Homeಅಂಕಣಗಳುಜ್ಯೋತಿಷ್ಯಿಯ ಮಾತು ಕೇಳಿ ತನ್ನ ಮಗನ ಕೊಂದ ಪಾಪಿ ! ಇತ್ಯಾದಿ…

ಜ್ಯೋತಿಷ್ಯಿಯ ಮಾತು ಕೇಳಿ ತನ್ನ ಮಗನ ಕೊಂದ ಪಾಪಿ ! ಇತ್ಯಾದಿ…

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಜ್ಯೋತಿಷ್ಯಿಯ ಮಾತು ಕೇಳಿಕೊಂಡು ಚಿಕ್ಕಮಗಳೂರು ಜಿಲ್ಲೆಯ ಬೂಚೇನಹಳ್ಳಿಯ ಯುವಕನೊಬ್ಬ ತನಗೆ ಹುಟ್ಟಿದ ಹೆಣ್ಣು ಮಗುವನ್ನು ಕತ್ತು ಹಿಸುಕಿ ಸಾಯಿಸಿದ ಘಟನೆ ಮನುಷ್ಯ ಸಮಾನವನ್ನು ಬೆಚ್ಚಿ ಬೀಳಿಸಿದೆ. ದಿನ ಬೆಳಗಾದರೆ ಟಿ.ವಿ.ಯಲ್ಲಿ ಒಕ್ಕರಿಸಿ ಕನ್ನಡ ನಾಡಿನ ಜನಗಳ ಬುದ್ಧಿಯ ಮೇಲೆ ಕಲ್ಲು ಚಪ್ಪಡಿ ಎಳೆಯುವ ಜ್ಯೋತಿಷ್ಯಿಗಾರರ ಕಾಟ ಅತಿಯಾಯಿತು ಎನ್ನದೆ ವಿಧಿ ಇಲ್ಲವಾಗಿದೆ. ಯಾರು , ಜ್ಯೋತಿಷ್ಯ, ಭವಿಷ್ಯ, ವಾಸ್ತುಗಳನ್ನು ನಂಬುತ್ತಾರೋ ಮೊದಲು ಅವರನ್ನು ಮಾನಸಿಕ ತಜ್ಞರ ಹತ್ತಿರ ಕರೆದುಕೊಂಡು ಹೋಗಿ ಎಂಬ ಸ್ವಾಮಿ ವಿವೇಕಾನಂದರ ಮಾತು ಇಂದು ಹೆಚ್ಚು ಪ್ರಸ್ತುತವೆನಿಸುತ್ತಿದೆ.

ಪ್ರತಿಯೊಬ್ಬರ ಬದುಕಿನಲ್ಲಿ ಬರಬಹುದಾದ ಸಂಕಟ ನೋವುಗಳಿಗೆ ಜ್ಯೋತಿಷ್ಯ ಪರಿಹಾರ ಅಲ್ಲವೇ ಅಲ್ಲ. ಯಾರೋ ಒಬ್ಬ ಮಾಂತ್ರಿಕ ಶಕ್ತಿ ಹೊಂದಿದ್ದೇನೆಂದು ಎಲ್ಲರ ನಂಬಿಸುತ್ತಿದ್ದವನೊಬ್ಬ ಹಸಿವಿನಿಂದ ಕಂಗಾಲಾಗಿ ಮನೆಯೊಂದಕ್ಕೆ ಹೋಗಿ ಬಿಕ್ಷೆ ಬೇಡುತ್ತ, “ ತಾಯಿ ನಾಲ್ಕಾರು ದಿನಗಳಿಂದ ಊಟ ಮಾಡಿಲ್ಲ, ಒಂದು ರೊಟ್ಟಿ ಕೊಡಿ ಎಂದು ಅಂಗಲಾಚಿದನಂತೆ. ಅದಕ್ಕೆ ಪ್ರತಿಕ್ರಿಯಿಸಿದ ಆ ಮನೆಯ ಒಡತಿ, ವಾಸ್ತವ ಅರ್ಥ ಮಾಡಿಕೊಳ್ಳದೆ “ ಓ ಮಹಾತ್ಮನೆ ನೀನು ನನಗೇನು ಕೊಡುತ್ತಿ ?” ಎಂದು ಕೇಳಿದ್ದೆ ತಡ ಆ ಪಾಕಡಾ ಆಸಾಮಿ “ ನಿನಗೆ ಹಸಿವಿಲ್ಲದ ಮಂತ್ರ ಕಲಿಸಿಕೊಡುತ್ತೇನೆ !?” ಎಂದು ಹೇಳಿದನಂತೆ. ಆ ಮಹಿಳೆ ಲಗುಬಗೆಯಿಂದ ತನ್ನ ಮನೆಯಲ್ಲಿದ್ದ ರೊಟ್ಟಿಯೊಂದನ್ನು ಕೊಟ್ಟು ನಂತರ ಯೋಚಿಸತೊಡಗಿದಳಂತೆ. ಹಸಿವಿಲ್ಲದ ಮಂತ್ರ ನನಗೆ ಕಲಿಸುವ ಬದಲು, ಆತನಗೆ ತನ್ನಷ್ಟಕ್ಕೆ ತಾನು ಹಸಿವೆ ಆಗದೆ ಇರುವ ಮಂತ್ರ ಹೇಳಿಕೊಂಡು ಹಸಿವು ನೀಗಿಸಿಕೊಳ್ಳಬಹುದಿತ್ತಲ್ಲ ! ಎಂದು.

