Homeನಿಜವೋ ಸುಳ್ಳೋಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ ಎಂದಿದ್ದರು

- Advertisement -
- Advertisement -

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?
ವರನಟ ಡಾ. ರಾಜ್ ಮತ್ತು ಇಂದಿರಾಗಾಂಧಿ ನಡುವೆ ನರೇಂದ್ರ ಮೋದಿ!

ಮಿಥ್ಯ: ಇಂಥದೊಂದು ಫೋಟೊ ಸಾಕಷ್ಟು ವೈರಲ್ ಆಗಿದೆ. ಅದು ಗುಜರಾತಿನಲ್ಲೇ ಹೆಚ್ಚು ಓಡಾಡುತ್ತಿದ್ದು, ಈ ಫೋಟೊ ಬಳಸುವವರ ಟಾರ್ಗೆಟ್ ನರೇಂದ್ರ ಮೋದಿ! ‘ನೋಡ್ರಪ್ಪ ನಿಮ್ಮ ಮೋದಿ ಸಾಬ್ ಕೂಡ ಕಾಂಗ್ರೆಸ್‍ಮನ್ ಆಗಿದ್ದ. ಈಗ ಏನ್ ಹೇಳ್ತೀರಿ ಭಕ್ತರೇ?’ ಎಂದು ಕಿಚಾಯಿಸುವ ಸಂದೇಶವನ್ನು ತೇಲಿಬಿಡಲಾಗಿದೆ. ‘ವೊಟ್ ಫಾರ್ ಎಐಎಂಐಎಂ’ ಫೇಸ್‍ಬುಕ್ ಪುಟದಲ್ಲಿ ಇದು 5 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದ್ದರೆ, ಇನ್ನೊಂದು ಫೇಸ್‍ಬುಕ್ ಪುಟದಲ್ಲಿ 6 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದೆ.

ಸತ್ಯ: ಅಂದಿನ ಪ್ರಧಾನಿ ಇಂದಿರಾಗಾಂಧಿ ಮತ್ತು ಕನ್ನಡದ ಹೆಮ್ಮೆ ಡಾ. ರಾಜಕುಮಾರ್ ಮಧ್ಯೆ ಯುವಕ ಮೋದಿ ಇರುವ ಈ ಫೋಟೋ ನಕಲಿ. ಇದನ್ನು ಫೋಟೊಶಾಪ್ ಮಾಡಲಾಗಿದೆ. ‘ಮೋದಿಯೂ ನಮ್ಮವನೇ ಆಗಿದ್ದ’ ಎಂದು ಕಾಂಗ್ರೆಸ್‍ನವರು ಈ ಕೆಲಸ ಮಾಡಿರಲಿಕ್ಕಿಲ್ಲ. ಆದರೆ ಎಐಎಂಐಎಂ ಫೇಸ್‍ಬುಕ್ ಪೇಜ್‍ನಿಂದ ಹೆಚ್ಚು ಶೇರ್ ಆಗಿರುವುದನ್ನು ನೋಡಿದರೆ, ಆ ಪಾರ್ಟಿ ಕಡೆಯವರು ಮಾಡಿರುವ ಸಾಧ್ಯತೆ ಇದ್ದು, ನೋಡಿ ಕಾಂಗ್ರೆಸ್, ಬಿಜೆಪಿ, ಇಂದಿರಾ, ಮೋದಿ ಎಲ್ಲ ಒಂದೇ ಎಂದು ಕಿಚಾಯಿಸುವ ಉದ್ದೇಶವಿರಬಹುದು. ಒಟ್ಟಿನಲ್ಲಿ ಎರಡೂ ಸಾಧ್ಯತೆಯಿವೆ.

