Homeಮುಖಪುಟಕೊರೊನಾ ಕೊಲ್ಲುತ್ತಿರುವಾಗ ಗೃಹಮಂತ್ರಿಗಳೆಲ್ಲಿ?: WhereIsAmitShah ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

ಕೊರೊನಾ ಕೊಲ್ಲುತ್ತಿರುವಾಗ ಗೃಹಮಂತ್ರಿಗಳೆಲ್ಲಿ?: WhereIsAmitShah ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಕೊರೊನಾ ವೇಗವಾಗಿ ಹರಡುತ್ತಿದೆ. ಭಾರತ ಮೂರನೇ ಹಂತಕ್ಕೆ ಪ್ರವೇಶಿಸಿ ಆಗಿದೆ. 21 ದಿನಗಳು ಭಾರತ ಸಂಪೂರ್ಣ ಲಾಕ್‌ಡೌನ್‌ ಆಗಿದೆ. 873 ಪ್ರಕರಣಗಳು ಭಾರತದಲ್ಲಿ ಕಾಣಿಸಿಕೊಂಡರೆ 19 ಜನ ಇದರಿಂದಾಗಿಯೇ ಸಾವನಪ್ಪಿದ್ದಾರೆ. ಇಂತಹ ಸಂದರ್ಭದಲ್ಲಿ ಕೊರೊನಾ ವಿರುದ್ಧದ ಸೆಣಸಾಟದಲ್ಲಿ ಮುಂದೆ ಇರಬೇಕಾಗಿದ್ದ ದೇಶದ ಗೃಹಮಂತ್ರಿ ಅಮಿತ್‌ ಶಾ ಎಲ್ಲಿದ್ದಾರೆ ಎಂಬ ವ್ಯಾಪಕವಾಗಿ ಕೇಳಿಬರುತ್ತಿದೆ.

ಹೌದು ಕಳೆದ ಹತ್ತು ಹದಿನೈದು ದಿನಗಳಿಂದ ಅಮಿತ್ ಶಾ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಆದರೆ ಇದೇ ಅವಧಿಯಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿದೆ. ಹಾಗಾಗಿ ಸಹಜವಾಗಿಯೇ ಅಮಿತ್‌ ಶಾ ವಿರುದ್ಧ ಆಕ್ರೋಶ ಹೊರಬಿದ್ದಿದೆ.

ಅದರಲ್ಲಿಯೂ ಸಾಮಾಜಿಕ ಜಾಲತಾಣಗಳಲ್ಲಿ ಅಮಿತ್‌ ಶಾ ವಿರುದ್ಧದ ಕಿಡಿ ಜೋರಾಗಿದ್ದು ಇಂದು WhereIsAmitShah ಹ್ಯಾಸ್‌ಟ್ಯಾಗ್‌ ಟ್ವಿಟ್‌ರ್‌ನಲ್ಲಿ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದೆ. ನೆಟ್ಟಿಗರ ಸಿಟ್ಟಿನ ಕೆಲ ಟ್ವೀಟ್‌ಗಳು ಕೆಳಗಿನಂತಿವೆ ನೋಡಿ.

ಕೋಣೆಯಲ್ಲಿಲ್ಲದ ಆನೆಯನ್ನು ಉದ್ದೇಶಿಸಿ ಮಾತನಾಡಲು ಸಮಯವಿದೆಯೇ? ಗೃಹ ಸಚಿವರು ಏಕೆ ಕಾಣೆಯಾಗಿದ್ದಾರೆ? ಈ ಯುದ್ಧದ ಮುಂಚೂಣಿಯಲ್ಲಿರಬೇಕಾದವರು ಅವರೇ ಅಲ್ಲವೇ? ಎಂದು ಅಜಯ್‌ ಕಾಮತ್‌ ಎಂಬುವವರು ಪ್ರಶ್ನಿಸಿದ್ದಾರೆ.

ಭಾರತದ ಗೃಹ ಸಚಿವ ಅಮಿತ್ ಶಾ ಎಲ್ಲಿ ಅಡಗಿದ್ದಾರೆ?

ಲಾಕ್‌ಡೌನ್ ಅನ್ನು ಜಾರಿಗೊಳಿಸುವುದು ಅವರ ಕೆಲಸವಲ್ಲವೇ? ಸಾಮೂಹಿಕ ವಲಸೆ ಸಮಸ್ಯೆಯನ್ನು ಪರಿಹರಿಸಲು ಅವರು ಯಾವ ಯೋಜನೆಯನ್ನು ರೂಪಿಸಿದ್ದಾರೆ? ಸಿಎಂಗಳೊಂದಿಗೆ ಹೇಗೆ ಸಹಕರಿಸಿದ್ದಾರೆ? ಇದು ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಲ್ಲವೇ?

ಒಂದು ಮಾತನ್ನೂ ಹೇಳಿಲ್ಲ ಮತ್ತು ದೃಶ್ಯದಿಂದ ಕಣ್ಮರೆಯಾಗಿದ್ದಾರೆ. ಲೋಹ್ ಪುರುಷ 2.0? ಎಂದು ಶ್ರೀವತ್ಸ ಎಂಬುವವರು ಕಿಡಿಕಾರಿದ್ದಾರೆ.

ಕೆಲ ದಿನಗಳ ಹಿಂದೇ ತಾನೇ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ನ 22ಕ್ಕೂ ಹೆಚ್ಚು ಶಾಸಕರನ್ನು ರಾಜೀನಾಮೆ ಕೊಡಸಿ ಅಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ಸ್ಥಾಪಿಸಲು ಅಮಿತ್‌ ಶಾಗೆ ಸಮಯವಿದೆ. ಆದರೆ ಭಾರತವನ್ನೇ ಕೊಲ್ಲುತ್ತಿರುವ ಕೊರೊನಾ ವಿರುದ್ಧ ಹೋರಾಡಲು ಸಮಯವಿಲ್ಲವೇ ಎಂದು ಬಹಳಷ್ಟು ಜನ ಹಿಂದೆ ಸಹ ಪ್ರಶ್ನಿಸಿದ್ದರು.

ಕಳೆದ ವರ್ಷ ನವೆಂಬರ್‌ 5 ರಂದು ಸಹ ನವದೆಹಲಿಯಲ್ಲಿ ಪೊಲೀಸರು ಮತ್ತು ವಕೀಲರ ಘರ್ಷಣೆ ತಾರಕಕ್ಕೇರಿದಾಗ ಅಮಿತ್‌ ಶಾ ಮಾತಾಡಿರಲಿಲ್ಲ. ಆಗಲೂ WhereIsAmitShah ಟ್ರೆಂಡಿಂಗ್‌ ಆಗಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...