ಮಂತ್ರ, ಶಾಸ್ತ್ರ, ಬೊಗಳೆ ಪುರಾಣಗಳಿಗೆ ಹಸಿವನ್ನು ನೀಗಿಸುವ ಶಕ್ತಿ ಇರಲು ಸಾಧ್ಯವೇ ಇಲ್ಲ. ಹಾಗೆಯೇ ಜ್ಯೋತಿಷ್ಯವೂ ಸಹ. ಜ್ಯೋತಿಷ್ಯದ ಹೆಸರಿನ ಮೇಲೆ ಇಂದು ಸಮಾಜದಲ್ಲಿ ನಡೆದಿರುವ ನಂಗಾನಾಚ ಹೇಸಿಗೆ ತರಿಸುತ್ತಿದೆ. ಬರಗೆಟ್ಟ ರಾಜಕಾರಣಿಗಳು, ಭ್ರಷ್ಟ ಅಧಿಕಾರಶಾಹಿ ಜನಗಳು, ಲಜ್ಜೆಗೆಟ್ಟ ಬಂಡವಾಳ ಶಾಹಿಗಳ ಹಾದರದ ಕೂಸೆ ಜ್ಯೋತಿಷ್ಯ , ವಾಸ್ತು, ಮಂತ್ರ, ತಂತ್ರ ಇತ್ಯಾದಿ. ‘ಮಂತ್ರಕ್ಕೆ ಮಾವಿನ ಕಾಯಿಯೂ ಉದರೊಲ್ಲ’ ಎಂಬುದು ಬಡಜನತೆಗೆ ಗೊತ್ತು. ಆದರೆ ಅವರು ತಮಗಿಂತಲೂ ದೊಡ್ಡವರು, ಶ್ಯಾಣ್ಯಾ ಜನ ಎಂದು ಕೊಂಡ ಶ್ರೀಮಂತರು, ರಾಜಕಾಣಿಗಳು ಹಾಗೂ ಅಧಿಕಾರಿಗಳ ನಡೆ ನುಡಿಗಳಿಂದ ಪ್ರಭಾವಿತಗೊಂಡಿರುತ್ತಾರೆ.
ನಮ್ಮನ್ನು ಆಳುವ ಸರಕಾರಗಳು ತಮ್ಮ ಕೈಯಲ್ಲಿಯೆ ಇರುವ ಮುಜರಾಯಿ ಇಲಾಖೆಯ ಮೂಲಕ ನಿತ್ಯ ದೇವರಿಗೆ ನಡೆಸುವ ಅಭಿಷೇಕ, ಕುಂಭಾಬಿಷೇಕ, ರುದ್ರಾಭಿಷೇಕ, ಕೋಟಿ ಬಿಲ್ವ ಅರ್ಚನೆ, ಪರ್ಜನ್ಯ ಜಪ ಮುಂತಾದ ಅರ್ಥಹೀನ ಕೆಲಸವನ್ನು ಯಾವ ನಾಚಿಕೆಯೂ ಇಲ್ಲದೆ ನಡೆಸುತ್ತಿದೆ. ಅದೇನೋ ಹೇಳುತ್ತಾರಲ್ಲ, ದೊಡ್ಡವರೆ ಓಡಾಡಿ ಮೂತ್ರ ಮಾಡುವಾಗ , ಇನ್ನು ಚಿಕ್ಕವರು ? ಶಾಲಾ ಕಾಲೇಜು ಓದಿ ಡಿಗ್ರಿಯ ಮೂಲಕ ಬಹುದೊಡ್ಡ ಹುದ್ದೆ ಹೊಂದಿದ್ದೇವೆ ಎಂಬುವವರೆ ಮಂತ್ರವಾದಿಗಳಿಗೆ ಪಿಗ್ಗಿ ಬಿದ್ದಿದ್ದಾರೆ. ಹೇಗಾದರೂ ಸೈ ಜನತೆಯ ಮನವನ್ನು ಗೆಲ್ಲಬೇಕು. ಅವರ ಮೌನಸಿಕ ದೌರ್ಬಲ್ಯವನ್ನು ಬೆಳೆಸಿಕೊಂಡು ಮೇಲೆ ಬರಬೇಕೆಂದು ಹೊಂಚು ಹಾಕಿದ ರಾಜಕಾಣಿಗಳಂತೂ ನಿತ್ಯವೂ ಗುಡಿ,ಮಸೀದಿ, ಚರ್ಚಗಳಿಗೆ ಎಡತಾಕುತ್ತಾರೆ. ಇದರಿಂದಾಗಿ ದುಡಿಯದೆ ದುಃಖ ಪಡದೆ ಆರಾಮ ಇರುವ ಮುಲ್ಲಾ, ಪಾದ್ರಿ, ಪುರೋಹಿತ ಇವರೆಲ್ಲರನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡು ಆಟ ಆಡುತ್ತಾನೆ.
ಇದನ್ನು ಓದಿ:  ಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

