Homeಅಂಕಣಗಳುಜ್ಯೋತಿಷ್ಯಿಯ ಮಾತು ಕೇಳಿ ತನ್ನ ಮಗನ ಕೊಂದ ಪಾಪಿ ! ಇತ್ಯಾದಿ…

ಜ್ಯೋತಿಷ್ಯಿಯ ಮಾತು ಕೇಳಿ ತನ್ನ ಮಗನ ಕೊಂದ ಪಾಪಿ ! ಇತ್ಯಾದಿ…

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಜ್ಯೋತಿಷ್ಯಿಯ ಮಾತು ಕೇಳಿಕೊಂಡು ಚಿಕ್ಕಮಗಳೂರು ಜಿಲ್ಲೆಯ ಬೂಚೇನಹಳ್ಳಿಯ ಯುವಕನೊಬ್ಬ ತನಗೆ ಹುಟ್ಟಿದ ಹೆಣ್ಣು ಮಗುವನ್ನು ಕತ್ತು ಹಿಸುಕಿ ಸಾಯಿಸಿದ ಘಟನೆ ಮನುಷ್ಯ ಸಮಾನವನ್ನು ಬೆಚ್ಚಿ ಬೀಳಿಸಿದೆ. ದಿನ ಬೆಳಗಾದರೆ ಟಿ.ವಿ.ಯಲ್ಲಿ ಒಕ್ಕರಿಸಿ ಕನ್ನಡ ನಾಡಿನ ಜನಗಳ ಬುದ್ಧಿಯ ಮೇಲೆ ಕಲ್ಲು ಚಪ್ಪಡಿ ಎಳೆಯುವ ಜ್ಯೋತಿಷ್ಯಿಗಾರರ ಕಾಟ ಅತಿಯಾಯಿತು ಎನ್ನದೆ ವಿಧಿ ಇಲ್ಲವಾಗಿದೆ. ಯಾರು , ಜ್ಯೋತಿಷ್ಯ, ಭವಿಷ್ಯ, ವಾಸ್ತುಗಳನ್ನು ನಂಬುತ್ತಾರೋ ಮೊದಲು ಅವರನ್ನು ಮಾನಸಿಕ ತಜ್ಞರ ಹತ್ತಿರ ಕರೆದುಕೊಂಡು ಹೋಗಿ ಎಂಬ ಸ್ವಾಮಿ ವಿವೇಕಾನಂದರ ಮಾತು ಇಂದು ಹೆಚ್ಚು ಪ್ರಸ್ತುತವೆನಿಸುತ್ತಿದೆ.

ಪ್ರತಿಯೊಬ್ಬರ ಬದುಕಿನಲ್ಲಿ ಬರಬಹುದಾದ ಸಂಕಟ ನೋವುಗಳಿಗೆ ಜ್ಯೋತಿಷ್ಯ ಪರಿಹಾರ ಅಲ್ಲವೇ ಅಲ್ಲ. ಯಾರೋ ಒಬ್ಬ ಮಾಂತ್ರಿಕ ಶಕ್ತಿ ಹೊಂದಿದ್ದೇನೆಂದು ಎಲ್ಲರ ನಂಬಿಸುತ್ತಿದ್ದವನೊಬ್ಬ ಹಸಿವಿನಿಂದ ಕಂಗಾಲಾಗಿ ಮನೆಯೊಂದಕ್ಕೆ ಹೋಗಿ ಬಿಕ್ಷೆ ಬೇಡುತ್ತ, “ ತಾಯಿ ನಾಲ್ಕಾರು ದಿನಗಳಿಂದ ಊಟ ಮಾಡಿಲ್ಲ, ಒಂದು ರೊಟ್ಟಿ ಕೊಡಿ ಎಂದು ಅಂಗಲಾಚಿದನಂತೆ. ಅದಕ್ಕೆ ಪ್ರತಿಕ್ರಿಯಿಸಿದ ಆ ಮನೆಯ ಒಡತಿ, ವಾಸ್ತವ ಅರ್ಥ ಮಾಡಿಕೊಳ್ಳದೆ “ ಓ ಮಹಾತ್ಮನೆ ನೀನು ನನಗೇನು ಕೊಡುತ್ತಿ ?” ಎಂದು ಕೇಳಿದ್ದೆ ತಡ ಆ ಪಾಕಡಾ ಆಸಾಮಿ “ ನಿನಗೆ ಹಸಿವಿಲ್ಲದ ಮಂತ್ರ ಕಲಿಸಿಕೊಡುತ್ತೇನೆ !?” ಎಂದು ಹೇಳಿದನಂತೆ. ಆ ಮಹಿಳೆ ಲಗುಬಗೆಯಿಂದ ತನ್ನ ಮನೆಯಲ್ಲಿದ್ದ ರೊಟ್ಟಿಯೊಂದನ್ನು ಕೊಟ್ಟು ನಂತರ ಯೋಚಿಸತೊಡಗಿದಳಂತೆ. ಹಸಿವಿಲ್ಲದ ಮಂತ್ರ ನನಗೆ ಕಲಿಸುವ ಬದಲು, ಆತನಗೆ ತನ್ನಷ್ಟಕ್ಕೆ ತಾನು ಹಸಿವೆ ಆಗದೆ ಇರುವ ಮಂತ್ರ ಹೇಳಿಕೊಂಡು ಹಸಿವು ನೀಗಿಸಿಕೊಳ್ಳಬಹುದಿತ್ತಲ್ಲ ! ಎಂದು.

