Homeಕರ್ನಾಟಕಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

ಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

- Advertisement -
- Advertisement -

“ಮೂರು ಪರ್ಸೆಂಟ್ ಇರುವ ಮೇಲ್ಜಾತಿಯವರಿಗೆ ಹತ್ತು ಪರ್ಸೆಂಟ್ (ಇಡಬ್ಲ್ಯೂಎಸ್) ಮೀಸಲಾತಿ ನೀಡಲು ಯಾವ ಉಪಸಮಿತಿ ಮಾಡಿದ್ರಿ, ಯಾವ ಆಯೋಗ ವರದಿ ನೀಡಿತ್ತು?” ಎಂದು ಉರಿಲಿಂಗಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಪ್ರಶ್ನಿಸಿದರು.

ಪುನಾರಂಭಗೊಂಡಿರುವ ಒಳಮೀಸಲಾತಿ ಹೋರಾಟ 30ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಆಗಮಿಸಿ, ಹೋರಾಟವನ್ನು ಉದ್ದೇಶಿಸಿ ಅವರು ಮಾತನಾಡಿದರು.

“ನಮ್ಮ ಸಮುದಾಯಗಳನ್ನು ಒಡೆದು ಆಳುವ ಷಡ್ಯಂತ್ರ ನಡೆಯುತ್ತಿರುವುದು ನಮಗೆ ತಿಳಿದಿದೆ. ಮತಕ್ಕಾಗಿ ನಮ್ಮನ್ನು ಛಿದ್ರ ಛಿದ್ರ ಮಾಡಿದ್ದಾರೆ. ನಾವು ಯಾರ ತಟ್ಟೆಗೂ ಕೈ ಹಾಕುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು ಎಂಬುದು ಸಂವಿಧಾನ ಹಾಗೂ ಬಾಬಾ ಸಾಹೇಬ್‌ ಅಂಬೇಡ್ಕರರ ಆಶಯ. ಉಪಸಮಿತಿ ರಚಿಸಿರುವುದಾಗಿ ಹೇಳುತ್ತಾರೆ. ಆದರೆ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೆ ಯಾವ ಉಪಸಮಿತಿ ಮಾಡಿದ್ದರು? ಯಾವ ಆಯೋಗ ಮಾಡಿದ್ದರು? ಯಾವ ವರದಿ ಪಡೆದಿದ್ದರು? ಹೇಗೆ ಇಡಬ್ಲ್ಯೂಎಸ್‌ ಜಾರಿಯಾಯಿತು?” ಎಂದು ಕೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂವಿಧಾನ ಜಾರಿಗೊಳಿಸುವ ಜಾಗದಲ್ಲಿ ನಾವಿಲ್ಲ. ನಮ್ಮ ಪ್ರತಿನಿಧಿಗಳಾಗಿ ಹೋದವರು ಬಾಯಿ ಕಟ್ಟಿದ ನಾಯಿಗಳಾಗಿ ಕೂತಿದ್ದಾರೆ. ನಾವಿಲ್ಲಿ ಟೆಂಟ್ ಹಾಕಿಕೊಂಡು ಧಿಕ್ಕಾರ ಕೂಗುತ್ತಿದ್ದೇವೆ. ನಮ್ಮನ್ನು ಒಡೆದು ಆಳುತ್ತಿದ್ದಾರೆ. ಜಲ್ಲಿ, ಸಿಮೆಂಟ್, ಕಬ್ಬಿಣ, ನೀರು- ಎಲ್ಲವನ್ನು ಬೇರ್ಪಡಿಸಿ ಕಾಂಕ್ರೀಟ್ ಮಾಡಲು ಸಾಧ್ಯವೇ? ಜೇನು ನೊಣಗಳಂತೆ ಒಂದಾಗಿ” ಎಂದು ಸಂದೇಶ ನೀಡಿದರು.