ಅಂದಿನ ರಾಜ ಮಹಾರಾಜರನ್ನೆ ತಮ್ಮ ಶಾಸ್ತ್ರದ ಬಲದಿಂದ ಪೋಜರಾಜರಂತೆ ಕುಣಿಸುತ್ತಿದ್ದರು. ಈಗಲೂ ಅವರು ಅಟಾಟೋಪ ನಿಂತಿಲ್ಲ. ಸುರಪುರದ ವೀರದೊರೆ ವೆಂಕಟಪ್ಪ ನಾಯಕರನ್ನು ಔರಂಗಜೇಬ ಕೂಡ ಸೋಲಿಸಲು ಸಾಧ್ಯವಾಗದೆ, ಆತನ ಶೌರ್ಯ ಪರಾಕ್ರಮವನ್ನು ನೋಡಿ ಬಿರುದು ಬಾವಲಿ ನೀಡಿ ಹೋದ. ಆದರೆ ಇಂಥ ಶೂರ ದೊರೆಯನ್ನು ಜ್ಯೋತಿಷ್ಯರು ಯಾವ ಮದ್ದು ಗುಂಡುಗಳನ್ನು ಬಳಸದೆ ಕೇವಲ ತಮ್ಮ ಶಾಸ್ತ್ರದ ಬಲದಿಂದ “ ರಾಜಾ ವೆಂಕಟಪ್ಪ ನಾಯಕ ಮುಂದಿನ ಯುದ್ಧದಲ್ಲಿ ಸೋತು ಹತನಾಗುತ್ತಾನೆ” ಎಂದು ಜ್ಯೋತಿಷ್ಯ ನುಡಿದರು. ಇದನ್ನು ಕೇಳಿ ಕಂಗಾಲಾದ ರಾಜ ಊರು ಬಿಟ್ಟು ಓಡಿ ಹೋಗಿಬಿಟ್ಟ. ವಾಸ್ತವವೆಂದರೆ ಮುಂದೆ ಯಾವ ಯುದ್ಧಗಳೂ ನಡೆಯೋದಿಲ್ಲ, ಆತ ಹತನಾಗುವ ಪ್ರಶ್ನೆಯೇ ಬರುತ್ತಿರಲಿಲ್ಲ. ಔರಂಗಜೇಬ ಸೋಲಿಸದೆ ಇರುವ ದೊರೆಯನ್ನು ಶಾಸ್ತ್ರಿಕರು ಸೋಲಿಸಿಬಿಟ್ಟರು.
ಹಲವು ವರ್ಷಗಳ ಹಿಂದೆ ಜ್ಯೋತಿಷ್ಯಿಯ ಮಾತು ಕೇಳಿ ಮದುವೆಯಾದ ನೇಪಾಳದ ದೊರೆ ಬೀರೇಂದ್ರ ನಾವೆಲ್ಲ ನೋಡ ನೋಡುತ್ತಲೆ ತನ್ನ ಇಡೀ ಪರಿವಾರವನ್ನು ಬಂದೂಕಿನಿಂದ ಹತ್ಯೆಗೈದು, ತಾನು ಹತನಾದ ದುರಂತ ಚಿತ್ರ ಕಣ್ಣ ಮುಂದೆಯೆ ಇದೆ. ಯಾರಲ್ಲಿ ಮನೋಬಲವಿಲ್ಲವೋ ಆತನ ಮಾತ್ರ ಜ್ಯೋತಿಷ್ಯರನ್ನು, ಕಣಿ ಹೇಳುವವರನ್ನು, ಪಂಚಾಂಗ ತಿರುವುವರನ್ನು ಭೇಟಿಯಾಗುತ್ತಾನೆ. ಯಾರಿಗೆ ತನ್ನ ಮೇಲೆ ತನಗೆ ನಂಬಿಕೆ ಇದೆಯೋ ಅವರು ಎಂದೂ ಜ್ಯೋತಿಷ್ಯಗಳೆಂಬ ಹಗಲುಗಳ್ಳರ ಹತ್ತಿರ ಕೂಡ ಸುಳಿಯಲಾರರು.
ಹಿಂದಿನ ಮಹಾತ್ಮ ಬುದ್ಧ, ಬಸವಣ್ಣನವರು ಸಹ ಈ ಜ್ಯೋತಿಷ್ಯಗಾರರಿಗೆ ಚಾಟಿ ಏಟು ಕೊಟ್ಟಿದ್ದಾರೆ. ಜಕ್ಕಣ್ಣಯ ಎಂಬ ಶರಣನೊಬ್ಬ

