Homeಮುಖಪುಟಯಾವ ಭಗವದ್ಗೀತೆ ಅನುಸರಿಸಬೇಕು?

ಯಾವ ಭಗವದ್ಗೀತೆ ಅನುಸರಿಸಬೇಕು?

- Advertisement -
- Advertisement -

ಇತ್ತೀಚೆಗೆ ಬೆಂಗಳೂರಿನಲ್ಲಿ ಇಸ್ಕಾನ್ ಸಂಸ್ಥೆ ’ಗೀತಾ ದಾನ ಯಜ್ಞ ಮಹೋತ್ಸವ’ ಆಚರಿಸಿದೆ ಮತ್ತು ಭಗವದ್ಗೀತೆಯ ಒಂದು ಲಕ್ಷ ಪ್ರತಿಗಳನ್ನು ಹಂಚಲು ನಿರ್ಧರಿಸಿದೆ. ಯಜ್ಞದಲ್ಲಿ ಭಾಗವಹಿಸಿದ ಭಾರತದ ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ಅವರು ಗೀತೆಯನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದ್ದಾರೆ. ಗೀತೆಯನ್ನು ಶಾಲಾ-ಕಾಲೇಜುಗಳಲ್ಲಿ ಪಠ್ಯವನ್ನಾಗಿ ಮಾಡಬೇಕೆಂದು ಕರ್ನಾಟಕದ ವಿದ್ಯಾ ಮಂತ್ರಿಗಳು ಹೇಳಿದ್ದಾರೆ. ಹಾಗೆಯೇ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ಕಟೀಲರೂ ಹೇಳಿದ್ದಾರೆ. ಸಾಲದ್ದಕ್ಕೆ ಭಗವದ್ಗೀತೆ ಎಲ್ಲರಿಗೂ ಸ್ಫೂರ್ತಿ ಹಾಗೂ ಪ್ರೇರಣಾದಾಯಕ ಎಂದು ಉಡುಪಿ ವಿಶ್ವಪ್ರಸನ್ನತೀರ್ಥರು ಹೇಳಿದ್ದಾರೆ.

ಆದರೆ ಇವರು ಯಾವ ಗೀತೆಯ ಬಗ್ಗೆ ಹೇಳುತ್ತಿದ್ದಾರೆ? ಹಿಂದೂಗಳ ಸರಿಸುಮಾರು ಎಲ್ಲಾ ಧರ್ಮ ಗ್ರಂಥಗಳಲ್ಲಿ ಆಗಿರುವಂತೆ ಗೀತೆಯಲ್ಲಿಯೂ ಕಲಬೆರಕೆಯಾಗಿರುವುದರಿಂದ ಇವರು ಕಲಬೆರಕೆಯಾಗಿರುವ ಗೀತೆಯ ಬಗ್ಗೆ ಹೇಳುತ್ತಿದ್ದಾರೆಯೋ ಅಥವಾ ಕಲಬೆರಕೆಯಾಗುವ ಮೊದಲಿನ ಗೀತೆಯ ಬಗ್ಗೆ ಹೇಳುತ್ತಿದ್ದಾರೆಯೋ? ಯಾವ ಶ್ಲೋಕಗಳು ಮೂಲ ಗೀತೆಯಲ್ಲಿದ್ದವು, ಯಾವ ಶ್ಲೋಕಗಳನ್ನು ನಂತರ ಬೆರೆಸಲಾಗಿದೆ ಎಂದು ಇವರಿಗೆ ಹೇಳುವುದಕ್ಕೆ ಸಾಧ್ಯವಿದೆಯೇ? ’ಸ್ಫೂರ್ತಿದಾಯಕವಾದ ಹಾಗೂ ಪ್ರೇರಣಾದಾಯಕವಾದ’ ಶ್ಲೋಕಗಳು ಮೂಲ ಗೀತೆಯಲ್ಲಿದ್ದವೇ ಅಥವಾ ಅವುಗಳನ್ನು ನಂತರ ಕಲಬೆರಕೆ ಮಾಡಲಾಯಿತೇ? ಒಟ್ಟಿನಲ್ಲಿ ಇಂದು ಇಡೀ ಗೀತೆಯೇ ಸಂಶಯಾಸ್ಪದ ಗ್ರಂಥವಾಗಿ ಅದರ ವಿಶ್ವಾಸಾರ್ಹತೆಯೇ ಇಲ್ಲದಂತಾಗಿದೆ.

