Homeಕರ್ನಾಟಕಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

ಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

- Advertisement -
- Advertisement -

“ಮೂರು ಪರ್ಸೆಂಟ್ ಇರುವ ಮೇಲ್ಜಾತಿಯವರಿಗೆ ಹತ್ತು ಪರ್ಸೆಂಟ್ (ಇಡಬ್ಲ್ಯೂಎಸ್) ಮೀಸಲಾತಿ ನೀಡಲು ಯಾವ ಉಪಸಮಿತಿ ಮಾಡಿದ್ರಿ, ಯಾವ ಆಯೋಗ ವರದಿ ನೀಡಿತ್ತು?” ಎಂದು ಉರಿಲಿಂಗಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಪ್ರಶ್ನಿಸಿದರು.

ಪುನಾರಂಭಗೊಂಡಿರುವ ಒಳಮೀಸಲಾತಿ ಹೋರಾಟ 30ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಆಗಮಿಸಿ, ಹೋರಾಟವನ್ನು ಉದ್ದೇಶಿಸಿ ಅವರು ಮಾತನಾಡಿದರು.

“ನಮ್ಮ ಸಮುದಾಯಗಳನ್ನು ಒಡೆದು ಆಳುವ ಷಡ್ಯಂತ್ರ ನಡೆಯುತ್ತಿರುವುದು ನಮಗೆ ತಿಳಿದಿದೆ. ಮತಕ್ಕಾಗಿ ನಮ್ಮನ್ನು ಛಿದ್ರ ಛಿದ್ರ ಮಾಡಿದ್ದಾರೆ. ನಾವು ಯಾರ ತಟ್ಟೆಗೂ ಕೈ ಹಾಕುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು ಎಂಬುದು ಸಂವಿಧಾನ ಹಾಗೂ ಬಾಬಾ ಸಾಹೇಬ್‌ ಅಂಬೇಡ್ಕರರ ಆಶಯ. ಉಪಸಮಿತಿ ರಚಿಸಿರುವುದಾಗಿ ಹೇಳುತ್ತಾರೆ. ಆದರೆ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೆ ಯಾವ ಉಪಸಮಿತಿ ಮಾಡಿದ್ದರು? ಯಾವ ಆಯೋಗ ಮಾಡಿದ್ದರು? ಯಾವ ವರದಿ ಪಡೆದಿದ್ದರು? ಹೇಗೆ ಇಡಬ್ಲ್ಯೂಎಸ್‌ ಜಾರಿಯಾಯಿತು?” ಎಂದು ಕೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂವಿಧಾನ ಜಾರಿಗೊಳಿಸುವ ಜಾಗದಲ್ಲಿ ನಾವಿಲ್ಲ. ನಮ್ಮ ಪ್ರತಿನಿಧಿಗಳಾಗಿ ಹೋದವರು ಬಾಯಿ ಕಟ್ಟಿದ ನಾಯಿಗಳಾಗಿ ಕೂತಿದ್ದಾರೆ. ನಾವಿಲ್ಲಿ ಟೆಂಟ್ ಹಾಕಿಕೊಂಡು ಧಿಕ್ಕಾರ ಕೂಗುತ್ತಿದ್ದೇವೆ. ನಮ್ಮನ್ನು ಒಡೆದು ಆಳುತ್ತಿದ್ದಾರೆ. ಜಲ್ಲಿ, ಸಿಮೆಂಟ್, ಕಬ್ಬಿಣ, ನೀರು- ಎಲ್ಲವನ್ನು ಬೇರ್ಪಡಿಸಿ ಕಾಂಕ್ರೀಟ್ ಮಾಡಲು ಸಾಧ್ಯವೇ? ಜೇನು ನೊಣಗಳಂತೆ ಒಂದಾಗಿ” ಎಂದು ಸಂದೇಶ ನೀಡಿದರು.

