾಮಾನ್ಯವಾಗಿರುತ್ತಿದ್ದ ಗೆಳೆಯರು ಇವತ್ತು ಯಾರೂ ಅವರ ಬಳಿ ಇಲ್ಲ. ಎಲ್ಲಾ ಹೊರಟುಹೋಗುತ್ತಿದ್ದಾರೆ. ಇಂತಹ ಹತಾಶೆಯ ಸಮಯದಲ್ಲಿ, ತಮ್ಮ ವೈರಿಗಳೆಂದುಕೊಂಡವರು ಈಗ ಅಧಿಕಾರದ ಕುರ್ಚಿ ಮೇಲೆ ಕುಳಿತುಕೊಂಡಿರುವುದು ಸಹಿಸಲಸಾಧ್ಯ ಸಂಗತಿಯಾಗಿಹೋಗಿದೆ. ಇಂತಹ ಸಮಯದಲ್ಲಿ ಕುಮಾರಣ್ಣ ಕೆರಳಿ ಕೆಂಡವಾಗುವುದರ ಬದಲು ಸನ್ನಿವೇಶ ನಿಭಾಯಿಸುವ ಚಾಣಾಕ್ಷತೆ ತೋರಬೇಕಾಗಿದೆಯಲ್ಲಾ, ಥೂತ್ತೇರಿ.

*****

ಕೆಂಗಲ್ ಹನುಮಂತಯ್ಯನವರ ಕಾಲದಲ್ಲಿ ಕಟ್ಟಿಸಿದ ವಿಧಾನಸೌಧಕ್ಕೆ ಮೆರಗು ಬರಬೇಕಾದರೆ ಅಲ್ಲಿ ಸಾರ್ವಜನಿಕವಾಗಿ ಶಾಸಕರು ಆಡುವ ಎಲ್ಲ ಮಾತನ್ನೂ ಕೇಳುವಂತಿರಬೇಕು ಮತ್ತು ಅದು ತಿಳಿವಳಿಕೆಯಿಂದ ಕೂಡಿರಬೇಕು. ಅಲ್ಲಿ ನಡೆದ ಚರ್ಚೆಯ ಇತಿಹಾಸ ನೋಡಿದರೆ ಮಾನ್ಯ ದೇವೇಗೌಡರು ಅರಸು ಎದುರು ಸಮರ್ಥವಾಗಿ ವಿರೋಧಪಕ್ಷದ ಕೆಲಸ ನಿರ್ವಹಿಸಿದ ದಾಖಲೆ ಸಿಗುತ್ತದೆ. ಅವರೆಂದೂ ಹಗುರ ಭಾಷೆ ಬಳಸಿದವರಲ್ಲ. ಕುಮಾರಣ್ಣ ಹಳೆಯ ದಾಖಲೆಗಳನ್ನ ವಿಧಾನಸೌಧದ ಲೈಬ್ರರಿಯಲ್ಲಿ ಹುಡುಕಿ ಓದಿದರೆ, ಈ ವಿಧಾನಸೌಧ ನಮ್ಮಪ್ಪುಂದೂ ಅಲ್ಲ, ನಿಮ್ಮಪ್ಪುಂದೂ ಅಲ್ಲ ಎಂಬ ಮಾತು ಹೊರಬರಲಾರದಂತಲ್ಲಾ, ಥೂತ್ತೇರಿ.