ಇಂದು ಪ್ರಚಲಿತವಾಗಿರುವ ಗೀತೆಯಲ್ಲಿ 700 ಶ್ಲೋಕಗಳಿವೆ. ಅವುಗಳಲ್ಲಿ 574 ಕೃಷ್ಣ ಹೇಳಿದ್ದು, 84 ಅರ್ಜುನ ಹೇಳಿದ್ದು, 41 ಸಂಜಯ ಹೇಳಿದ್ದು ಹಾಗೂ 1 ಧೃತರಾಷ್ಟ್ರ ಹೇಳಿದ್ದು. ಆದರೆ ಮಹಾಭಾರತದ ಭೀಷ್ಮಪರ್ವದ 43ನೆಯ ಅಧ್ಯಾಯದಲ್ಲಿ ಒಂದು ಶ್ಲೋಕ ಹೀಗೆ ಹೇಳುತ್ತದೆ: ’ಷಟ್‌ಶತಾನಿ ಸಂವಿಶಾನಿ ಶ್ಲೋಕಾನಾಂ ಪ್ರಾಹ ಕೇಶವಃ, ಅರ್ಜುನಃ ಸಪ್ತಪಂಚಾಶತ್ಸಪ್ತಷಷ್ಠಿಂ ತು ಸಂಜಯಃ, ಧೃತರಾಷ್ಟ್ರಃ ಶ್ಲೋಕಮೇಕಂ ಗೀತಾಯಾ ಮಾನಮುಚ್ಯತೆ’. ಅಂದರೆ ಗೀತೆಯಲ್ಲಿ ಕೃಷ್ಣ ಹೇಳಿದ 620, ಅರ್ಜುನ ಹೇಳಿದ 57, ಸಂಜಯ ಹೇಳಿದ 68 ಹಾಗೂ ಧೃತರಾಷ್ಟ್ರ ಹೇಳಿದ 1 ಶ್ಲೋಕಗಳು ಇವೆ ಎಂದು ಮೇಲಿನ ಸಾಲು ಹೇಳುತ್ತದೆ. ಆದರೆ ಈ ಶ್ಲೋಕದ ಪ್ರಕಾರ ಗೀತೆಯಲ್ಲಿರುವ ಶ್ಲೋಕಗಳ ಮೊತ್ತ 746 ಆಗುತ್ತದೆ. ಅಂದರೆ ಇಂದು ಲಭ್ಯವಿರುವ ಗೀತೆಯಲ್ಲಿ ಕೃಷ್ಣ ಹೇಳಿದ ಶ್ಲೋಕಗಳಲ್ಲಿ 46 ಕಡಿಮೆ ಇವೆ, ಸಂಜಯ ಹೇಳಿದ ಶ್ಲೋಕಗಳಲ್ಲಿ 27 ಕಡಿಮೆ ಇವೆ ಹಾಗೂ ಅರ್ಜುನ ಹೇಳಿದ ಶ್ಲೋಕಗಳಲ್ಲಿ 27 ಶ್ಲೋಕಗಳು ಹೆಚ್ಚಿಗಿವೆ ಎಂದಾಯಿತು.

