Homeಮುಖಪುಟಮಣಿಪುರ ವಿಚಾರದಲ್ಲಿ ರಾಹುಲ್ ಹೃದಯದಿಂದ ಮಾತನಾಡಿದರೆ, ಶಾ ರಾಜಕೀಯವಾಗಿ ಮಾತನಾಡಿದ್ದಾರೆ: ಟಿಎಂಸಿ ಸಂಸದ

ಮಣಿಪುರ ವಿಚಾರದಲ್ಲಿ ರಾಹುಲ್ ಹೃದಯದಿಂದ ಮಾತನಾಡಿದರೆ, ಶಾ ರಾಜಕೀಯವಾಗಿ ಮಾತನಾಡಿದ್ದಾರೆ: ಟಿಎಂಸಿ ಸಂಸದ

- Advertisement -
- Advertisement -

ಬುಧವಾರ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಮಣಿಪುರ ಹಿಂಸಾಚಾರದ ವಿಚಾರದಲ್ಲಿ ನೇರವಾಗಿ ಹೃದಯದಿಂದ ಮಾತನಾಡಿದ್ದಾರೆ. ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ರಾಜಕೀಯವಾಗಿ ಮಾತನಾಡಿದ್ದಾರೆ ಎಂದು ಶೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಹೇಳಿದೆ.

ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗಿಯಾದ ರಾಹುಲ್, ”ಕೇಂದ್ರ ಸರ್ಕಾರವು ಮಣಿಪುರ ಹಿಂಸಾಚಾರ ತಡೆಗೆ ನಿರ್ಲಕ್ಷ್ಯ ವಹಿಸಿದೆ ಎಂದು ಕಿಡಿಕಾರಿದ್ದಾರೆ.

”ನನ್ನ ತಾಯಿ (ಸೋನಿಯಾ ಗಾಂಧಿ) ಸದನದಲ್ಲಿ ಕುಳಿತಿದ್ದಾರೆ. ಬಿಜೆಪಿಯ ರಾಜಕೀಯದಿಂದ ಮಣಿಪುರದಲ್ಲಿ ನನ್ನ ಮತ್ತೊಬ್ಬ ತಾಯಿಯಾದ ಭಾರತ ಮಾತೆಗೆ ಕಲೆಯಾಗಿದೆ. ಅಲ್ಲಿ ಭಾರತದ ಧ್ವನಿಯೂ ಅಡಗಿದೆ. ನೀವು ನಿಜವಾದ ದೇಶಭಕ್ತರಲ್ಲ, ದೇಶದ್ರೋಹಿಗಳು” ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಬಗ್ಗೆ ಮಾತನಾಡಿರುವ ಟಿಎಂಸಿ ಸಂಸದ ಸೌಗತಾ ಥಾಯ್, ”ರಾಹುಲ್ ಗಾಂಧಿ ಅವರು ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ, ಪ್ರಸ್ತಾಪಿಸಿದ್ದಾರೆ ಮಣಿಪುರ ಪರಿಸ್ಥಿತಿಯ ಬಗ್ಗೆ ಹೃದಯದಿಂದ ಮಾತನಾಡಿದ್ದಾರೆ. ಇಡೀ ದೇಶದ ಭಾವನೆಯೂ ಅದೇ ಆಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬುದನ್ನು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ” ಎಂದಿದ್ದಾರೆ.

”ಕೇಂದ್ರ ಸರ್ಕಾರವು ಮಣಿಪುರಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ. ಆದರೆ ಆ ವಿಚಾರವನ್ನು ರಾಹುಲ್ ಗಾಂಧಿ ಅವರು ಸೂಕ್ತ ರೀತಿಯಲ್ಲಿ ಪ್ರಸ್ತಾಪಿಸಿದ್ದಾರೆ” ಎಂದು ಹೇಳಿದ್ದಾರೆ.

”ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಮಣಿಪುರ ವಿಚಾರವಾಗಿ ಸಮರ್ಪಕವಾಗಿ ಧ್ವನಿ ಎತ್ತಿದ್ದಾರೆ. ಸಂಸತ್ತಿನಲ್ಲಿ ಈ ವಿಚಾರವನ್ನು ಚರ್ಚೆ ನಡೆಸುವುದು ಕೇಂದ್ರ ಸರ್ಕಾರಕ್ಕೆ ಇಷ್ಟವಿಲ್ಲ. ಆದರೆ, ಅವಿಶ್ವಾಸ ನಿರ್ಣಯದ ಮೂಲಕ ಈ ಬಗ್ಗೆ ಮಾತನಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು. ರಾಹುಲ್ ಗಾಂಧಿ ಯಾವೆಲ್ಲ, ವಿಚಾರಗಳನ್ನು ಹೇಳಿದ್ದಾರೋ ಅವೆಲ್ಲವೂ ಸರಿಯಾಗಿಯೇ ಇವೆ. ಅವರು ಮಣಿಪುರದಲ್ಲಿ ಅನ್ಯಾಯ ನಡೆಯುತ್ತಿರುವುದನ್ನು ಎತ್ತಿ ತೋರಿಸಿದ್ದಾರೆ” ಎಂದು ಸೌಗತಾ ಥಾಯ್ ಅವರು ಅಭಿಪ್ರಾಯಪಟ್ಟಿದ್ದಾರೆ.

”ಇನ್ನೂ ಅಮಿತ್ ಶಾ ಮಾಡಿದ ಭಾಷಣವು ಕೇಂದ್ರ ಸರ್ಕಾರದ ಅಸಮರ್ಥತೆಯನ್ನು ಸಮರ್ಥಿಸಿಕೊಳ್ಳುವ ರಾಜಕೀಯ ಭಾಷಣವಾಗಿತ್ತು” ಎಂದು ರಾಯ್ ಆರೋಪಿಸಿದ್ದಾರೆ.

”ಅಮಿತ್ ಶಾ ಅವರು ರಾಜಕೀಯ ಹೇಳಿಕೆಯನ್ನು ನೀಡಿದ್ದಾರೆ. ವಿರೋಧ ಪಕ್ಷಗಳನ್ನು ತೆಗಳುವ ಮೂಲಕ ಕೇಂದ್ರ ಸರ್ಕಾರದ ಜವಾಬ್ದಾರಿಗಳಿಂದ ಪಲಾಯನ ಮಾಡಲು ಮತ್ತು ಕೇಂದ್ರದ ವೈಫಲ್ಯಗಳನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಕೇಂದ್ರದ ನೀತಿಯಿಂದಾಗಿ ಮಣಿಪುರ ಹೊತ್ತಿ ಉರಿಯುತ್ತಿದೆ” ಎಂದು ಕಿಡಿಕಾರಿದ್ದಾರೆ.

ಮೇ 3ರಂದು ಹಿಂಸಾಚಾರ ಆರಂಭವಾದ ಬಳಿಕ ಮಣಿಪುರದಲ್ಲಿ ಈವರೆಗೂ 180ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ರಾಹುಲ್ ‘ಫ್ಲೈಯಿಂಗ್ ಕಿಸ್’ ವಿಚಾರ: ಬಿಜೆಪಿಯವರಿಗೆ ದ್ವೇಷವೇ ಅಭ್ಯಾಸವಾಗಿರುವಾಗ, ಪ್ರೀತಿ ಸ್ವೀಕರಿಸಲು ಸಾಧ್ಯವಿಲ್ಲ ಎಂದ ಶಿವಸೇನೆ ಸಂಸದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...