ವೇದ ದೊಡ್ಡದೆಂದು ನುಡಿವ ವದಿಯ ಮಾತ ಹೇಳಲಾಗದು
ಕೇಳಲಾಗದು, ಶಾಸ್ತ್ರ ದೊಡ್ಡದೆಂದು ನುಡಿವ ಪಾತಕನ ಮಾತ ಹೇಳಲಾಗದು ಕೇಳಲಾಗದು.
ಪುರಾಣ ದೊಡ್ಡದೆಂದು ನುಡಿದ ಪುಂಡರ ಮಾತ ಹೇಳಲಾಗದು ಕೇಳಲಾಗದು
ಆಗಮ ದೊಡ್ಡದೆಂದು ನುಡಿವ ಅಹಂಕಾರಿಯ ಮಾತ ಹೇಳಲಾಗದು, ಕೇಳಲಾಗದು
ಜ್ಯೋತಿಷ್ಯ ದೊಡ್ಡದೆಂದು ನುಡಿವ ಘಾತಕವ ಮಾತ ಹೇಳಲಾಗದು, ಕೇಳಲಾಗದು
ಇದನ್ನು ಓದಿ: ಜನರ ತಲೆಗೆ ಮೌಢ್ಯದ ‘ಚಿಪ್ಪು’!