ಮಹಾಭಾರತದ ಈ ಶ್ಲೋಕ ಮಹಾಭಾರತದ ಹಲವು ಆವೃತ್ತಿಗಳಲ್ಲಿ ಲಭ್ಯವಿದ್ದರೂ ಹಲವು ಆವೃತ್ತಿಗಳಲ್ಲಿ ಲಭ್ಯವಿರುವುದಿಲ್ಲ. ಉದಾಹರಣೆಗೆ ಈ ಶ್ಲೋಕ ಪುಣೆಯ ಭಂಡಾರಕರ ಓರಿಎಂಟಲ್ ರಿಸರ್ಚ ಇನ್ಸ್ಟಿಟ್ಯೂಟಿನ ಆವೃತ್ತಿಯಲ್ಲಿ ಲಭ್ಯವಿಲ್ಲ ಆದರೆ ಗೋರಖಪುರದ ಗೀತಾ ಪ್ರೆಸ್ ಪ್ರಕಟಿಸಿರುವ ಆವೃತ್ತಿಯಲ್ಲಿ ಲಭ್ಯವಿರುತ್ತದೆ. ಹಾಗಾದರೆ ಮಹಾಭಾರತದ ಈ ಶ್ಲೋಕವನ್ನು ಪ್ರಾಮಾಣಿಕವೆಂದು ನಂಬಿದರೆ ಗೀತೆಯಲ್ಲಿ ಕಲಬೆರಕೆಯಾಗಿದೆ ಎಂಬುವುದನ್ನು ಒಪ್ಪಬೇಕಾಗುತ್ತದೆ. ಆದರೆ ಗೀತೆಯ 700 ಶ್ಲೋಕಗಳನ್ನು ಪ್ರಾಮಾಣಿಕ ಎಂದು ನಂಬಿದರೆ, ಮಹಾಭಾರತದ ಈ ಶ್ಲೋಕವನ್ನು ಕಲಬೆರಕೆಯಾದುದು ಎಂದು ನಂಬಬೇಕಾಗುತ್ತದೆ. ಎರಡೂ ಶ್ಲೋಕಗಳು ಬರುವುದು ಮಹಾಭಾರತದ ಭೀಷ್ಮಪರ್ವದಲ್ಲಿಯೇ ಅಂದ ಮೇಲೆ ಇವೆರಡರಲ್ಲಿ ಯಾವುದನ್ನು ಪ್ರಾಮಾಣಿಕ, ಯಾವುದನ್ನು ಕಲಬೆರಕೆ ಎಂದು ಹೇಳುವುದು? ಯಾವುದನ್ನೋ ಒಪ್ಪುವುದಾದರೆ ಹಾಗೆ ಹೇಳಲು ಆಧಾರಗಳೇನು?

ಇದನ್ನೂ ಓದಿ: ಭಗವದ್ಗೀತೆಯಲ್ಲಿ ಅದ್ಯಾವ ನೈತಿಕ ಶಿಕ್ಷಣವಿದೆ?

ಸಂದರ್ಭ ಹಾಗೂ ಆಂತರಿಕ ವಿರೋಧಾಭಾಸ ಮೊದಲಾದವುಗಳ ಆಧಾರದ ಮೇಲೆ ಇಂತಹ ಕಲಬೆರಕೆಗಳನ್ನು ಗುರುತಿಸುವುದು ಸಾಧ್ಯವಿಲ್ಲ ಯಾಕೆಂದರೆ ಈ ಕಲಬೆರಕೆಗಳನ್ನು ಅತ್ಯಂತ ಚಾತುರ್ಯದಿಂದ ಅಳವಡಿಸಲಾಗಿದೆ ಎನ್ನುತ್ತಾರೆ ಮಹಾಭಾರತದ ಸಂಪಾದನೆಯಲ್ಲಿ ಭಾಗವಹಿಸಿದ ಪ್ರತಾಪ ಚಂದ್ರ ರಾಯ್ ಅವರು.