“ಗ್ರಾಮ ಪಂಚಾಯಿತಿ ಮೆಂಬರ್‌ ಕೂಡ ಆಗಲು ಸಾಧ್ಯವಿಲ್ಲದಂತಹ ಬುಡುಬುಡಕೆ, ದೊಂಬಿದಾಸ, ಶಿಳ್ಳೆಕ್ಯಾತರಿದ್ದಾರೆ. ಅವರಿಗೆಲ್ಲರಿಗೂ ಪ್ರಾತಿನಿಧ್ಯ ಕೊಡಬೇಕು. ಆದರೆ ಮೆಜಾರಿಟಿ ಇಲ್ಲದ ಬ್ರಾಹ್ಮಣರು 127 ಮಂದಿ ಎಂಪಿಗಳನ್ನು ಹೊಂದಿದ್ದಾರೆ. ಅವರನ್ನು ಗೆದ್ದು ಕಳಿಸಿದ್ದು ಯಾರು? ನಿಮ್ಮ ಹೆಗಲ ಮೇಲೆ ಕಾಲುಗಳನ್ನು ಇಟ್ಟುಕೊಂಡು ನಿಂತಿದ್ದಾರೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗವೆಲ್ಲ ಅವರ ಹಿಡಿತದಲ್ಲಿವೆ. ಹೀಗಾಗಿ ಹತ್ತು ಪರ್ಸೆಂಟ್ ಮೀಸಲಾತಿ ಒಂದೇ ದಿನದಲ್ಲಿ ಮಾಡಿಕೊಳ್ಳುತ್ತಾರೆ. ಯಾಕೆಂದರೆ ಅವರ ಬಳಿ ಅಧಿಕಾರವಿದೆ. ಅಂಬೇಡ್ಕರ್‌ರವರು ಹೇಳಿದಂತೆ ಅಧಿಕಾರ ಹೀನತೆಯೇ ಅಸ್ಪೃಶ್ಯತೆ” ಎಂದು ಅಭಿಪ್ರಾಯಪಟ್ಟರು.

“ಒಂದೇ ದಿನದಲ್ಲಿ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೊಳಿಸಿದಂತೆ ಒಳಮೀಸಲಾತಿ ಜಾರಿಗೊಳಿಸಿ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತನ್ನಿರಿ. ಆಜಾದಿ ಕಾ ಅಮೃತ ಮಹೋತ್ಸವ ಎನ್ನುತ್ತಿದ್ದಾರೆ. ಯಾರಿಗೆ ಅಮೃತ? ಆರು ನಿಮಿಷಕ್ಕೊಮ್ಮೆ ದಲಿತ ಹೆಣ್ಣುಮಕ್ಕಳ ರೇಪ್ ಆಗುತ್ತಿದೆ. ಎಂಟು ನಿಮಿಷಕ್ಕೊಂದು ಗುಡಿಸಲಿಗೆ ಬೆಂಕಿ ಬೀಳುತ್ತಿದೆ, ಅರವತ್ತು ಸಾವಿರ ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್ ಬಂದ್‌ ಆಗಿದೆ, ಏಳು ಸಾವಿರ ವಿದ್ಯಾರ್ಥಿಗಳ ಪಿಎಚ್‌.ಡಿ ಬಂದ್ ಆಗಿದೆ, ಬೈಕ್‌ ರೈಡ್ ಮಾಡಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಕೋಲಾರದಲ್ಲಿ ಥಳಿಸಿದ್ದಾರೆ, ಇದಕ್ಕೆಲ್ಲ ಯಾರು ಉತ್ತರ ಕೊಡಬೇಕು” ಎಂದು ಮಾರ್ಮಿಕವಾಗಿ ನುಡಿದರು.

“ಜಾತಿ ಜಾತಿಗಳ ನಡುವೆ ಒಡಕುಗಳು ಬೇಡ. ಎಸ್.ಸಿ., ಎಸ್‌.ಟಿ. ಸ್ವಾಮೀಜಿಗಳು ಏಕೆ ಒಂದಾಗಬೇಕು ಎಂಬ ವಿಷಯವನ್ನಿಟ್ಟುಕೊಂಡು 31 ಜಿಲ್ಲೆಗಳಲ್ಲೂ ಹೋರಾಟ ಮಾಡುತ್ತಿದ್ದೇವೆ. ಪರಿಶಿಷ್ಟ ಜನಾಂಗದ ಸ್ವಾಮೀಜಿಗಳನ್ನೇ ಒಡೆಯಬೇಕೆಂದು ಹೊರಟಿದ್ದಾರೆ. ಒಂದಿಷ್ಟು ಸಮುದಾಯದ ಸ್ವಾಮೀಜಿಗಳನ್ನು ಎತ್ತಿಕಟ್ಟಿ ನಮ್ಮ ವಿರುದ್ಧ ಬಿಟ್ಟಿದ್ದಾರೆ. ನಾವು ಯಾರೂ ವಿಚಲಿತರಾಗಿಲ್ಲ. ನಾವು ಒಗ್ಗಟ್ಟಿನಿಂದ ಇದ್ದೇವೆ. ನಾಲ್ಕು ವಿಭಾಗೀಯ ಸಮಾವೇಶ ಮಾಡುತ್ತೇವೆ, ದಲಿತ ಮುಖಂಡರೆಲ್ಲ ಅದರಲ್ಲಿ ಪಾಲ್ಗೊಳ್ಳಿದ್ದಾರೆ” ಎಂದು ಗುಡುಗಿದರು.

