Homeನಿಜವೋ ಸುಳ್ಳೋಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ ಎಂದಿದ್ದರು

- Advertisement -
- Advertisement -

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?
ವರನಟ ಡಾ. ರಾಜ್ ಮತ್ತು ಇಂದಿರಾಗಾಂಧಿ ನಡುವೆ ನರೇಂದ್ರ ಮೋದಿ!

ಮಿಥ್ಯ: ಇಂಥದೊಂದು ಫೋಟೊ ಸಾಕಷ್ಟು ವೈರಲ್ ಆಗಿದೆ. ಅದು ಗುಜರಾತಿನಲ್ಲೇ ಹೆಚ್ಚು ಓಡಾಡುತ್ತಿದ್ದು, ಈ ಫೋಟೊ ಬಳಸುವವರ ಟಾರ್ಗೆಟ್ ನರೇಂದ್ರ ಮೋದಿ! ‘ನೋಡ್ರಪ್ಪ ನಿಮ್ಮ ಮೋದಿ ಸಾಬ್ ಕೂಡ ಕಾಂಗ್ರೆಸ್‍ಮನ್ ಆಗಿದ್ದ. ಈಗ ಏನ್ ಹೇಳ್ತೀರಿ ಭಕ್ತರೇ?’ ಎಂದು ಕಿಚಾಯಿಸುವ ಸಂದೇಶವನ್ನು ತೇಲಿಬಿಡಲಾಗಿದೆ. ‘ವೊಟ್ ಫಾರ್ ಎಐಎಂಐಎಂ’ ಫೇಸ್‍ಬುಕ್ ಪುಟದಲ್ಲಿ ಇದು 5 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದ್ದರೆ, ಇನ್ನೊಂದು ಫೇಸ್‍ಬುಕ್ ಪುಟದಲ್ಲಿ 6 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದೆ.

ಸತ್ಯ: ಅಂದಿನ ಪ್ರಧಾನಿ ಇಂದಿರಾಗಾಂಧಿ ಮತ್ತು ಕನ್ನಡದ ಹೆಮ್ಮೆ ಡಾ. ರಾಜಕುಮಾರ್ ಮಧ್ಯೆ ಯುವಕ ಮೋದಿ ಇರುವ ಈ ಫೋಟೋ ನಕಲಿ. ಇದನ್ನು ಫೋಟೊಶಾಪ್ ಮಾಡಲಾಗಿದೆ. ‘ಮೋದಿಯೂ ನಮ್ಮವನೇ ಆಗಿದ್ದ’ ಎಂದು ಕಾಂಗ್ರೆಸ್‍ನವರು ಈ ಕೆಲಸ ಮಾಡಿರಲಿಕ್ಕಿಲ್ಲ. ಆದರೆ ಎಐಎಂಐಎಂ ಫೇಸ್‍ಬುಕ್ ಪೇಜ್‍ನಿಂದ ಹೆಚ್ಚು ಶೇರ್ ಆಗಿರುವುದನ್ನು ನೋಡಿದರೆ, ಆ ಪಾರ್ಟಿ ಕಡೆಯವರು ಮಾಡಿರುವ ಸಾಧ್ಯತೆ ಇದ್ದು, ನೋಡಿ ಕಾಂಗ್ರೆಸ್, ಬಿಜೆಪಿ, ಇಂದಿರಾ, ಮೋದಿ ಎಲ್ಲ ಒಂದೇ ಎಂದು ಕಿಚಾಯಿಸುವ ಉದ್ದೇಶವಿರಬಹುದು. ಒಟ್ಟಿನಲ್ಲಿ ಎರಡೂ ಸಾಧ್ಯತೆಯಿವೆ.

