Homeಕರ್ನಾಟಕಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

ಇಡಬ್ಲ್ಯೂಎಸ್‌ ಜಾರಿಗೆ ಯಾವ ಉಪಸಮಿತಿ ಮಾಡಿದ್ರಿ?: ಒಳಮೀಸಲಾತಿ ಹೋರಾಟದಲ್ಲಿ ಜ್ಞಾನಪ್ರಕಾಶ ಸ್ವಾಮೀಜಿ ವಾಗ್ದಾಳಿ

- Advertisement -
- Advertisement -

“ಮೂರು ಪರ್ಸೆಂಟ್ ಇರುವ ಮೇಲ್ಜಾತಿಯವರಿಗೆ ಹತ್ತು ಪರ್ಸೆಂಟ್ (ಇಡಬ್ಲ್ಯೂಎಸ್) ಮೀಸಲಾತಿ ನೀಡಲು ಯಾವ ಉಪಸಮಿತಿ ಮಾಡಿದ್ರಿ, ಯಾವ ಆಯೋಗ ವರದಿ ನೀಡಿತ್ತು?” ಎಂದು ಉರಿಲಿಂಗಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಪ್ರಶ್ನಿಸಿದರು.

ಪುನಾರಂಭಗೊಂಡಿರುವ ಒಳಮೀಸಲಾತಿ ಹೋರಾಟ 30ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಆಗಮಿಸಿ, ಹೋರಾಟವನ್ನು ಉದ್ದೇಶಿಸಿ ಅವರು ಮಾತನಾಡಿದರು.

“ನಮ್ಮ ಸಮುದಾಯಗಳನ್ನು ಒಡೆದು ಆಳುವ ಷಡ್ಯಂತ್ರ ನಡೆಯುತ್ತಿರುವುದು ನಮಗೆ ತಿಳಿದಿದೆ. ಮತಕ್ಕಾಗಿ ನಮ್ಮನ್ನು ಛಿದ್ರ ಛಿದ್ರ ಮಾಡಿದ್ದಾರೆ. ನಾವು ಯಾರ ತಟ್ಟೆಗೂ ಕೈ ಹಾಕುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು ಎಂಬುದು ಸಂವಿಧಾನ ಹಾಗೂ ಬಾಬಾ ಸಾಹೇಬ್‌ ಅಂಬೇಡ್ಕರರ ಆಶಯ. ಉಪಸಮಿತಿ ರಚಿಸಿರುವುದಾಗಿ ಹೇಳುತ್ತಾರೆ. ಆದರೆ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೆ ಯಾವ ಉಪಸಮಿತಿ ಮಾಡಿದ್ದರು? ಯಾವ ಆಯೋಗ ಮಾಡಿದ್ದರು? ಯಾವ ವರದಿ ಪಡೆದಿದ್ದರು? ಹೇಗೆ ಇಡಬ್ಲ್ಯೂಎಸ್‌ ಜಾರಿಯಾಯಿತು?” ಎಂದು ಕೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂವಿಧಾನ ಜಾರಿಗೊಳಿಸುವ ಜಾಗದಲ್ಲಿ ನಾವಿಲ್ಲ. ನಮ್ಮ ಪ್ರತಿನಿಧಿಗಳಾಗಿ ಹೋದವರು ಬಾಯಿ ಕಟ್ಟಿದ ನಾಯಿಗಳಾಗಿ ಕೂತಿದ್ದಾರೆ. ನಾವಿಲ್ಲಿ ಟೆಂಟ್ ಹಾಕಿಕೊಂಡು ಧಿಕ್ಕಾರ ಕೂಗುತ್ತಿದ್ದೇವೆ. ನಮ್ಮನ್ನು ಒಡೆದು ಆಳುತ್ತಿದ್ದಾರೆ. ಜಲ್ಲಿ, ಸಿಮೆಂಟ್, ಕಬ್ಬಿಣ, ನೀರು- ಎಲ್ಲವನ್ನು ಬೇರ್ಪಡಿಸಿ ಕಾಂಕ್ರೀಟ್ ಮಾಡಲು ಸಾಧ್ಯವೇ? ಜೇನು ನೊಣಗಳಂತೆ ಒಂದಾಗಿ” ಎಂದು ಸಂದೇಶ ನೀಡಿದರು.

