Homeನಿಜವೋ ಸುಳ್ಳೋಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ ಎಂದಿದ್ದರು

- Advertisement -
- Advertisement -

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?
ವರನಟ ಡಾ. ರಾಜ್ ಮತ್ತು ಇಂದಿರಾಗಾಂಧಿ ನಡುವೆ ನರೇಂದ್ರ ಮೋದಿ!

ಮಿಥ್ಯ: ಇಂಥದೊಂದು ಫೋಟೊ ಸಾಕಷ್ಟು ವೈರಲ್ ಆಗಿದೆ. ಅದು ಗುಜರಾತಿನಲ್ಲೇ ಹೆಚ್ಚು ಓಡಾಡುತ್ತಿದ್ದು, ಈ ಫೋಟೊ ಬಳಸುವವರ ಟಾರ್ಗೆಟ್ ನರೇಂದ್ರ ಮೋದಿ! ‘ನೋಡ್ರಪ್ಪ ನಿಮ್ಮ ಮೋದಿ ಸಾಬ್ ಕೂಡ ಕಾಂಗ್ರೆಸ್‍ಮನ್ ಆಗಿದ್ದ. ಈಗ ಏನ್ ಹೇಳ್ತೀರಿ ಭಕ್ತರೇ?’ ಎಂದು ಕಿಚಾಯಿಸುವ ಸಂದೇಶವನ್ನು ತೇಲಿಬಿಡಲಾಗಿದೆ. ‘ವೊಟ್ ಫಾರ್ ಎಐಎಂಐಎಂ’ ಫೇಸ್‍ಬುಕ್ ಪುಟದಲ್ಲಿ ಇದು 5 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದ್ದರೆ, ಇನ್ನೊಂದು ಫೇಸ್‍ಬುಕ್ ಪುಟದಲ್ಲಿ 6 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದೆ.

ಸತ್ಯ: ಅಂದಿನ ಪ್ರಧಾನಿ ಇಂದಿರಾಗಾಂಧಿ ಮತ್ತು ಕನ್ನಡದ ಹೆಮ್ಮೆ ಡಾ. ರಾಜಕುಮಾರ್ ಮಧ್ಯೆ ಯುವಕ ಮೋದಿ ಇರುವ ಈ ಫೋಟೋ ನಕಲಿ. ಇದನ್ನು ಫೋಟೊಶಾಪ್ ಮಾಡಲಾಗಿದೆ. ‘ಮೋದಿಯೂ ನಮ್ಮವನೇ ಆಗಿದ್ದ’ ಎಂದು ಕಾಂಗ್ರೆಸ್‍ನವರು ಈ ಕೆಲಸ ಮಾಡಿರಲಿಕ್ಕಿಲ್ಲ. ಆದರೆ ಎಐಎಂಐಎಂ ಫೇಸ್‍ಬುಕ್ ಪೇಜ್‍ನಿಂದ ಹೆಚ್ಚು ಶೇರ್ ಆಗಿರುವುದನ್ನು ನೋಡಿದರೆ, ಆ ಪಾರ್ಟಿ ಕಡೆಯವರು ಮಾಡಿರುವ ಸಾಧ್ಯತೆ ಇದ್ದು, ನೋಡಿ ಕಾಂಗ್ರೆಸ್, ಬಿಜೆಪಿ, ಇಂದಿರಾ, ಮೋದಿ ಎಲ್ಲ ಒಂದೇ ಎಂದು ಕಿಚಾಯಿಸುವ ಉದ್ದೇಶವಿರಬಹುದು. ಒಟ್ಟಿನಲ್ಲಿ ಎರಡೂ ಸಾಧ್ಯತೆಯಿವೆ.

