Homeಕರ್ನಾಟಕಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

ಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

- Advertisement -
- Advertisement -

ರಾಜ್ಯ ಚುನಾವಣಾ ಸಂದರ್ಭದಲ್ಲಿ ಸಿಎಂ ರೇಸ್‌ನಲ್ಲಿದ್ದ ಬಿಜೆಪಿಯ ಕೆಲವು ಲಿಂಗಾಯತ ನಾಯಕರು ಬಿಜೆಪಿ ತೊರೆಯುತ್ತಿರುವುದಕ್ಕೆ ಪಕ್ಷದಲ್ಲಿನ ಬ್ರಾಹ್ಮಣ ನಾಯಕರೇ ಕಾರಣ ಎನ್ನುವ ಆರೋಪಗಳು ಕೇಳಿಬಂದಿವೆ. ಇದ್ದಕ್ಕೆ ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತರೇ ಮುಖ್ಯಮಂತ್ರಿ ಆಗೋದು ಎಂದು ಹೇಳಿದ್ದಾರೆ.

ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ”ಯಾವ್ ಜೋಶಿ? ಯಾವ್ ಬಿ.ಎಲ್. ಸಂತೋಷ? ಅವರು ಮುಖ್ಯಮಂತ್ರಿ ಆಗಲ್ಲ. ಈ ಬಾರಿ ಲಿಂಗಾಯತರೇ ಮುಖ್ಯಮಂತ್ರಿ ಆಗೋದು” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ಯಾರು ಆಗಬೇಕು ಎಂಬ ಚರ್ಚೆ ಬೆನ್ನಲ್ಲೇ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಲಿಂಗಾಯತರೇ ಮುಖ್ಯಮಂತ್ರಿಯಾಗುತ್ತರೆ ಎಂದು ಹೇಳಿದ್ದಾರೆ. ”ಪ್ರಹ್ಲಾದ್‌ ಜೋಶಿ ಅವರು ಕೇಂದ್ರ ರಾಜಕೀಯದಲ್ಲಿ ಇರುತ್ತಾರೆ. ಅವರು ಇಲ್ಲಿಗೆ ಬರುವ ಪ್ರಮೇಯ ಇಲ್ಲ. ಬಿಎಲ್‌ ಸಂತೋಷ್‌ ಕೂಡ ಇಲ್ಲಿಗೆ ಬರುವ ಮಾತಿಲ್ಲ. ಹೀಗಾಗಿ ಮುಂದೆ ಯಾವತ್ತಿದ್ದರೂ ಲಿಂಗಾಯತ ನಾಯಕರೇ ಮುಂದಿನ ಮುಖ್ಯಮಂತ್ರಿ” ಎಂದು ಹೇಳಿದರು.

ಇದನ್ನೂ ಓದಿ: ನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

”ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲ. ಲಿಂಗಾಯತರು ಯಾರದರೂ ಬರಬಹುದು. ಅರವಿಂದ ಬೆಲ್ಲದ್‌ ಬಗ್ಗೆ ನನಗೆ ಗೊತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿಯೊಳಗೆ ಲಿಂಗಾಯತರು ಮಾತ್ರವೇ ಮುಖ್ಯಮಂತ್ರಿ ಆಗುತ್ತಾರೆ” ಎಂದರು.

ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ

”ಕೆಲವರು ಭಾರತೀಯ ಜನತಾ ಪಾರ್ಟಿಯನ್ನು ಬಿಟ್ಟು ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್‌ ಸೇರಿಕೊಂಡಿದ್ದಾರೆ. ಯಾವುದು ದೇಶ ವಿರೋಧಿ 2047ರಲ್ಲಿ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಉದ್ದೇಶವಿರುವ ಎಸ್‌ಡಿಪಿಐ ಹಾಗೂ ಪಿಎಫ್‌ಐ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಕಾಂಗ್ರೆಸ್‌ ಜೊತೆ ಹೋಗಿರುವವರು ಬಿಜೆಪಿಯಲ್ಲಿ ಎಲ್ಲ ಅಧಿಕಾರವನ್ನು ಅನುಭವಿಸಿದ್ದಾರೆ” ಎಂದು ಹೆಸರು ಹೇಳದೇ ಶೆಟ್ಟರ್ ವಿರುದ್ಧ ಯತ್ನಾಳ್ ವಾಗ್ಧಾಳಿ ನಡೆಸಿದರು.

”ಬಿಜೆಪಿಯಲ್ಲಿ ಎಲ್ಲ ಸುಖವನ್ನು ಅನುಭವಿಸಿದ ಶೆಟ್ಟರ್ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಹೋದರೆ ಪಕ್ಷಕ್ಕೆ ನಷ್ಟವಿಲ್ಲ. ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ನಾಯಕರಿದ್ದಾರೆ. ಲಿಂಗಾಯತ ಹೆಸರು
ಹೇಳಿಕೊಂಡು ಶೆಟ್ಟರ್‌ ಶಾಸಕ, ಮಂತ್ರಿ, ಉಪ ಮುಖ್ಯಮಂತ್ರಿ, ಸ್ಪೀಕರ್ ಆಗಿ ಸುಖ ಉಂಡಿದ್ದಾರೆ” ಎಂದು ಟೀಕಿಸಿದರು.

”ಶಾಸಕ, ಸಚಿವ, ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಹಾಗೂ ಸ್ಪೀಕರ್‌ ಹೀಗೆ ಎಲ್ಲ ಸ್ಥಾನಮಾನಗಳನ್ನು ಅನುಭವಿಸಿ ಹೋಗಿದ್ದಾರೆ. ದುಡಿಯದೇ ದುಃಖಪಡದೆ ಉಂಡಿದ್ದಾರೆ. ಇಲ್ಲಿ ದುಡಿದವರೇ ಬೇರೆ. ಕರ್ನಾಟಕಕ್ಕೆ ಹೊಸ ನಾಯಕತ್ವ ಬರಲಿದೆ. ಹೊಸ ಎರಡನೇ ಸಾಲಿನ ನಾಯಕರು ಇಲ್ಲಿ ಮುಂದೆ ಬರಲಿದ್ದಾರೆ, ನಮ್ಮಲ್ಲೂ ಯುವ ನಾಯಕರು ಇದ್ದಾರೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...