Homeನಿಜವೋ ಸುಳ್ಳೋಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?

ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ ಎಂದಿದ್ದರು

- Advertisement -
- Advertisement -

ಅರೆ, ವಿಚಿತ್ರವಾಗಿದೆ, ಯಾವುದಪ್ಪ ಈ ಫೋಟೊ?
ವರನಟ ಡಾ. ರಾಜ್ ಮತ್ತು ಇಂದಿರಾಗಾಂಧಿ ನಡುವೆ ನರೇಂದ್ರ ಮೋದಿ!

ಮಿಥ್ಯ: ಇಂಥದೊಂದು ಫೋಟೊ ಸಾಕಷ್ಟು ವೈರಲ್ ಆಗಿದೆ. ಅದು ಗುಜರಾತಿನಲ್ಲೇ ಹೆಚ್ಚು ಓಡಾಡುತ್ತಿದ್ದು, ಈ ಫೋಟೊ ಬಳಸುವವರ ಟಾರ್ಗೆಟ್ ನರೇಂದ್ರ ಮೋದಿ! ‘ನೋಡ್ರಪ್ಪ ನಿಮ್ಮ ಮೋದಿ ಸಾಬ್ ಕೂಡ ಕಾಂಗ್ರೆಸ್‍ಮನ್ ಆಗಿದ್ದ. ಈಗ ಏನ್ ಹೇಳ್ತೀರಿ ಭಕ್ತರೇ?’ ಎಂದು ಕಿಚಾಯಿಸುವ ಸಂದೇಶವನ್ನು ತೇಲಿಬಿಡಲಾಗಿದೆ. ‘ವೊಟ್ ಫಾರ್ ಎಐಎಂಐಎಂ’ ಫೇಸ್‍ಬುಕ್ ಪುಟದಲ್ಲಿ ಇದು 5 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದ್ದರೆ, ಇನ್ನೊಂದು ಫೇಸ್‍ಬುಕ್ ಪುಟದಲ್ಲಿ 6 ಸಾವಿರಕ್ಕೂ ಹೆಚ್ಚು ಸಲ ಶೇರ್ ಆಗಿದೆ.

ಸತ್ಯ: ಅಂದಿನ ಪ್ರಧಾನಿ ಇಂದಿರಾಗಾಂಧಿ ಮತ್ತು ಕನ್ನಡದ ಹೆಮ್ಮೆ ಡಾ. ರಾಜಕುಮಾರ್ ಮಧ್ಯೆ ಯುವಕ ಮೋದಿ ಇರುವ ಈ ಫೋಟೋ ನಕಲಿ. ಇದನ್ನು ಫೋಟೊಶಾಪ್ ಮಾಡಲಾಗಿದೆ. ‘ಮೋದಿಯೂ ನಮ್ಮವನೇ ಆಗಿದ್ದ’ ಎಂದು ಕಾಂಗ್ರೆಸ್‍ನವರು ಈ ಕೆಲಸ ಮಾಡಿರಲಿಕ್ಕಿಲ್ಲ. ಆದರೆ ಎಐಎಂಐಎಂ ಫೇಸ್‍ಬುಕ್ ಪೇಜ್‍ನಿಂದ ಹೆಚ್ಚು ಶೇರ್ ಆಗಿರುವುದನ್ನು ನೋಡಿದರೆ, ಆ ಪಾರ್ಟಿ ಕಡೆಯವರು ಮಾಡಿರುವ ಸಾಧ್ಯತೆ ಇದ್ದು, ನೋಡಿ ಕಾಂಗ್ರೆಸ್, ಬಿಜೆಪಿ, ಇಂದಿರಾ, ಮೋದಿ ಎಲ್ಲ ಒಂದೇ ಎಂದು ಕಿಚಾಯಿಸುವ ಉದ್ದೇಶವಿರಬಹುದು. ಒಟ್ಟಿನಲ್ಲಿ ಎರಡೂ ಸಾಧ್ಯತೆಯಿವೆ.

