Homeನಿಜವೋ ಸುಳ್ಳೋಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ ಎಂದಿದ್ದರು

- Advertisement -
- Advertisement -

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?
ವರನಟ ಡಾ. ರಾಜ್ ಮತ್ತು ಇಂದಿರಾಗಾಂಧಿ ನಡುವೆ ನರೇಂದ್ರ ಮೋದಿ!

ಮಿಥ್ಯ: ಇಂಥದೊಂದು ಫೋಟೊ ಸಾಕಷ್ಟು ವೈರಲ್ ಆಗಿದೆ. ಅದು ಗುಜರಾತಿನಲ್ಲೇ ಹೆಚ್ಚು ಓಡಾಡುತ್ತಿದ್ದು, ಈ ಫೋಟೊ ಬಳಸುವವರ ಟಾರ್ಗೆಟ್ ನರೇಂದ್ರ ಮೋದಿ! ‘ನೋಡ್ರಪ್ಪ ನಿಮ್ಮ ಮೋದಿ ಸಾಬ್ ಕೂಡ ಕಾಂಗ್ರೆಸ್‍ಮನ್ ಆಗಿದ್ದ. ಈಗ ಏನ್ ಹೇಳ್ತೀರಿ ಭಕ್ತರೇ?’ ಎಂದು ಕಿಚಾಯಿಸುವ ಸಂದೇಶವನ್ನು ತೇಲಿಬಿಡಲಾಗಿದೆ. ‘ವೊಟ್ ಫಾರ್ ಎಐಎಂಐಎಂ’ ಫೇಸ್‍ಬುಕ್ ಪುಟದಲ್ಲಿ ಇದು 5 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದ್ದರೆ, ಇನ್ನೊಂದು ಫೇಸ್‍ಬುಕ್ ಪುಟದಲ್ಲಿ 6 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದೆ.

ಸತ್ಯ: ಅಂದಿನ ಪ್ರಧಾನಿ ಇಂದಿರಾಗಾಂಧಿ ಮತ್ತು ಕನ್ನಡದ ಹೆಮ್ಮೆ ಡಾ. ರಾಜಕುಮಾರ್ ಮಧ್ಯೆ ಯುವಕ ಮೋದಿ ಇರುವ ಈ ಫೋಟೋ ನಕಲಿ. ಇದನ್ನು ಫೋಟೊಶಾಪ್ ಮಾಡಲಾಗಿದೆ. ‘ಮೋದಿಯೂ ನಮ್ಮವನೇ ಆಗಿದ್ದ’ ಎಂದು ಕಾಂಗ್ರೆಸ್‍ನವರು ಈ ಕೆಲಸ ಮಾಡಿರಲಿಕ್ಕಿಲ್ಲ. ಆದರೆ ಎಐಎಂಐಎಂ ಫೇಸ್‍ಬುಕ್ ಪೇಜ್‍ನಿಂದ ಹೆಚ್ಚು ಶೇರ್ ಆಗಿರುವುದನ್ನು ನೋಡಿದರೆ, ಆ ಪಾರ್ಟಿ ಕಡೆಯವರು ಮಾಡಿರುವ ಸಾಧ್ಯತೆ ಇದ್ದು, ನೋಡಿ ಕಾಂಗ್ರೆಸ್, ಬಿಜೆಪಿ, ಇಂದಿರಾ, ಮೋದಿ ಎಲ್ಲ ಒಂದೇ ಎಂದು ಕಿಚಾಯಿಸುವ ಉದ್ದೇಶವಿರಬಹುದು. ಒಟ್ಟಿನಲ್ಲಿ ಎರಡೂ ಸಾಧ್ಯತೆಯಿವೆ.