“ಗ್ರಾಮ ಪಂಚಾಯಿತಿ ಮೆಂಬರ್‌ ಕೂಡ ಆಗಲು ಸಾಧ್ಯವಿಲ್ಲದಂತಹ ಬುಡುಬುಡಕೆ, ದೊಂಬಿದಾಸ, ಶಿಳ್ಳೆಕ್ಯಾತರಿದ್ದಾರೆ. ಅವರಿಗೆಲ್ಲರಿಗೂ ಪ್ರಾತಿನಿಧ್ಯ ಕೊಡಬೇಕು. ಆದರೆ ಮೆಜಾರಿಟಿ ಇಲ್ಲದ ಬ್ರಾಹ್ಮಣರು 127 ಮಂದಿ ಎಂಪಿಗಳನ್ನು ಹೊಂದಿದ್ದಾರೆ. ಅವರನ್ನು ಗೆದ್ದು ಕಳಿಸಿದ್ದು ಯಾರು? ನಿಮ್ಮ ಹೆಗಲ ಮೇಲೆ ಕಾಲುಗಳನ್ನು ಇಟ್ಟುಕೊಂಡು ನಿಂತಿದ್ದಾರೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗವೆಲ್ಲ ಅವರ ಹಿಡಿತದಲ್ಲಿವೆ. ಹೀಗಾಗಿ ಹತ್ತು ಪರ್ಸೆಂಟ್ ಮೀಸಲಾತಿ ಒಂದೇ ದಿನದಲ್ಲಿ ಮಾಡಿಕೊಳ್ಳುತ್ತಾರೆ. ಯಾಕೆಂದರೆ ಅವರ ಬಳಿ ಅಧಿಕಾರವಿದೆ. ಅಂಬೇಡ್ಕರ್‌ರವರು ಹೇಳಿದಂತೆ ಅಧಿಕಾರ ಹೀನತೆಯೇ ಅಸ್ಪೃಶ್ಯತೆ” ಎಂದು ಅಭಿಪ್ರಾಯಪಟ್ಟರು.

“ಒಂದೇ ದಿನದಲ್ಲಿ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೊಳಿಸಿದಂತೆ ಒಳಮೀಸಲಾತಿ ಜಾರಿಗೊಳಿಸಿ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತನ್ನಿರಿ. ಆಜಾದಿ ಕಾ ಅಮೃತ ಮಹೋತ್ಸವ ಎನ್ನುತ್ತಿದ್ದಾರೆ. ಯಾರಿಗೆ ಅಮೃತ? ಆರು ನಿಮಿಷಕ್ಕೊಮ್ಮೆ ದಲಿತ ಹೆಣ್ಣುಮಕ್ಕಳ ರೇಪ್ ಆಗುತ್ತಿದೆ. ಎಂಟು ನಿಮಿಷಕ್ಕೊಂದು ಗುಡಿಸಲಿಗೆ ಬೆಂಕಿ ಬೀಳುತ್ತಿದೆ, ಅರವತ್ತು ಸಾವಿರ ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್ ಬಂದ್‌ ಆಗಿದೆ, ಏಳು ಸಾವಿರ ವಿದ್ಯಾರ್ಥಿಗಳ ಪಿಎಚ್‌.ಡಿ ಬಂದ್ ಆಗಿದೆ, ಬೈಕ್‌ ರೈಡ್ ಮಾಡಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಕೋಲಾರದಲ್ಲಿ ಥಳಿಸಿದ್ದಾರೆ, ಇದಕ್ಕೆಲ್ಲ ಯಾರು ಉತ್ತರ ಕೊಡಬೇಕು” ಎಂದು ಮಾರ್ಮಿಕವಾಗಿ ನುಡಿದರು.

“ಜಾತಿ ಜಾತಿಗಳ ನಡುವೆ ಒಡಕುಗಳು ಬೇಡ. ಎಸ್.ಸಿ., ಎಸ್‌.ಟಿ. ಸ್ವಾಮೀಜಿಗಳು ಏಕೆ ಒಂದಾಗಬೇಕು ಎಂಬ ವಿಷಯವನ್ನಿಟ್ಟುಕೊಂಡು 31 ಜಿಲ್ಲೆಗಳಲ್ಲೂ ಹೋರಾಟ ಮಾಡುತ್ತಿದ್ದೇವೆ. ಪರಿಶಿಷ್ಟ ಜನಾಂಗದ ಸ್ವಾಮೀಜಿಗಳನ್ನೇ ಒಡೆಯಬೇಕೆಂದು ಹೊರಟಿದ್ದಾರೆ. ಒಂದಿಷ್ಟು ಸಮುದಾಯದ ಸ್ವಾಮೀಜಿಗಳನ್ನು ಎತ್ತಿಕಟ್ಟಿ ನಮ್ಮ ವಿರುದ್ಧ ಬಿಟ್ಟಿದ್ದಾರೆ. ನಾವು ಯಾರೂ ವಿಚಲಿತರಾಗಿಲ್ಲ. ನಾವು ಒಗ್ಗಟ್ಟಿನಿಂದ ಇದ್ದೇವೆ. ನಾಲ್ಕು ವಿಭಾಗೀಯ ಸಮಾವೇಶ ಮಾಡುತ್ತೇವೆ, ದಲಿತ ಮುಖಂಡರೆಲ್ಲ ಅದರಲ್ಲಿ ಪಾಲ್ಗೊಳ್ಳಿದ್ದಾರೆ” ಎಂದು ಗುಡುಗಿದರು.

