Homeಕರ್ನಾಟಕಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

ಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

- Advertisement -
- Advertisement -

“ಮೂರು ಪರ್ಸೆಂಟ್ ಇರುವ ಮೇಲ್ಜಾತಿಯವರಿಗೆ ಹತ್ತು ಪರ್ಸೆಂಟ್ (ಇಡಬ್ಲ್ಯೂಎಸ್) ಮೀಸಲಾತಿ ನೀಡಲು ಯಾವ ಉಪಸಮಿತಿ ಮಾಡಿದ್ರಿ, ಯಾವ ಆಯೋಗ ವರದಿ ನೀಡಿತ್ತು?” ಎಂದು ಉರಿಲಿಂಗಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಪ್ರಶ್ನಿಸಿದರು.

ಪುನಾರಂಭಗೊಂಡಿರುವ ಒಳಮೀಸಲಾತಿ ಹೋರಾಟ 30ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಆಗಮಿಸಿ, ಹೋರಾಟವನ್ನು ಉದ್ದೇಶಿಸಿ ಅವರು ಮಾತನಾಡಿದರು.

“ನಮ್ಮ ಸಮುದಾಯಗಳನ್ನು ಒಡೆದು ಆಳುವ ಷಡ್ಯಂತ್ರ ನಡೆಯುತ್ತಿರುವುದು ನಮಗೆ ತಿಳಿದಿದೆ. ಮತಕ್ಕಾಗಿ ನಮ್ಮನ್ನು ಛಿದ್ರ ಛಿದ್ರ ಮಾಡಿದ್ದಾರೆ. ನಾವು ಯಾರ ತಟ್ಟೆಗೂ ಕೈ ಹಾಕುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು ಎಂಬುದು ಸಂವಿಧಾನ ಹಾಗೂ ಬಾಬಾ ಸಾಹೇಬ್‌ ಅಂಬೇಡ್ಕರರ ಆಶಯ. ಉಪಸಮಿತಿ ರಚಿಸಿರುವುದಾಗಿ ಹೇಳುತ್ತಾರೆ. ಆದರೆ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೆ ಯಾವ ಉಪಸಮಿತಿ ಮಾಡಿದ್ದರು? ಯಾವ ಆಯೋಗ ಮಾಡಿದ್ದರು? ಯಾವ ವರದಿ ಪಡೆದಿದ್ದರು? ಹೇಗೆ ಇಡಬ್ಲ್ಯೂಎಸ್‌ ಜಾರಿಯಾಯಿತು?” ಎಂದು ಕೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂವಿಧಾನ ಜಾರಿಗೊಳಿಸುವ ಜಾಗದಲ್ಲಿ ನಾವಿಲ್ಲ. ನಮ್ಮ ಪ್ರತಿನಿಧಿಗಳಾಗಿ ಹೋದವರು ಬಾಯಿ ಕಟ್ಟಿದ ನಾಯಿಗಳಾಗಿ ಕೂತಿದ್ದಾರೆ. ನಾವಿಲ್ಲಿ ಟೆಂಟ್ ಹಾಕಿಕೊಂಡು ಧಿಕ್ಕಾರ ಕೂಗುತ್ತಿದ್ದೇವೆ. ನಮ್ಮನ್ನು ಒಡೆದು ಆಳುತ್ತಿದ್ದಾರೆ. ಜಲ್ಲಿ, ಸಿಮೆಂಟ್, ಕಬ್ಬಿಣ, ನೀರು- ಎಲ್ಲವನ್ನು ಬೇರ್ಪಡಿಸಿ ಕಾಂಕ್ರೀಟ್ ಮಾಡಲು ಸಾಧ್ಯವೇ? ಜೇನು ನೊಣಗಳಂತೆ ಒಂದಾಗಿ” ಎಂದು ಸಂದೇಶ ನೀಡಿದರು.

