Homeಕರ್ನಾಟಕಬಾಗಲಕೋಟೆ ಜಿಲ್ಲೆಯಲ್ಲಿ ಯಾವ ಪಕ್ಷಕ್ಕೆ ಮುನ್ನಡೆ?

ಬಾಗಲಕೋಟೆ ಜಿಲ್ಲೆಯಲ್ಲಿ ಯಾವ ಪಕ್ಷಕ್ಕೆ ಮುನ್ನಡೆ?

- Advertisement -
- Advertisement -

ಬಾಗಲಕೋಟೆ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಎಚ್‌ವೈ ಮೇಟಿ- ಮುನ್ನಡೆ

ಬಿಜೆಪಿ- ವೀರಣ್ಣ ಚರಂತಿಮಠ- ಹಿನ್ನಡೆ

ಜೆಡಿಎಸ್- ಡಾ. ದೇವರಾಜ್ ಪಾಟೀಲ್- ಹಿನ್ನಡೆ

ಪಕ್ಷೇತರ- ಮಲ್ಲಿಕಾರ್ಜುನ್ ಚರಂತಿಮಠ- ಹಿನ್ನಡೆ

ಹಿನ್ನೆಲೆ:- 2008ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ವೀರಣ್ಣ ಚರಂತಿಮಠ 46,452 ಮತ ಪಡೆಯುವ ಮೂಲಕ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಎಚ್‌ ವೈ ಮೇಟಿ ಅವರನ್ನು 9,246 ಮತಗಳ ಅಂತರದಲ್ಲಿ ಸೋಲಿಸಿ ಶಾಸಕರಾಗಿದ್ದರು. ಎಚ್‌ ವೈ ಮೇಟಿ 37,206 ಮತ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಪಿ ಎಚ್‌ ಪೂಜಾರ 17,389 ಮತ ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.

2013ರ ಚುನಾವಣೆಯಲ್ಲಿ ಸುದೀರ್ಘ ವರ್ಷಗಳ ನಂತರ ಎಚ್‌ ವೈ ಮೇಟಿ ಮೂಲಕ ಕಾಂಗ್ರೆಸ್‌ ಈ ಕ್ಷೇತ್ರವನ್ನು ಮರಳಿ ಪಡೆಯಿತು. ಎಚ್‌ ವೈ ಮೇಟಿ 68,216 ಮತ ಪಡೆದು ಗೆಲುವಿನ ನಗೆ ಬೀರಿದರೆ, ಬಿಜೆಪಿಯ ಚರಂತಿಮಠ ತೀವ್ರ ಪೈಪೋಟಿ ನೀಡಿ, 2,900 ಮತಗಳ ಅಂತರದಿಂದ ಸೋಲು ಕಂಡರು. ಎಚ್‌ ವೈ ಮೇಟಿ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು.

2018ರ ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತೆ ವೀರಣ್ಣ ಚರಂತಿಮಠ ಮೂಲಕ ಬಾಗಲಕೋಟೆ ಕ್ಷೇತ್ರವನ್ನು ಮರಳಿ ಪಡೆಯಿತು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಎಚ್‌ ವೈ ಮೇಟಿ 69,719 ಮತ ಪಡೆದರೆ, ಚರಂತಿಮಠ 85,653 ಮತ ಪಡೆದು ಗೆಲುವಿನ ನಗೆ ಬೀರಿದರು.

*****

ಹುನಗುಂದ

ಕಾಂಗ್ರೆಸ್ – ವಿಜಯಾನಂದ್ ಕಾಶಪ್ಪನವರ- ಮುನ್ನಡೆ

ಬಿಜೆಪಿ – ದೊಡ್ಡನಗೌಡ ಜಿ ಪಾಟೀಲ್- ಹಿನ್ನಡೆ

ಕೆಆರ್‌ಪಿಪಿ- ನವಲಿಹಿರೇಮಠ- ಹಿನ್ನಡೆ

ಹಿನ್ನೆಲೆ:- 2008ರಲ್ಲಿ ಬಿಜೆಪಿ ಎರಡನೇ ಅವಧಿಗೆ ಇಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗುತ್ತದೆ. ದೊಡ್ಡನಗೌಡ ಪಾಟೀಲ 53,644 ಮತ ಪಡೆದು ಗೆಲುವಿನ ನಗೆ ಬೀರುತ್ತಾರೆ. ಕಾಂಗ್ರೆಸ್ಸಿನಿಂದ ವಿಜಯಾನಂದ ಕಾಶಪ್ಪನವರ 48,575 ಮತ ಪಡೆಯುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು.