ಮಂತ್ರ, ಶಾಸ್ತ್ರ, ಬೊಗಳೆ ಪುರಾಣಗಳಿಗೆ ಹಸಿವನ್ನು ನೀಗಿಸುವ ಶಕ್ತಿ ಇರಲು ಸಾಧ್ಯವೇ ಇಲ್ಲ. ಹಾಗೆಯೇ ಜ್ಯೋತಿಷ್ಯವೂ ಸಹ. ಜ್ಯೋತಿಷ್ಯದ ಹೆಸರಿನ ಮೇಲೆ ಇಂದು ಸಮಾಜದಲ್ಲಿ ನಡೆದಿರುವ ನಂಗಾನಾಚ ಹೇಸಿಗೆ ತರಿಸುತ್ತಿದೆ. ಬರಗೆಟ್ಟ ರಾಜಕಾರಣಿಗಳು, ಭ್ರಷ್ಟ ಅಧಿಕಾರಶಾಹಿ ಜನಗಳು, ಲಜ್ಜೆಗೆಟ್ಟ ಬಂಡವಾಳ ಶಾಹಿಗಳ ಹಾದರದ ಕೂಸೆ ಜ್ಯೋತಿಷ್ಯ , ವಾಸ್ತು, ಮಂತ್ರ, ತಂತ್ರ ಇತ್ಯಾದಿ. ‘ಮಂತ್ರಕ್ಕೆ ಮಾವಿನ ಕಾಯಿಯೂ ಉದರೊಲ್ಲ’ ಎಂಬುದು ಬಡಜನತೆಗೆ ಗೊತ್ತು. ಆದರೆ ಅವರು ತಮಗಿಂತಲೂ ದೊಡ್ಡವರು, ಶ್ಯಾಣ್ಯಾ ಜನ ಎಂದು ಕೊಂಡ ಶ್ರೀಮಂತರು, ರಾಜಕಾಣಿಗಳು ಹಾಗೂ ಅಧಿಕಾರಿಗಳ ನಡೆ ನುಡಿಗಳಿಂದ ಪ್ರಭಾವಿತಗೊಂಡಿರುತ್ತಾರೆ.
ನಮ್ಮನ್ನು ಆಳುವ ಸರಕಾರಗಳು ತಮ್ಮ ಕೈಯಲ್ಲಿಯೆ ಇರುವ ಮುಜರಾಯಿ ಇಲಾಖೆಯ ಮೂಲಕ ನಿತ್ಯ ದೇವರಿಗೆ ನಡೆಸುವ ಅಭಿಷೇಕ, ಕುಂಭಾಬಿಷೇಕ, ರುದ್ರಾಭಿಷೇಕ, ಕೋಟಿ ಬಿಲ್ವ ಅರ್ಚನೆ, ಪರ್ಜನ್ಯ ಜಪ ಮುಂತಾದ ಅರ್ಥಹೀನ ಕೆಲಸವನ್ನು ಯಾವ ನಾಚಿಕೆಯೂ ಇಲ್ಲದೆ ನಡೆಸುತ್ತಿದೆ. ಅದೇನೋ ಹೇಳುತ್ತಾರಲ್ಲ, ದೊಡ್ಡವರೆ ಓಡಾಡಿ ಮೂತ್ರ ಮಾಡುವಾಗ , ಇನ್ನು ಚಿಕ್ಕವರು ? ಶಾಲಾ ಕಾಲೇಜು ಓದಿ ಡಿಗ್ರಿಯ ಮೂಲಕ ಬಹುದೊಡ್ಡ ಹುದ್ದೆ ಹೊಂದಿದ್ದೇವೆ ಎಂಬುವವರೆ ಮಂತ್ರವಾದಿಗಳಿಗೆ ಪಿಗ್ಗಿ ಬಿದ್ದಿದ್ದಾರೆ. ಹೇಗಾದರೂ ಸೈ ಜನತೆಯ ಮನವನ್ನು ಗೆಲ್ಲಬೇಕು. ಅವರ ಮೌನಸಿಕ ದೌರ್ಬಲ್ಯವನ್ನು ಬೆಳೆಸಿಕೊಂಡು ಮೇಲೆ ಬರಬೇಕೆಂದು ಹೊಂಚು ಹಾಕಿದ ರಾಜಕಾಣಿಗಳಂತೂ ನಿತ್ಯವೂ ಗುಡಿ,ಮಸೀದಿ, ಚರ್ಚಗಳಿಗೆ ಎಡತಾಕುತ್ತಾರೆ. ಇದರಿಂದಾಗಿ ದುಡಿಯದೆ ದುಃಖ ಪಡದೆ ಆರಾಮ ಇರುವ ಮುಲ್ಲಾ, ಪಾದ್ರಿ, ಪುರೋಹಿತ ಇವರೆಲ್ಲರನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡು ಆಟ ಆಡುತ್ತಾನೆ.
ಇದನ್ನು ಓದಿ:  ಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