ನಮ್ಮ ಪಾಲು ಕೇಳಲು ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ: ಮಾವಳ್ಳಿ ಶಂಕರ್‌

ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಯಾರ ಪಾಲನ್ನು ನಾವು ಕಿತ್ತುಕೊಳ್ಳುತ್ತಿಲ್ಲ, ಯಾರ ಆಸ್ತಿಗೂ, ತಟ್ಟೆಗೂ ಕೈಹಾಕಿಲ್ಲ. ಹಿಂದುಳಿದ ಜಾತಿಗಳಿಗೆ ಮೀಸಲಾತಿ ವರ್ಗೀಕರಣ ಮಾಡಲು ಸಾಧ್ಯವಾದರೆ ಪರಿಶಿಷ್ಟ ಜಾತಿಯಲ್ಲಿ ಏಕೆ ಸಾಧ್ಯವಾಗುತ್ತಿಲ್ಲ? ನಮ್ಮ ಪಾಲನ್ನು ನಾವು ಕೇಳೋದಕ್ಕೆ ಯಾವುದೇ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎ.ಜೆ.ಸದಾಶಿವ ಆಯೋಗದ ಜಾರಿಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡು ಮಾವಳ್ಳಿ ಶಂಕರ್‌ ಮಾತನಾಡಿದರು.

“ಒಳಮೀಸಲಾತಿ ಕುರಿತು ಚರ್ಚೆ ಮಾಡುತ್ತಿರುವಾಗ ಖಾಸಗೀಕರಣ ಹೆಚ್ಚಾಗಿರುವುದನ್ನು ಪ್ರಸ್ತಾಪಿಸುತ್ತಾರೆ. ಅದರ ವಿರುದ್ಧ ಹೋರಾಟ ಮಾಡುವುದು ಹೇಗೆಂದು ಬಾಬಾ ಸಾಹೇಬರ ಅನುಯಾಯಿಗಳಿಗೆ ಗೊತ್ತಿದೆ. ಆದರೆ ಖಾಸಗೀಕರಣವನ್ನು ತೋರಿಸಿ, ಈ ಹೋರಾಟವನ್ನು ತಡೆಯಬಾರದು” ಎಂದು ಎಚ್ಚರಿಕೆ ನೀಡಿದರು.

“ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಲ್ಲಿ ಹೇಡಿಗಳು ಗೆದ್ದು ಬರುತ್ತಿದ್ದಾರೆ. ಅವರೆಲ್ಲ ಈ ಸಮುದಾಯವನ್ನು ಪ್ರತಿನಿಧಿಸಿ ಮೇಲ್ಜಾತಿಯ ಗುಲಾಮಗಿರಿ ಮಾಡದಿದ್ದರೆ ಒಳಮೀಸಲಾತಿ ದೊಡ್ಡ ಪ್ರಶ್ನೆಯೇ ಆಗುತ್ತಿರಲಿಲ್ಲ. ರಾಜಕೀಯ ಅಧಿಕಾರಕ್ಕಾಗಿ ಬೇರೆಯವರ ಜೀತ ಮಾಡಿದರೆ ಸಮುದಾಯ ಹಿಂದುಳಿಯುತ್ತದೆ. ಬಾಬಾ ಸಾಹೇಬರ ಆಶಯದಂತೆ ಪ್ರತ್ಯೇಕ ಮತದಾನದ ಹಕ್ಕು ನಮಗೆ ಸಿಕ್ಕಿದ್ದರೆ ನಮ್ಮ ಕಾಲ ಬುಡಕ್ಕೆ ಮೇಲ್ಜಾತಿಗಳು ಬರುತ್ತಿದ್ದವು. ಪರಿಶಿಷ್ಟ ರಾಜಕಾರಣಗಳು ಒಳಮೀಸಲಾತಿ ಪರ ಮಾತನಾಡಲು ಸಾಧ್ಯವಾಗುತ್ತಿಲ್ಲ. ದಲಿತ ರಾಜಕಾರಣಿಗಳು ಮೇಲ್ಜಾತಿಗಳ ಮರ್ಜಿಗೆ ಬಿದ್ದಿದ್ದಾರೆ” ಎಂದು ವಿಷಾದಿಸಿದರು.

ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ದಲಿತ ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿ, “ಈ ಮೂವತ್ತು ವರ್ಷದ ಹೋರಾಟದಲ್ಲಿ ಹಲವಾರು ನಾಯಕರು ಸತ್ತಿದ್ದಾರೆ, ಜೈಲಿಗೆ ಹೋಗಿದ್ದಾರೆ, ನೌಕರಿ ಬಿಟ್ಟಿದ್ದಾರೆ, ಲಾಠಿ ಏಟು ತಿಂದಿದ್ದಾರೆ- ಯಾವುದೇ ಕಾರಣಕ್ಕೂ ಒಂದು ದಿನಕ್ಕೆ ಮಾತ್ರ ಹೋರಾಟ ಸೀಮಿತಗೊಳಿಸಬಾರದು ಎಂದು ಭೀಮ ಸೈನಿಕರು ಎಚ್ಚರಿಕೆ ಕೊಟ್ಟು ನಮ್ಮನ್ನು ಕಳಿಸಿದ್ದಾರೆ. ಹೀಗಾಗಿ ಹೋರಾಟ ಮುಂದುವರಿಸಿದೆ. ನವೆಂಬರ್‌ ತಿಂಗಳಿನಿಂದ ನಿರಂತರ ಹೋರಾಟ ನಡೆಯುತ್ತಿದೆ. ಡಿಸೆಂಬರ್‌ 11ರಿಂದ ಬೆಂಗಳೂರಿನಲ್ಲಿ ಹೋರಾಟ ಜರುಗಿದೆ” ಎಂದರು.

“ಒಂದು ಸಂಘಟನೆ, ಒಂದು ಸಮುದಾಯ ಈ ಹೋರಾಟದ ಮುಂದಾಳತ್ವ ವಹಿಸಿತ್ತು. ಆದರೆ ಎಲ್ಲ ಜಾತಿಗಳು ಈ ಚಳವಳಿಯ ಭಾಗವಾಗಬೇಕೆಂದು ನಿರಂತರ ಚರ್ಚೆಗಳು ನಡೆಸಿದ್ದೇವೆ. ಎಲ್ಲ ಸಮುದಾಯಗಳು ಒಳಗೊಂಡಿದ್ದರಿಂದ ನಮ್ಮ ಟೈಟಲ್‌ ಬದಲಾಗಿದೆ, ನಡೆ, ನುಡಿ, ವರ್ತನೆ ಬದಲಾಗಿದೆ. ಎಲ್ಲ ರೀತಿಯಲ್ಲೂ ನಮ್ಮ ಹೋರಾಟ ವಿಸ್ತರಣೆಯಾಗಿದೆ. ಮೂರು ಪಕ್ಷಗಳು ಮಾತನಾಡುವಂತಾಗಿದೆ. ಇದು ರಾಜಕೀಯೇತರ ಚಳವಳಿ” ಎಂದು ಸ್ಪಷ್ಟಪಡಿಸಿದರು.