2013ರ ಚುನಾವಣೆಯಲ್ಲಿ ವಿಜಯಾನಂದ ಕಾಶಪ್ಪನವರ 72,720 ಮತ ಪಡೆಯುವ ಮೂಲಕ ಭರ್ಜರಿ ಜಯ ಸಾಧಿಸುವುದರೊಂದಿಗೆ ಕಾಂಗ್ರೆಸಿನ ಹಿಡಿತಕ್ಕೆ ಕ್ಷೇತ್ರ ಮರಳುತ್ತದೆ. ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ ವಿರುದ್ಧ 15,797 ಮತಗಳ ಅಂತರದಿಂದ ಕಾಶಪ್ಪನವರ ಗೆಲುವು ಕಂಡರು.

2018ರ ಚುನಾವಣೆಯಲ್ಲಿ ಬಿಜೆಪಿಯ ದೊಡ್ಡನಗೌಡ ಪಾಟೀಲ ಅವರು 65,012 ಮತ ಪಡೆದು ಗೆಲುವು ಕಂಡರು. ಇತ್ತ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ವಿಜಯಾನಂದ ಕಾಶಪ್ಪನವರ 59,785 ಮತ ಪಡೆದು, 5227 ಮತಗಳ ಅಂತರಲ್ಲಿ ಸೋಲು ಕಾಣುತ್ತಾರೆ. ಪಕ್ಷೇತರವಾಗಿ ಸ್ಪರ್ಧಿಸಿದ್ದ ಎಸ್‌ ಆರ್‌ ನವಲಿ ಹಿರೇಮಠ ಅವರು ಕಾಂಗ್ರೆಸ್‌ ಮತ್ತು ಬಿಜೆಪಿ ಪೈಪೋಟಿ ನಡುವೆಯೂ 25,850 ಮತಗಳನ್ನು ಪಡೆದು ಗಮನ ಸೆಳೆಯುತ್ತಾರೆ.

*******

ಬಾದಾಮಿ

ಕಾಂಗ್ರೆಸ್- ಭೀಮಸೇನ್ ಚಿಮ್ಮನಕಟ್ಟಿ- ಮುನ್ನಡೆ

ಬಿಜೆಪಿ- ಶಾಂತಗೌಡ ಪಾಟೀಲ್- ಹಿನ್ನಡೆ

ಜೆಡಿಎಸ್- ಹನಮಂತ ಮಾವಿನಮರದ- ಹಿನ್ನಡೆ

ಹಿನ್ನೆಲೆ:- 2004ರಲ್ಲಿ ಬಾದಾಮಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿತು. ಎಂ.ಕೆ ಪಟ್ಟಣಶೆಟ್ಟಿ ಅವರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಬಳಿಕ 2008ರಲ್ಲೂ ಪಟ್ಟಣಶೆಟ್ಟಿ ಗೆಲುವು ಕಾಣುತ್ತಾರೆ. 2013ರಲ್ಲಿ ಬಿ.ಬಿ ಚಿಮ್ಮನಕಟ್ಟಿ ಗೆಲುವು ಸಾಧಿಸಿದರು. 2018ರಲ್ಲಿ ರಾಜ್ಯದ ಚಿತ್ತ ಬಾದಾಮಿಯತ್ತ ನೆಟ್ಟಿತ್ತು. ಏಕೆಂದರೆ ಕಾಂಗ್ರೆಸ್‌ನಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದರು. ಅವರ ವಿರುದ್ಧ ಪ್ರಬಲ ಅಭ್ಯರ್ಥಿಯಾಗಿದ್ದ ಬಿ ಶ್ರೀರಾಮುಲು ಸ್ಪರ್ಧಿಸಿದ್ದರು. ಅಂತಿಮವಾಗಿ ಕಾಂಗ್ರೆಸ್ ಪಕ್ಷ ಜಯ ಗಳಿಸಿತು.