ನಮ್ಮ ಪಾಲು ಕೇಳಲು ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ: ಮಾವಳ್ಳಿ ಶಂಕರ್‌

ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಯಾರ ಪಾಲನ್ನು ನಾವು ಕಿತ್ತುಕೊಳ್ಳುತ್ತಿಲ್ಲ, ಯಾರ ಆಸ್ತಿಗೂ, ತಟ್ಟೆಗೂ ಕೈಹಾಕಿಲ್ಲ. ಹಿಂದುಳಿದ ಜಾತಿಗಳಿಗೆ ಮೀಸಲಾತಿ ವರ್ಗೀಕರಣ ಮಾಡಲು ಸಾಧ್ಯವಾದರೆ ಪರಿಶಿಷ್ಟ ಜಾತಿಯಲ್ಲಿ ಏಕೆ ಸಾಧ್ಯವಾಗುತ್ತಿಲ್ಲ? ನಮ್ಮ ಪಾಲನ್ನು ನಾವು ಕೇಳೋದಕ್ಕೆ ಯಾವುದೇ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎ.ಜೆ.ಸದಾಶಿವ ಆಯೋಗದ ಜಾರಿಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡು ಮಾವಳ್ಳಿ ಶಂಕರ್‌ ಮಾತನಾಡಿದರು.

“ಒಳಮೀಸಲಾತಿ ಕುರಿತು ಚರ್ಚೆ ಮಾಡುತ್ತಿರುವಾಗ ಖಾಸಗೀಕರಣ ಹೆಚ್ಚಾಗಿರುವುದನ್ನು ಪ್ರಸ್ತಾಪಿಸುತ್ತಾರೆ. ಅದರ ವಿರುದ್ಧ ಹೋರಾಟ ಮಾಡುವುದು ಹೇಗೆಂದು ಬಾಬಾ ಸಾಹೇಬರ ಅನುಯಾಯಿಗಳಿಗೆ ಗೊತ್ತಿದೆ. ಆದರೆ ಖಾಸಗೀಕರಣವನ್ನು ತೋರಿಸಿ, ಈ ಹೋರಾಟವನ್ನು ತಡೆಯಬಾರದು” ಎಂದು ಎಚ್ಚರಿಕೆ ನೀಡಿದರು.

“ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಲ್ಲಿ ಹೇಡಿಗಳು ಗೆದ್ದು ಬರುತ್ತಿದ್ದಾರೆ. ಅವರೆಲ್ಲ ಈ ಸಮುದಾಯವನ್ನು ಪ್ರತಿನಿಧಿಸಿ ಮೇಲ್ಜಾತಿಯ ಗುಲಾಮಗಿರಿ ಮಾಡದಿದ್ದರೆ ಒಳಮೀಸಲಾತಿ ದೊಡ್ಡ ಪ್ರಶ್ನೆಯೇ ಆಗುತ್ತಿರಲಿಲ್ಲ. ರಾಜಕೀಯ ಅಧಿಕಾರಕ್ಕಾಗಿ ಬೇರೆಯವರ ಜೀತ ಮಾಡಿದರೆ ಸಮುದಾಯ ಹಿಂದುಳಿಯುತ್ತದೆ. ಬಾಬಾ ಸಾಹೇಬರ ಆಶಯದಂತೆ ಪ್ರತ್ಯೇಕ ಮತದಾನದ ಹಕ್ಕು ನಮಗೆ ಸಿಕ್ಕಿದ್ದರೆ ನಮ್ಮ ಕಾಲ ಬುಡಕ್ಕೆ ಮೇಲ್ಜಾತಿಗಳು ಬರುತ್ತಿದ್ದವು. ಪರಿಶಿಷ್ಟ ರಾಜಕಾರಣಗಳು ಒಳಮೀಸಲಾತಿ ಪರ ಮಾತನಾಡಲು ಸಾಧ್ಯವಾಗುತ್ತಿಲ್ಲ. ದಲಿತ ರಾಜಕಾರಣಿಗಳು ಮೇಲ್ಜಾತಿಗಳ ಮರ್ಜಿಗೆ ಬಿದ್ದಿದ್ದಾರೆ” ಎಂದು ವಿಷಾದಿಸಿದರು.

ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ದಲಿತ ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿ, “ಈ ಮೂವತ್ತು ವರ್ಷದ ಹೋರಾಟದಲ್ಲಿ ಹಲವಾರು ನಾಯಕರು ಸತ್ತಿದ್ದಾರೆ, ಜೈಲಿಗೆ ಹೋಗಿದ್ದಾರೆ, ನೌಕರಿ ಬಿಟ್ಟಿದ್ದಾರೆ, ಲಾಠಿ ಏಟು ತಿಂದಿದ್ದಾರೆ- ಯಾವುದೇ ಕಾರಣಕ್ಕೂ ಒಂದು ದಿನಕ್ಕೆ ಮಾತ್ರ ಹೋರಾಟ ಸೀಮಿತಗೊಳಿಸಬಾರದು ಎಂದು ಭೀಮ ಸೈನಿಕರು ಎಚ್ಚರಿಕೆ ಕೊಟ್ಟು ನಮ್ಮನ್ನು ಕಳಿಸಿದ್ದಾರೆ. ಹೀಗಾಗಿ ಹೋರಾಟ ಮುಂದುವರಿಸಿದೆ. ನವೆಂಬರ್‌ ತಿಂಗಳಿನಿಂದ ನಿರಂತರ ಹೋರಾಟ ನಡೆಯುತ್ತಿದೆ. ಡಿಸೆಂಬರ್‌ 11ರಿಂದ ಬೆಂಗಳೂರಿನಲ್ಲಿ ಹೋರಾಟ ಜರುಗಿದೆ” ಎಂದರು.

“ಒಂದು ಸಂಘಟನೆ, ಒಂದು ಸಮುದಾಯ ಈ ಹೋರಾಟದ ಮುಂದಾಳತ್ವ ವಹಿಸಿತ್ತು. ಆದರೆ ಎಲ್ಲ ಜಾತಿಗಳು ಈ ಚಳವಳಿಯ ಭಾಗವಾಗಬೇಕೆಂದು ನಿರಂತರ ಚರ್ಚೆಗಳು ನಡೆಸಿದ್ದೇವೆ. ಎಲ್ಲ ಸಮುದಾಯಗಳು ಒಳಗೊಂಡಿದ್ದರಿಂದ ನಮ್ಮ ಟೈಟಲ್‌ ಬದಲಾಗಿದೆ, ನಡೆ, ನುಡಿ, ವರ್ತನೆ ಬದಲಾಗಿದೆ. ಎಲ್ಲ ರೀತಿಯಲ್ಲೂ ನಮ್ಮ ಹೋರಾಟ ವಿಸ್ತರಣೆಯಾಗಿದೆ. ಮೂರು ಪಕ್ಷಗಳು ಮಾತನಾಡುವಂತಾಗಿದೆ. ಇದು ರಾಜಕೀಯೇತರ ಚಳವಳಿ” ಎಂದು ಸ್ಪಷ್ಟಪಡಿಸಿದರು.