ದಲಿತ ಹೋರಾಟಗಾರರಾದ ಬಿ.ಗೋಪಾಲ್ ಮಾತನಾಡಿ, “ಯಾರದೇ ಮೀಸಲಾತಿಯನ್ನು ಕಿತ್ತುಹಾಕುವ ಪ್ರಸ್ತಾವನ್ನು ಯಾರೂ ಮಾಡಿಲ್ಲ. ಮಾಡಲೂಬಾರದು” ಎಂದು ಆಶಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಹೋರಾಟ 30ನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟದಲ್ಲಿ ದಲಿತ ಮುಖಂಡರಾದ ಎನ್.ವೆಂಕಟೇಶ್, ಹೆಣ್ಣೂರು ಶ್ರೀನಿವಾಸ್, ಬಸವರಾಜ ಕೌತಾಳ್, ಮೋಹನ್ ರಾಜ್, ಹೆಣ್ಣೂರು ಲಕ್ಷ್ಮೀನಾರಾಯಣ್, ಡಿ.ಶಿವಶಂಕರ್, ಕನಕಪುರ ಬಿ.ಶಿವಣ್ಣ, ಶಿವರಾಜ ಯಕ್ಕರಕಿ, ಗುರುಮೂರ್ತಿ, ಶಿವಸುಂದರ್, ಗೌರಿ ಜನಶಕ್ತಿ, ನಾಗಮಣಿ, ಸವಿತಾ, ಹ.ರಾ.ಮಹೇಶ್, ಸೂಲಿಕುಂಟೆ ರಮೇಶ್, ಗಣೇಶ್ ಮೇತ್ರಿ, ಕಮಲಾನಗರ ಚಿಕ್ಕಣ್ಣ, ರಾಜಗೋಪಾಲ್, ಹನುಮೇಗೌಡ, ಕರಿಯಪ್ಪ ಗುಡಿಮನಿ, ವೇಣುಗೋಪಾಲ್ ಮೌರ್ಯ, ಹನುಮೇಶ್ ಗುಂಡೂರು, ಡಿಬಿಎಂ ವೆಂಕಟೇಶ್, ಕೋದಂಡರಾಮ್, ಹೆಗ್ಗನಹಳ್ಳಿ ಮೂರ್ತಿ, ಕನಕೇನಹಳ್ಳಿ ಕೃಷ್ಣ, ಡಾ.ರವಿಕುಮಾರ್ ಬಾಗಿ, ಹಾಡುಗಾರರಾದ ಕೆ.ಎನ್.ನಾಗೇಶ್, ಸಬ್ಬನಹಳ್ಳಿ ರಾಜು, ಪ್ರಶಾಂತ್ ದಾನಪ್ಪ, ಸುಧಾಕರ್, ಸಿದ್ದಯ್ಯ, ಎಲ್.ವಿ.ಸುರೇಶ್, ಮೌನೇಶ್ ದೇವತೆಗಲ್, ಮೌಲಪ್ಪ ಐಹೊಳೆ, ಹನುಮೇಶ್ ಬೇರಿ, ಎಂ.ಡೇವಿಡ್ ಸಿರವಾರ, ಎಸ್.ಎಚ್.ನಾಗೇಶ್ ಮೊದಲಾದವರು ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಲಂಬಾಣಿ, ಭೋವಿ ಸಮುದಾಯ ಬೃಹತ್‌ ಪ್ರತಿಭಟನೆ

ಭೋವಿ, ಲಂಬಾಣಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟದ ನೇತೃತ್ವ’ದಲ್ಲಿ ಅದೇ ಫ್ರೀಡಂ ಪಾರ್ಕ್‌‌ನಲ್ಲಿ ಬೃಹತ್ ಹೋರಾಟ ಜರುಗಿತು.

ಎ.ಜೆ.ಸದಾಶಿವ ಆಯೋಗದ ವರದಿಯನ್ನು ತರಾತುರಿಯಲ್ಲಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬಾರದು ಎಂಬುದು ಒಕ್ಕೂಟದ ಆಗ್ರಹವಾಗಿತ್ತು. ಎರಡು ಭಿನ್ನ ನಿಲುವಿನ ಹೋರಾಟಗಳು ಒಂದೇ ಸ್ಥಳದಲ್ಲಿ ಜರುಗಿದ್ದರಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಒಂದು ಸಾವಿರ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ್ದರು. ಎ.ಜೆ.ಸದಾಶಿವ ಆಯೋಗದ ಪರ ನಡೆಯುತ್ತಿರುವ 30ನೇ ದಿನದ ಹೋರಾಟದ ಸ್ಥಳಕ್ಕೆ ಹೋಗುವವರನ್ನು ಪರಿಶೀಲಿಸಿ ಬಿಡಲಾಗುತ್ತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಾಲಾದರೂ ಸನಾತನಿ ಬ್ರಾಹ್ಮಣ್ಯದ ಎದುರು ಗಟ್ಟಿಯಾಗಿ ಮಾತಾಡುತ್ತದ್ದಾರಲ್ಲಾ?,🙏

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...