Homeನಿಜವೋ ಸುಳ್ಳೋಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ ಎಂದಿದ್ದರು

- Advertisement -
- Advertisement -

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?
ವರನಟ ಡಾ. ರಾಜ್ ಮತ್ತು ಇಂದಿರಾಗಾಂಧಿ ನಡುವೆ ನರೇಂದ್ರ ಮೋದಿ!

ಮಿಥ್ಯ: ಇಂಥದೊಂದು ಫೋಟೊ ಸಾಕಷ್ಟು ವೈರಲ್ ಆಗಿದೆ. ಅದು ಗುಜರಾತಿನಲ್ಲೇ ಹೆಚ್ಚು ಓಡಾಡುತ್ತಿದ್ದು, ಈ ಫೋಟೊ ಬಳಸುವವರ ಟಾರ್ಗೆಟ್ ನರೇಂದ್ರ ಮೋದಿ! ‘ನೋಡ್ರಪ್ಪ ನಿಮ್ಮ ಮೋದಿ ಸಾಬ್ ಕೂಡ ಕಾಂಗ್ರೆಸ್‍ಮನ್ ಆಗಿದ್ದ. ಈಗ ಏನ್ ಹೇಳ್ತೀರಿ ಭಕ್ತರೇ?’ ಎಂದು ಕಿಚಾಯಿಸುವ ಸಂದೇಶವನ್ನು ತೇಲಿಬಿಡಲಾಗಿದೆ. ‘ವೊಟ್ ಫಾರ್ ಎಐಎಂಐಎಂ’ ಫೇಸ್‍ಬುಕ್ ಪುಟದಲ್ಲಿ ಇದು 5 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದ್ದರೆ, ಇನ್ನೊಂದು ಫೇಸ್‍ಬುಕ್ ಪುಟದಲ್ಲಿ 6 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದೆ.

ಸತ್ಯ: ಅಂದಿನ ಪ್ರಧಾನಿ ಇಂದಿರಾಗಾಂಧಿ ಮತ್ತು ಕನ್ನಡದ ಹೆಮ್ಮೆ ಡಾ. ರಾಜಕುಮಾರ್ ಮಧ್ಯೆ ಯುವಕ ಮೋದಿ ಇರುವ ಈ ಫೋಟೋ ನಕಲಿ. ಇದನ್ನು ಫೋಟೊಶಾಪ್ ಮಾಡಲಾಗಿದೆ. ‘ಮೋದಿಯೂ ನಮ್ಮವನೇ ಆಗಿದ್ದ’ ಎಂದು ಕಾಂಗ್ರೆಸ್‍ನವರು ಈ ಕೆಲಸ ಮಾಡಿರಲಿಕ್ಕಿಲ್ಲ. ಆದರೆ ಎಐಎಂಐಎಂ ಫೇಸ್‍ಬುಕ್ ಪೇಜ್‍ನಿಂದ ಹೆಚ್ಚು ಶೇರ್ ಆಗಿರುವುದನ್ನು ನೋಡಿದರೆ, ಆ ಪಾರ್ಟಿ ಕಡೆಯವರು ಮಾಡಿರುವ ಸಾಧ್ಯತೆ ಇದ್ದು, ನೋಡಿ ಕಾಂಗ್ರೆಸ್, ಬಿಜೆಪಿ, ಇಂದಿರಾ, ಮೋದಿ ಎಲ್ಲ ಒಂದೇ ಎಂದು ಕಿಚಾಯಿಸುವ ಉದ್ದೇಶವಿರಬಹುದು. ಒಟ್ಟಿನಲ್ಲಿ ಎರಡೂ ಸಾಧ್ಯತೆಯಿವೆ.