******

ಬೀಳಗಿ

ಕಾಂಗ್ರೆಸ್- ಜೆಟಿ ಪಾಟೀಲ್- ಹಿನ್ನಡೆ

ಬಿಜೆಪಿ- ಮುರಗೇಶ್ ನಿರಾಣಿ- ಮುನ್ನಡೆ

ಜೆಡಿಎಸ್-  ರುಕ್ಮುದ್ದೀನ್‌ ಸೌದಗಲ್‌- ಹಿನ್ನಡೆ

2004ರ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದ ಮುರಗೇಶ ನಿರಾಣಿ, ಕಾಂಗ್ರೆಸ್ ಹುರಿಯಾಳು ಜೆಟಿ ಪಾಟೀಲ್ ಅವರ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕಿದರು. ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ ನಿರಾಣಿ, ಜೆಟಿ ಪಾಟೀಲ್ ವಿರುದ್ಧ 17,325 ಮತಗಳ ಅಂತರಿಂದ ಗೆಲುವು ಕಂಡರು.

2008ರ ಚುನಾವಣೆಯಲ್ಲಿ ಮತ್ತೆ ಮುರುಗೇಶ ನಿರಾಣಿ ಬಿಜೆಪಿ ಪಕ್ಷದಿಂದ ಗೆಲುವು ಕಂಡರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯಥಿಯಾಗಿದ್ದ ಅಜಯ್‌ ಕುಮಾರ್‌ ಸರನಾಯಕ ಅವರು ಪ್ರಬಲ ಪೈಪೋಟಿ ನೀಡಿ ಕೇವಲ 3,124 ಮತಗಳ ಅಂತರದಿಂದ ನಿರಾಣಿ ವಿರುದ್ಧ ಸೋಲುಣಬೇಕಾಯಿತು. ಗೆದ್ದ ನಿರಾಣಿ ಮಂತ್ರಿಯಾದರು. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಜೆ.ಟಿ ಪಾಟೀಲ ಅವರನ್ನು ಕಣಕ್ಕಿಳಿಸಿದರು. ಈ ವೇಳೆ ನಿರಾಣಿಯ ಹ್ಯಾಟ್ರಿಕ್‌ ಗೆಲುವಿಗೆ ಜೆ.ಟಿ ಪಾಟೀಲ ಬ್ರೇಕ್ ಹಾಕಿದರು. ನಿರಾಣಿ ವಿರುದ್ಧ 11,238 ಮತಗಳ ಅಂತರದಿಂದ ಗೆದ್ದ ಜೆಟಿ ಪಾಟೀಲ್ ಅವರು ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

ಕಳೆದ ಬಾರಿಯ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುರುಗೇಶ ನಿರಾಣಿ 85,135 ಮತ ಪಡೆಯುವ ಮೂಲಕ ಗೆಲುವಿನ ನಗೆ ಬೀರಿದರು. ಕಾಂಗ್ರೆಸ್‌ ಅಭ್ಯರ್ಥಿ ಜೆ.ಟಿ ಪಾಟೀಲ್ ತೀವ್ರ ಪೈಪೋಟಿ ನೀಡಿ ಕೇವಲ 4,811 ಮತಗಳ ಅಂತರದಿಂದ ಸೋಲುಂಡರು. ಬಿಜೆಪಿ ಸರ್ಕಾರದಲ್ಲಿ ನಿರಾಣಿ ಎರಡನೇ ಬಾರಿ ಮಂತ್ರಿಯಾದರು.

******

ಮುಧೋಳ

ಕಾಂಗ್ರೆಸ್- ಆರ್‌ಬಿ ತಿಮ್ಮಾಪೂರ- ಹಿನ್ನಡೆ

ಬಿಜೆಪಿ- ಗೋವಿಂದ್ ಕಾರಜೋಳ- ಮುನ್ನಡೆ

ಪಕ್ಷೇತರ- ಸತೀಶ್ ಬಂಡಿವಡ್ಡರ್- ಹಿನ್ನಡೆ

2004ರ ಚುನಾವಣೆಯಲ್ಲಿ 71,814 ಮತ ಪಡೆಯುವ ಮೂಲಕ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ನ ಆರ್.ಬಿ ತಿಮ್ಮಾಪೂರ ವಿರುದ್ಧ 32,942 ಮತಗಳ ಅಂತರದಿಂದ ದೊಡ್ಡ ಗೆಲುವು ಸಾಧಿಸಿದರು. 2008ರಲ್ಲೂ ಕಾಂಗ್ರೆಸ್‌ನ ತಿಮ್ಮಾಪೂರ ಹಾಗೂ ಬಿಜೆಪಿಯ ಕಾರಜೋಳ ನಡುವೆಯೇ ಫೈಟ್ ಮುಂದುವರೆಯಿತು. ಕಾರಜೋಳ ಗೆಲುವಿನ ಓಟವನ್ನು ಮುಂದುವರೆಸಿದರು.ತಿಮ್ಮಾಪೂರ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಈ ಚುನಾವಣೆಯಲ್ಲಿ ಇಬ್ಬರ ನಡುವಿನ ಮತಗಳಿಕೆಯ ಅಂತರ ಕೇವಲ 7,378 ಆಗಿತ್ತು.