ಈ ನಕಲಿ ಫೋಟೊದಲ್ಲಿ ಇಂದಿರಾ ಮತ್ತು ರಾಜ್ ಮಧ್ಯದಿಂದ ಮುಖ ಕಾಣುವಂತೆ ಹಿಂದಿನ ಸಾಲಿನಲ್ಲಿ ಮೋದಿ ಮುಖ ತುರುಕಲಾಗಿದೆ. ವೈರಲ್ ಮಾಡಿದವರು ರಾಜ್ ಹೆಸರನ್ನು ಎಲ್ಲೂ ಬಳಸಿಲ್ಲ. altnews ಈ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್‍ನಲ್ಲಿ ಪರಿಶೀಲಿಸಿದಾಗ, ದಿ ಕ್ವಿಂಟ್ ಪೋರ್ಟಲ್‍ನಲ್ಲಿ ‘Karnataka’s  reluctant politician: The Life and Times of ‘Annavru’ ಎಂಬ ಲೇಖನವಿದ್ದು ಅದರಲ್ಲಿ ಓರಿಜಿನಲ್ ಫೋಟೊ ಸಿಕ್ಕಿದೆ. ಸಂಗೀತ ಕಾರ್ಯಕ್ರಮವೊಂದರಲ್ಲಿ ತೆಗೆದ ಫೋಟೊ ಇದು. ಆ ಫೋಟೊದಲ್ಲಿ ಮೋದಿ ಮೂತಿ ಇಲ್ಲ. ಈ ಫೋಟೊವನ್ನು ಫೋಟೊಶಾಪ್ ಮಾಡಿ ಮೋದಿಯನ್ನು ತುರುಕಲಾಗಿದೆ.

ಓರಿಜಿನಲ್ ಫೋಟೊ

ನಮ್ಮ ಓದುಗರಿಗಾಗಿ ನಾನುಗೌರಿ ಡೆಸ್ಕ್ ಈ ಲೇಖನ ಹುಡುಕಿ ಓದಿದಾಗ, ಅದನ್ನು ದಿ ಕ್ವಿಂಟ್‍ಗೆ ಟಿ.ಎಂ. ವೀರರಾಘವನ್ 2018ರಲ್ಲಿ ಬರೆದಿದ್ದು 24-04-2019ರಂದು ಮತ್ತೆ ಅಪ್‍ಡೇಟ್ ಮಾಡಲಾಗಿದೆ. ದಕ್ಷಿಣದಲ್ಲಿ ಸಿನಿಮಾನಟರು ದಿಢೀರ್ ರಾಜಕೀಯ ನಾಯಕರಾದುದನ್ನು ಎನ್‍ಟಿಆರ್, ಎಂಜಿಆರ್ ಉದಾಹರಿಸಿ ಬರೆಯುವ ವೀರರಾಘವನ್ ಕರ್ನಾಟಕದಲ್ಲಿ ಅಂತಹ ಶಕ್ತಿ ಇದ್ದುದು ಡಾ ರಾಜ್‍ಗೆ ಮಾತ್ರ. ಹಲವಾರು ಸಲ ರಾಜಕೀಯ ಪಕ್ಷಗಳು ಅವರಿಗೆ ದುಂಬಾಲು ಬಿದ್ದರೂ ರಾಜ್ ಎಂದೂ ಒಪ್ಪಿಕೊಳ್ಳಲಿಲ್ಲ. 1978ರಲ್ಲಿ ಚಿಕ್ಕಮಗಳೂರು ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್‍ರನ್ನು ಕಣಕ್ಕಳಿಸಲು ಜನತಾ ಪಕ್ಷ ಯತ್ನಿಸಿತ್ತು ಎಂಬುದನ್ನು, ರಾಜ್ ಅದನ್ನು ನಿರಾಕರಿಸಿದ್ದರು ಎಂಬುದನ್ನು ಲೇಖನದಲ್ಲಿ ಬರೆಯಲಾಗಿದೆ.

ಫೋಟೊ ಕೃಪೆ ಸಂಗೀತಾ ಮ್ಯುಸಿಕ್ ಎಂದಿದ್ದು, ಅವರ ವೆಬ್‍ಸೈಟಿನ ಆಲ್ಬಮ್‍ನಲ್ಲಿ ಈ ಫೋಟೊ ಕಂಡುಬಂತು. ಸಂಗೀಯ ಮ್ಯೂಸಿಕ್‍ನವರ ಕಾರ್ಯಕ್ರಮಕ್ಕೆ ಇಂದಿರಾ ಗಾಂಧಿಯವರನ್ನು ಕರೆಸಿದಾಗ ಈ ಫೋಟೊ ಕ್ಲಿಕ್ಕಿಸಲಾಗಿದೆ. ಚಿತ್ರದಲ್ಲಿ ಪಾರ್ವತಮ್ಮ ರಾಜಕುಮಾರ್, ರಾಜ್ ಸಹೋದರಿ ಅವರನ್ನು ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...