Homeಚಳವಳಿಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಸೆಪ್ಟೆಂಬರ್ 27 ರಂದು ರೈತರು ಕರೆ ನೀಡಿರುವ ಭಾರತ್ ಬಂದ್‌ಗೆ ಹಲವು ರಾಜಕೀಯ ಪಕ್ಷಗಳು ಸಂಪೂರ್ಣ ಬೆಂಬಲ ಸೂಚಿಸಿವೆ. ಅವುಗಳ ಪಟ್ಟಿ ಇಲ್ಲಿದೆ.

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್‌ಗೆ  ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಎಡಪಕ್ಷಗಳು ಈಗಾಗಲೇ ಬೆಂಬಲವನ್ನು ಘೋಷಿಸಿವೆ.

ವೈಎಸ್ಆರ್ ಕಾಂಗ್ರೆಸ್

ವೈಎಸ್ಆರ್ ಕಾಂಗ್ರೆಸ್ ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ರೈತರು ಕರೆ ನೀಡಿರುವ ಸೆಪ್ಟೆಂಬರ್ 27 ಭಾರತ್ ಬಂದ್‌ಗೆ ಬೆಂಬನ ನೀಡಿದೆ. ಆಂಧ್ರಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ (ನಾನಿ) ಶನಿವಾರ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ರಾಜ್ಯ ಸರ್ಕಾರ ರೈತರ ಪ್ರತಿಭಟನೆಗೆ ಸಂಪೂರ್ನ ಬೆಂಬಲ ನೀಡಿದೆ. ಜೊತೆಗೆ ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಕಾರ್ಮಿಕರ ಪ್ರತಿಭಟನೆಯನ್ನು ಬೆಂಬಲಿಸಿ, ಕೇಂದ್ರ ಸರ್ಕಾರದ ಖಾಸಗೀಕರಣ ಪ್ರಯತ್ನಗಳನ್ನು ವಿರೋಧಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಂಪೂರ್ಣ ಬೆಂಬಲ

ಕಾಂಗ್ರೆಸ್

ಭಾರತ್ ಬಂದ್‌ಗೆ ತನ್ನ ಬೆಂಬಲ ನೀಡಿರುವ ಕಾಂಗ್ರೆಸ್, ಪ್ರತಿಭಟನಾಕಾರರೊಂದಿಗೆ ಸರ್ಕಾರ ಚರ್ಚೆಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿದೆ.

“ಶಾಂತಿಯುತ” ಮುಷ್ಕರಕ್ಕೆ ಕರೆ ನೀಡಿರುವ ಕಾಂಗ್ರೆಸ್ ವಕ್ತಾರ ಗೌರವ ವಲ್ಲಭ್, ಕೇಂದ್ರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಗಳು ನೀಡಿದ ಭಾರತ್ ಬಂದ್‌ಗೆ ಪಕ್ಷ ಮತ್ತು ಅದರ ಎಲ್ಲಾ ಕಾರ್ಯಕರ್ತರು ಬೆಂಬಲ ನೀಡುತ್ತಿದ್ದಾರೆ. ಪ್ರತಿ ರೈತನಿಗೂ ಎಮ್‌ಎಸ್‌ಪಿಯನ್ನು ಕಾನೂನುಬದ್ಧ ಹಕ್ಕಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಆಮ್ ಆದ್ಮಿ ಪಕ್ಷ

ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾ ನೀಡಿದ ಭಾರತ್ ಬಂದ್ ಕರೆಗೆ ಎಎಪಿ ಸಹ ಬೆಂಬಲ ನೀಡಿದೆ. ರೈತರಿಗೆ ಒಗ್ಗಟ್ಟಿನ ಈ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಪಕ್ಷವು ಬೆಂಬಲವನ್ನು ಘೋಷಿಸಿದೆ ಎಂದು ಎಎಪಿ ನಾಯಕ ರಾಘವ್ ಚಡ್ಡಾ ಹೇಳಿದ್ದಾರೆ. ಆಮ್ ಆದ್ಮಿ ಪಕ್ಷವು ರೈತರ ದೆಹಲಿ ಚಲೋ ಆರಂಭವಾದಾಗಿನಿಂದ ರೈತರಿಗೆ ಬೆಂಬಲವಾಗಿ ನಿಂತಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ, ನೀವು ಉಪವಾಸ ಕೈಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