“ಗ್ರಾಮ ಪಂಚಾಯಿತಿ ಮೆಂಬರ್‌ ಕೂಡ ಆಗಲು ಸಾಧ್ಯವಿಲ್ಲದಂತಹ ಬುಡುಬುಡಕೆ, ದೊಂಬಿದಾಸ, ಶಿಳ್ಳೆಕ್ಯಾತರಿದ್ದಾರೆ. ಅವರಿಗೆಲ್ಲರಿಗೂ ಪ್ರಾತಿನಿಧ್ಯ ಕೊಡಬೇಕು. ಆದರೆ ಮೆಜಾರಿಟಿ ಇಲ್ಲದ ಬ್ರಾಹ್ಮಣರು 127 ಮಂದಿ ಎಂಪಿಗಳನ್ನು ಹೊಂದಿದ್ದಾರೆ. ಅವರನ್ನು ಗೆದ್ದು ಕಳಿಸಿದ್ದು ಯಾರು? ನಿಮ್ಮ ಹೆಗಲ ಮೇಲೆ ಕಾಲುಗಳನ್ನು ಇಟ್ಟುಕೊಂಡು ನಿಂತಿದ್ದಾರೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗವೆಲ್ಲ ಅವರ ಹಿಡಿತದಲ್ಲಿವೆ. ಹೀಗಾಗಿ ಹತ್ತು ಪರ್ಸೆಂಟ್ ಮೀಸಲಾತಿ ಒಂದೇ ದಿನದಲ್ಲಿ ಮಾಡಿಕೊಳ್ಳುತ್ತಾರೆ. ಯಾಕೆಂದರೆ ಅವರ ಬಳಿ ಅಧಿಕಾರವಿದೆ. ಅಂಬೇಡ್ಕರ್‌ರವರು ಹೇಳಿದಂತೆ ಅಧಿಕಾರ ಹೀನತೆಯೇ ಅಸ್ಪೃಶ್ಯತೆ” ಎಂದು ಅಭಿಪ್ರಾಯಪಟ್ಟರು.

“ಒಂದೇ ದಿನದಲ್ಲಿ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೊಳಿಸಿದಂತೆ ಒಳಮೀಸಲಾತಿ ಜಾರಿಗೊಳಿಸಿ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತನ್ನಿರಿ. ಆಜಾದಿ ಕಾ ಅಮೃತ ಮಹೋತ್ಸವ ಎನ್ನುತ್ತಿದ್ದಾರೆ. ಯಾರಿಗೆ ಅಮೃತ? ಆರು ನಿಮಿಷಕ್ಕೊಮ್ಮೆ ದಲಿತ ಹೆಣ್ಣುಮಕ್ಕಳ ರೇಪ್ ಆಗುತ್ತಿದೆ. ಎಂಟು ನಿಮಿಷಕ್ಕೊಂದು ಗುಡಿಸಲಿಗೆ ಬೆಂಕಿ ಬೀಳುತ್ತಿದೆ, ಅರವತ್ತು ಸಾವಿರ ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್ ಬಂದ್‌ ಆಗಿದೆ, ಏಳು ಸಾವಿರ ವಿದ್ಯಾರ್ಥಿಗಳ ಪಿಎಚ್‌.ಡಿ ಬಂದ್ ಆಗಿದೆ, ಬೈಕ್‌ ರೈಡ್ ಮಾಡಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಕೋಲಾರದಲ್ಲಿ ಥಳಿಸಿದ್ದಾರೆ, ಇದಕ್ಕೆಲ್ಲ ಯಾರು ಉತ್ತರ ಕೊಡಬೇಕು” ಎಂದು ಮಾರ್ಮಿಕವಾಗಿ ನುಡಿದರು.

“ಜಾತಿ ಜಾತಿಗಳ ನಡುವೆ ಒಡಕುಗಳು ಬೇಡ. ಎಸ್.ಸಿ., ಎಸ್‌.ಟಿ. ಸ್ವಾಮೀಜಿಗಳು ಏಕೆ ಒಂದಾಗಬೇಕು ಎಂಬ ವಿಷಯವನ್ನಿಟ್ಟುಕೊಂಡು 31 ಜಿಲ್ಲೆಗಳಲ್ಲೂ ಹೋರಾಟ ಮಾಡುತ್ತಿದ್ದೇವೆ. ಪರಿಶಿಷ್ಟ ಜನಾಂಗದ ಸ್ವಾಮೀಜಿಗಳನ್ನೇ ಒಡೆಯಬೇಕೆಂದು ಹೊರಟಿದ್ದಾರೆ. ಒಂದಿಷ್ಟು ಸಮುದಾಯದ ಸ್ವಾಮೀಜಿಗಳನ್ನು ಎತ್ತಿಕಟ್ಟಿ ನಮ್ಮ ವಿರುದ್ಧ ಬಿಟ್ಟಿದ್ದಾರೆ. ನಾವು ಯಾರೂ ವಿಚಲಿತರಾಗಿಲ್ಲ. ನಾವು ಒಗ್ಗಟ್ಟಿನಿಂದ ಇದ್ದೇವೆ. ನಾಲ್ಕು ವಿಭಾಗೀಯ ಸಮಾವೇಶ ಮಾಡುತ್ತೇವೆ, ದಲಿತ ಮುಖಂಡರೆಲ್ಲ ಅದರಲ್ಲಿ ಪಾಲ್ಗೊಳ್ಳಿದ್ದಾರೆ” ಎಂದು ಗುಡುಗಿದರು.

