Homeಕರ್ನಾಟಕಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

ಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

- Advertisement -
- Advertisement -

“ಮೂರು ಪರ್ಸೆಂಟ್ ಇರುವ ಮೇಲ್ಜಾತಿಯವರಿಗೆ ಹತ್ತು ಪರ್ಸೆಂಟ್ (ಇಡಬ್ಲ್ಯೂಎಸ್) ಮೀಸಲಾತಿ ನೀಡಲು ಯಾವ ಉಪಸಮಿತಿ ಮಾಡಿದ್ರಿ, ಯಾವ ಆಯೋಗ ವರದಿ ನೀಡಿತ್ತು?” ಎಂದು ಉರಿಲಿಂಗಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಪ್ರಶ್ನಿಸಿದರು.

ಪುನಾರಂಭಗೊಂಡಿರುವ ಒಳಮೀಸಲಾತಿ ಹೋರಾಟ 30ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಆಗಮಿಸಿ, ಹೋರಾಟವನ್ನು ಉದ್ದೇಶಿಸಿ ಅವರು ಮಾತನಾಡಿದರು.

“ನಮ್ಮ ಸಮುದಾಯಗಳನ್ನು ಒಡೆದು ಆಳುವ ಷಡ್ಯಂತ್ರ ನಡೆಯುತ್ತಿರುವುದು ನಮಗೆ ತಿಳಿದಿದೆ. ಮತಕ್ಕಾಗಿ ನಮ್ಮನ್ನು ಛಿದ್ರ ಛಿದ್ರ ಮಾಡಿದ್ದಾರೆ. ನಾವು ಯಾರ ತಟ್ಟೆಗೂ ಕೈ ಹಾಕುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು ಎಂಬುದು ಸಂವಿಧಾನ ಹಾಗೂ ಬಾಬಾ ಸಾಹೇಬ್‌ ಅಂಬೇಡ್ಕರರ ಆಶಯ. ಉಪಸಮಿತಿ ರಚಿಸಿರುವುದಾಗಿ ಹೇಳುತ್ತಾರೆ. ಆದರೆ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೆ ಯಾವ ಉಪಸಮಿತಿ ಮಾಡಿದ್ದರು? ಯಾವ ಆಯೋಗ ಮಾಡಿದ್ದರು? ಯಾವ ವರದಿ ಪಡೆದಿದ್ದರು? ಹೇಗೆ ಇಡಬ್ಲ್ಯೂಎಸ್‌ ಜಾರಿಯಾಯಿತು?” ಎಂದು ಕೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂವಿಧಾನ ಜಾರಿಗೊಳಿಸುವ ಜಾಗದಲ್ಲಿ ನಾವಿಲ್ಲ. ನಮ್ಮ ಪ್ರತಿನಿಧಿಗಳಾಗಿ ಹೋದವರು ಬಾಯಿ ಕಟ್ಟಿದ ನಾಯಿಗಳಾಗಿ ಕೂತಿದ್ದಾರೆ. ನಾವಿಲ್ಲಿ ಟೆಂಟ್ ಹಾಕಿಕೊಂಡು ಧಿಕ್ಕಾರ ಕೂಗುತ್ತಿದ್ದೇವೆ. ನಮ್ಮನ್ನು ಒಡೆದು ಆಳುತ್ತಿದ್ದಾರೆ. ಜಲ್ಲಿ, ಸಿಮೆಂಟ್, ಕಬ್ಬಿಣ, ನೀರು- ಎಲ್ಲವನ್ನು ಬೇರ್ಪಡಿಸಿ ಕಾಂಕ್ರೀಟ್ ಮಾಡಲು ಸಾಧ್ಯವೇ? ಜೇನು ನೊಣಗಳಂತೆ ಒಂದಾಗಿ” ಎಂದು ಸಂದೇಶ ನೀಡಿದರು.

