Homeಮುಖಪುಟಮನೀಶ್ ಸಿಸೋಡಿಯಾ ವಿರುದ್ಧ ಪುರಾವೆ ಎಲ್ಲಿದೆ? ಸಿಬಿಐ, ಇಡಿಗೆ ಪ್ರಶ್ನಿಸಿದ ಸುಪ್ರೀಂಕೋರ್ಟ್

ಮನೀಶ್ ಸಿಸೋಡಿಯಾ ವಿರುದ್ಧ ಪುರಾವೆ ಎಲ್ಲಿದೆ? ಸಿಬಿಐ, ಇಡಿಗೆ ಪ್ರಶ್ನಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ಮದ್ಯ ನೀತಿ ಪ್ರಕರಣದಲ್ಲಿ ಬಂಧಿತ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯ ವೇಳೆ ಕೆಲವು ಅವಲೋಕನಗಳನ್ನು ಮಾಡಿದ ಸುಪ್ರೀಂ ಕೋರ್ಟ್, ಸಾಕ್ಷ್ಯಗಳನ್ನು ಸಂಪೂರ್ಣವಾಗಿ ನೀಡಲಾಗಿಲ್ಲ, ಸಿಸೋಡಿಯಾ ವಿರುದ್ಧ ಪುರಾವೆ ಎಲ್ಲಿದೆ ಎಂದು ಕೇಳಿದೆ.

ಪ್ರಕರಣದಲ್ಲಿ ಸ್ವತಃ ಆರೋಪಿಯಾಗಿರುವ ಉದ್ಯಮಿ ದಿನೇಶ್ ಅರೋರಾ ಅವರ ಹೇಳಿಕೆಯನ್ನು ಹೊರತುಪಡಿಸಿ, ಸಿಸೋಡಿಯಾ ವಿರುದ್ಧ ಪುರಾವೆ ಎಲ್ಲಿದೆ ಎಂದು ಕೋರ್ಟ್‌ ಕೇಳಿದೆ. ಅರೋರಾ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಮತ್ತು ಇತ್ತೀಚೆಗೆ ಜಾಮೀನು ಪಡೆದಿದ್ದಾರೆ.

ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠ, ಮನೀಷ್ ಸಿಸೋಡಿಯಾ ಅವರು ಹಣ ಪಡೆದಿದ್ದಾರೆ ಮತ್ತು ಅದು ಮದ್ಯದ ಗುಂಪಿನಿಂದ ಅವರಿಗೆ ಹೇಗೆ ತಲುಪಿತು ಎಂದು ಏಜೆನ್ಸಿಗಳ ಕೇಸ್ ಆಗಿದೆ ಎಂದು ಗಮನಿಸಿದ್ದಾರೆ.

100 ಕೋಟಿ ಮತ್ತು 30 ಕೋಟಿ ಎಂಬ ಎರಡು ಅಂಕಿಗಳನ್ನು ತೆಗೆದುಕೊಂಡಿದ್ದೀರಿ. ಅವರಿಗೆ ಇದನ್ನು ಪಾವತಿಸಿದವರು ಯಾರು? ಹಣವನ್ನು ಪಾವತಿಸಿದವರಲ್ಲಿ ಅನೇಕ ಜನರು ಇರಬಹುದು ಅದರಲ್ಲಿ ಮದ್ಯದ ನೀತಿಗೆ ಸಂಪರ್ಕ ಹೊಂದಿಲ್ಲದವರು ಇರಬಹುದು. ಪುರಾವೆ ಎಲ್ಲಿದೆ? ದಿನೇಶ್ ಅರೋರಾ ಅವರೇ ಸ್ವೀಕರಿಸಿದ್ದಾರೆ. ಹಾಗಾದ್ರೆ ಸಾಕ್ಷಿ ಎಲ್ಲಿದೆ? ದಿನೇಶ್ ಅರೋರಾ ಅವರ ಹೇಳಿಕೆಯನ್ನು ಹೊರತುಪಡಿಸಿ, ಬೇರೆ ಯಾವುದೇ ಪುರಾವೆಗಳಿವೆಯೇ ಎಂದು ನ್ಯಾಯಮೂರ್ತಿ ಖನ್ನಾ ಪ್ರಶ್ನಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ಸಲ್ಲಿಸಿದ ಎಎಪಿ ನಾಯಕನ ವಿರುದ್ಧದ ಆರೋಪಗಳನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದ ನ್ಯಾಯಮೂರ್ತಿ ಖನ್ನಾ, ಮನೀಶ್ ಸಿಸೋಡಿಯಾ ಈ ಪ್ರಕರಣದಲ್ಲಿ ಭಾಗಿಯಾಗಿರುವಂತೆ ಕಂಡು ಬರುತ್ತಿಲ್ಲ. ಇವರನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಹೇಗೆ ತಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ಕುರಿತು ಅರ್ಜಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ.

ಇದನ್ನು ಓದಿ: ಬಿಜೆಪಿ-ಜೆಡಿಎಸ್‌ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...