ಈ ನಕಲಿ ಫೋಟೊದಲ್ಲಿ ಇಂದಿರಾ ಮತ್ತು ರಾಜ್ ಮಧ್ಯದಿಂದ ಮುಖ ಕಾಣುವಂತೆ ಹಿಂದಿನ ಸಾಲಿನಲ್ಲಿ ಮೋದಿ ಮುಖ ತುರುಕಲಾಗಿದೆ. ವೈರಲ್ ಮಾಡಿದವರು ರಾಜ್ ಹೆಸರನ್ನು ಎಲ್ಲೂ ಬಳಸಿಲ್ಲ. altnews ಈ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್‍ನಲ್ಲಿ ಪರಿಶೀಲಿಸಿದಾಗ, ದಿ ಕ್ವಿಂಟ್ ಪೋರ್ಟಲ್‍ನಲ್ಲಿ ‘Karnataka’s  reluctant politician: The Life and Times of ‘Annavru’ ಎಂಬ ಲೇಖನವಿದ್ದು ಅದರಲ್ಲಿ ಓರಿಜಿನಲ್ ಫೋಟೊ ಸಿಕ್ಕಿದೆ. ಸಂಗೀತ ಕಾರ್ಯಕ್ರಮವೊಂದರಲ್ಲಿ ತೆಗೆದ ಫೋಟೊ ಇದು. ಆ ಫೋಟೊದಲ್ಲಿ ಮೋದಿ ಮೂತಿ ಇಲ್ಲ. ಈ ಫೋಟೊವನ್ನು ಫೋಟೊಶಾಪ್ ಮಾಡಿ ಮೋದಿಯನ್ನು ತುರುಕಲಾಗಿದೆ.

ಓರಿಜಿನಲ್ ಫೋಟೊ

ನಮ್ಮ ಓದುಗರಿಗಾಗಿ ನಾನುಗೌರಿ ಡೆಸ್ಕ್ ಈ ಲೇಖನ ಹುಡುಕಿ ಓದಿದಾಗ, ಅದನ್ನು ದಿ ಕ್ವಿಂಟ್‍ಗೆ ಟಿ.ಎಂ. ವೀರರಾಘವನ್ 2018ರಲ್ಲಿ ಬರೆದಿದ್ದು 24-04-2019ರಂದು ಮತ್ತೆ ಅಪ್‍ಡೇಟ್ ಮಾಡಲಾಗಿದೆ. ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ. ಹಲವಾರು ಸಲ ರಾಜಕೀಯ ಪಕ್ಷಗಳು ಅವರಿಗೆ ದುಂಬಾಲು ಬಿದ್ದರೂ ರಾಜ್ ಎಂದೂ ಒಪ್ಪಿಕೊಳ್ಳಲಿಲ್ಲ. 1978ರಲ್ಲಿ ಚಿಕ್ಕಮಗಳೂರು ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್‍ರನ್ನು ಕಣಕ್ಕಳಿಸಲು ಜನತಾ ಪಕ್ಷ ಯತ್ನಿಸಿತ್ತು ಎಂಬುದನ್ನು, ರಾಜ್ ಅದನ್ನು ನಿರಾಕರಿಸಿದ್ದರು ಎಂಬುದನ್ನು ಲೇಖನದಲ್ಲಿ ಬರೆಯಲಾಗಿದೆ.

ಫೋಟೊ ಕೃಪೆ ಸಂಗೀತಾ ಮ್ಯುಸಿಕ್ ಎಂದಿದ್ದು, ಅವರ ವೆಬ್‍ಸೈಟಿನ ಆಲ್ಬಮ್‍ನಲ್ಲಿ ಈ ಫೋಟೊ ಕಂಡುಬಂತು. ಸಂಗೀಯ ಮ್ಯೂಸಿಕ್‍ನವರ ಕಾರ್ಯಕ್ರಮಕ್ಕೆ ಇಂದಿರಾ ಗಾಂಧಿಯವರನ್ನು ಕರೆಸಿದಾಗ ಈ ಫೋಟೊ ಕ್ಲಿಕ್ಕಿಸಲಾಗಿದೆ. ಚಿತ್ರದಲ್ಲಿ ಪಾರ್ವತಮ್ಮ ರಾಜಕುಮಾರ್, ರಾಜ್ ಸಹೋದರಿ ಅವರನ್ನು ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....