“ಗ್ರಾಮ ಪಂಚಾಯಿತಿ ಮೆಂಬರ್‌ ಕೂಡ ಆಗಲು ಸಾಧ್ಯವಿಲ್ಲದಂತಹ ಬುಡುಬುಡಕೆ, ದೊಂಬಿದಾಸ, ಶಿಳ್ಳೆಕ್ಯಾತರಿದ್ದಾರೆ. ಅವರಿಗೆಲ್ಲರಿಗೂ ಪ್ರಾತಿನಿಧ್ಯ ಕೊಡಬೇಕು. ಆದರೆ ಮೆಜಾರಿಟಿ ಇಲ್ಲದ ಬ್ರಾಹ್ಮಣರು 127 ಮಂದಿ ಎಂಪಿಗಳನ್ನು ಹೊಂದಿದ್ದಾರೆ. ಅವರನ್ನು ಗೆದ್ದು ಕಳಿಸಿದ್ದು ಯಾರು? ನಿಮ್ಮ ಹೆಗಲ ಮೇಲೆ ಕಾಲುಗಳನ್ನು ಇಟ್ಟುಕೊಂಡು ನಿಂತಿದ್ದಾರೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗವೆಲ್ಲ ಅವರ ಹಿಡಿತದಲ್ಲಿವೆ. ಹೀಗಾಗಿ ಹತ್ತು ಪರ್ಸೆಂಟ್ ಮೀಸಲಾತಿ ಒಂದೇ ದಿನದಲ್ಲಿ ಮಾಡಿಕೊಳ್ಳುತ್ತಾರೆ. ಯಾಕೆಂದರೆ ಅವರ ಬಳಿ ಅಧಿಕಾರವಿದೆ. ಅಂಬೇಡ್ಕರ್‌ರವರು ಹೇಳಿದಂತೆ ಅಧಿಕಾರ ಹೀನತೆಯೇ ಅಸ್ಪೃಶ್ಯತೆ” ಎಂದು ಅಭಿಪ್ರಾಯಪಟ್ಟರು.

“ಒಂದೇ ದಿನದಲ್ಲಿ ಹತ್ತು ಪರ್ಸೆಂಟ್ ಮೀಸಲಾತಿ ಜಾರಿಗೊಳಿಸಿದಂತೆ ಒಳಮೀಸಲಾತಿ ಜಾರಿಗೊಳಿಸಿ. ಸುಗ್ರೀವಾಜ್ಞೆ ಮೂಲಕ ಜಾರಿಗೆ ತನ್ನಿರಿ. ಆಜಾದಿ ಕಾ ಅಮೃತ ಮಹೋತ್ಸವ ಎನ್ನುತ್ತಿದ್ದಾರೆ. ಯಾರಿಗೆ ಅಮೃತ? ಆರು ನಿಮಿಷಕ್ಕೊಮ್ಮೆ ದಲಿತ ಹೆಣ್ಣುಮಕ್ಕಳ ರೇಪ್ ಆಗುತ್ತಿದೆ. ಎಂಟು ನಿಮಿಷಕ್ಕೊಂದು ಗುಡಿಸಲಿಗೆ ಬೆಂಕಿ ಬೀಳುತ್ತಿದೆ, ಅರವತ್ತು ಸಾವಿರ ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್ ಬಂದ್‌ ಆಗಿದೆ, ಏಳು ಸಾವಿರ ವಿದ್ಯಾರ್ಥಿಗಳ ಪಿಎಚ್‌.ಡಿ ಬಂದ್ ಆಗಿದೆ, ಬೈಕ್‌ ರೈಡ್ ಮಾಡಿದ್ದಕ್ಕೆ ದಲಿತ ವಿದ್ಯಾರ್ಥಿಗೆ ಕೋಲಾರದಲ್ಲಿ ಥಳಿಸಿದ್ದಾರೆ, ಇದಕ್ಕೆಲ್ಲ ಯಾರು ಉತ್ತರ ಕೊಡಬೇಕು” ಎಂದು ಮಾರ್ಮಿಕವಾಗಿ ನುಡಿದರು.