ಅಂದಿನ ರಾಜ ಮಹಾರಾಜರನ್ನೆ ತಮ್ಮ ಶಾಸ್ತ್ರದ ಬಲದಿಂದ ಪೋಜರಾಜರಂತೆ ಕುಣಿಸುತ್ತಿದ್ದರು. ಈಗಲೂ ಅವರು ಅಟಾಟೋಪ ನಿಂತಿಲ್ಲ. ಸುರಪುರದ ವೀರದೊರೆ ವೆಂಕಟಪ್ಪ ನಾಯಕರನ್ನು ಔರಂಗಜೇಬ ಕೂಡ ಸೋಲಿಸಲು ಸಾಧ್ಯವಾಗದೆ, ಆತನ ಶೌರ್ಯ ಪರಾಕ್ರಮವನ್ನು ನೋಡಿ ಬಿರುದು ಬಾವಲಿ ನೀಡಿ ಹೋದ. ಆದರೆ ಇಂಥ ಶೂರ ದೊರೆಯನ್ನು ಜ್ಯೋತಿಷ್ಯರು ಯಾವ ಮದ್ದು ಗುಂಡುಗಳನ್ನು ಬಳಸದೆ ಕೇವಲ ತಮ್ಮ ಶಾಸ್ತ್ರದ ಬಲದಿಂದ “ ರಾಜಾ ವೆಂಕಟಪ್ಪ ನಾಯಕ ಮುಂದಿನ ಯುದ್ಧದಲ್ಲಿ ಸೋತು ಹತನಾಗುತ್ತಾನೆ” ಎಂದು ಜ್ಯೋತಿಷ್ಯ ನುಡಿದರು. ಇದನ್ನು ಕೇಳಿ ಕಂಗಾಲಾದ ರಾಜ ಊರು ಬಿಟ್ಟು ಓಡಿ ಹೋಗಿಬಿಟ್ಟ. ವಾಸ್ತವವೆಂದರೆ ಮುಂದೆ ಯಾವ ಯುದ್ಧಗಳೂ ನಡೆಯೋದಿಲ್ಲ, ಆತ ಹತನಾಗುವ ಪ್ರಶ್ನೆಯೇ ಬರುತ್ತಿರಲಿಲ್ಲ. ಔರಂಗಜೇಬ ಸೋಲಿಸದೆ ಇರುವ ದೊರೆಯನ್ನು ಶಾಸ್ತ್ರಿಕರು ಸೋಲಿಸಿಬಿಟ್ಟರು.
ಹಲವು ವರ್ಷಗಳ ಹಿಂದೆ ಜ್ಯೋತಿಷ್ಯಿಯ ಮಾತು ಕೇಳಿ ಮದುವೆಯಾದ ನೇಪಾಳದ ದೊರೆ ಬೀರೇಂದ್ರ ನಾವೆಲ್ಲ ನೋಡ ನೋಡುತ್ತಲೆ ತನ್ನ ಇಡೀ ಪರಿವಾರವನ್ನು ಬಂದೂಕಿನಿಂದ ಹತ್ಯೆಗೈದು, ತಾನು ಹತನಾದ ದುರಂತ ಚಿತ್ರ ಕಣ್ಣ ಮುಂದೆಯೆ ಇದೆ. ಯಾರಲ್ಲಿ ಮನೋಬಲವಿಲ್ಲವೋ ಆತನ ಮಾತ್ರ ಜ್ಯೋತಿಷ್ಯರನ್ನು, ಕಣಿ ಹೇಳುವವರನ್ನು, ಪಂಚಾಂಗ ತಿರುವುವರನ್ನು ಭೇಟಿಯಾಗುತ್ತಾನೆ. ಯಾರಿಗೆ ತನ್ನ ಮೇಲೆ ತನಗೆ ನಂಬಿಕೆ ಇದೆಯೋ ಅವರು ಎಂದೂ ಜ್ಯೋತಿಷ್ಯಗಳೆಂಬ ಹಗಲುಗಳ್ಳರ ಹತ್ತಿರ ಕೂಡ ಸುಳಿಯಲಾರರು.
ಹಿಂದಿನ ಮಹಾತ್ಮ ಬುದ್ಧ, ಬಸವಣ್ಣನವರು ಸಹ ಈ ಜ್ಯೋತಿಷ್ಯಗಾರರಿಗೆ ಚಾಟಿ ಏಟು ಕೊಟ್ಟಿದ್ದಾರೆ. ಜಕ್ಕಣ್ಣಯ ಎಂಬ ಶರಣನೊಬ್ಬ

