Homeಮುಖಪುಟಅತಿಹೆಚ್ಚು ವಿದೇಶಿ ಪ್ರವಾಸ ಮಾಡಿದ್ದು ಮೋದಿಯಲ್ಲ, ಮನಮೋಹನ್ ಸಿಂಗ್: ಅಮಿತ್ ಶಾ ಹೇಳಿದ್ದು ನಿಜವೇ?

ಅತಿಹೆಚ್ಚು ವಿದೇಶಿ ಪ್ರವಾಸ ಮಾಡಿದ್ದು ಮೋದಿಯಲ್ಲ, ಮನಮೋಹನ್ ಸಿಂಗ್: ಅಮಿತ್ ಶಾ ಹೇಳಿದ್ದು ನಿಜವೇ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮಾಡಿದ್ದ ಟೀಕೆಗೆ ಬಿಜೆಪಿ ಪ್ರಮುಖ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿಕಾರಿದ್ದಾರೆ. ಕಾಂಗ್ರೆಸ್ ಮಾಡಿರುವ ಟೀಕೆಯನ್ನು ಖಂಡಿಸಿರುವ ಅಮಿತ್ ಶಾ, ಮೋದಿ ಪ್ರವಾಸವನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರಿಗಿಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅತಿಹೆಚ್ಚು ವಿದೇಶ ಪ್ರವಾಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ವಿದೇಶ ಪ್ರವಾಸ ಹಾಗೂ ಮನ್ನಣೆ ಕಂಡು ಕಾಂಗ್ರೆಸ್ ಹೊಟ್ಟೆಕಿಚ್ಚು ಪಡುತ್ತಿದೆ. ಮೋದಿ ಹೋದ ದೇಶಗಳಲ್ಲಿನ ಜನತೆ ಅವರನ್ನು ಕಾಣಲು ವಿಮಾನ ನಿಲ್ದಾಣಕ್ಕೆ ಬರುತ್ತಾರೆ. ಮೋದಿಯನ್ನು ಕಂಡು ಹರ್ಷಿತರಾಗಿ, ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾರೆ. ಮೋದಿಯವರಿಗೆ ವಿದೇಶದಲ್ಲಿ ಸಿಗುತ್ತಿರುವ ಖ್ಯಾತಿ ಕಂಡು ಕಾಂಗ್ರೆಸ್ ಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಲ್ಲಸಲ್ಲದ ಟೀಕೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಮೇರಿಕದ ಹ್ಯೂಸ್ಟನ್ ನಲ್ಲಿ ನಡೆದ ’ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಮೋದಿ ಭಾಷಣ ಕೇಳಲು ನೆರೆದಿದ್ದ ಜನಸಾಗರ ಮೋದಿಗೆ ಎಷ್ಟು ಅಭಿಮಾನಿಗಳಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದರು.

ಇನ್ನು ಕಾಂಗ್ರೆಸ್, ಸೆಪ್ಟಂಬರ್ 27ರಂದು ವಿಶ್ವ ಪ್ರವಾಸ ದಿನದ ಅಂಗವಾಗಿ ಮೋದಿ ವಿದೇಶ ಪ್ರವಾಸದ ಫೋಟೋ ಹಾಗೂ ವಿಮಾನ ನಿಲ್ದಾಣದಲ್ಲಿ ಇಳಿಯುವ ಮತ್ತು ಕೈ ಬೀಸುವ ಫೋಟೋಗಳ ಕೊಲಾಜ್ ಮಾಡಿ, ಹ್ಯಾಪಿ ಟೂರಿಸಂ ಡೇ ಎಂದು ಕ್ಯಾಪ್ಶನ್ ಬರೆದು ಟ್ರೋಲ್‌ ಮಾಡಿತ್ತು. ಅದಕ್ಕೆ ಪ್ರತಿಕ್ರಿಯೆಯಾಗಿ ಅಮಿತ್‌ ಶಾ ಮೇಲಿನ ಹೇಳಿಕೆ ನೀಡಿದ್ದಾರೆ.

ಇನ್ನು ಮೋದಿ ಮೇ 2014ರಿಂದ ಇಲ್ಲಿಯವರೆಗೆ 56 ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ ಎಂದು ಅಂಕಿಅಂಶಗಳು ಹೇಳುತ್ತಿವೆ. ಹಾಗೇ ನೋಡಿದರೆ ಮನಮೋಹನ್ ಸಿಂಗ್, ಮೋದಿ ಅವರಿಗಿಂತ ಹೆಚ್ಚು ವರ್ಷಗಳವರೆಗೆ (10 ವರ್ಷ) ಆಡಳಿತದಲ್ಲಿದ್ದರು. ಆದರೆ ಮೋದಿ ಅವರು ಕಡಿಮೆ ಅವಧಿಯಲ್ಲಿ (5.5 ವರ್ಷ) ಹೆಚ್ಚು ಪ್ರವಾಸ ಮಾಡಿರುವುದು ಮೇಲ್ನೋಟಕ್ಕೆ ಕಾಣುವ ವಿಷಯವಾಗಿದೆ.

ವಿದೇಶಿ ಪ್ರವಾಸದ ಖರ್ಚಿನಲ್ಲಿಯೂ ಸಹ ಮೋದಿಯವರು ಮನಮೋಹನ್‌ ಸಿಂಗ್‌ರವರಿಗಿಂತ ಹೆಚ್ಚು ಖರ್ಚು ಮಾಡಿದ್ದರೆಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಹಾಗಾಗಿ ಅಮಿತ್‌ ಶಾ ರವರು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ಮಾತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...