ತೆಲುಗು ದೇಶಂ ಪಕ್ಷ ಮತ್ತು ಎಡಪಕ್ಷಗಳು

ಭಾರತ್ ಬಂದ್ ಅನ್ನು ಯಶಸ್ವಿಗೊಳಿಸಲು ಆಂಧ್ರಪ್ರದೇಶದ ಕಮ್ಯುನಿಸ್ಟ್ ಪಾರ್ಟಿ ಇಂಡಿಯಾ (ಸಿಪಿಐ) ಕಚೇರಿಯಲ್ಲಿ ಎಡ ಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಯಿಂದ ಸಭೆ ನಡೆದಿದೆ.

ಸಿಪಿಐ ರಾಜ್ಯ ನಾಯಕ ದೊಣೆಪುಡಿ ಶಂಕರ್, “ದೆಹಲಿಯಲ್ಲಿ ರೈತರು ಒಂಬತ್ತು ತಿಂಗಳಿಂದ ಆಂದೋಲನ ನಡೆಸುತ್ತಿದ್ದಾರೆ, ಆದ್ದರಿಂದ ಅವರನ್ನು ಬೆಂಬಲಿಸಲು ಈ ಭಾರತ್ ಬಂದ್ ನಡೆಯಲಿದೆ” ಎಂದು ಹೇಳಿದ್ದರು.

ಜಂಟಿ ಹೇಳಿಕೆಯಲ್ಲಿ, ಎಡಪಕ್ಷಗಳಾದ ಸಿಪಿಐ, ಸಿಪಿಐ (ಎಂ), ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ-ಲೆನಿನಿಸ್ಟ್)-ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ನೀಡುವಂತೆ ಜನರನ್ನು ಕೋರಿದೆ.

ಆರ್‌ಜೆಡಿ ನಾಯಕ ತೇಜಶ್ವಿ ಯಾದವ್

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಸೆಪ್ಟೆಂಬರ್ 27 ರಂದು ಭಾರತ್ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆಗೆ ಬೆಂಬಲ ನೀಡಿದ್ದಾರೆ.

ಕೇರಳ ಸರ್ಕಾರ: ಎಲ್‌ಡಿಎಫ್ 

ಕೇರಳದ ಆಡಳಿತಾರೂಢ ಎಲ್‌ಡಿಎಫ್ ಕೂಡ ರೈತರಿಗೆ ಬೆಂಬಲ ಸೂಚಿಸಲು, ಸೆಪ್ಟೆಂಬರ್ 27 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ತಿರುವನಂತಪುರಂನಲ್ಲಿ ಆಡಳಿತ ಪಕ್ಷದ ಮೈತ್ರಿಕೂಟದ ನಾಯಕರ ಸಭೆಯ ನಂತರ ಸಿಪಿಐ (ಎಂ) ಹಂಗಾಮಿ ಕಾರ್ಯದರ್ಶಿ ಎ ವಿಜಯರಾಘವನ್ ಬೆಂಬಲ ಘೋಷಿಸಿರುವುದಾಗಿ ಹೇಳಿದ್ದಾರೆ.

“ಪ್ರತಿಭಟನೆಯಲ್ಲಿ ಐದು ಲಕ್ಷ ಜನರು ಭಾಗವಹಿಸಲಿದ್ದಾರೆ. ಸಾರಿಗೆ ನೌಕರರು, ಬ್ಯಾಂಕ್ ಉದ್ಯೋಗಿಗಳು ಮತ್ತು ರೈತ ಸಂಘಟನೆಗಳು ಸೇರಿದಂತೆ 100 ಕ್ಕೂ ಹೆಚ್ಚು ಸಂಘಟನೆಗಳು ಎಲ್‌ಡಿಎಫ್ ಆಂದೋಲನಕ್ಕೆ ತಮ್ಮ ಬೆಂಬಲವನ್ನು ನೀಡಿವೆ” ಎಂದು ವಿಜಯರಾಘವನ್ ಹೇಳಿದ್ದಾರೆ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) 

“ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ತನ್ನ ಒಗ್ಗಟ್ಟನ್ನು ಘೋಷಿಸುತ್ತದೆ” ಎಂದು SDPI ಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಕ್ಷವು ಆರಂಭದಿಂದಲೂ ರೈತರ ಆಂದೋಲನವನ್ನು ಬೆಂಬಲಿಸುತ್ತಿದೆ ಮತ್ತು ಕೃಷಿ ಕಾಯಿದೆಗಳ ವಿರುದ್ಧ ದೇಶದಾದ್ಯಂತ ನೂರಾರು ಪ್ರತಿಭಟನೆಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಸೋಶಿಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್)

ಸೋಶಿಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷವೂ ಭಾರತ ಬಂದ್ ಸಂಪೂರ್ಣ ಬೆಂಬಲ ಘೋಷಣೆ ಮಾಡಿದೆ. ಕರ್ನಾಟಕದ ಐದು ಎಡ ಪಕ್ಷಗಳು ಮತ್ತು ಎರಡು ಪ್ರಜಾತಾಂತ್ರಿಕ ಪಕ್ಷಗಳು ಹೋರಾಟಕ್ಕೆ ಬೆಂಬಲ ಘೋಷಣೆ ಮಾಡಿ, ರಾಜ್ಯದಾದ್ಯಂತ ಸೆ.24ರಂದು ಸೌಹಾರ್ದ ಪ್ರದರ್ಶನ ನಡೆಸಿವೆ.

ಸ್ವರಾಜ್ ಇಂಡಿಯಾ

ಯೋಗೇಂದ್ರ ಯಾದವ್ ಅವರ ಸ್ವರಾಜ್ ಇಂಡಿಯಾ ಪಕ್ಷವೂ ರೈತ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಿದೆ.

ಕರ್ನಾಟಕ ರಾಷ್ಟ್ರ ಸಮಿತಿ

ಹೋರಾಟಗಾರ ರವಿ ಕೃಷ್ಣಾ ರೆಡ್ಡಿ ಅವರ ಕರ್ನಾಟಕ ರಾಷ್ಟ್ರ ಸಮಿತಿಯು ಭಾರತ್ ಬಂದ್‌ಗೆ ಬೆಂಬಲ ನೀಡಿದೆ.

ಬ್ಯಾಂಕ್ ಅಧಿಕಾರಿಗಳ ಸಂಘ

ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಅಲ್‌ಬಿಒಸಿ) ಸೋಮವಾರ ನಡೆಯಲಿರುವ ಭಾರತ್ ಬಂದ್‌ಗೆ ತನ್ನ ಬೆಂಬಲವನ್ನು ನೀಡಿದೆ. ರೈತರ ಬೇಡಿಕೆಗಳ ಕುರಿತು ಒಕ್ಕೂಟ ಸರ್ಕಾರ ಸಂವಾದ ನಡೆಸಬೇಕು ಮತ್ತು   ಮೂರು ವಿವಾದಿತ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದೆ.

ರಾಜಕೀಯ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು, ರೈತ ಸಂಘಗಳು, ಕಾರ್ಮಿಕ ಸಂಘಟನೆಗಳು, ಯುವಕರು, ಶಿಕ್ಷಕರು, ಕಾರ್ಮಿಕರು ಮತ್ತು ಜನಪರ ಸಂಘಟನೆಗಳು ಸೇರಿದಂತೆ ಹಲವು ವಿವಿಧ ಸಂಸ್ಥೆಗಳು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿರುವ ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿವೆ.


ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೈತರ ಕರೆಗೆ ಸಂಪೂರ್ಣ ಬೆಂಬಲ ಜೈ ಜವಾನ್ ಜೈ ಕಿಸಾನ್

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...