Homeಕರ್ನಾಟಕಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

ಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

- Advertisement -
- Advertisement -

ರಾಜ್ಯ ಚುನಾವಣಾ ಸಂದರ್ಭದಲ್ಲಿ ಸಿಎಂ ರೇಸ್‌ನಲ್ಲಿದ್ದ ಬಿಜೆಪಿಯ ಕೆಲವು ಲಿಂಗಾಯತ ನಾಯಕರು ಬಿಜೆಪಿ ತೊರೆಯುತ್ತಿರುವುದಕ್ಕೆ ಪಕ್ಷದಲ್ಲಿನ ಬ್ರಾಹ್ಮಣ ನಾಯಕರೇ ಕಾರಣ ಎನ್ನುವ ಆರೋಪಗಳು ಕೇಳಿಬಂದಿವೆ. ಇದ್ದಕ್ಕೆ ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತರೇ ಮುಖ್ಯಮಂತ್ರಿ ಆಗೋದು ಎಂದು ಹೇಳಿದ್ದಾರೆ.

ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ”ಯಾವ್ ಜೋಶಿ? ಯಾವ್ ಬಿ.ಎಲ್. ಸಂತೋಷ? ಅವರು ಮುಖ್ಯಮಂತ್ರಿ ಆಗಲ್ಲ. ಈ ಬಾರಿ ಲಿಂಗಾಯತರೇ ಮುಖ್ಯಮಂತ್ರಿ ಆಗೋದು” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ಯಾರು ಆಗಬೇಕು ಎಂಬ ಚರ್ಚೆ ಬೆನ್ನಲ್ಲೇ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಲಿಂಗಾಯತರೇ ಮುಖ್ಯಮಂತ್ರಿಯಾಗುತ್ತರೆ ಎಂದು ಹೇಳಿದ್ದಾರೆ. ”ಪ್ರಹ್ಲಾದ್‌ ಜೋಶಿ ಅವರು ಕೇಂದ್ರ ರಾಜಕೀಯದಲ್ಲಿ ಇರುತ್ತಾರೆ. ಅವರು ಇಲ್ಲಿಗೆ ಬರುವ ಪ್ರಮೇಯ ಇಲ್ಲ. ಬಿಎಲ್‌ ಸಂತೋಷ್‌ ಕೂಡ ಇಲ್ಲಿಗೆ ಬರುವ ಮಾತಿಲ್ಲ. ಹೀಗಾಗಿ ಮುಂದೆ ಯಾವತ್ತಿದ್ದರೂ ಲಿಂಗಾಯತ ನಾಯಕರೇ ಮುಂದಿನ ಮುಖ್ಯಮಂತ್ರಿ” ಎಂದು ಹೇಳಿದರು.

ಇದನ್ನೂ ಓದಿ: ನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

”ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲ. ಲಿಂಗಾಯತರು ಯಾರದರೂ ಬರಬಹುದು. ಅರವಿಂದ ಬೆಲ್ಲದ್‌ ಬಗ್ಗೆ ನನಗೆ ಗೊತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿಯೊಳಗೆ ಲಿಂಗಾಯತರು ಮಾತ್ರವೇ ಮುಖ್ಯಮಂತ್ರಿ ಆಗುತ್ತಾರೆ” ಎಂದರು.

ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ

”ಕೆಲವರು ಭಾರತೀಯ ಜನತಾ ಪಾರ್ಟಿಯನ್ನು ಬಿಟ್ಟು ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್‌ ಸೇರಿಕೊಂಡಿದ್ದಾರೆ. ಯಾವುದು ದೇಶ ವಿರೋಧಿ 2047ರಲ್ಲಿ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಉದ್ದೇಶವಿರುವ ಎಸ್‌ಡಿಪಿಐ ಹಾಗೂ ಪಿಎಫ್‌ಐ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಕಾಂಗ್ರೆಸ್‌ ಜೊತೆ ಹೋಗಿರುವವರು ಬಿಜೆಪಿಯಲ್ಲಿ ಎಲ್ಲ ಅಧಿಕಾರವನ್ನು ಅನುಭವಿಸಿದ್ದಾರೆ” ಎಂದು ಹೆಸರು ಹೇಳದೇ ಶೆಟ್ಟರ್ ವಿರುದ್ಧ ಯತ್ನಾಳ್ ವಾಗ್ಧಾಳಿ ನಡೆಸಿದರು.

”ಬಿಜೆಪಿಯಲ್ಲಿ ಎಲ್ಲ ಸುಖವನ್ನು ಅನುಭವಿಸಿದ ಶೆಟ್ಟರ್ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಹೋದರೆ ಪಕ್ಷಕ್ಕೆ ನಷ್ಟವಿಲ್ಲ. ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ನಾಯಕರಿದ್ದಾರೆ. ಲಿಂಗಾಯತ ಹೆಸರು
ಹೇಳಿಕೊಂಡು ಶೆಟ್ಟರ್‌ ಶಾಸಕ, ಮಂತ್ರಿ, ಉಪ ಮುಖ್ಯಮಂತ್ರಿ, ಸ್ಪೀಕರ್ ಆಗಿ ಸುಖ ಉಂಡಿದ್ದಾರೆ” ಎಂದು ಟೀಕಿಸಿದರು.

”ಶಾಸಕ, ಸಚಿವ, ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಹಾಗೂ ಸ್ಪೀಕರ್‌ ಹೀಗೆ ಎಲ್ಲ ಸ್ಥಾನಮಾನಗಳನ್ನು ಅನುಭವಿಸಿ ಹೋಗಿದ್ದಾರೆ. ದುಡಿಯದೇ ದುಃಖಪಡದೆ ಉಂಡಿದ್ದಾರೆ. ಇಲ್ಲಿ ದುಡಿದವರೇ ಬೇರೆ. ಕರ್ನಾಟಕಕ್ಕೆ ಹೊಸ ನಾಯಕತ್ವ ಬರಲಿದೆ. ಹೊಸ ಎರಡನೇ ಸಾಲಿನ ನಾಯಕರು ಇಲ್ಲಿ ಮುಂದೆ ಬರಲಿದ್ದಾರೆ, ನಮ್ಮಲ್ಲೂ ಯುವ ನಾಯಕರು ಇದ್ದಾರೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...