ಈ ನಕಲಿ ಫೋಟೊದಲ್ಲಿ ಇಂದಿರಾ ಮತ್ತು ರಾಜ್ ಮಧ್ಯದಿಂದ ಮುಖ ಕಾಣುವಂತೆ ಹಿಂದಿನ ಸಾಲಿನಲ್ಲಿ ಮೋದಿ ಮುಖ ತುರುಕಲಾಗಿದೆ. ವೈರಲ್ ಮಾಡಿದವರು ರಾಜ್ ಹೆಸರನ್ನು ಎಲ್ಲೂ ಬಳಸಿಲ್ಲ. altnews ಈ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್‍ನಲ್ಲಿ ಪರಿಶೀಲಿಸಿದಾಗ, ದಿ ಕ್ವಿಂಟ್ ಪೋರ್ಟಲ್‍ನಲ್ಲಿ ‘Karnataka’s  reluctant politician: The Life and Times of ‘Annavru’ ಎಂಬ ಲೇಖನವಿದ್ದು ಅದರಲ್ಲಿ ಓರಿಜಿನಲ್ ಫೋಟೊ ಸಿಕ್ಕಿದೆ. ಸಂಗೀತ ಕಾರ್ಯಕ್ರಮವೊಂದರಲ್ಲಿ ತೆಗೆದ ಫೋಟೊ ಇದು. ಆ ಫೋಟೊದಲ್ಲಿ ಮೋದಿ ಮೂತಿ ಇಲ್ಲ. ಈ ಫೋಟೊವನ್ನು ಫೋಟೊಶಾಪ್ ಮಾಡಿ ಮೋದಿಯನ್ನು ತುರುಕಲಾಗಿದೆ.

ಓರಿಜಿನಲ್ ಫೋಟೊ

ನಮ್ಮ ಓದುಗರಿಗಾಗಿ ನಾನುಗೌರಿ ಡೆಸ್ಕ್ ಈ ಲೇಖನ ಹುಡುಕಿ ಓದಿದಾಗ, ಅದನ್ನು ದಿ ಕ್ವಿಂಟ್‍ಗೆ ಟಿ.ಎಂ. ವೀರರಾಘವನ್ 2018ರಲ್ಲಿ ಬರೆದಿದ್ದು 24-04-2019ರಂದು ಮತ್ತೆ ಅಪ್‍ಡೇಟ್ ಮಾಡಲಾಗಿದೆ. ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ. ಹಲವಾರು ಸಲ ರಾಜಕೀಯ ಪಕ್ಷಗಳು ಅವರಿಗೆ ದುಂಬಾಲು ಬಿದ್ದರೂ ರಾಜ್ ಎಂದೂ ಒಪ್ಪಿಕೊಳ್ಳಲಿಲ್ಲ. 1978ರಲ್ಲಿ ಚಿಕ್ಕಮಗಳೂರು ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್‍ರನ್ನು ಕಣಕ್ಕಳಿಸಲು ಜನತಾ ಪಕ್ಷ ಯತ್ನಿಸಿತ್ತು ಎಂಬುದನ್ನು, ರಾಜ್ ಅದನ್ನು ನಿರಾಕರಿಸಿದ್ದರು ಎಂಬುದನ್ನು ಲೇಖನದಲ್ಲಿ ಬರೆಯಲಾಗಿದೆ.

ಫೋಟೊ ಕೃಪೆ ಸಂಗೀತಾ ಮ್ಯುಸಿಕ್ ಎಂದಿದ್ದು, ಅವರ ವೆಬ್‍ಸೈಟಿನ ಆಲ್ಬಮ್‍ನಲ್ಲಿ ಈ ಫೋಟೊ ಕಂಡುಬಂತು. ಸಂಗೀಯ ಮ್ಯೂಸಿಕ್‍ನವರ ಕಾರ್ಯಕ್ರಮಕ್ಕೆ ಇಂದಿರಾ ಗಾಂಧಿಯವರನ್ನು ಕರೆಸಿದಾಗ ಈ ಫೋಟೊ ಕ್ಲಿಕ್ಕಿಸಲಾಗಿದೆ. ಚಿತ್ರದಲ್ಲಿ ಪಾರ್ವತಮ್ಮ ರಾಜಕುಮಾರ್, ರಾಜ್ ಸಹೋದರಿ ಅವರನ್ನು ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....