*****

ವಿಧಾನಸೌಧದ ಒಳಗೆ ಒಂಥರದ ಗಲಭೆ ನಡೆದಿದ್ದರೆ ಹೊರಗಿನ ಗಲಭೆ ತುಂಬ ಅವ್ಯಕ್ತವಾಗಿದೆಯಂತಲ್ಲಾ. ಮುಖ್ಯವಾಗಿ ಹೊಸ ಸರಕಾರ ನೇಮಿಸಲಿರುವ ಅಕಾಡೆಮಿಗಳು, ನಿಗಮ ಮಂಡಲಿಗಳ ಕುರ್ಚಿಯ ಮೇಲೆ ಕೂರುವ ಸಂಚು ನಡೆಸಿರುವ ಜನ, ಅದರಲ್ಲೂ ಸಾಹಿತ್ಯ, ನಾಟಕ, ಪತ್ರಿಕಾ ಅಕಾಡೆಮಿಗಳನ್ನು ಕುರಿತು ಯೋಚಿಸಿರುವ ಜನರಲ್ಲಿ ಇದು ಕಾಣುತ್ತಿದೆಯಂತಲ್ಲ. ಮಂತ್ರಿ ಶಾಸಕರಿಗೆ ಮುತ್ತಿಕೊಂಡಿರುವುದಲ್ಲದೆ ಪ್ರಭಾವಿಗಳು ಮುಖ್ಯಮಂತ್ರಿ ಕಣ್ಣಿಗೆ ಬೀಳಲು ಹರಸಾಹಸ ಪಡುತ್ತಿರುವುದನ್ನು ನೋಡಿದರೆ ಸಾಮಾನ್ಯರಿಗೆ ಕನಿಕರವಾಗುತ್ತಿದೆಯಂತಲ್ಲಾ. ಏಕೆಂದರೆ ಈ ಮೇಧಾವಿಗಳು ಬಿಜೆಪಿ ಸರಕಾರದಲ್ಲಿ ಇದ್ದಾರೊ ಇಲ್ಲವೊ ಎಂಬಂತೆ ಅವಿತುಕೊಂಡಿದ್ದರು. ಬಿಜೆಪಿಗಳು ನೇರವಾಗಿ ಮುಸ್ಲಿಂ ಸಂಸ್ಕೃತಿ ಮೇಲೆ ದಾಳಿ ಮಾಡಿದಾಗ ಪಠ್ಯಪುಸ್ತಕವನ್ನು ತಿದ್ದಿದಾಗ ಮನೆಯೊಳಗಿದ್ದವರು, ಯಾವತ್ತು ಕಾಂಗ್ರೆಸ್ ಅಧಿಕಾರ ಹಿಡಿಯಿತೊ ಆ ಕೂಡಲೇ ವಿಧಾನಸೌಧದ ಕಾರಿಡಾರಿನಲ್ಲಿ ಸುತ್ತುತ್ತಿರುವುದಲ್ಲದೆ ಬಿಜೆಪಿ ಕಾಲದ ಅನಾಹುತಗಳನ್ನು ದನಿ ಎತ್ತರಿಸಿ ಚರ್ಚಿಸುತ್ತಿದ್ದಾರಲ್ಲಾ, ಥೂತ್ತೇರಿ.

*****

ಸರಕಾರ ಈಗ ಮಾಡಬೇಕಾದದ್ದು ಇಷ್ಟೆ. ಈ ಅಕಾಡೆಮಿ ನಿಗಮಮಂಡಲಿಗಳ ನೇಮಕ ನಿಧಾನವಾಗಿ ಆಗಲಿ ಎಂದು ನಿರ್ಧರಿಸುವುದು; ಇವುಗಳಿಗೆ ನೇಮಕ ತಡವಾಗುವುದರಿಂದ ಯಾವ ಅನಾಹುತಗಳೇನೂ ಸಂಭವಿಸುವುದಿಲ್ಲ. ಆ ಸಮಯದಲ್ಲಿ ಕೋಮುವಾದಿ ಸರಕಾರ ಸೃಷ್ಟಿಸಿದ ಸಮಸ್ಯೆಗಳು ಮತ್ತು ದುರಂತಗಳ ವಿರದ್ಧ ಬರೆದವರು, ಪ್ರತಿಭಟಿಸಿದವರು, ಜಾಥ ತೆಗೆದವರು ಇತ್ಯಾದಿ ಜನಗಳ ಇತಿಹಾಸ ತೆಗೆದರೆ ಯೋಗ್ಯರು ಸಿಗಬಹುದು. ಈ ಹಿಂದಿನ ಸಿದ್ದರಾಮಯ್ಯನವರ ಸರಕಾರದಲ್ಲಿ ಸ್ಥಾನಮಾನ ಪಡೆದ ಕಾರಣಕ್ಕಾಗಿಯಾದರು ಕೋಮುವಾದ ಮತ್ತು ದ್ವೇಷದ ವಾತಾವರಣದ ವಿರುದ್ಧ ಹೋರಾಡದೆ, ಹೊಟ್ಟೆತುಂಬ ಕುಡಿದುಕೊಂಡು ಕಾಲಹಾಕಿದವರು ಈಗಲೂ ವಿಧಾನಸೌಧದ ಕಾರಿಡಾರಿನಲ್ಲಿ ಹೊಸವೇಶದೊಂದಿಗೆ ಪ್ರತ್ಯಕ್ಷವಾಗಿವೆಯಲ್ಲಾ, ಥೂತ್ತೇರಿ.


ಇದನ್ನೂ ಓದಿ: ಮೋದಿಗೂ ಅರ್ಜುನನಿಗೂ ಯಾವ ಸಂಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...