2013ರ ಚುನಾವಣೆಯಲ್ಲೂ ಕೈ-ಕಮಲದಿಂದ ಸಾಂಪ್ರದಾಯಿಕ ಎದುರಾಳಿಗಳಾದ ಕಾರಜೋಳ ಹಾಗೂ ತಿಮ್ಮಾಪೂರ ಸ್ಪರ್ಧೆಗಿಳಿದರು. ಈ ಬಾರಿಯ ಮತಗಳಿಕೆಯ ಅಂತರ ಕಡಿಮೆಯಾಯಿತೇ ವಿನಃ ಗೆಲುವು-ಸೋಲಿನಲ್ಲಿ ವ್ಯತ್ಯಾಸವಾಗಲಿಲ್ಲ. ಕಾರಜೋಳ ಅವರು ಕೇವಲ 5,178 ಮತಗಳಿಂದ ಗೆಲುವು ಸಾಧಿಸಿದರು.

ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್, 2018ರ ಚುನಾವಣೆಯಲ್ಲಿ ಕಾರಜೋಳ ವಿರುದ್ಧ ತನ್ನ ಅಭ್ಯರ್ಥಿಯನ್ನೇ ಬದಲಾಯಿಸಿತು. ಕಾಂಗ್ರೆಸ್‌ನಿಂದ ಸತೀಶ್ ಬಂಡಿವಡ್ಡರಗೆ ಟಿಕೆಟ್ ನೀಡಲಾಯಿತಾದರೂ ಪ್ರಬಲ ನಾಯಕನಾಗಿ ಬೆಳೆದುನಿಂತಿದ್ದ ಬಿಜೆಪಿಯ ಕಾರಜೋಳ ವಿರುದ್ಧ ಆಟ ನಡೆಯಲಿಲ್ಲ. ಮತ್ತೆ ಕಾರಜೋಳ ವಿಜಯಪತಾಕೆ ಹಾರಿಸಿದರು. ಆ ಮೂಲಕ ಸತತ ನಾಲ್ಕನೇ ಅವಧಿಗೆ ಕಾರಜೋಳ ಶಾಸಕರಾಗಿ ಆಯ್ಕೆಯಾದರು. ಹಾಲಿ ನೀರಾವರಿ ಸಚಿವರಾಗಿರುವ ಗೋವಿಂದ ಕಾರಜೋಳ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನೂ ಅಲಂಕರಿಸಿದ್ದರು. ಬಿಜೆಪಿಯಲ್ಲಿ ಪ್ರಬಲ ದಲಿತ ಸಮುದಾಯದ ಮುಖಂಡರಾಗಿರುವ ಅವರು 6 ಬಾರಿ ಸ್ಪರ್ಧಿಸಿ 5 ಬಾರಿ ಗೆಲುವು ಸಾಧಿಸಿದ್ದು, ಒಂದು ಬಾರಿ ಸೋಲು ಕಂಡಿದ್ದಾರೆ.

*******

ಜಮಖಂಡಿ

ಕಾಂಗ್ರೆಸ್- ಆನಂದ್ ನ್ಯಾಮಗೌಡ- ಮುನ್ನಡೆ

ಬಿಜೆಪಿ- ಜಗದೀಶ ಗುಡಗುಂಟಿ- ಹಿನ್ನಡೆ

2018ರಲ್ಲಿ ನಡೆದ ಚುನಾವಣೆಯಲ್ಲಿ 49,245 ಮತ ಪಡೆಯುವ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದು ನ್ಯಾಮಗೌಡ ಅವರು ಗೆಲುವು ಕಂಡರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಶ್ರೀಕಾಂತ್‌ ಕುಲಕರ್ಣಿ ತೀವ್ರ ಪೈಪೋಟಿ ನೀಡಿ 2,795 ಮತಗಳ ಅಂತರದಲ್ಲಿ ಸೋಲುತ್ತಾರೆ. ಪಕ್ಷೇತರರಾಗಿ ಸ್ಪರ್ಧಿಸಿದ್ದ ಮುರುಗೇಶ್‌ ನಿರಾಣಿ ಸಹೋದರ ಸಂಗಮೇಶ್‌ ನಿರಾಣಿ 24,461 ಮತ ಪಡೆದು ಮೂರನೇ ಸ್ಥಾನಕ್ಕೆ ಕುಸಿಯುತ್ತಾರೆ.

