Homeಮುಖಪುಟಜನರು ಮನರೇಗಾ ಕೆಲಸಕ್ಕಾಗಿ ಅಲೆಯುತ್ತಿದ್ದರೆ, ಪ್ರಧಾನಿ ಚುನಾವಣಾ ಪ್ರಚಾರದಲ್ಲಿ ಮುಳಗಿದ್ದಾರೆ: ಖರ್ಗೆ

ಜನರು ಮನರೇಗಾ ಕೆಲಸಕ್ಕಾಗಿ ಅಲೆಯುತ್ತಿದ್ದರೆ, ಪ್ರಧಾನಿ ಚುನಾವಣಾ ಪ್ರಚಾರದಲ್ಲಿ ಮುಳಗಿದ್ದಾರೆ: ಖರ್ಗೆ

- Advertisement -
- Advertisement -

ಗ್ರಾಮೀಣ ಭಾರತದಲ್ಲಿ ಜನರು ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ಅಲೆಯುತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಚುನಾವಣೆ ನಡೆಯಲಿರುವ ರಾಜ್ಯಗಳ ಪ್ರವಾಸದ ವೇಳೆ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತ ತಮ್ಮ ವೈಫಲ್ಯವನ್ನು ಮರೆಮಾಚುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಆರೋಪಿಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆ, ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆ ವಿಷಯಕ್ಕೆ ಸಂಬಂಧಿಸಿದಂತೆ ಅಶೋಕ್ ಗೆಹಲೋತ್ ನೇತೃತ್ವದ ರಾಜಸ್ಥಾನ ಸರ್ಕಾರದ ವಿರುದ್ಧ ಗುರುವಾರ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಖರ್ಗೆ ಈ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಖರ್ಗೆ ಅವರು, ”ಪ್ರಧಾನಿಯವರು ಕಾಂಗ್ರೆಸ್ ಪಕ್ಷವನ್ನು ಮನಸೋ ಇಚ್ಚೆ ಟೀಕಿಸಲಿ, ಆದರೆ, ಬಡಜನರ ಹಕ್ಕುಗಳನ್ನು ಕಸಿದುಕೊಳ್ಳಬಾರದು. ‘ಆದಾಯ ಕಡಿಮೆಯಾಗಿ ಹಣದುಬ್ಬರ ಏರಿಕೆಯಾಗಿರುವ ಕಾರಣ ಬಡ ಜನರು ಕೆಲಸಕ್ಕಾಗಿ ಅಲೆಯುತ್ತಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ) ಕೆಲಸ ನೀಡಿ ಎಂಬ ಬೇಡಿಕೆ ಹೆಚ್ಚುತ್ತಿದೆ. ಆದರೆ, ಬಜೆಟ್‌ನಲ್ಲಿ ಅದಕ್ಕೆ ಮೀಸಲಿಡುವ ಅನುದಾನವನ್ನು ಕಡಿತ ಮಾಡಲಾಗಿದೆ” ಎಂದು ಆರೋಪಿಸಿದರು.

”ಗ್ರಾಮೀಣ ಭಾಗದಲ್ಲಿ ಆರ್ಥಿಕ ಬಿಕ್ಕಟ್ಟು ಹೆಚ್ಚಾಗಿದೆ. ಹೀಗಾಗಿ ಸೆಪ್ಟೆಂಬರ್‌ನಲ್ಲಿ ಮನರೇಗಾ ಯೋಜನೆಯ ಬೇಡಿಕೆ ಶೇ 30ರಷ್ಟು ಹೆಚ್ಚಾಗಿದೆ. ಪರಿಸ್ಥಿತಿ ಹೀಗಿರುವಾಗ ಮನರೇಗಾ ಅನುದಾನ ಶೇ 4ರಷ್ಟು ಮಾತ್ರ ಬಾಕಿ ಉಳಿದಿದೆ. ಈ ವಿಷಯದಲ್ಲಿ ಕ್ರಮ ಕೈಗೊಳ್ಳುವುದು ಬಿಟ್ಟು ಪ್ರಧಾನಿ ಮೋದಿ ಅವರು ಚುನಾವಣಾ ರಾಜ್ಯಗಳಲ್ಲಿ ಕಾಂಗ್ರೆಸ್‌ ಗೆ ಶಾಪ ಹಾಕುತ್ತಿದ್ದಾರೆ, ತಮ್ಮ ಭಾಷಣದ ಮೂಲಕ ತಮ್ಮ ವೈಫಲ್ಯವನ್ನು ಮುಚ್ಚಿ ಹಾಕುತ್ತಿದ್ದಾರೆ” ಎಂದು ಹೇಳಿದ್ದಾರೆ.

2023ರ ಬಜೆಟ್‌ನಲ್ಲಿ ಮೋದಿ ಸರ್ಕಾರವು ಮನರೇಗಾ ಯೋಜನೆಗೆ ಮೀಸಲಿಟ್ಟ ಅನುದಾನದ ಪ್ರಕಾರ ಶೇ 33ರಷ್ಟನ್ನು ಕಡಿತ ಮಾಡಿದೆ ಎನ್ನುವುದು ಈ ದೇಶದ ಜನರಿಗೆ ನೆನಪಿದೆ” ಎಂದು ಹೇಳಿದರು.

ಇದನ್ನೂ ಓದಿ: ಪೋಸ್ಟರ್ ವಾರ್: ರಾಹುಲ್‌ಗೆ ರಾವಣ ಎಂದ ಬಿಜೆಪಿ; ‘ಮೋದಿ ಸುಳ್ಳುಗಾರ’- ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು...

ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು...

‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ...

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...