Homeಮುಖಪುಟಮಣಿಪುರ ವಿಚಾರದಲ್ಲಿ ರಾಹುಲ್ ಹೃದಯದಿಂದ ಮಾತನಾಡಿದರೆ, ಶಾ ರಾಜಕೀಯವಾಗಿ ಮಾತನಾಡಿದ್ದಾರೆ: ಟಿಎಂಸಿ ಸಂಸದ

ಮಣಿಪುರ ವಿಚಾರದಲ್ಲಿ ರಾಹುಲ್ ಹೃದಯದಿಂದ ಮಾತನಾಡಿದರೆ, ಶಾ ರಾಜಕೀಯವಾಗಿ ಮಾತನಾಡಿದ್ದಾರೆ: ಟಿಎಂಸಿ ಸಂಸದ

- Advertisement -
- Advertisement -

ಬುಧವಾರ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಮಣಿಪುರ ಹಿಂಸಾಚಾರದ ವಿಚಾರದಲ್ಲಿ ನೇರವಾಗಿ ಹೃದಯದಿಂದ ಮಾತನಾಡಿದ್ದಾರೆ. ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ರಾಜಕೀಯವಾಗಿ ಮಾತನಾಡಿದ್ದಾರೆ ಎಂದು ಶೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಹೇಳಿದೆ.

ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗಿಯಾದ ರಾಹುಲ್, ”ಕೇಂದ್ರ ಸರ್ಕಾರವು ಮಣಿಪುರ ಹಿಂಸಾಚಾರ ತಡೆಗೆ ನಿರ್ಲಕ್ಷ್ಯ ವಹಿಸಿದೆ ಎಂದು ಕಿಡಿಕಾರಿದ್ದಾರೆ.

”ನನ್ನ ತಾಯಿ (ಸೋನಿಯಾ ಗಾಂಧಿ) ಸದನದಲ್ಲಿ ಕುಳಿತಿದ್ದಾರೆ. ಬಿಜೆಪಿಯ ರಾಜಕೀಯದಿಂದ ಮಣಿಪುರದಲ್ಲಿ ನನ್ನ ಮತ್ತೊಬ್ಬ ತಾಯಿಯಾದ ಭಾರತ ಮಾತೆಗೆ ಕಲೆಯಾಗಿದೆ. ಅಲ್ಲಿ ಭಾರತದ ಧ್ವನಿಯೂ ಅಡಗಿದೆ. ನೀವು ನಿಜವಾದ ದೇಶಭಕ್ತರಲ್ಲ, ದೇಶದ್ರೋಹಿಗಳು” ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಬಗ್ಗೆ ಮಾತನಾಡಿರುವ ಟಿಎಂಸಿ ಸಂಸದ ಸೌಗತಾ ಥಾಯ್, ”ರಾಹುಲ್ ಗಾಂಧಿ ಅವರು ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ, ಪ್ರಸ್ತಾಪಿಸಿದ್ದಾರೆ ಮಣಿಪುರ ಪರಿಸ್ಥಿತಿಯ ಬಗ್ಗೆ ಹೃದಯದಿಂದ ಮಾತನಾಡಿದ್ದಾರೆ. ಇಡೀ ದೇಶದ ಭಾವನೆಯೂ ಅದೇ ಆಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬುದನ್ನು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ” ಎಂದಿದ್ದಾರೆ.

”ಕೇಂದ್ರ ಸರ್ಕಾರವು ಮಣಿಪುರಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ. ಆದರೆ ಆ ವಿಚಾರವನ್ನು ರಾಹುಲ್ ಗಾಂಧಿ ಅವರು ಸೂಕ್ತ ರೀತಿಯಲ್ಲಿ ಪ್ರಸ್ತಾಪಿಸಿದ್ದಾರೆ” ಎಂದು ಹೇಳಿದ್ದಾರೆ.

”ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಮಣಿಪುರ ವಿಚಾರವಾಗಿ ಸಮರ್ಪಕವಾಗಿ ಧ್ವನಿ ಎತ್ತಿದ್ದಾರೆ. ಸಂಸತ್ತಿನಲ್ಲಿ ಈ ವಿಚಾರವನ್ನು ಚರ್ಚೆ ನಡೆಸುವುದು ಕೇಂದ್ರ ಸರ್ಕಾರಕ್ಕೆ ಇಷ್ಟವಿಲ್ಲ. ಆದರೆ, ಅವಿಶ್ವಾಸ ನಿರ್ಣಯದ ಮೂಲಕ ಈ ಬಗ್ಗೆ ಮಾತನಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು. ರಾಹುಲ್ ಗಾಂಧಿ ಯಾವೆಲ್ಲ, ವಿಚಾರಗಳನ್ನು ಹೇಳಿದ್ದಾರೋ ಅವೆಲ್ಲವೂ ಸರಿಯಾಗಿಯೇ ಇವೆ. ಅವರು ಮಣಿಪುರದಲ್ಲಿ ಅನ್ಯಾಯ ನಡೆಯುತ್ತಿರುವುದನ್ನು ಎತ್ತಿ ತೋರಿಸಿದ್ದಾರೆ” ಎಂದು ಸೌಗತಾ ಥಾಯ್ ಅವರು ಅಭಿಪ್ರಾಯಪಟ್ಟಿದ್ದಾರೆ.

”ಇನ್ನೂ ಅಮಿತ್ ಶಾ ಮಾಡಿದ ಭಾಷಣವು ಕೇಂದ್ರ ಸರ್ಕಾರದ ಅಸಮರ್ಥತೆಯನ್ನು ಸಮರ್ಥಿಸಿಕೊಳ್ಳುವ ರಾಜಕೀಯ ಭಾಷಣವಾಗಿತ್ತು” ಎಂದು ರಾಯ್ ಆರೋಪಿಸಿದ್ದಾರೆ.

”ಅಮಿತ್ ಶಾ ಅವರು ರಾಜಕೀಯ ಹೇಳಿಕೆಯನ್ನು ನೀಡಿದ್ದಾರೆ. ವಿರೋಧ ಪಕ್ಷಗಳನ್ನು ತೆಗಳುವ ಮೂಲಕ ಕೇಂದ್ರ ಸರ್ಕಾರದ ಜವಾಬ್ದಾರಿಗಳಿಂದ ಪಲಾಯನ ಮಾಡಲು ಮತ್ತು ಕೇಂದ್ರದ ವೈಫಲ್ಯಗಳನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಕೇಂದ್ರದ ನೀತಿಯಿಂದಾಗಿ ಮಣಿಪುರ ಹೊತ್ತಿ ಉರಿಯುತ್ತಿದೆ” ಎಂದು ಕಿಡಿಕಾರಿದ್ದಾರೆ.

ಮೇ 3ರಂದು ಹಿಂಸಾಚಾರ ಆರಂಭವಾದ ಬಳಿಕ ಮಣಿಪುರದಲ್ಲಿ ಈವರೆಗೂ 180ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ರಾಹುಲ್ ‘ಫ್ಲೈಯಿಂಗ್ ಕಿಸ್’ ವಿಚಾರ: ಬಿಜೆಪಿಯವರಿಗೆ ದ್ವೇಷವೇ ಅಭ್ಯಾಸವಾಗಿರುವಾಗ, ಪ್ರೀತಿ ಸ್ವೀಕರಿಸಲು ಸಾಧ್ಯವಿಲ್ಲ ಎಂದ ಶಿವಸೇನೆ ಸಂಸದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...