ದೆಹಲಿಯ ಹಿಂಸೆಗೆ ಕಾರಣವಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದವರು ಕಪಿಲ್ ಮಿಶ್ರಾ ಆಗಿರಲಿ ಅಥವಾ ಬೇರೆ ಯಾರೇ ಆಗಿರಲಿ, ಯಾವುದೇ ಪಕ್ಷಕ್ಕೆ ಸೇರಿದವರಾಗಿರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಕ್ರಿಕೆಟಿಗ ಮತ್ತು ದೆಹಲಿಯ ಬಿಜೆಪಿ ಸಂಸದ ಗೌತಮ್ ಗಂಭೀರ್ ಆಗ್ರಹಿಸಿದ್ದಾರೆ.
BJP MP Gautam Gambhir on Kapil Mishra's speech: No matter who the person is, whether he is Kapil Mishra or anyone else, belonging to any party, if he has given any provoking speech then strict action should be taken against him. #NortheastDelhi pic.twitter.com/pBmtBORxIY
— ANI (@ANI) February 25, 2020
ಎರಡು ದಿನದ ಮೊದಲು ಬಿಜೆಪಿಯ ಕಪಿಲ್ ಮಿಶ್ರಾ ಹಿಂಸೆಗೆ ಪ್ರಚೋದನೆ ನೀಡುವ ಭಾಷಣ ಮಾಡಿದ್ದರು. ಶನಿವಾರ ರಾತ್ರಿಯಿಂದ ಈಶಾನ್ಯ ದೆಹಲಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ, ಆದರೆ ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ಬೀದಿಗಿಳಿಯಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳ ಎದುರಿಗೆ ಅವರಾಡಿದ್ದ ಮಾತುಗಳು ವೈರಲ್ ಆಗಿದ್ದವು.
दिल्ली पुलिस को तीन दिन का अल्टीमेटम – जाफराबाद और चांद बाग की सड़कें खाली करवाइए इसके बाद हमें मत समझाइयेगा , हम आपकी भी नहीं सुनेंगे, सिर्फ तीन दिन@DelhiPolice pic.twitter.com/9ozTazMZew
— Kapil Mishra (@KapilMishra_IND) February 23, 2020
ಒಟ್ಟಿನಲ್ಲಿ ಹಿಂಸೆಗೆ ಬಿಜೆಪಿಯ ಮುಖಂಡರು ಕಾರಣರಾಗಿದ್ದರೆ ಅವರ ಮೇಲೆಯೂ ಸಹ ಕ್ರಮ ತೆಗೆದುಕೊಳ್ಳಬೇಕು, ಆ ಮೂಲಕ ಶಾಂತಿ ಕಾಪಾಡಬೇಕು ಎಂದು ಗೌತಮ್ ಗಂಭೀರ್ ಒತ್ತಾಯ ಮಾಡಿದ್ದಾರೆ.