Homeಚಳವಳಿಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಸೆಪ್ಟೆಂಬರ್ 27 ರಂದು ರೈತರು ಕರೆ ನೀಡಿರುವ ಭಾರತ್ ಬಂದ್‌ಗೆ ಹಲವು ರಾಜಕೀಯ ಪಕ್ಷಗಳು ಸಂಪೂರ್ಣ ಬೆಂಬಲ ಸೂಚಿಸಿವೆ. ಅವುಗಳ ಪಟ್ಟಿ ಇಲ್ಲಿದೆ.

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್‌ಗೆ  ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಎಡಪಕ್ಷಗಳು ಈಗಾಗಲೇ ಬೆಂಬಲವನ್ನು ಘೋಷಿಸಿವೆ.

ವೈಎಸ್ಆರ್ ಕಾಂಗ್ರೆಸ್

ವೈಎಸ್ಆರ್ ಕಾಂಗ್ರೆಸ್ ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ರೈತರು ಕರೆ ನೀಡಿರುವ ಸೆಪ್ಟೆಂಬರ್ 27 ಭಾರತ್ ಬಂದ್‌ಗೆ ಬೆಂಬನ ನೀಡಿದೆ. ಆಂಧ್ರಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ (ನಾನಿ) ಶನಿವಾರ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ರಾಜ್ಯ ಸರ್ಕಾರ ರೈತರ ಪ್ರತಿಭಟನೆಗೆ ಸಂಪೂರ್ನ ಬೆಂಬಲ ನೀಡಿದೆ. ಜೊತೆಗೆ ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಕಾರ್ಮಿಕರ ಪ್ರತಿಭಟನೆಯನ್ನು ಬೆಂಬಲಿಸಿ, ಕೇಂದ್ರ ಸರ್ಕಾರದ ಖಾಸಗೀಕರಣ ಪ್ರಯತ್ನಗಳನ್ನು ವಿರೋಧಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಂಪೂರ್ಣ ಬೆಂಬಲ

ಕಾಂಗ್ರೆಸ್

ಭಾರತ್ ಬಂದ್‌ಗೆ ತನ್ನ ಬೆಂಬಲ ನೀಡಿರುವ ಕಾಂಗ್ರೆಸ್, ಪ್ರತಿಭಟನಾಕಾರರೊಂದಿಗೆ ಸರ್ಕಾರ ಚರ್ಚೆಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿದೆ.

“ಶಾಂತಿಯುತ” ಮುಷ್ಕರಕ್ಕೆ ಕರೆ ನೀಡಿರುವ ಕಾಂಗ್ರೆಸ್ ವಕ್ತಾರ ಗೌರವ ವಲ್ಲಭ್, ಕೇಂದ್ರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಗಳು ನೀಡಿದ ಭಾರತ್ ಬಂದ್‌ಗೆ ಪಕ್ಷ ಮತ್ತು ಅದರ ಎಲ್ಲಾ ಕಾರ್ಯಕರ್ತರು ಬೆಂಬಲ ನೀಡುತ್ತಿದ್ದಾರೆ. ಪ್ರತಿ ರೈತನಿಗೂ ಎಮ್‌ಎಸ್‌ಪಿಯನ್ನು ಕಾನೂನುಬದ್ಧ ಹಕ್ಕಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಆಮ್ ಆದ್ಮಿ ಪಕ್ಷ

ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾ ನೀಡಿದ ಭಾರತ್ ಬಂದ್ ಕರೆಗೆ ಎಎಪಿ ಸಹ ಬೆಂಬಲ ನೀಡಿದೆ. ರೈತರಿಗೆ ಒಗ್ಗಟ್ಟಿನ ಈ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಪಕ್ಷವು ಬೆಂಬಲವನ್ನು ಘೋಷಿಸಿದೆ ಎಂದು ಎಎಪಿ ನಾಯಕ ರಾಘವ್ ಚಡ್ಡಾ ಹೇಳಿದ್ದಾರೆ. ಆಮ್ ಆದ್ಮಿ ಪಕ್ಷವು ರೈತರ ದೆಹಲಿ ಚಲೋ ಆರಂಭವಾದಾಗಿನಿಂದ ರೈತರಿಗೆ ಬೆಂಬಲವಾಗಿ ನಿಂತಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