“ಗ್ರಾಮ ಪಂಚಾಯಿತಿ ಮೆಂಬರ್‌ ಕೂಡ ಆಗಲು ಸಾಧ್ಯವಿಲ್ಲದಂತಹ ಬುಡುಬುಡಕೆ, ದೊಂಬಿದಾಸ, ಶಿಳ್ಳೆಕ್ಯಾತರಿದ್ದಾರೆ. ಅವರಿಗೆಲ್ಲರಿಗೂ ಪ್ರಾತಿನಿಧ್ಯ ಕೊಡಬೇಕು. ಆದರೆ ಮೆಜಾರಿಟಿ ಇಲ್ಲದ ಬ್ರಾಹ್ಮಣರು 127 ಮಂದಿ ಎಂಪಿಗಳನ್ನು ಹೊಂದಿದ್ದಾರೆ. ಅವರನ್ನು ಗೆದ್ದು ಕಳಿಸಿದ್ದು ಯಾರು? ನಿಮ್ಮ ಹೆಗಲ ಮೇಲೆ ಕಾಲುಗಳನ್ನು ಇಟ್ಟುಕೊಂಡು ನಿಂತಿದ್ದಾರೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗವೆಲ್ಲ ಅವರ ಹಿಡಿತದಲ್ಲಿವೆ. ಹೀಗಾಗಿ ಹತ್ತು ಪರ್ಸೆಂಟ್ ಮೀಸಲಾತಿ ಒಂದೇ ದಿನದಲ್ಲಿ ಮಾಡಿಕೊಳ್ಳುತ್ತಾರೆ. ಯಾಕೆಂದರೆ ಅವರ ಬಳಿ ಅಧಿಕಾರವಿದೆ. ಅಂಬೇಡ್ಕರ್‌ರವರು ಹೇಳಿದಂತೆ ಅಧಿಕಾರ ಹೀನತೆಯೇ ಅಸ್ಪೃಶ್ಯತೆ” ಎಂದು ಅಭಿಪ್ರಾಯಪಟ್ಟರು.

“ಒಂದೇ ದಿನದಲ್ಲಿ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೊಳಿಸಿದಂತೆ ಒಳಮೀಸಲಾತಿ ಜಾರಿಗೊಳಿಸಿ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತನ್ನಿರಿ. ಆಜಾದಿ ಕಾ ಅಮೃತ ಮಹೋತ್ಸವ ಎನ್ನುತ್ತಿದ್ದಾರೆ. ಯಾರಿಗೆ ಅಮೃತ? ಆರು ನಿಮಿಷಕ್ಕೊಮ್ಮೆ ದಲಿತ ಹೆಣ್ಣುಮಕ್ಕಳ ರೇಪ್ ಆಗುತ್ತಿದೆ. ಎಂಟು ನಿಮಿಷಕ್ಕೊಂದು ಗುಡಿಸಲಿಗೆ ಬೆಂಕಿ ಬೀಳುತ್ತಿದೆ, ಅರವತ್ತು ಸಾವಿರ ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್ ಬಂದ್‌ ಆಗಿದೆ, ಏಳು ಸಾವಿರ ವಿದ್ಯಾರ್ಥಿಗಳ ಪಿಎಚ್‌.ಡಿ ಬಂದ್ ಆಗಿದೆ, ಬೈಕ್‌ ರೈಡ್ ಮಾಡಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಕೋಲಾರದಲ್ಲಿ ಥಳಿಸಿದ್ದಾರೆ, ಇದಕ್ಕೆಲ್ಲ ಯಾರು ಉತ್ತರ ಕೊಡಬೇಕು” ಎಂದು ಮಾರ್ಮಿಕವಾಗಿ ನುಡಿದರು.

“ಜಾತಿ ಜಾತಿಗಳ ನಡುವೆ ಒಡಕುಗಳು ಬೇಡ. ಎಸ್.ಸಿ., ಎಸ್‌.ಟಿ. ಸ್ವಾಮೀಜಿಗಳು ಏಕೆ ಒಂದಾಗಬೇಕು ಎಂಬ ವಿಷಯವನ್ನಿಟ್ಟುಕೊಂಡು 31 ಜಿಲ್ಲೆಗಳಲ್ಲೂ ಹೋರಾಟ ಮಾಡುತ್ತಿದ್ದೇವೆ. ಪರಿಶಿಷ್ಟ ಜನಾಂಗದ ಸ್ವಾಮೀಜಿಗಳನ್ನೇ ಒಡೆಯಬೇಕೆಂದು ಹೊರಟಿದ್ದಾರೆ. ಒಂದಿಷ್ಟು ಸಮುದಾಯದ ಸ್ವಾಮೀಜಿಗಳನ್ನು ಎತ್ತಿಕಟ್ಟಿ ನಮ್ಮ ವಿರುದ್ಧ ಬಿಟ್ಟಿದ್ದಾರೆ. ನಾವು ಯಾರೂ ವಿಚಲಿತರಾಗಿಲ್ಲ. ನಾವು ಒಗ್ಗಟ್ಟಿನಿಂದ ಇದ್ದೇವೆ. ನಾಲ್ಕು ವಿಭಾಗೀಯ ಸಮಾವೇಶ ಮಾಡುತ್ತೇವೆ, ದಲಿತ ಮುಖಂಡರೆಲ್ಲ ಅದರಲ್ಲಿ ಪಾಲ್ಗೊಳ್ಳಿದ್ದಾರೆ” ಎಂದು ಗುಡುಗಿದರು.