ದಲಿತ ಹೋರಾಟಗಾರರಾದ ಬಿ.ಗೋಪಾಲ್ ಮಾತನಾಡಿ, “ಯಾರದೇ ಮೀಸಲಾತಿಯನ್ನು ಕಿತ್ತುಹಾಕುವ ಪ್ರಸ್ತಾವನ್ನು ಯಾರೂ ಮಾಡಿಲ್ಲ. ಮಾಡಲೂಬಾರದು” ಎಂದು ಆಶಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಹೋರಾಟ 30ನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟದಲ್ಲಿ ದಲಿತ ಮುಖಂಡರಾದ ಎನ್.ವೆಂಕಟೇಶ್, ಹೆಣ್ಣೂರು ಶ್ರೀನಿವಾಸ್, ಬಸವರಾಜ ಕೌತಾಳ್, ಮೋಹನ್ ರಾಜ್, ಹೆಣ್ಣೂರು ಲಕ್ಷ್ಮೀನಾರಾಯಣ್, ಡಿ.ಶಿವಶಂಕರ್, ಕನಕಪುರ ಬಿ.ಶಿವಣ್ಣ, ಶಿವರಾಜ ಯಕ್ಕರಕಿ, ಗುರುಮೂರ್ತಿ, ಶಿವಸುಂದರ್, ಗೌರಿ ಜನಶಕ್ತಿ, ನಾಗಮಣಿ, ಸವಿತಾ, ಹ.ರಾ.ಮಹೇಶ್, ಸೂಲಿಕುಂಟೆ ರಮೇಶ್, ಗಣೇಶ್ ಮೇತ್ರಿ, ಕಮಲಾನಗರ ಚಿಕ್ಕಣ್ಣ, ರಾಜಗೋಪಾಲ್, ಹನುಮೇಗೌಡ, ಕರಿಯಪ್ಪ ಗುಡಿಮನಿ, ವೇಣುಗೋಪಾಲ್ ಮೌರ್ಯ, ಹನುಮೇಶ್ ಗುಂಡೂರು, ಡಿಬಿಎಂ ವೆಂಕಟೇಶ್, ಕೋದಂಡರಾಮ್, ಹೆಗ್ಗನಹಳ್ಳಿ ಮೂರ್ತಿ, ಕನಕೇನಹಳ್ಳಿ ಕೃಷ್ಣ, ಡಾ.ರವಿಕುಮಾರ್ ಬಾಗಿ, ಹಾಡುಗಾರರಾದ ಕೆ.ಎನ್.ನಾಗೇಶ್, ಸಬ್ಬನಹಳ್ಳಿ ರಾಜು, ಪ್ರಶಾಂತ್ ದಾನಪ್ಪ, ಸುಧಾಕರ್, ಸಿದ್ದಯ್ಯ, ಎಲ್.ವಿ.ಸುರೇಶ್, ಮೌನೇಶ್ ದೇವತೆಗಲ್, ಮೌಲಪ್ಪ ಐಹೊಳೆ, ಹನುಮೇಶ್ ಬೇರಿ, ಎಂ.ಡೇವಿಡ್ ಸಿರವಾರ, ಎಸ್.ಎಚ್.ನಾಗೇಶ್ ಮೊದಲಾದವರು ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಲಂಬಾಣಿ, ಭೋವಿ ಸಮುದಾಯ ಬೃಹತ್‌ ಪ್ರತಿಭಟನೆ

ಭೋವಿ, ಲಂಬಾಣಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟದ ನೇತೃತ್ವ’ದಲ್ಲಿ ಅದೇ ಫ್ರೀಡಂ ಪಾರ್ಕ್‌‌ನಲ್ಲಿ ಬೃಹತ್ ಹೋರಾಟ ಜರುಗಿತು.

ಎ.ಜೆ.ಸದಾಶಿವ ಆಯೋಗದ ವರದಿಯನ್ನು ತರಾತುರಿಯಲ್ಲಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬಾರದು ಎಂಬುದು ಒಕ್ಕೂಟದ ಆಗ್ರಹವಾಗಿತ್ತು. ಎರಡು ಭಿನ್ನ ನಿಲುವಿನ ಹೋರಾಟಗಳು ಒಂದೇ ಸ್ಥಳದಲ್ಲಿ ಜರುಗಿದ್ದರಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಒಂದು ಸಾವಿರ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ್ದರು. ಎ.ಜೆ.ಸದಾಶಿವ ಆಯೋಗದ ಪರ ನಡೆಯುತ್ತಿರುವ 30ನೇ ದಿನದ ಹೋರಾಟದ ಸ್ಥಳಕ್ಕೆ ಹೋಗುವವರನ್ನು ಪರಿಶೀಲಿಸಿ ಬಿಡಲಾಗುತ್ತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಾಲಾದರೂ ಸನಾತನಿ ಬ್ರಾಹ್ಮಣ್ಯದ ಎದುರು ಗಟ್ಟಿಯಾಗಿ ಮಾತಾಡುತ್ತದ್ದಾರಲ್ಲಾ?,🙏

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...