ತಮಾಷೆ ಎಂದರೆ ಭೀಷ್ಮ ಪರ್ವದಲ್ಲಿ ಸ್ವತಃ ಕೃಷ್ಣನೇ ತಾನು ಉಪದೇಶಿಸಿದ ಗೀತೆಯನ್ನು ಅಶ್ವಮೇಧಿಕ ಪರ್ವದ ಹೊತ್ತಿಗೆ ಅಂದರೆ ಯುದ್ಧದ ನಂತರ ಯುಧಿಷ್ಠಿರ ಅಶ್ವಮೇಧ ಯಜ್ಞವನ್ನು ಮಾಡುವ ಹೊತ್ತಿಗೆ ಮರೆತುಬಿಟ್ಟಿದ್ದ. ಮಹಾಭಾರತದ ಅಶ್ವಮೇಧಿಕ ಪರ್ವದಲ್ಲಿ ಅರ್ಜುನ ಕೃಷ್ಣನಿಗೆ ಗೀತೆಯನ್ನು ಪುನಃ ಉಪದೇಶಿಸುವಂತೆ ಕೇಳಿದಾಗ ಕೃಷ್ಣ ’ಸ ಹಿ ಧಮಃ ಸುಪರ್ಯಾಪ್ತೋ ಬ್ರಹ್ಮಣಃ ಪದವೇದನೇ, ನ ಶಕ್ಯಂ ತನ್ಮಯಾ ಭೂಯಸ್ತಥಾ ವಕ್ತುಂ ಅಶೇಷತಃ’ ಎನ್ನುತ್ತಾನೆ. ತಾನು ಅದನ್ನು ಮರೆತುದಾಗಿಯೂ, ಆದುದರಿಂದ ಪುನರುಪದೇಶಿಸಲು ತನಗೆ ಸಾಧ್ಯವಿಲ್ಲ ಎಂದೂ ಹೇಳುತ್ತಾನೆ. ತಾನೇ ಉಪದೇಶಿಸಿದ ಗೀತೆಯನ್ನು ಸ್ವತಃ ಕೃಷ್ಣನೇ ಮರೆತಿದ್ದ ಎಂದ ಮೇಲೆ ಪಾಂಡವರ ಸ್ವರ್ಗಾರೋಹಣ ಆದ ಮೇಲೆ ಮಹಾಭಾರತವನ್ನು ಬರೆದವನಿಗೆ ಅದು ಹೇಗೆ ನೆನಪಿರಲು ಸಾಧ್ಯ? ಹಾಗಾದರೆ ಮೂಲ ಗೀತೆಯ ವಿಶ್ವಾಸಾರ್ಹತೆಯನ್ನು ಸ್ಥಾಪಿಸುವುದು ಹೇಗೆ?

ಹಾಗಾದರೆ ಯಾರು, ಯಾಕೆ ಮತ್ತು ಯಾವ್ಯಾವ ಶ್ಲೋಕಗಳನ್ನು ತೆಗೆದು ಹಾಕಿ ಯಾವ ಹೊಸ ಶ್ಲೋಕಗಳನ್ನು ಸೇರಿಸಿದ್ದಾರೆ ಎಂದು ಕಂಡುಕೊಳ್ಳುವುದು ಹೇಗೆ? ಕೃಷ್ಣ ಹೇಳಿದ ಶ್ಲೋಕಗಳಲ್ಲಿ 100 ಶ್ಲೋಕಗಳನ್ನು ತೆಗೆದು ಹಾಕಿ 54 ಹೊಸ ಶ್ಲೋಕಗಳನ್ನು ಸೇರಿಸಿದ್ದರೂ ಮೊತ್ತ ಅಷ್ಟೇ ಉಳಿಯುವುದರಿಂದ ಈಗ ಕೃಷ್ಣ ಹೇಳಿದ ಎನ್ನಲಾಗುವ 574 ಶ್ಲೋಕಗಳು ಮೂಲ ಗೀತೆಯಲ್ಲಿಯೂ ಇದ್ದವು, ಅವು ಕೃಷ್ಣನೇ ಹೇಳಿದ ಶ್ಲೋಕಗಳು ಎಂದು ಪ್ರಮಾಣೀಕರಿಸುವುದು ಹೇಗೆ?

