Homeಮುಖಪುಟಕಪಿಲ್ ಮಿಶ್ರಾ ಅಥವಾ ಬೇರೆ ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ: ಗೌತಮ್...

ಕಪಿಲ್ ಮಿಶ್ರಾ ಅಥವಾ ಬೇರೆ ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ: ಗೌತಮ್ ಗಂಭೀರ್

- Advertisement -
- Advertisement -

ದೆಹಲಿಯ ಹಿಂಸೆಗೆ ಕಾರಣವಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದವರು ಕಪಿಲ್ ಮಿಶ್ರಾ ಆಗಿರಲಿ ಅಥವಾ ಬೇರೆ ಯಾರೇ ಆಗಿರಲಿ, ಯಾವುದೇ ಪಕ್ಷಕ್ಕೆ ಸೇರಿದವರಾಗಿರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಕ್ರಿಕೆಟಿಗ ಮತ್ತು ದೆಹಲಿಯ ಬಿಜೆಪಿ ಸಂಸದ ಗೌತಮ್ ಗಂಭೀರ್ ಆಗ್ರಹಿಸಿದ್ದಾರೆ.

ಎರಡು ದಿನದ ಮೊದಲು ಬಿಜೆಪಿಯ ಕಪಿಲ್‌ ಮಿಶ್ರಾ ಹಿಂಸೆಗೆ ಪ್ರಚೋದನೆ ನೀಡುವ ಭಾಷಣ ಮಾಡಿದ್ದರು. ಶನಿವಾರ ರಾತ್ರಿಯಿಂದ ಈಶಾನ್ಯ ದೆಹಲಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ, ಆದರೆ ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ಬೀದಿಗಿಳಿಯಬೇಕಾಗುತ್ತದೆ ಎಂದು ಪೊಲೀಸ್‌ ಅಧಿಕಾರಿಗಳ ಎದುರಿಗೆ ಅವರಾಡಿದ್ದ ಮಾತುಗಳು ವೈರಲ್‌ ಆಗಿದ್ದವು.

ಒಟ್ಟಿನಲ್ಲಿ ಹಿಂಸೆಗೆ ಬಿಜೆಪಿಯ ಮುಖಂಡರು ಕಾರಣರಾಗಿದ್ದರೆ ಅವರ ಮೇಲೆಯೂ ಸಹ ಕ್ರಮ ತೆಗೆದುಕೊಳ್ಳಬೇಕು, ಆ ಮೂಲಕ ಶಾಂತಿ ಕಾಪಾಡಬೇಕು ಎಂದು ಗೌತಮ್‌ ಗಂಭೀರ್‌ ಒತ್ತಾಯ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...