ನಮ್ಮ ಪಾಲು ಕೇಳಲು ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ: ಮಾವಳ್ಳಿ ಶಂಕರ್‌

ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಯಾರ ಪಾಲನ್ನು ನಾವು ಕಿತ್ತುಕೊಳ್ಳುತ್ತಿಲ್ಲ, ಯಾರ ಆಸ್ತಿಗೂ, ತಟ್ಟೆಗೂ ಕೈಹಾಕಿಲ್ಲ. ಹಿಂದುಳಿದ ಜಾತಿಗಳಿಗೆ ಮೀಸಲಾತಿ ವರ್ಗೀಕರಣ ಮಾಡಲು ಸಾಧ್ಯವಾದರೆ ಪರಿಶಿಷ್ಟ ಜಾತಿಯಲ್ಲಿ ಏಕೆ ಸಾಧ್ಯವಾಗುತ್ತಿಲ್ಲ? ನಮ್ಮ ಪಾಲನ್ನು ನಾವು ಕೇಳೋದಕ್ಕೆ ಯಾವುದೇ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎ.ಜೆ.ಸದಾಶಿವ ಆಯೋಗದ ಜಾರಿಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡು ಮಾವಳ್ಳಿ ಶಂಕರ್‌ ಮಾತನಾಡಿದರು.

“ಒಳಮೀಸಲಾತಿ ಕುರಿತು ಚರ್ಚೆ ಮಾಡುತ್ತಿರುವಾಗ ಖಾಸಗೀಕರಣ ಹೆಚ್ಚಾಗಿರುವುದನ್ನು ಪ್ರಸ್ತಾಪಿಸುತ್ತಾರೆ. ಅದರ ವಿರುದ್ಧ ಹೋರಾಟ ಮಾಡುವುದು ಹೇಗೆಂದು ಬಾಬಾ ಸಾಹೇಬರ ಅನುಯಾಯಿಗಳಿಗೆ ಗೊತ್ತಿದೆ. ಆದರೆ ಖಾಸಗೀಕರಣವನ್ನು ತೋರಿಸಿ, ಈ ಹೋರಾಟವನ್ನು ತಡೆಯಬಾರದು” ಎಂದು ಎಚ್ಚರಿಕೆ ನೀಡಿದರು.

“ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಲ್ಲಿ ಹೇಡಿಗಳು ಗೆದ್ದು ಬರುತ್ತಿದ್ದಾರೆ. ಅವರೆಲ್ಲ ಈ ಸಮುದಾಯವನ್ನು ಪ್ರತಿನಿಧಿಸಿ ಮೇಲ್ಜಾತಿಯ ಗುಲಾಮಗಿರಿ ಮಾಡದಿದ್ದರೆ ಒಳಮೀಸಲಾತಿ ದೊಡ್ಡ ಪ್ರಶ್ನೆಯೇ ಆಗುತ್ತಿರಲಿಲ್ಲ. ರಾಜಕೀಯ ಅಧಿಕಾರಕ್ಕಾಗಿ ಬೇರೆಯವರ ಜೀತ ಮಾಡಿದರೆ ಸಮುದಾಯ ಹಿಂದುಳಿಯುತ್ತದೆ. ಬಾಬಾ ಸಾಹೇಬರ ಆಶಯದಂತೆ ಪ್ರತ್ಯೇಕ ಮತದಾನದ ಹಕ್ಕು ನಮಗೆ ಸಿಕ್ಕಿದ್ದರೆ ನಮ್ಮ ಕಾಲ ಬುಡಕ್ಕೆ ಮೇಲ್ಜಾತಿಗಳು ಬರುತ್ತಿದ್ದವು. ಪರಿಶಿಷ್ಟ ರಾಜಕಾರಣಗಳು ಒಳಮೀಸಲಾತಿ ಪರ ಮಾತನಾಡಲು ಸಾಧ್ಯವಾಗುತ್ತಿಲ್ಲ. ದಲಿತ ರಾಜಕಾರಣಿಗಳು ಮೇಲ್ಜಾತಿಗಳ ಮರ್ಜಿಗೆ ಬಿದ್ದಿದ್ದಾರೆ” ಎಂದು ವಿಷಾದಿಸಿದರು.

ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ದಲಿತ ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿ, “ಈ ಮೂವತ್ತು ವರ್ಷದ ಹೋರಾಟದಲ್ಲಿ ಹಲವಾರು ನಾಯಕರು ಸತ್ತಿದ್ದಾರೆ, ಜೈಲಿಗೆ ಹೋಗಿದ್ದಾರೆ, ನೌಕರಿ ಬಿಟ್ಟಿದ್ದಾರೆ, ಲಾಠಿ ಏಟು ತಿಂದಿದ್ದಾರೆ- ಯಾವುದೇ ಕಾರಣಕ್ಕೂ ಒಂದು ದಿನಕ್ಕೆ ಮಾತ್ರ ಹೋರಾಟ ಸೀಮಿತಗೊಳಿಸಬಾರದು ಎಂದು ಭೀಮ ಸೈನಿಕರು ಎಚ್ಚರಿಕೆ ಕೊಟ್ಟು ನಮ್ಮನ್ನು ಕಳಿಸಿದ್ದಾರೆ. ಹೀಗಾಗಿ ಹೋರಾಟ ಮುಂದುವರಿಸಿದೆ. ನವೆಂಬರ್‌ ತಿಂಗಳಿನಿಂದ ನಿರಂತರ ಹೋರಾಟ ನಡೆಯುತ್ತಿದೆ. ಡಿಸೆಂಬರ್‌ 11ರಿಂದ ಬೆಂಗಳೂರಿನಲ್ಲಿ ಹೋರಾಟ ಜರುಗಿದೆ” ಎಂದರು.

“ಒಂದು ಸಂಘಟನೆ, ಒಂದು ಸಮುದಾಯ ಈ ಹೋರಾಟದ ಮುಂದಾಳತ್ವ ವಹಿಸಿತ್ತು. ಆದರೆ ಎಲ್ಲ ಜಾತಿಗಳು ಈ ಚಳವಳಿಯ ಭಾಗವಾಗಬೇಕೆಂದು ನಿರಂತರ ಚರ್ಚೆಗಳು ನಡೆಸಿದ್ದೇವೆ. ಎಲ್ಲ ಸಮುದಾಯಗಳು ಒಳಗೊಂಡಿದ್ದರಿಂದ ನಮ್ಮ ಟೈಟಲ್‌ ಬದಲಾಗಿದೆ, ನಡೆ, ನುಡಿ, ವರ್ತನೆ ಬದಲಾಗಿದೆ. ಎಲ್ಲ ರೀತಿಯಲ್ಲೂ ನಮ್ಮ ಹೋರಾಟ ವಿಸ್ತರಣೆಯಾಗಿದೆ. ಮೂರು ಪಕ್ಷಗಳು ಮಾತನಾಡುವಂತಾಗಿದೆ. ಇದು ರಾಜಕೀಯೇತರ ಚಳವಳಿ” ಎಂದು ಸ್ಪಷ್ಟಪಡಿಸಿದರು.