“ಜಾತಿ ಜಾತಿಗಳ ನಡುವೆ ಒಡಕುಗಳು ಬೇಡ. ಎಸ್.ಸಿ., ಎಸ್‌.ಟಿ. ಸ್ವಾಮೀಜಿಗಳು ಏಕೆ ಒಂದಾಗಬೇಕು ಎಂಬ ವಿಷಯವನ್ನಿಟ್ಟುಕೊಂಡು 31 ಜಿಲ್ಲೆಗಳಲ್ಲೂ ಹೋರಾಟ ಮಾಡುತ್ತಿದ್ದೇವೆ. ಪರಿಶಿಷ್ಟ ಜನಾಂಗದ ಸ್ವಾಮೀಜಿಗಳನ್ನೇ ಒಡೆಯಬೇಕೆಂದು ಹೊರಟಿದ್ದಾರೆ. ಒಂದಿಷ್ಟು ಸಮುದಾಯದ ಸ್ವಾಮೀಜಿಗಳನ್ನು ಎತ್ತಿಕಟ್ಟಿ ನಮ್ಮ ವಿರುದ್ಧ ಬಿಟ್ಟಿದ್ದಾರೆ. ನಾವು ಯಾರೂ ವಿಚಲಿತರಾಗಿಲ್ಲ. ನಾವು ಒಗ್ಗಟ್ಟಿನಿಂದ ಇದ್ದೇವೆ. ನಾಲ್ಕು ವಿಭಾಗೀಯ ಸಮಾವೇಶ ಮಾಡುತ್ತೇವೆ, ದಲಿತ ಮುಖಂಡರೆಲ್ಲ ಅದರಲ್ಲಿ ಪಾಲ್ಗೊಳ್ಳಿದ್ದಾರೆ” ಎಂದು ಗುಡುಗಿದರು.

ನಮ್ಮ ಪಾಲು ಕೇಳಲು ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ: ಮಾವಳ್ಳಿ ಶಂಕರ್‌

ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಯಾರ ಪಾಲನ್ನು ನಾವು ಕಿತ್ತುಕೊಳ್ಳುತ್ತಿಲ್ಲ, ಯಾರ ಆಸ್ತಿಗೂ, ತಟ್ಟೆಗೂ ಕೈಹಾಕಿಲ್ಲ. ಹಿಂದುಳಿದ ಜಾತಿಗಳಿಗೆ ಮೀಸಲಾತಿ ವರ್ಗೀಕರಣ ಮಾಡಲು ಸಾಧ್ಯವಾದರೆ ಪರಿಶಿಷ್ಟ ಜಾತಿಯಲ್ಲಿ ಏಕೆ ಸಾಧ್ಯವಾಗುತ್ತಿಲ್ಲ? ನಮ್ಮ ಪಾಲನ್ನು ನಾವು ಕೇಳೋದಕ್ಕೆ ಯಾವುದೇ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎ.ಜೆ.ಸದಾಶಿವ ಆಯೋಗದ ಜಾರಿಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಂಡು ಮಾವಳ್ಳಿ ಶಂಕರ್‌ ಮಾತನಾಡಿದರು.

“ಒಳಮೀಸಲಾತಿ ಕುರಿತು ಚರ್ಚೆ ಮಾಡುತ್ತಿರುವಾಗ ಖಾಸಗೀಕರಣ ಹೆಚ್ಚಾಗಿರುವುದನ್ನು ಪ್ರಸ್ತಾಪಿಸುತ್ತಾರೆ. ಅದರ ವಿರುದ್ಧ ಹೋರಾಟ ಮಾಡುವುದು ಹೇಗೆಂದು ಬಾಬಾ ಸಾಹೇಬರ ಅನುಯಾಯಿಗಳಿಗೆ ಗೊತ್ತಿದೆ. ಆದರೆ ಖಾಸಗೀಕರಣವನ್ನು ತೋರಿಸಿ, ಈ ಹೋರಾಟವನ್ನು ತಡೆಯಬಾರದು” ಎಂದು ಎಚ್ಚರಿಕೆ ನೀಡಿದರು.

“ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಲ್ಲಿ ಹೇಡಿಗಳು ಗೆದ್ದು ಬರುತ್ತಿದ್ದಾರೆ. ಅವರೆಲ್ಲ ಈ ಸಮುದಾಯವನ್ನು ಪ್ರತಿನಿಧಿಸಿ ಮೇಲ್ಜಾತಿಯ ಗುಲಾಮಗಿರಿ ಮಾಡದಿದ್ದರೆ ಒಳಮೀಸಲಾತಿ ದೊಡ್ಡ ಪ್ರಶ್ನೆಯೇ ಆಗುತ್ತಿರಲಿಲ್ಲ. ರಾಜಕೀಯ ಅಧಿಕಾರಕ್ಕಾಗಿ ಬೇರೆಯವರ ಜೀತ ಮಾಡಿದರೆ ಸಮುದಾಯ ಹಿಂದುಳಿಯುತ್ತದೆ. ಬಾಬಾ ಸಾಹೇಬರ ಆಶಯದಂತೆ ಪ್ರತ್ಯೇಕ ಮತದಾನದ ಹಕ್ಕು ನಮಗೆ ಸಿಕ್ಕಿದ್ದರೆ ನಮ್ಮ ಕಾಲ ಬುಡಕ್ಕೆ ಮೇಲ್ಜಾತಿಗಳು ಬರುತ್ತಿದ್ದವು. ಪರಿಶಿಷ್ಟ ರಾಜಕಾರಣಗಳು ಒಳಮೀಸಲಾತಿ ಪರ ಮಾತನಾಡಲು ಸಾಧ್ಯವಾಗುತ್ತಿಲ್ಲ. ದಲಿತ ರಾಜಕಾರಣಿಗಳು ಮೇಲ್ಜಾತಿಗಳ ಮರ್ಜಿಗೆ ಬಿದ್ದಿದ್ದಾರೆ” ಎಂದು ವಿಷಾದಿಸಿದರು.

ಒಳಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ದಲಿತ ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿ, “ಈ ಮೂವತ್ತು ವರ್ಷದ ಹೋರಾಟದಲ್ಲಿ ಹಲವಾರು ನಾಯಕರು ಸತ್ತಿದ್ದಾರೆ, ಜೈಲಿಗೆ ಹೋಗಿದ್ದಾರೆ, ನೌಕರಿ ಬಿಟ್ಟಿದ್ದಾರೆ, ಲಾಠಿ ಏಟು ತಿಂದಿದ್ದಾರೆ- ಯಾವುದೇ ಕಾರಣಕ್ಕೂ ಒಂದು ದಿನಕ್ಕೆ ಮಾತ್ರ ಹೋರಾಟ ಸೀಮಿತಗೊಳಿಸಬಾರದು ಎಂದು ಭೀಮ ಸೈನಿಕರು ಎಚ್ಚರಿಕೆ ಕೊಟ್ಟು ನಮ್ಮನ್ನು ಕಳಿಸಿದ್ದಾರೆ. ಹೀಗಾಗಿ ಹೋರಾಟ ಮುಂದುವರಿಸಿದೆ. ನವೆಂಬರ್‌ ತಿಂಗಳಿನಿಂದ ನಿರಂತರ ಹೋರಾಟ ನಡೆಯುತ್ತಿದೆ. ಡಿಸೆಂಬರ್‌ 11ರಿಂದ ಬೆಂಗಳೂರಿನಲ್ಲಿ ಹೋರಾಟ ಜರುಗಿದೆ” ಎಂದರು.

“ಒಂದು ಸಂಘಟನೆ, ಒಂದು ಸಮುದಾಯ ಈ ಹೋರಾಟದ ಮುಂದಾಳತ್ವ ವಹಿಸಿತ್ತು. ಆದರೆ ಎಲ್ಲ ಜಾತಿಗಳು ಈ ಚಳವಳಿಯ ಭಾಗವಾಗಬೇಕೆಂದು ನಿರಂತರ ಚರ್ಚೆಗಳು ನಡೆಸಿದ್ದೇವೆ. ಎಲ್ಲ ಸಮುದಾಯಗಳು ಒಳಗೊಂಡಿದ್ದರಿಂದ ನಮ್ಮ ಟೈಟಲ್‌ ಬದಲಾಗಿದೆ, ನಡೆ, ನುಡಿ, ವರ್ತನೆ ಬದಲಾಗಿದೆ. ಎಲ್ಲ ರೀತಿಯಲ್ಲೂ ನಮ್ಮ ಹೋರಾಟ ವಿಸ್ತರಣೆಯಾಗಿದೆ. ಮೂರು ಪಕ್ಷಗಳು ಮಾತನಾಡುವಂತಾಗಿದೆ. ಇದು ರಾಜಕೀಯೇತರ ಚಳವಳಿ” ಎಂದು ಸ್ಪಷ್ಟಪಡಿಸಿದರು.

ದಲಿತ ಹೋರಾಟಗಾರರಾದ ಬಿ.ಗೋಪಾಲ್ ಮಾತನಾಡಿ, “ಯಾರದೇ ಮೀಸಲಾತಿಯನ್ನು ಕಿತ್ತುಹಾಕುವ ಪ್ರಸ್ತಾವನ್ನು ಯಾರೂ ಮಾಡಿಲ್ಲ. ಮಾಡಲೂಬಾರದು” ಎಂದು ಆಶಿಸಿದರು.

ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಹೋರಾಟ 30ನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟದಲ್ಲಿ ದಲಿತ ಮುಖಂಡರಾದ ಎನ್.ವೆಂಕಟೇಶ್, ಹೆಣ್ಣೂರು ಶ್ರೀನಿವಾಸ್, ಬಸವರಾಜ ಕೌತಾಳ್, ಮೋಹನ್ ರಾಜ್, ಹೆಣ್ಣೂರು ಲಕ್ಷ್ಮೀನಾರಾಯಣ್, ಡಿ.ಶಿವಶಂಕರ್, ಕನಕಪುರ ಬಿ.ಶಿವಣ್ಣ, ಶಿವರಾಜ ಯಕ್ಕರಕಿ, ಗುರುಮೂರ್ತಿ, ಶಿವಸುಂದರ್, ಗೌರಿ ಜನಶಕ್ತಿ, ನಾಗಮಣಿ, ಸವಿತಾ, ಹ.ರಾ.ಮಹೇಶ್, ಸೂಲಿಕುಂಟೆ ರಮೇಶ್, ಗಣೇಶ್ ಮೇತ್ರಿ, ಕಮಲಾನಗರ ಚಿಕ್ಕಣ್ಣ, ರಾಜಗೋಪಾಲ್, ಹನುಮೇಗೌಡ, ಕರಿಯಪ್ಪ ಗುಡಿಮನಿ, ವೇಣುಗೋಪಾಲ್ ಮೌರ್ಯ, ಹನುಮೇಶ್ ಗುಂಡೂರು, ಡಿಬಿಎಂ ವೆಂಕಟೇಶ್, ಕೋದಂಡರಾಮ್, ಹೆಗ್ಗನಹಳ್ಳಿ ಮೂರ್ತಿ, ಕನಕೇನಹಳ್ಳಿ ಕೃಷ್ಣ, ಡಾ.ರವಿಕುಮಾರ್ ಬಾಗಿ, ಹಾಡುಗಾರರಾದ ಕೆ.ಎನ್.ನಾಗೇಶ್, ಸಬ್ಬನಹಳ್ಳಿ ರಾಜು, ಪ್ರಶಾಂತ್ ದಾನಪ್ಪ, ಸುಧಾಕರ್, ಸಿದ್ದಯ್ಯ, ಎಲ್.ವಿ.ಸುರೇಶ್, ಮೌನೇಶ್ ದೇವತೆಗಲ್, ಮೌಲಪ್ಪ ಐಹೊಳೆ, ಹನುಮೇಶ್ ಬೇರಿ, ಎಂ.ಡೇವಿಡ್ ಸಿರವಾರ, ಎಸ್.ಎಚ್.ನಾಗೇಶ್ ಮೊದಲಾದವರು ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಲಂಬಾಣಿ, ಭೋವಿ ಸಮುದಾಯ ಬೃಹತ್‌ ಪ್ರತಿಭಟನೆ

ಭೋವಿ, ಲಂಬಾಣಿ ಮುಖಂಡರು ಮುಂಚೂಣಿಯಲ್ಲಿರುವ ‘ಕರ್ನಾಟಕ ಮೀಸಲಾತಿ ಸಂರಕ್ಷಣ ಒಕ್ಕೂಟದ ನೇತೃತ್ವ’ದಲ್ಲಿ ಅದೇ ಫ್ರೀಡಂ ಪಾರ್ಕ್‌‌ನಲ್ಲಿ ಬೃಹತ್ ಹೋರಾಟ ಜರುಗಿತು.

ಎ.ಜೆ.ಸದಾಶಿವ ಆಯೋಗದ ವರದಿಯನ್ನು ತರಾತುರಿಯಲ್ಲಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬಾರದು ಎಂಬುದು ಒಕ್ಕೂಟದ ಆಗ್ರಹವಾಗಿತ್ತು. ಎರಡು ಭಿನ್ನ ನಿಲುವಿನ ಹೋರಾಟಗಳು ಒಂದೇ ಸ್ಥಳದಲ್ಲಿ ಜರುಗಿದ್ದರಿಂದ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಒಂದು ಸಾವಿರ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ್ದರು. ಎ.ಜೆ.ಸದಾಶಿವ ಆಯೋಗದ ಪರ ನಡೆಯುತ್ತಿರುವ 30ನೇ ದಿನದ ಹೋರಾಟದ ಸ್ಥಳಕ್ಕೆ ಹೋಗುವವರನ್ನು ಪರಿಶೀಲಿಸಿ ಬಿಡಲಾಗುತ್ತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಾಲಾದರೂ ಸನಾತನಿ ಬ್ರಾಹ್ಮಣ್ಯದ ಎದುರು ಗಟ್ಟಿಯಾಗಿ ಮಾತಾಡುತ್ತದ್ದಾರಲ್ಲಾ?,🙏

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...