ವೇದ ದೊಡ್ಡದೆಂದು ನುಡಿವ ವದಿಯ ಮಾತ ಹೇಳಲಾಗದು
ಕೇಳಲಾಗದು, ಶಾಸ್ತ್ರ ದೊಡ್ಡದೆಂದು ನುಡಿವ ಪಾತಕನ ಮಾತ ಹೇಳಲಾಗದು ಕೇಳಲಾಗದು.
ಪುರಾಣ ದೊಡ್ಡದೆಂದು ನುಡಿದ ಪುಂಡರ ಮಾತ ಹೇಳಲಾಗದು ಕೇಳಲಾಗದು
ಆಗಮ ದೊಡ್ಡದೆಂದು ನುಡಿವ ಅಹಂಕಾರಿಯ ಮಾತ ಹೇಳಲಾಗದು, ಕೇಳಲಾಗದು
ಜ್ಯೋತಿಷ್ಯ ದೊಡ್ಡದೆಂದು ನುಡಿವ ಘಾತಕವ ಮಾತ ಹೇಳಲಾಗದು, ಕೇಳಲಾಗದು
ಇದನ್ನು ಓದಿ: ಜನರ ತಲೆಗೆ ಮೌಢ್ಯದ ‘ಚಿಪ್ಪು’!

ಎಂದು ಸ್ಪಷ್ಟವಾಗಿ ಇವರನ್ನು ಜಜ್ಜನೆ ಜರಿದಿದ್ದಾರೆ.
ಸೊಲ್ಲಾಪುರದ ಸಿದ್ಧರಾಮ ಶಿವಯೋಗಿಗಳು
ಲಗ್ನಕ್ಕೆ ವಿಘ್ನಬಾರದೆಂದು ಜ್ಯೋತಿಷ್ಯ ಕೇಳುವ ಅಣ್ಣಗಳಿರಾ
ಕೇಳಿರಯ್ಯಾ : ಅಂದೇಕೆ ವೀರಭದ್ರನ ಸೆರಗ ಸುಟ್ಟಿತ್ತು ?
ಅಂದೇಕೆ ಮಹಾದೇವಿಯವರ ಬಲಭುಜ ಹಾರಿತ್ತು ?
ಇಂದೇಕೆ ಎನ್ನ ವಾಮನೇತ್ರ ಚರಿಸಿತ್ತು ? ಕಪಿಲಸಿದ್ದಮಲ್ಲಿಕಾರ್ಜುನಾ