ಈ ನಕಲಿ ಫೋಟೊದಲ್ಲಿ ಇಂದಿರಾ ಮತ್ತು ರಾಜ್ ಮಧ್ಯದಿಂದ ಮುಖ ಕಾಣುವಂತೆ ಹಿಂದಿನ ಸಾಲಿನಲ್ಲಿ ಮೋದಿ ಮುಖ ತುರುಕಲಾಗಿದೆ. ವೈರಲ್ ಮಾಡಿದವರು ರಾಜ್ ಹೆಸರನ್ನು ಎಲ್ಲೂ ಬಳಸಿಲ್ಲ. altnews ಈ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್‍ನಲ್ಲಿ ಪರಿಶೀಲಿಸಿದಾಗ, ದಿ ಕ್ವಿಂಟ್ ಪೋರ್ಟಲ್‍ನಲ್ಲಿ ‘Karnataka’s  reluctant politician: The Life and Times of ‘Annavru’ ಎಂಬ ಲೇಖನವಿದ್ದು ಅದರಲ್ಲಿ ಓರಿಜಿನಲ್ ಫೋಟೊ ಸಿಕ್ಕಿದೆ. ಸಂಗೀತ ಕಾರ್ಯಕ್ರಮವೊಂದರಲ್ಲಿ ತೆಗೆದ ಫೋಟೊ ಇದು. ಆ ಫೋಟೊದಲ್ಲಿ ಮೋದಿ ಮೂತಿ ಇಲ್ಲ. ಈ ಫೋಟೊವನ್ನು ಫೋಟೊಶಾಪ್ ಮಾಡಿ ಮೋದಿಯನ್ನು ತುರುಕಲಾಗಿದೆ.

ಓರಿಜಿನಲ್ ಫೋಟೊ

ನಮ್ಮ ಓದುಗರಿಗಾಗಿ ನಾನುಗೌರಿ ಡೆಸ್ಕ್ ಈ ಲೇಖನ ಹುಡುಕಿ ಓದಿದಾಗ, ಅದನ್ನು ದಿ ಕ್ವಿಂಟ್‍ಗೆ ಟಿ.ಎಂ. ವೀರರಾಘವನ್ 2018ರಲ್ಲಿ ಬರೆದಿದ್ದು 24-04-2019ರಂದು ಮತ್ತೆ ಅಪ್‍ಡೇಟ್ ಮಾಡಲಾಗಿದೆ. ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ. ಹಲವಾರು ಸಲ ರಾಜಕೀಯ ಪಕ್ಷಗಳು ಅವರಿಗೆ ದುಂಬಾಲು ಬಿದ್ದರೂ ರಾಜ್ ಎಂದೂ ಒಪ್ಪಿಕೊಳ್ಳಲಿಲ್ಲ. 1978ರಲ್ಲಿ ಚಿಕ್ಕಮಗಳೂರು ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್‍ರನ್ನು ಕಣಕ್ಕಳಿಸಲು ಜನತಾ ಪಕ್ಷ ಯತ್ನಿಸಿತ್ತು ಎಂಬುದನ್ನು, ರಾಜ್ ಅದನ್ನು ನಿರಾಕರಿಸಿದ್ದರು ಎಂಬುದನ್ನು ಲೇಖನದಲ್ಲಿ ಬರೆಯಲಾಗಿದೆ.

ಫೋಟೊ ಕೃಪೆ ಸಂಗೀತಾ ಮ್ಯುಸಿಕ್ ಎಂದಿದ್ದು, ಅವರ ವೆಬ್‍ಸೈಟಿನ ಆಲ್ಬಮ್‍ನಲ್ಲಿ ಈ ಫೋಟೊ ಕಂಡುಬಂತು. ಸಂಗೀಯ ಮ್ಯೂಸಿಕ್‍ನವರ ಕಾರ್ಯಕ್ರಮಕ್ಕೆ ಇಂದಿರಾ ಗಾಂಧಿಯವರನ್ನು ಕರೆಸಿದಾಗ ಈ ಫೋಟೊ ಕ್ಲಿಕ್ಕಿಸಲಾಗಿದೆ. ಚಿತ್ರದಲ್ಲಿ ಪಾರ್ವತಮ್ಮ ರಾಜಕುಮಾರ್, ರಾಜ್ ಸಹೋದರಿ ಅವರನ್ನು ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...