Homeಮುಖಪುಟಟೀಕೆಗಳು ಪ್ರಜಾಪ್ರಭುತ್ವದ ಸಂಕೇತವಲ್ಲವೇ? ಭಾರತಕ್ಕೆ ಬ್ರಿಟೀಷ್ ಸಂಸದೆಯ ಪ್ರಶ್ನೆ

ಟೀಕೆಗಳು ಪ್ರಜಾಪ್ರಭುತ್ವದ ಸಂಕೇತವಲ್ಲವೇ? ಭಾರತಕ್ಕೆ ಬ್ರಿಟೀಷ್ ಸಂಸದೆಯ ಪ್ರಶ್ನೆ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಭಾರತದ ನೀತಿಗಳನ್ನು ಟೀಕಿಸಿದ ಬ್ರಿಟಿಷ್ ಸಂಸದೆ ಡೆಬ್ಬಿ ಅಬ್ರಹಾಮ್ಸ್ ಅವರನ್ನು ದೆಹಲಿ ವಿಮಾನ ನಿಲ್ದಾಣದಿಂದ ನಿನ್ನೆ ವಾಪಾಸು ಕಳುಹಿಸಲಾಗಿತ್ತು. ವಿಚಾರವಾಗಿ ಒಂದು ದಿನದ ನಂತರ ಸರ್ಕಾರ ಈ ಬಗ್ಗೆ ಸಮರ್ಥನೆ ನೀಡಿದ್ದು “ಭಾರತದ ರಾಷ್ಟ್ರೀಯ ಹಿತಾಸಕ್ತಿಯ ವಿರುದ್ಧದ ಚಟುವಟಿಕೆಗಾಗಿ ಭಾರತಕ್ಕೆ ಪ್ರಯಾಣಿಸುವ ಮೊದಲು ಅವರ ಇ-ವೀಸಾವನ್ನು ರದ್ದುಪಡಿಸಲಾಗಿದೆ”ಎಂದಿದೆ. ಅಲ್ಲದೇ ಫೆಬ್ರವರಿ 14 ರಂದು ವೀಸಾವನ್ನು ತಿರಸ್ಕರಿಸಿದ ಬಗ್ಗೆ ಅವರಿಗೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ಅಬ್ರಹಾಮ್ಸ್ “ಸ್ನೇಹಿತನೊಬ್ಬ ಇನ್ನೊಬ್ಬ ಸ್ನೇಹಿತನನ್ನು ಗೌರವದಿಂದ ಟೀಕಿಸಲು ಸಾಧ್ಯವಿಲ್ಲ ಎಂಬುದು ತುಂಬಾ ನಿರಾಶಾದಾಯಕವಾಗಿದೆ. ಇಂತಹಾ ಟೀಕೆಗಳು ಆರೋಗ್ಯಕರ ಪ್ರಜಾಪ್ರಭುತ್ವದ ಸಂಕೇತವಲ್ಲವೇ?” ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ತಮ್ಮ ವೀಸಾವೂ ಈ ವರ್ಷದ ಅಕ್ಟೋಬರ್ ವರೆಗೆ ಮಾನ್ಯವಾಗಿದೆ ಎಂದು ಸಾಬೀತುಪಡಿಸಲು ಟ್ವಿಟ್ಟರ‌ನಲ್ಲಿ ಅದರ ಫೋಟೋವನ್ನು ಕೂಡಾ ಹಾಕಿದ್ದಾರೆ.

ನಾನು ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯದ PRO ಆಗಿದ್ದೇನೆ. ನಿಯಂತ್ರಣ ರೇಖೆಯ ಎರಡೂ ಬದಿಗಳಲ್ಲಿ ಕಾಶ್ಮೀರಿಗಳು ಸೇರಿದಂತೆ ಈ ಹಕ್ಕುಗಳನ್ನು ಪಡೆಯದ ಜನರ ಪರವಾಗಿ ನಾನು ಯಾವಾಗಲೂ ಮಾತನಾಡುತ್ತೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಅಬ್ರಹಾಮ್ಸ್ ಅವರಿಗೆ ಅಕ್ಟೋಬರ್ 7, 2019 ರಂದು ಇ-ಬಿಸಿನೆಸ್ ವೀಸಾ ನೀಡಲಾಗಿತ್ತು, ಇದು ವ್ಯವಹಾರ ಸಭೆಗಳಿಗೆ ಹಾಜರಾಗಲು 2020ರ ಅಕ್ಟೋಬರ್ 5ರವರೆಗೆ ಮಾನ್ಯವಾಗಿತ್ತು.

ಸೋಮವಾರ ಡೆಬ್ಬಿ ಅಬ್ರಹಾಮ್ಸ್ ದುಬೈನಿಂದ ವಿಮಾನದಲ್ಲಿ ಬೆಳಿಗ್ಗೆ 8.50 ರ ಸುಮಾರಿಗೆ ದೆಹಲಿಗೆ ಬಂದಾಗ, ಅವರ ವೀಸಾವನ್ನು ರದ್ದು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ನನ್ನನ್ನು ತುಂಬಾ ಕೆಟ್ಟದಾಗಿ ಮತ್ತು ಅಪರಾಧಿಗಳ ರೀತಿ ನಡೆಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...