ಎಂದು ಇತಿಹಾಸದ ಪುಟಗಳಲ್ಲಿ ನಡೆದ ಘಟನೆಗಳನ್ನು ಉದಾಹರಿಸಿ ನಮ್ಮ ಕಣ್ಣು ತೆರೆಸುತ್ತಾರೆ. ಜ್ಯೋತಿಷ್ಯ ನೋಡಿಯೆ ಮದುಯಾದ ಎಷ್ಟೋ ಜೋಡಿಗಳು ವರ್ಷ ತುಂಬುವಷ್ಟರಲ್ಲಿಯೆ ಡೈವೋರ್ಸ ಪಡೆದಿವೆ. ಜ್ಯೋತಿಷ್ಯ ನೋಡಿಯೇ ಪ್ರಧಾನಿಯ ಪಟ್ಟ ಮತ್ತೆ ಇನ್ನಷ್ಟು ದಿನ ಉಳಿಸಿಕೊಳ್ಳಬೇಕೆಂದ ದೇವೇಗೌಡರು ರಾಜ್ಯಕ್ಕೆ ಮರಳಿ ಬರಲಿಲ್ಲವೆ ? ಜ್ಯೋತಿಷ್ಯಿಯ ಮಾತು ಕೇಳಿ ಹದಿ ಹರೆಯದ ಹುಡುಗಿಯನ್ನು ನಗ್ನ ಮಾಡಿ ಪೂಜಿಸಿದ ಆಂದ್ರದ ಮುಖ್ಯ ಮಂತ್ರಿ ಎನ್.ಟಿ.ಆರ್. ಅಧಿಕಾರ ಶಾಶ್ವತವಾಗಿ ಉಳಿಯಿತೆ ?

ಗಿಳಿಯೋದಿ ಫಲವೇನು
ಬೆಕ್ಕು ಬಹುದ ಹೇಳಲರಿಯದು
ಜಗವೆಲ್ಲ ಕಾಬ ಕಣ್ಣು, ತನ್ನ ಕೊಂಬ ಕೊಲ್ಲೆಯ
ಕಾಣಲರಿಯದು.
ಇದಿರ ಗುಣವ ಬಲ್ಲೆವೆಂಬರು ತಮ್ಮ ಗುಣವನರಿಯರು
ಕೂಡಲಸಂಗಮದೇವಾ

ಮಡಿವಾಳ ಮಾಚಿದೇವನೆಂಬ ಶರಣರಂತು ‘ಗಿಳಿಯೋದಿ ತನ್ನ ಅಶುದ್ಧವ ತನ್ನ ಮೂಗಿನಲಿ ಕಚ್ಚಿ ತೆಗೆದಂತೆ’ ಜ್ಯೋತಿಷ್ಯ ಕಲಿತವರ ಹಣೆಬರಹ ಎಂದು ಹೇಳಿತ್ತಾರೆ.
ಒಟ್ಟಿನಲ್ಲಿ ನಮ್ಮ ಬದುಕು ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲಿಯೆ ಇದೆ. ಇನ್ನಾರ ಕೈಯಲ್ಲಿಯೂ ಅದು ಇಲ್ಲವೆ ಇಲ್ಲ. ಆದ್ದರಿಂದಲೆ ಮಹಾತ್ಮ ಬುದ್ಧ ‘ನಿನಗೆ ನೀನೇ ಬೆಳಕು’ ಎಂದು ಹೇಳಿದರು. ನಮಗೆ ನಾವೆ ಬೆಳಕಾಗಬೇಕೆ ವಿನಃ ಕೊಳಕರ ಮಾತು ಕೇಳಿಕೊಂಡು ಜನ ಸಾಮಾನ್ಯರು ಹೊಲಸಿನ ಹೊಂಡಕ್ಕೆ ಬೀಳಬಾರದು. ತಮ್ಮ ಬದುಕನ್ನು ಕೆಡಿಸಿಕೊಳ್ಳಬಾರದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...