ಈ ನಕಲಿ ಫೋಟೊದಲ್ಲಿ ಇಂದಿರಾ ಮತ್ತು ರಾಜ್ ಮಧ್ಯದಿಂದ ಮುಖ ಕಾಣುವಂತೆ ಹಿಂದಿನ ಸಾಲಿನಲ್ಲಿ ಮೋದಿ ಮುಖ ತುರುಕಲಾಗಿದೆ. ವೈರಲ್ ಮಾಡಿದವರು ರಾಜ್ ಹೆಸರನ್ನು ಎಲ್ಲೂ ಬಳಸಿಲ್ಲ. altnews ಈ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್‍ನಲ್ಲಿ ಪರಿಶೀಲಿಸಿದಾಗ, ದಿ ಕ್ವಿಂಟ್ ಪೋರ್ಟಲ್‍ನಲ್ಲಿ ‘Karnataka’s  reluctant politician: The Life and Times of ‘Annavru’ ಎಂಬ ಲೇಖನವಿದ್ದು ಅದರಲ್ಲಿ ಓರಿಜಿನಲ್ ಫೋಟೊ ಸಿಕ್ಕಿದೆ. ಸಂಗೀತ ಕಾರ್ಯಕ್ರಮವೊಂದರಲ್ಲಿ ತೆಗೆದ ಫೋಟೊ ಇದು. ಆ ಫೋಟೊದಲ್ಲಿ ಮೋದಿ ಮೂತಿ ಇಲ್ಲ. ಈ ಫೋಟೊವನ್ನು ಫೋಟೊಶಾಪ್ ಮಾಡಿ ಮೋದಿಯನ್ನು ತುರುಕಲಾಗಿದೆ.

ಓರಿಜಿನಲ್ ಫೋಟೊ

ನಮ್ಮ ಓದುಗರಿಗಾಗಿ ನಾನುಗೌರಿ ಡೆಸ್ಕ್ ಈ ಲೇಖನ ಹುಡುಕಿ ಓದಿದಾಗ, ಅದನ್ನು ದಿ ಕ್ವಿಂಟ್‍ಗೆ ಟಿ.ಎಂ. ವೀರರಾಘವನ್ 2018ರಲ್ಲಿ ಬರೆದಿದ್ದು 24-04-2019ರಂದು ಮತ್ತೆ ಅಪ್‍ಡೇಟ್ ಮಾಡಲಾಗಿದೆ. ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ. ಹಲವಾರು ಸಲ ರಾಜಕೀಯ ಪಕ್ಷಗಳು ಅವರಿಗೆ ದುಂಬಾಲು ಬಿದ್ದರೂ ರಾಜ್ ಎಂದೂ ಒಪ್ಪಿಕೊಳ್ಳಲಿಲ್ಲ. 1978ರಲ್ಲಿ ಚಿಕ್ಕಮಗಳೂರು ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್‍ರನ್ನು ಕಣಕ್ಕಳಿಸಲು ಜನತಾ ಪಕ್ಷ ಯತ್ನಿಸಿತ್ತು ಎಂಬುದನ್ನು, ರಾಜ್ ಅದನ್ನು ನಿರಾಕರಿಸಿದ್ದರು ಎಂಬುದನ್ನು ಲೇಖನದಲ್ಲಿ ಬರೆಯಲಾಗಿದೆ.

ಫೋಟೊ ಕೃಪೆ ಸಂಗೀತಾ ಮ್ಯುಸಿಕ್ ಎಂದಿದ್ದು, ಅವರ ವೆಬ್‍ಸೈಟಿನ ಆಲ್ಬಮ್‍ನಲ್ಲಿ ಈ ಫೋಟೊ ಕಂಡುಬಂತು. ಸಂಗೀಯ ಮ್ಯೂಸಿಕ್‍ನವರ ಕಾರ್ಯಕ್ರಮಕ್ಕೆ ಇಂದಿರಾ ಗಾಂಧಿಯವರನ್ನು ಕರೆಸಿದಾಗ ಈ ಫೋಟೊ ಕ್ಲಿಕ್ಕಿಸಲಾಗಿದೆ. ಚಿತ್ರದಲ್ಲಿ ಪಾರ್ವತಮ್ಮ ರಾಜಕುಮಾರ್, ರಾಜ್ ಸಹೋದರಿ ಅವರನ್ನು ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...