Homeಮುಖಪುಟಮಣಿಪುರ ವಿಚಾರದಲ್ಲಿ ರಾಹುಲ್ ಹೃದಯದಿಂದ ಮಾತನಾಡಿದರೆ, ಶಾ ರಾಜಕೀಯವಾಗಿ ಮಾತನಾಡಿದ್ದಾರೆ: ಟಿಎಂಸಿ ಸಂಸದ

ಮಣಿಪುರ ವಿಚಾರದಲ್ಲಿ ರಾಹುಲ್ ಹೃದಯದಿಂದ ಮಾತನಾಡಿದರೆ, ಶಾ ರಾಜಕೀಯವಾಗಿ ಮಾತನಾಡಿದ್ದಾರೆ: ಟಿಎಂಸಿ ಸಂಸದ

- Advertisement -
- Advertisement -

ಬುಧವಾರ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಮಣಿಪುರ ಹಿಂಸಾಚಾರದ ವಿಚಾರದಲ್ಲಿ ನೇರವಾಗಿ ಹೃದಯದಿಂದ ಮಾತನಾಡಿದ್ದಾರೆ. ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ರಾಜಕೀಯವಾಗಿ ಮಾತನಾಡಿದ್ದಾರೆ ಎಂದು ಶೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಹೇಳಿದೆ.

ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗಿಯಾದ ರಾಹುಲ್, ”ಕೇಂದ್ರ ಸರ್ಕಾರವು ಮಣಿಪುರ ಹಿಂಸಾಚಾರ ತಡೆಗೆ ನಿರ್ಲಕ್ಷ್ಯ ವಹಿಸಿದೆ ಎಂದು ಕಿಡಿಕಾರಿದ್ದಾರೆ.

”ನನ್ನ ತಾಯಿ (ಸೋನಿಯಾ ಗಾಂಧಿ) ಸದನದಲ್ಲಿ ಕುಳಿತಿದ್ದಾರೆ. ಬಿಜೆಪಿಯ ರಾಜಕೀಯದಿಂದ ಮಣಿಪುರದಲ್ಲಿ ನನ್ನ ಮತ್ತೊಬ್ಬ ತಾಯಿಯಾದ ಭಾರತ ಮಾತೆಗೆ ಕಲೆಯಾಗಿದೆ. ಅಲ್ಲಿ ಭಾರತದ ಧ್ವನಿಯೂ ಅಡಗಿದೆ. ನೀವು ನಿಜವಾದ ದೇಶಭಕ್ತರಲ್ಲ, ದೇಶದ್ರೋಹಿಗಳು” ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಬಗ್ಗೆ ಮಾತನಾಡಿರುವ ಟಿಎಂಸಿ ಸಂಸದ ಸೌಗತಾ ಥಾಯ್, ”ರಾಹುಲ್ ಗಾಂಧಿ ಅವರು ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ, ಪ್ರಸ್ತಾಪಿಸಿದ್ದಾರೆ ಮಣಿಪುರ ಪರಿಸ್ಥಿತಿಯ ಬಗ್ಗೆ ಹೃದಯದಿಂದ ಮಾತನಾಡಿದ್ದಾರೆ. ಇಡೀ ದೇಶದ ಭಾವನೆಯೂ ಅದೇ ಆಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂಬುದನ್ನು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ” ಎಂದಿದ್ದಾರೆ.

”ಕೇಂದ್ರ ಸರ್ಕಾರವು ಮಣಿಪುರಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ. ಆದರೆ ಆ ವಿಚಾರವನ್ನು ರಾಹುಲ್ ಗಾಂಧಿ ಅವರು ಸೂಕ್ತ ರೀತಿಯಲ್ಲಿ ಪ್ರಸ್ತಾಪಿಸಿದ್ದಾರೆ” ಎಂದು ಹೇಳಿದ್ದಾರೆ.

”ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಮಣಿಪುರ ವಿಚಾರವಾಗಿ ಸಮರ್ಪಕವಾಗಿ ಧ್ವನಿ ಎತ್ತಿದ್ದಾರೆ. ಸಂಸತ್ತಿನಲ್ಲಿ ಈ ವಿಚಾರವನ್ನು ಚರ್ಚೆ ನಡೆಸುವುದು ಕೇಂದ್ರ ಸರ್ಕಾರಕ್ಕೆ ಇಷ್ಟವಿಲ್ಲ. ಆದರೆ, ಅವಿಶ್ವಾಸ ನಿರ್ಣಯದ ಮೂಲಕ ಈ ಬಗ್ಗೆ ಮಾತನಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು. ರಾಹುಲ್ ಗಾಂಧಿ ಯಾವೆಲ್ಲ, ವಿಚಾರಗಳನ್ನು ಹೇಳಿದ್ದಾರೋ ಅವೆಲ್ಲವೂ ಸರಿಯಾಗಿಯೇ ಇವೆ. ಅವರು ಮಣಿಪುರದಲ್ಲಿ ಅನ್ಯಾಯ ನಡೆಯುತ್ತಿರುವುದನ್ನು ಎತ್ತಿ ತೋರಿಸಿದ್ದಾರೆ” ಎಂದು ಸೌಗತಾ ಥಾಯ್ ಅವರು ಅಭಿಪ್ರಾಯಪಟ್ಟಿದ್ದಾರೆ.

”ಇನ್ನೂ ಅಮಿತ್ ಶಾ ಮಾಡಿದ ಭಾಷಣವು ಕೇಂದ್ರ ಸರ್ಕಾರದ ಅಸಮರ್ಥತೆಯನ್ನು ಸಮರ್ಥಿಸಿಕೊಳ್ಳುವ ರಾಜಕೀಯ ಭಾಷಣವಾಗಿತ್ತು” ಎಂದು ರಾಯ್ ಆರೋಪಿಸಿದ್ದಾರೆ.

”ಅಮಿತ್ ಶಾ ಅವರು ರಾಜಕೀಯ ಹೇಳಿಕೆಯನ್ನು ನೀಡಿದ್ದಾರೆ. ವಿರೋಧ ಪಕ್ಷಗಳನ್ನು ತೆಗಳುವ ಮೂಲಕ ಕೇಂದ್ರ ಸರ್ಕಾರದ ಜವಾಬ್ದಾರಿಗಳಿಂದ ಪಲಾಯನ ಮಾಡಲು ಮತ್ತು ಕೇಂದ್ರದ ವೈಫಲ್ಯಗಳನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಕೇಂದ್ರದ ನೀತಿಯಿಂದಾಗಿ ಮಣಿಪುರ ಹೊತ್ತಿ ಉರಿಯುತ್ತಿದೆ” ಎಂದು ಕಿಡಿಕಾರಿದ್ದಾರೆ.

ಮೇ 3ರಂದು ಹಿಂಸಾಚಾರ ಆರಂಭವಾದ ಬಳಿಕ ಮಣಿಪುರದಲ್ಲಿ ಈವರೆಗೂ 180ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ರಾಹುಲ್ ‘ಫ್ಲೈಯಿಂಗ್ ಕಿಸ್’ ವಿಚಾರ: ಬಿಜೆಪಿಯವರಿಗೆ ದ್ವೇಷವೇ ಅಭ್ಯಾಸವಾಗಿರುವಾಗ, ಪ್ರೀತಿ ಸ್ವೀಕರಿಸಲು ಸಾಧ್ಯವಿಲ್ಲ ಎಂದ ಶಿವಸೇನೆ ಸಂಸದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...