ನಮ್ಮ ಪಾಲು ಕೇಳಲು ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ: ಮಾವಳ್ಳಿ ಶಂಕರ್‌

ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಯಾರ ಪಾಲನ್ನು ನಾವು ಕಿತ್ತುಕೊಳ್ಳುತ್ತಿಲ್ಲ, ಯಾರ ಆಸ್ತಿಗೂ, ತಟ್ಟೆಗೂ ಕೈಹಾಕಿಲ್ಲ. ಹಿಂದುಳಿದ ಜಾತಿಗಳಿಗೆ ಮೀಸಲಾತಿ ವರ್ಗೀಕರಣ ಮಾಡಲು ಸಾಧ್ಯವಾದರೆ ಪರಿಶಿಷ್ಟ ಜಾತಿಯಲ್ಲಿ ಏಕೆ ಸಾಧ್ಯವಾಗುತ್ತಿಲ್ಲ? ನಮ್ಮ ಪಾಲನ್ನು ನಾವು ಕೇಳೋದಕ್ಕೆ ಯಾವುದೇ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎ.ಜೆ.ಸದಾಶಿವ ಆಯೋಗದ ಜಾರಿಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡು ಮಾವಳ್ಳಿ ಶಂಕರ್‌ ಮಾತನಾಡಿದರು.

“ಒಳಮೀಸಲಾತಿ ಕುರಿತು ಚರ್ಚೆ ಮಾಡುತ್ತಿರುವಾಗ ಖಾಸಗೀಕರಣ ಹೆಚ್ಚಾಗಿರುವುದನ್ನು ಪ್ರಸ್ತಾಪಿಸುತ್ತಾರೆ. ಅದರ ವಿರುದ್ಧ ಹೋರಾಟ ಮಾಡುವುದು ಹೇಗೆಂದು ಬಾಬಾ ಸಾಹೇಬರ ಅನುಯಾಯಿಗಳಿಗೆ ಗೊತ್ತಿದೆ. ಆದರೆ ಖಾಸಗೀಕರಣವನ್ನು ತೋರಿಸಿ, ಈ ಹೋರಾಟವನ್ನು ತಡೆಯಬಾರದು” ಎಂದು ಎಚ್ಚರಿಕೆ ನೀಡಿದರು.

“ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಲ್ಲಿ ಹೇಡಿಗಳು ಗೆದ್ದು ಬರುತ್ತಿದ್ದಾರೆ. ಅವರೆಲ್ಲ ಈ ಸಮುದಾಯವನ್ನು ಪ್ರತಿನಿಧಿಸಿ ಮೇಲ್ಜಾತಿಯ ಗುಲಾಮಗಿರಿ ಮಾಡದಿದ್ದರೆ ಒಳಮೀಸಲಾತಿ ದೊಡ್ಡ ಪ್ರಶ್ನೆಯೇ ಆಗುತ್ತಿರಲಿಲ್ಲ. ರಾಜಕೀಯ ಅಧಿಕಾರಕ್ಕಾಗಿ ಬೇರೆಯವರ ಜೀತ ಮಾಡಿದರೆ ಸಮುದಾಯ ಹಿಂದುಳಿಯುತ್ತದೆ. ಬಾಬಾ ಸಾಹೇಬರ ಆಶಯದಂತೆ ಪ್ರತ್ಯೇಕ ಮತದಾನದ ಹಕ್ಕು ನಮಗೆ ಸಿಕ್ಕಿದ್ದರೆ ನಮ್ಮ ಕಾಲ ಬುಡಕ್ಕೆ ಮೇಲ್ಜಾತಿಗಳು ಬರುತ್ತಿದ್ದವು. ಪರಿಶಿಷ್ಟ ರಾಜಕಾರಣಗಳು ಒಳಮೀಸಲಾತಿ ಪರ ಮಾತನಾಡಲು ಸಾಧ್ಯವಾಗುತ್ತಿಲ್ಲ. ದಲಿತ ರಾಜಕಾರಣಿಗಳು ಮೇಲ್ಜಾತಿಗಳ ಮರ್ಜಿಗೆ ಬಿದ್ದಿದ್ದಾರೆ” ಎಂದು ವಿಷಾದಿಸಿದರು.

ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ದಲಿತ ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿ, “ಈ ಮೂವತ್ತು ವರ್ಷದ ಹೋರಾಟದಲ್ಲಿ ಹಲವಾರು ನಾಯಕರು ಸತ್ತಿದ್ದಾರೆ, ಜೈಲಿಗೆ ಹೋಗಿದ್ದಾರೆ, ನೌಕರಿ ಬಿಟ್ಟಿದ್ದಾರೆ, ಲಾಠಿ ಏಟು ತಿಂದಿದ್ದಾರೆ- ಯಾವುದೇ ಕಾರಣಕ್ಕೂ ಒಂದು ದಿನಕ್ಕೆ ಮಾತ್ರ ಹೋರಾಟ ಸೀಮಿತಗೊಳಿಸಬಾರದು ಎಂದು ಭೀಮ ಸೈನಿಕರು ಎಚ್ಚರಿಕೆ ಕೊಟ್ಟು ನಮ್ಮನ್ನು ಕಳಿಸಿದ್ದಾರೆ. ಹೀಗಾಗಿ ಹೋರಾಟ ಮುಂದುವರಿಸಿದೆ. ನವೆಂಬರ್‌ ತಿಂಗಳಿನಿಂದ ನಿರಂತರ ಹೋರಾಟ ನಡೆಯುತ್ತಿದೆ. ಡಿಸೆಂಬರ್‌ 11ರಿಂದ ಬೆಂಗಳೂರಿನಲ್ಲಿ ಹೋರಾಟ ಜರುಗಿದೆ” ಎಂದರು.

“ಒಂದು ಸಂಘಟನೆ, ಒಂದು ಸಮುದಾಯ ಈ ಹೋರಾಟದ ಮುಂದಾಳತ್ವ ವಹಿಸಿತ್ತು. ಆದರೆ ಎಲ್ಲ ಜಾತಿಗಳು ಈ ಚಳವಳಿಯ ಭಾಗವಾಗಬೇಕೆಂದು ನಿರಂತರ ಚರ್ಚೆಗಳು ನಡೆಸಿದ್ದೇವೆ. ಎಲ್ಲ ಸಮುದಾಯಗಳು ಒಳಗೊಂಡಿದ್ದರಿಂದ ನಮ್ಮ ಟೈಟಲ್‌ ಬದಲಾಗಿದೆ, ನಡೆ, ನುಡಿ, ವರ್ತನೆ ಬದಲಾಗಿದೆ. ಎಲ್ಲ ರೀತಿಯಲ್ಲೂ ನಮ್ಮ ಹೋರಾಟ ವಿಸ್ತರಣೆಯಾಗಿದೆ. ಮೂರು ಪಕ್ಷಗಳು ಮಾತನಾಡುವಂತಾಗಿದೆ. ಇದು ರಾಜಕೀಯೇತರ ಚಳವಳಿ” ಎಂದು ಸ್ಪಷ್ಟಪಡಿಸಿದರು.