ಈ ನಕಲಿ ಫೋಟೊದಲ್ಲಿ ಇಂದಿರಾ ಮತ್ತು ರಾಜ್ ಮಧ್ಯದಿಂದ ಮುಖ ಕಾಣುವಂತೆ ಹಿಂದಿನ ಸಾಲಿನಲ್ಲಿ ಮೋದಿ ಮುಖ ತುರುಕಲಾಗಿದೆ. ವೈರಲ್ ಮಾಡಿದವರು ರಾಜ್ ಹೆಸರನ್ನು ಎಲ್ಲೂ ಬಳಸಿಲ್ಲ. altnews ಈ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್‍ನಲ್ಲಿ ಪರಿಶೀಲಿಸಿದಾಗ, ದಿ ಕ್ವಿಂಟ್ ಪೋರ್ಟಲ್‍ನಲ್ಲಿ ‘Karnataka’s  reluctant politician: The Life and Times of ‘Annavru’ ಎಂಬ ಲೇಖನವಿದ್ದು ಅದರಲ್ಲಿ ಓರಿಜಿನಲ್ ಫೋಟೊ ಸಿಕ್ಕಿದೆ. ಸಂಗೀತ ಕಾರ್ಯಕ್ರಮವೊಂದರಲ್ಲಿ ತೆಗೆದ ಫೋಟೊ ಇದು. ಆ ಫೋಟೊದಲ್ಲಿ ಮೋದಿ ಮೂತಿ ಇಲ್ಲ. ಈ ಫೋಟೊವನ್ನು ಫೋಟೊಶಾಪ್ ಮಾಡಿ ಮೋದಿಯನ್ನು ತುರುಕಲಾಗಿದೆ.

ಓರಿಜಿನಲ್ ಫೋಟೊ

ನಮ್ಮ ಓದುಗರಿಗಾಗಿ ನಾನುಗೌರಿ ಡೆಸ್ಕ್ ಈ ಲೇಖನ ಹುಡುಕಿ ಓದಿದಾಗ, ಅದನ್ನು ದಿ ಕ್ವಿಂಟ್‍ಗೆ ಟಿ.ಎಂ. ವೀರರಾಘವನ್ 2018ರಲ್ಲಿ ಬರೆದಿದ್ದು 24-04-2019ರಂದು ಮತ್ತೆ ಅಪ್‍ಡೇಟ್ ಮಾಡಲಾಗಿದೆ. ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ. ಹಲವಾರು ಸಲ ರಾಜಕೀಯ ಪಕ್ಷಗಳು ಅವರಿಗೆ ದುಂಬಾಲು ಬಿದ್ದರೂ ರಾಜ್ ಎಂದೂ ಒಪ್ಪಿಕೊಳ್ಳಲಿಲ್ಲ. 1978ರಲ್ಲಿ ಚಿಕ್ಕಮಗಳೂರು ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್‍ರನ್ನು ಕಣಕ್ಕಳಿಸಲು ಜನತಾ ಪಕ್ಷ ಯತ್ನಿಸಿತ್ತು ಎಂಬುದನ್ನು, ರಾಜ್ ಅದನ್ನು ನಿರಾಕರಿಸಿದ್ದರು ಎಂಬುದನ್ನು ಲೇಖನದಲ್ಲಿ ಬರೆಯಲಾಗಿದೆ.

ಫೋಟೊ ಕೃಪೆ ಸಂಗೀತಾ ಮ್ಯುಸಿಕ್ ಎಂದಿದ್ದು, ಅವರ ವೆಬ್‍ಸೈಟಿನ ಆಲ್ಬಮ್‍ನಲ್ಲಿ ಈ ಫೋಟೊ ಕಂಡುಬಂತು. ಸಂಗೀಯ ಮ್ಯೂಸಿಕ್‍ನವರ ಕಾರ್ಯಕ್ರಮಕ್ಕೆ ಇಂದಿರಾ ಗಾಂಧಿಯವರನ್ನು ಕರೆಸಿದಾಗ ಈ ಫೋಟೊ ಕ್ಲಿಕ್ಕಿಸಲಾಗಿದೆ. ಚಿತ್ರದಲ್ಲಿ ಪಾರ್ವತಮ್ಮ ರಾಜಕುಮಾರ್, ರಾಜ್ ಸಹೋದರಿ ಅವರನ್ನು ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...