ತೆಲುಗು ದೇಶಂ ಪಕ್ಷ ಮತ್ತು ಎಡಪಕ್ಷಗಳು

ಭಾರತ್ ಬಂದ್ ಅನ್ನು ಯಶಸ್ವಿಗೊಳಿಸಲು ಆಂಧ್ರಪ್ರದೇಶದ ಕಮ್ಯುನಿಸ್ಟ್ ಪಾರ್ಟಿ ಇಂಡಿಯಾ (ಸಿಪಿಐ) ಕಚೇರಿಯಲ್ಲಿ ಎಡ ಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಯಿಂದ ಸಭೆ ನಡೆದಿದೆ.

ಸಿಪಿಐ ರಾಜ್ಯ ನಾಯಕ ದೊಣೆಪುಡಿ ಶಂಕರ್, “ದೆಹಲಿಯಲ್ಲಿ ರೈತರು ಒಂಬತ್ತು ತಿಂಗಳಿಂದ ಆಂದೋಲನ ನಡೆಸುತ್ತಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸಲು ಈ ಭಾರತ್ ಬಂದ್ ನಡೆಯಲಿದೆ” ಎಂದು ಹೇಳಿದ್ದರು.

ಜಂಟಿ ಹೇಳಿಕೆಯಲ್ಲಿ, ಎಡಪಕ್ಷಗಳಾದ ಸಿಪಿಐ, ಸಿಪಿಐ (ಎಂ), ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ-ಲೆನಿನಿಸ್ಟ್)-ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುವಂತೆ ಜನರನ್ನು ಕೋರಿದೆ.

ಆರ್‌ಜೆಡಿ ನಾಯಕ ತೇಜಶ್ವಿ ಯಾದವ್

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಸೆಪ್ಟೆಂಬರ್ 27 ರಂದು ಭಾರತ್ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆಗೆ ಬೆಂಬಲ ನೀಡಿದ್ದಾರೆ.

ಕೇರಳ ಸರ್ಕಾರ: ಎಲ್‌ಡಿಎಫ್ 

ಕೇರಳದ ಆಡಳಿತಾರೂಢ ಎಲ್‌ಡಿಎಫ್ ಕೂಡ ರೈತರಿಗೆ ಬೆಂಬಲ ಸೂಚಿಸಲು, ಸೆಪ್ಟೆಂಬರ್ 27 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ತಿರುವನಂತಪುರಂನಲ್ಲಿ ಆಡಳಿತ ಪಕ್ಷದ ಮೈತ್ರಿಕೂಟದ ನಾಯಕರ ಸಭೆಯ ನಂತರ ಸಿಪಿಐ (ಎಂ) ಹಂಗಾಮಿ ಕಾರ್ಯದರ್ಶಿ ಎ ವಿಜಯರಾಘವನ್ ಬೆಂಬಲ ಘೋಷಿಸಿರುವುದಾಗಿ ಹೇಳಿದ್ದಾರೆ.

“ಪ್ರತಿಭಟನೆಯಲ್ಲಿ ಐದು ಲಕ್ಷ ಜನರು ಭಾಗವಹಿಸಲಿದ್ದಾರೆ. ಸಾರಿಗೆ ನೌಕರರು, ಬ್ಯಾಂಕ್ ಉದ್ಯೋಗಿಗಳು ಮತ್ತು ರೈತ ಸಂಘಟನೆಗಳು ಸೇರಿದಂತೆ 100 ಕ್ಕೂ ಹೆಚ್ಚು ಸಂಘಟನೆಗಳು ಎಲ್‌ಡಿಎಫ್ ಆಂದೋಲನಕ್ಕೆ ತಮ್ಮ ಬೆಂಬಲವನ್ನು ನೀಡಿವೆ” ಎಂದು ವಿಜಯರಾಘವನ್ ಹೇಳಿದ್ದಾರೆ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) 

“ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ತನ್ನ ಒಗ್ಗಟ್ಟನ್ನು ಘೋಷಿಸುತ್ತದೆ” ಎಂದು SDPI ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಕ್ಷವು ಆರಂಭದಿಂದಲೂ ರೈತರ ಆಂದೋಲನವನ್ನು ಬೆಂಬಲಿಸುತ್ತಿದೆ ಮತ್ತು ಕೃಷಿ ಕಾಯಿದೆಗಳ ವಿರುದ್ಧ ದೇಶದಾದ್ಯಂತ ನೂರಾರು ಪ್ರತಿಭಟನೆಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಸೋಶಿಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್)

ಸೋಶಿಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷವೂ ಭಾರತ ಬಂದ್ ಸಂಪೂರ್ಣ ಬೆಂಬಲ ಘೋಷಣೆ ಮಾಡಿದೆ. ಕರ್ನಾಟಕದ ಐದು ಎಡ ಪಕ್ಷಗಳು ಮತ್ತು ಎರಡು ಪ್ರಜಾತಾಂತ್ರಿಕ ಪಕ್ಷಗಳು ಹೋರಾಟಕ್ಕೆ ಬೆಂಬಲ ಘೋಷಣೆ ಮಾಡಿ, ರಾಜ್ಯದಾದ್ಯಂತ ಸೆ.24ರಂದು ಸೌಹಾರ್ದ ಪ್ರದರ್ಶನ ನಡೆಸಿವೆ.

ಸ್ವರಾಜ್ ಇಂಡಿಯಾ

ಯೋಗೇಂದ್ರ ಯಾದವ್ ಅವರ ಸ್ವರಾಜ್ ಇಂಡಿಯಾ ಪಕ್ಷವೂ ರೈತ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಿದೆ.

ಕರ್ನಾಟಕ ರಾಷ್ಟ್ರ ಸಮಿತಿ

ಹೋರಾಟಗಾರ ರವಿ ಕೃಷ್ಣಾ ರೆಡ್ಡಿ ಅವರ ಕರ್ನಾಟಕ ರಾಷ್ಟ್ರ ಸಮಿತಿಯು ಭಾರತ್ ಬಂದ್‌ಗೆ ಬೆಂಬಲ ನೀಡಿದೆ.

ಬ್ಯಾಂಕ್ ಅಧಿಕಾರಿಗಳ ಸಂಘ

ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಅಲ್‌ಬಿಒಸಿ) ಸೋಮವಾರ ನಡೆಯಲಿರುವ ಭಾರತ್ ಬಂದ್‌ಗೆ ತನ್ನ ಬೆಂಬಲವನ್ನು ನೀಡಿದೆ. ರೈತರ ಬೇಡಿಕೆಗಳ ಕುರಿತು ಒಕ್ಕೂಟ ಸರ್ಕಾರ ಸಂವಾದ ನಡೆಸಬೇಕು ಮತ್ತು   ಮೂರು ವಿವಾದಿತ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದೆ.

ರಾಜಕೀಯ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು, ರೈತ ಸಂಘಗಳು, ಕಾರ್ಮಿಕ ಸಂಘಟನೆಗಳು, ಯುವಕರು, ಶಿಕ್ಷಕರು, ಕಾರ್ಮಿಕರು ಮತ್ತು ಜನಪರ ಸಂಘಟನೆಗಳು ಸೇರಿದಂತೆ ಹಲವು ವಿವಿಧ ಸಂಸ್ಥೆಗಳು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿರುವ ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿವೆ.


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೈತರ ಕರೆಗೆ ಸಂಪೂರ್ಣ ಬೆಂಬಲ ಜೈ ಜವಾನ್ ಜೈ ಕಿಸಾನ್

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...