ದಲಿತ ಹೋರಾಟಗಾರರಾದ ಬಿ.ಗೋಪಾಲ್ ಮಾತನಾಡಿ, “ಯಾರದೇ ಮೀಸಲಾತಿಯನ್ನು ಕಿತ್ತುಹಾಕುವ ಪ್ರಸ್ತಾವನ್ನು ಯಾರೂ ಮಾಡಿಲ್ಲ. ಮಾಡಲೂಬಾರದು” ಎಂದು ಆಶಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಹೋರಾಟ 30ನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟದಲ್ಲಿ ದಲಿತ ಮುಖಂಡರಾದ ಎನ್.ವೆಂಕಟೇಶ್, ಹೆಣ್ಣೂರು ಶ್ರೀನಿವಾಸ್, ಬಸವರಾಜ ಕೌತಾಳ್, ಮೋಹನ್ ರಾಜ್, ಹೆಣ್ಣೂರು ಲಕ್ಷ್ಮೀನಾರಾಯಣ್, ಡಿ.ಶಿವಶಂಕರ್, ಕನಕಪುರ ಬಿ.ಶಿವಣ್ಣ, ಶಿವರಾಜ ಯಕ್ಕರಕಿ, ಗುರುಮೂರ್ತಿ, ಶಿವಸುಂದರ್, ಗೌರಿ ಜನಶಕ್ತಿ, ನಾಗಮಣಿ, ಸವಿತಾ, ಹ.ರಾ.ಮಹೇಶ್, ಸೂಲಿಕುಂಟೆ ರಮೇಶ್, ಗಣೇಶ್ ಮೇತ್ರಿ, ಕಮಲಾನಗರ ಚಿಕ್ಕಣ್ಣ, ರಾಜಗೋಪಾಲ್, ಹನುಮೇಗೌಡ, ಕರಿಯಪ್ಪ ಗುಡಿಮನಿ, ವೇಣುಗೋಪಾಲ್ ಮೌರ್ಯ, ಹನುಮೇಶ್ ಗುಂಡೂರು, ಡಿಬಿಎಂ ವೆಂಕಟೇಶ್, ಕೋದಂಡರಾಮ್, ಹೆಗ್ಗನಹಳ್ಳಿ ಮೂರ್ತಿ, ಕನಕೇನಹಳ್ಳಿ ಕೃಷ್ಣ, ಡಾ.ರವಿಕುಮಾರ್ ಬಾಗಿ, ಹಾಡುಗಾರರಾದ ಕೆ.ಎನ್.ನಾಗೇಶ್, ಸಬ್ಬನಹಳ್ಳಿ ರಾಜು, ಪ್ರಶಾಂತ್ ದಾನಪ್ಪ, ಸುಧಾಕರ್, ಸಿದ್ದಯ್ಯ, ಎಲ್.ವಿ.ಸುರೇಶ್, ಮೌನೇಶ್ ದೇವತೆಗಲ್, ಮೌಲಪ್ಪ ಐಹೊಳೆ, ಹನುಮೇಶ್ ಬೇರಿ, ಎಂ.ಡೇವಿಡ್ ಸಿರವಾರ, ಎಸ್.ಎಚ್.ನಾಗೇಶ್ ಮೊದಲಾದವರು ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಲಂಬಾಣಿ, ಭೋವಿ ಸಮುದಾಯ ಬೃಹತ್‌ ಪ್ರತಿಭಟನೆ

ಭೋವಿ, ಲಂಬಾಣಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟದ ನೇತೃತ್ವ’ದಲ್ಲಿ ಅದೇ ಫ್ರೀಡಂ ಪಾರ್ಕ್‌‌ನಲ್ಲಿ ಬೃಹತ್ ಹೋರಾಟ ಜರುಗಿತು.

ಎ.ಜೆ.ಸದಾಶಿವ ಆಯೋಗದ ವರದಿಯನ್ನು ತರಾತುರಿಯಲ್ಲಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬಾರದು ಎಂಬುದು ಒಕ್ಕೂಟದ ಆಗ್ರಹವಾಗಿತ್ತು. ಎರಡು ಭಿನ್ನ ನಿಲುವಿನ ಹೋರಾಟಗಳು ಒಂದೇ ಸ್ಥಳದಲ್ಲಿ ಜರುಗಿದ್ದರಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಒಂದು ಸಾವಿರ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ್ದರು. ಎ.ಜೆ.ಸದಾಶಿವ ಆಯೋಗದ ಪರ ನಡೆಯುತ್ತಿರುವ 30ನೇ ದಿನದ ಹೋರಾಟದ ಸ್ಥಳಕ್ಕೆ ಹೋಗುವವರನ್ನು ಪರಿಶೀಲಿಸಿ ಬಿಡಲಾಗುತ್ತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಾಲಾದರೂ ಸನಾತನಿ ಬ್ರಾಹ್ಮಣ್ಯದ ಎದುರು ಗಟ್ಟಿಯಾಗಿ ಮಾತಾಡುತ್ತದ್ದಾರಲ್ಲಾ?,🙏

LEAVE A REPLY

Please enter your comment!
Please enter your name here

- Advertisment -

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...