Homeಮುಖಪುಟಮಣಿಪುರ ವಿಚಾರದಲ್ಲಿ ರಾಹುಲ್ ಹೃದಯದಿಂದ ಮಾತನಾಡಿದರೆ, ಶಾ ರಾಜಕೀಯವಾಗಿ ಮಾತನಾಡಿದ್ದಾರೆ: ಟಿಎಂಸಿ ಸಂಸದ

ಮಣಿಪುರ ವಿಚಾರದಲ್ಲಿ ರಾಹುಲ್ ಹೃದಯದಿಂದ ಮಾತನಾಡಿದರೆ, ಶಾ ರಾಜಕೀಯವಾಗಿ ಮಾತನಾಡಿದ್ದಾರೆ: ಟಿಎಂಸಿ ಸಂಸದ

- Advertisement -
- Advertisement -

ಬುಧವಾರ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಮಣಿಪುರ ಹಿಂಸಾಚಾರದ ವಿಚಾರದಲ್ಲಿ ನೇರವಾಗಿ ಹೃದಯದಿಂದ ಮಾತನಾಡಿದ್ದಾರೆ. ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ರಾಜಕೀಯವಾಗಿ ಮಾತನಾಡಿದ್ದಾರೆ ಎಂದು ಶೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಹೇಳಿದೆ.

ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗಿಯಾದ ರಾಹುಲ್, ”ಕೇಂದ್ರ ಸರ್ಕಾರವು ಮಣಿಪುರ ಹಿಂಸಾಚಾರ ತಡೆಗೆ ನಿರ್ಲಕ್ಷ್ಯ ವಹಿಸಿದೆ ಎಂದು ಕಿಡಿಕಾರಿದ್ದಾರೆ.

”ನನ್ನ ತಾಯಿ (ಸೋನಿಯಾ ಗಾಂಧಿ) ಸದನದಲ್ಲಿ ಕುಳಿತಿದ್ದಾರೆ. ಬಿಜೆಪಿಯ ರಾಜಕೀಯದಿಂದ ಮಣಿಪುರದಲ್ಲಿ ನನ್ನ ಮತ್ತೊಬ್ಬ ತಾಯಿಯಾದ ಭಾರತ ಮಾತೆಗೆ ಕಲೆಯಾಗಿದೆ. ಅಲ್ಲಿ ಭಾರತದ ಧ್ವನಿಯೂ ಅಡಗಿದೆ. ನೀವು ನಿಜವಾದ ದೇಶಭಕ್ತರಲ್ಲ, ದೇಶದ್ರೋಹಿಗಳು” ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಬಗ್ಗೆ ಮಾತನಾಡಿರುವ ಟಿಎಂಸಿ ಸಂಸದ ಸೌಗತಾ ಥಾಯ್, ”ರಾಹುಲ್ ಗಾಂಧಿ ಅವರು ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ, ಪ್ರಸ್ತಾಪಿಸಿದ್ದಾರೆ ಮಣಿಪುರ ಪರಿಸ್ಥಿತಿಯ ಬಗ್ಗೆ ಹೃದಯದಿಂದ ಮಾತನಾಡಿದ್ದಾರೆ. ಇಡೀ ದೇಶದ ಭಾವನೆಯೂ ಅದೇ ಆಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬುದನ್ನು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ” ಎಂದಿದ್ದಾರೆ.

”ಕೇಂದ್ರ ಸರ್ಕಾರವು ಮಣಿಪುರಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ. ಆದರೆ ಆ ವಿಚಾರವನ್ನು ರಾಹುಲ್ ಗಾಂಧಿ ಅವರು ಸೂಕ್ತ ರೀತಿಯಲ್ಲಿ ಪ್ರಸ್ತಾಪಿಸಿದ್ದಾರೆ” ಎಂದು ಹೇಳಿದ್ದಾರೆ.

”ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಮಣಿಪುರ ವಿಚಾರವಾಗಿ ಸಮರ್ಪಕವಾಗಿ ಧ್ವನಿ ಎತ್ತಿದ್ದಾರೆ. ಸಂಸತ್ತಿನಲ್ಲಿ ಈ ವಿಚಾರವನ್ನು ಚರ್ಚೆ ನಡೆಸುವುದು ಕೇಂದ್ರ ಸರ್ಕಾರಕ್ಕೆ ಇಷ್ಟವಿಲ್ಲ. ಆದರೆ, ಅವಿಶ್ವಾಸ ನಿರ್ಣಯದ ಮೂಲಕ ಈ ಬಗ್ಗೆ ಮಾತನಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು. ರಾಹುಲ್ ಗಾಂಧಿ ಯಾವೆಲ್ಲ, ವಿಚಾರಗಳನ್ನು ಹೇಳಿದ್ದಾರೋ ಅವೆಲ್ಲವೂ ಸರಿಯಾಗಿಯೇ ಇವೆ. ಅವರು ಮಣಿಪುರದಲ್ಲಿ ಅನ್ಯಾಯ ನಡೆಯುತ್ತಿರುವುದನ್ನು ಎತ್ತಿ ತೋರಿಸಿದ್ದಾರೆ” ಎಂದು ಸೌಗತಾ ಥಾಯ್ ಅವರು ಅಭಿಪ್ರಾಯಪಟ್ಟಿದ್ದಾರೆ.

”ಇನ್ನೂ ಅಮಿತ್ ಶಾ ಮಾಡಿದ ಭಾಷಣವು ಕೇಂದ್ರ ಸರ್ಕಾರದ ಅಸಮರ್ಥತೆಯನ್ನು ಸಮರ್ಥಿಸಿಕೊಳ್ಳುವ ರಾಜಕೀಯ ಭಾಷಣವಾಗಿತ್ತು” ಎಂದು ರಾಯ್ ಆರೋಪಿಸಿದ್ದಾರೆ.

”ಅಮಿತ್ ಶಾ ಅವರು ರಾಜಕೀಯ ಹೇಳಿಕೆಯನ್ನು ನೀಡಿದ್ದಾರೆ. ವಿರೋಧ ಪಕ್ಷಗಳನ್ನು ತೆಗಳುವ ಮೂಲಕ ಕೇಂದ್ರ ಸರ್ಕಾರದ ಜವಾಬ್ದಾರಿಗಳಿಂದ ಪಲಾಯನ ಮಾಡಲು ಮತ್ತು ಕೇಂದ್ರದ ವೈಫಲ್ಯಗಳನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಕೇಂದ್ರದ ನೀತಿಯಿಂದಾಗಿ ಮಣಿಪುರ ಹೊತ್ತಿ ಉರಿಯುತ್ತಿದೆ” ಎಂದು ಕಿಡಿಕಾರಿದ್ದಾರೆ.

ಮೇ 3ರಂದು ಹಿಂಸಾಚಾರ ಆರಂಭವಾದ ಬಳಿಕ ಮಣಿಪುರದಲ್ಲಿ ಈವರೆಗೂ 180ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ರಾಹುಲ್ ‘ಫ್ಲೈಯಿಂಗ್ ಕಿಸ್’ ವಿಚಾರ: ಬಿಜೆಪಿಯವರಿಗೆ ದ್ವೇಷವೇ ಅಭ್ಯಾಸವಾಗಿರುವಾಗ, ಪ್ರೀತಿ ಸ್ವೀಕರಿಸಲು ಸಾಧ್ಯವಿಲ್ಲ ಎಂದ ಶಿವಸೇನೆ ಸಂಸದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...