ಶಾಸಕ ಸಿದ್ದು ನ್ಯಾಮಗೌಡರ ಅಕಾಲಿಕ ಮರಣದಿಂದಾಗಿ ಜಮಖಂಡಿಯಲ್ಲಿ 47 ವರ್ಷಗಳ ನಂತರ 2018ರಲ್ಲಿ ಉಪ ಚುನಾವಣೆ ನಡೆಯಿತು. ಸಿದ್ದು ನ್ಯಾಮಗೌಡರ ಮಗ ಆನಂದ್ ನ್ಯಾಮಗೌಡ ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಅನುಕಂಪದ ಅಲೆ ಮೇಲೆ 97,017 ಮತಗಳನ್ನು ಪಡೆಯುವ ಮೂಲಕ 39 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದರು. ಸಂಘಟನೆಯ ಬಲ ನೆಚ್ಚಿಕೊಂಡಿದ್ದ ಬಿಜೆಪಿಯ ಶ್ರೀಕಾಂತ ಕುಲಕರ್ಣಿ 57,537 ಮತ ಪಡೆದು ಸೋಲು ಅನುಭವಿಸಿದರು.

*******

ತೇರದಾಳ

ಕಾಂಗ್ರೆಸ್- ಸಿದ್ದು ಕೊಣ್ಣೂರ-  ಹಿನ್ನಡೆ

ಬಿಜೆಪಿ- ಸಿದ್ದು ಸವದಿ- ಮುನ್ನಡೆ

ಪಕ್ಷೇತರ- ಡಾ. ಪದ್ಮಜೀತ್ ನಾಡಗೌಡ- ಹಿನ್ನಡೆ

2008ರಲ್ಲಿ ಮೊದಲ ವಿಧಾನಸಭಾ ಚುನಾವಣೆ ಎದುರಿಸಿದ ತೇರದಾಳದಲ್ಲಿ ಬಿಜೆಪಿ ಬಾವುಟ ಹಾರಿತ್ತು. ಬಿಜೆಪಿಯಿಂದ ಸ್ಪರ್ಧಿಸಿದ್ದ ಸಿದ್ದು ಸವದಿ 62,595 ಮತಗಳನ್ನು ಪಡೆದು ಕ್ಷೇತ್ರದ ಮೊದಲ ಶಾಸಕರಾಗಿ ಆಯ್ಕೆಯಾದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಉಮಾಶ್ರೀ 50351 ಮತ ಪಡೆದು, 12,244 ಮತಗಳ ಅಂತರದಲ್ಲಿ ಸೋಲು ಅನುಭವಿಸಿದರು.

2013ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮಾಶ್ರೀ ಅವರು ಸಿದ್ದು ಸವದಿಗೆ ಸೋಲಿನ ರುಚಿ ತೋರಿಸಿದರು. ಉಮಾಶ್ರೀ ಅವರು 70,189 ಮತ ಪಡೆಯುವ ಮೂಲಕ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಆ ಮೂಲಕ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವೆ ಕೂಡ ಆದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಸಿದ್ದು ಸವದಿ 67,590 ಪಡೆದು, 2,599 ಮತಗಳ ಅಂತರದಲ್ಲಿ ಸೋಲು ಕಂಡರು.

2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸಿದ್ದು ಸವದಿ ಮತ್ತೆ ಗೆಲುವು ಸಾಧಿಸುವ ಮೂಲಕ ಉಮಾಶ್ರೀ ಅವರನ್ನು ಸೋಲಿಸಿದರು. ಆ ವೇಳೆ ಸಿದ್ದು ಸವದಿ 87,583 ಮತ ಪಡೆದು ಗೆಲುವಿನ ನಗೆ ಬಿರಿದರು. ಉಮಾಶ್ರೀ 66,470 ಮತ ಪಡೆದು 21,113 ಮತಗಳ ಅಂತರದಲ್ಲಿ ಸೋಲು ಅನುಭವಿಸಿದರು.

*****

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...