ಹಿಂದೂ ಧರ್ಮ ಗ್ರಂಥಗಳಲ್ಲಿ ಹಿಗ್ಗಾಮುಗ್ಗಾ ಕಲಬೆರಕೆ ಮಾಡಿರುವುದನ್ನು ಮಹಾಭಾರತವೂ ಒಪ್ಪುತ್ತದೆ, ಮನುವೂ ಒಪ್ಪುತ್ತಾನೆ. ಯಜ್ಞಗಳಲ್ಲಿ ಹೆಂಡ, ಮೀನು, ಮಾಂಸ ಮೊದಲಾದವುಗಳಿಗೆ ಅವಕಾಶವಿಲ್ಲದಿದ್ದರೂ ಧೂರ್ತರು ಅವುಗಳ ಬಗ್ಗೆ ತಮಗಿರುವ ದುರಾಸೆಯಿಂದಾಗಿ ಅವುಗಳನ್ನು ಸೇರಿಸಿದ್ದಾರೆ ಎಂದು ಮಹಾಭಾರತ ಹೇಳುತ್ತದೆ. “ಸುರಾ ಮತ್ಸ್ಯಾ ಮಧು ಮಾಂಸಮಾಸವಂ ಕೃಸರೌದನಮ್, ಧೂತೈಃ ಪ್ರವರ್ತಿತ ಹ್ರೋತನ್ನೈತದ್ ವೇದೇಷು ಕಲ್ಪಿತಮ್, ಮಾನಾನ್ಮೋಹಾಚ್ಚ ಲೋಭಾಚ್ಚ ಲೌಲ್ಯಮೆತತ್ಪ್ರಕಲ್ಪಿತಮ” (ಮಹಾಭಾರತ, ಶಾಂತಿ ಪರ್ವ 264.9-10). ಮನುಸ್ಮೃತಿಯ 9ನೆಯ ಅಧ್ಯಾಯದ 66ನೆಯ ಶ್ಲೋಕ ಹೀಗೆ ಹೇಳುತ್ತದೆ: “ಅಯಂ ದ್ವಿಜೈರ್ಹಿ ವಿದ್ವದ್ಭಿಃ ಪಶುಧರ್ಮೋ ವಿಗರ್ಹಿತಃ, ಮನುಷ್ಯಾಣಾಮಪಿ ಪ್ರೊಕ್ತೋ ವೇನೇ ರಾಜ್ಯಂ ಪ್ರಶಾಸತಿ”, ಅಂದರೆ ವೇಣನೆಂಬ ರಾಜನು ರಾಜ್ಯಭಾರ ಮಾಡುತ್ತಿದ್ದಾಗ ಇಂತಹ ಮೃಗೀಯ ಆಚರಣೆಗಳನ್ನು ಅಜ್ಞಾನಿ ದ್ವಿಜರಿಂದ ಸೇರಿಸಲಾಯಿತು. ಯಜ್ಞದಂತಹ ಪವಿತ್ರ ಆಚರಣೆಯಲ್ಲಿಯೇ ಕಲಬೆರಕೆ ಮಾಡುವವರು ಇನ್ನು ಗ್ರಂಥಗಳನ್ನು ಬಿಟ್ಟಾರೆಯೇ?

ಇಂತಹ ಕಲಬೆರಕೆಗಳನ್ನು ಯಾರು ಮಾಡಲು ಸಾಧ್ಯ? ಹಾಗೆ ಮಾಡಲು ಮೊದಲನೆಯದಾಗಿ ಅವರಿಗೆ ಸಂಸ್ಕೃತ ಭಾಷೆಯ ಜ್ಞಾನವಿರಬೇಕು. ಎರಡನೆಯದಾಗಿ ಅವರು ಆ ಗ್ರಂಥಗಳ ಸ್ವಾಧೀನವನ್ನು ಪಡೆದಿರಬೇಕು. ಶೂದ್ರರಂತೂ ಮಾಡಿರಲಾರರು ಏಕೆಂದರೆ ಮನು ಸ್ಪಷ್ಟವಾಗಿಯೇ ದ್ವಿಜರನ್ನು ದೂಷಿಸುತ್ತಾನೆ. ಅಂಥವರು ಯಾರು ಎಂಬುದು ಓದುಗರ ಕಲ್ಪನೆಗೇ ಬಿಟ್ಟ ವಿಷಯ. ಆದರೆ ಜನಸಾಮಾನ್ಯರಿಗಿರುವ ಪ್ರಶ್ನೆ ಎಂದರೆ ಯಾವ ಶ್ಲೋಕಗಳನ್ನು ಪ್ರಾಮಾಣಿಕ ಎಂದು ಪರಿಗಣಿಸಿ ಅನುಸರಿಸಬೇಕು, ಆ ಶ್ಲೋಕಗಳು ಅನುಕರಣಯೋಗ್ಯವೇ ಎನ್ನುವುದು.

ಬಾಪು ಹೆದ್ದೂರಶೆಟ್ಟಿ

ಬಾಪು ಹೆದ್ದೂರಶೆಟ್ಟಿ
ವಕೀಲರು ಹಾಗೂ ಸಮಾಜವಾದಿ ಚಿಂತಕ-ಲೇಖಕ-ಚಳವಳಿಕಾರ. ’ಲೋಹಿಯಾ – ವ್ಯಕ್ತಿ ಮತ್ತು ವಿಚಾರ’, ’ಗಾಂಧಿ-ಅಂಬೇಡ್ಕರ್ ಮತ್ತು ಸಮಾಜವಾದ’, ’ಸಮಾಜವಾದ: ವಾದ-ವಿವಾದ’ ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...