ದಲಿತ ಹೋರಾಟಗಾರರಾದ ಬಿ.ಗೋಪಾಲ್ ಮಾತನಾಡಿ, “ಯಾರದೇ ಮೀಸಲಾತಿಯನ್ನು ಕಿತ್ತುಹಾಕುವ ಪ್ರಸ್ತಾವನ್ನು ಯಾರೂ ಮಾಡಿಲ್ಲ. ಮಾಡಲೂಬಾರದು” ಎಂದು ಆಶಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಹೋರಾಟ 30ನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟದಲ್ಲಿ ದಲಿತ ಮುಖಂಡರಾದ ಎನ್.ವೆಂಕಟೇಶ್, ಹೆಣ್ಣೂರು ಶ್ರೀನಿವಾಸ್, ಬಸವರಾಜ ಕೌತಾಳ್, ಮೋಹನ್ ರಾಜ್, ಹೆಣ್ಣೂರು ಲಕ್ಷ್ಮೀನಾರಾಯಣ್, ಡಿ.ಶಿವಶಂಕರ್, ಕನಕಪುರ ಬಿ.ಶಿವಣ್ಣ, ಶಿವರಾಜ ಯಕ್ಕರಕಿ, ಗುರುಮೂರ್ತಿ, ಶಿವಸುಂದರ್, ಗೌರಿ ಜನಶಕ್ತಿ, ನಾಗಮಣಿ, ಸವಿತಾ, ಹ.ರಾ.ಮಹೇಶ್, ಸೂಲಿಕುಂಟೆ ರಮೇಶ್, ಗಣೇಶ್ ಮೇತ್ರಿ, ಕಮಲಾನಗರ ಚಿಕ್ಕಣ್ಣ, ರಾಜಗೋಪಾಲ್, ಹನುಮೇಗೌಡ, ಕರಿಯಪ್ಪ ಗುಡಿಮನಿ, ವೇಣುಗೋಪಾಲ್ ಮೌರ್ಯ, ಹನುಮೇಶ್ ಗುಂಡೂರು, ಡಿಬಿಎಂ ವೆಂಕಟೇಶ್, ಕೋದಂಡರಾಮ್, ಹೆಗ್ಗನಹಳ್ಳಿ ಮೂರ್ತಿ, ಕನಕೇನಹಳ್ಳಿ ಕೃಷ್ಣ, ಡಾ.ರವಿಕುಮಾರ್ ಬಾಗಿ, ಹಾಡುಗಾರರಾದ ಕೆ.ಎನ್.ನಾಗೇಶ್, ಸಬ್ಬನಹಳ್ಳಿ ರಾಜು, ಪ್ರಶಾಂತ್ ದಾನಪ್ಪ, ಸುಧಾಕರ್, ಸಿದ್ದಯ್ಯ, ಎಲ್.ವಿ.ಸುರೇಶ್, ಮೌನೇಶ್ ದೇವತೆಗಲ್, ಮೌಲಪ್ಪ ಐಹೊಳೆ, ಹನುಮೇಶ್ ಬೇರಿ, ಎಂ.ಡೇವಿಡ್ ಸಿರವಾರ, ಎಸ್.ಎಚ್.ನಾಗೇಶ್ ಮೊದಲಾದವರು ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಲಂಬಾಣಿ, ಭೋವಿ ಸಮುದಾಯ ಬೃಹತ್‌ ಪ್ರತಿಭಟನೆ

ಭೋವಿ, ಲಂಬಾಣಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟದ ನೇತೃತ್ವ’ದಲ್ಲಿ ಅದೇ ಫ್ರೀಡಂ ಪಾರ್ಕ್‌‌ನಲ್ಲಿ ಬೃಹತ್ ಹೋರಾಟ ಜರುಗಿತು.

ಎ.ಜೆ.ಸದಾಶಿವ ಆಯೋಗದ ವರದಿಯನ್ನು ತರಾತುರಿಯಲ್ಲಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬಾರದು ಎಂಬುದು ಒಕ್ಕೂಟದ ಆಗ್ರಹವಾಗಿತ್ತು. ಎರಡು ಭಿನ್ನ ನಿಲುವಿನ ಹೋರಾಟಗಳು ಒಂದೇ ಸ್ಥಳದಲ್ಲಿ ಜರುಗಿದ್ದರಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಒಂದು ಸಾವಿರ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ್ದರು. ಎ.ಜೆ.ಸದಾಶಿವ ಆಯೋಗದ ಪರ ನಡೆಯುತ್ತಿರುವ 30ನೇ ದಿನದ ಹೋರಾಟದ ಸ್ಥಳಕ್ಕೆ ಹೋಗುವವರನ್ನು ಪರಿಶೀಲಿಸಿ ಬಿಡಲಾಗುತ್ತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಾಲಾದರೂ ಸನಾತನಿ ಬ್ರಾಹ್ಮಣ್ಯದ ಎದುರು ಗಟ್ಟಿಯಾಗಿ ಮಾತಾಡುತ್ತದ್ದಾರಲ್ಲಾ?,🙏

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...