ಎಂದು ಸ್ಪಷ್ಟವಾಗಿ ಇವರನ್ನು ಜಜ್ಜನೆ ಜರಿದಿದ್ದಾರೆ.
ಸೊಲ್ಲಾಪುರದ ಸಿದ್ಧರಾಮ ಶಿವಯೋಗಿಗಳು
ಲಗ್ನಕ್ಕೆ ವಿಘ್ನಬಾರದೆಂದು ಜ್ಯೋತಿಷ್ಯ ಕೇಳುವ ಅಣ್ಣಗಳಿರಾ
ಕೇಳಿರಯ್ಯಾ : ಅಂದೇಕೆ ವೀರಭದ್ರನ ಸೆರಗ ಸುಟ್ಟಿತ್ತು ?
ಅಂದೇಕೆ ಮಹಾದೇವಿಯವರ ಬಲಭುಜ ಹಾರಿತ್ತು ?
ಇಂದೇಕೆ ಎನ್ನ ವಾಮನೇತ್ರ ಚರಿಸಿತ್ತು ? ಕಪಿಲಸಿದ್ದಮಲ್ಲಿಕಾರ್ಜುನಾ

ಎಂದು ಇತಿಹಾಸದ ಪುಟಗಳಲ್ಲಿ ನಡೆದ ಘಟನೆಗಳನ್ನು ಉದಾಹರಿಸಿ ನಮ್ಮ ಕಣ್ಣು ತೆರೆಸುತ್ತಾರೆ. ಜ್ಯೋತಿಷ್ಯ ನೋಡಿಯೆ ಮದುಯಾದ ಎಷ್ಟೋ ಜೋಡಿಗಳು ವರ್ಷ ತುಂಬುವಷ್ಟರಲ್ಲಿಯೆ ಡೈವೋರ್ಸ ಪಡೆದಿವೆ. ಜ್ಯೋತಿಷ್ಯ ನೋಡಿಯೇ ಪ್ರಧಾನಿಯ ಪಟ್ಟ ಮತ್ತೆ ಇನ್ನಷ್ಟು ದಿನ ಉಳಿಸಿಕೊಳ್ಳಬೇಕೆಂದ ದೇವೇಗೌಡರು ರಾಜ್ಯಕ್ಕೆ ಮರಳಿ ಬರಲಿಲ್ಲವೆ ? ಜ್ಯೋತಿಷ್ಯಿಯ ಮಾತು ಕೇಳಿ ಹದಿ ಹರೆಯದ ಹುಡುಗಿಯನ್ನು ನಗ್ನ ಮಾಡಿ ಪೂಜಿಸಿದ ಆಂದ್ರದ ಮುಖ್ಯ ಮಂತ್ರಿ ಎನ್.ಟಿ.ಆರ್. ಅಧಿಕಾರ ಶಾಶ್ವತವಾಗಿ ಉಳಿಯಿತೆ ?

ಗಿಳಿಯೋದಿ ಫಲವೇನು
ಬೆಕ್ಕು ಬಹುದ ಹೇಳಲರಿಯದು
ಜಗವೆಲ್ಲ ಕಾಬ ಕಣ್ಣು, ತನ್ನ ಕೊಂಬ ಕೊಲ್ಲೆಯ
ಕಾಣಲರಿಯದು.
ಇದಿರ ಗುಣವ ಬಲ್ಲೆವೆಂಬರು ತಮ್ಮ ಗುಣವನರಿಯರು
ಕೂಡಲಸಂಗಮದೇವಾ

ಮಡಿವಾಳ ಮಾಚಿದೇವನೆಂಬ ಶರಣರಂತು ‘ಗಿಳಿಯೋದಿ ತನ್ನ ಅಶುದ್ಧವ ತನ್ನ ಮೂಗಿನಲಿ ಕಚ್ಚಿ ತೆಗೆದಂತೆ’ ಜ್ಯೋತಿಷ್ಯ ಕಲಿತವರ ಹಣೆಬರಹ ಎಂದು ಹೇಳಿತ್ತಾರೆ.
ಒಟ್ಟಿನಲ್ಲಿ ನಮ್ಮ ಬದುಕು ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲಿಯೆ ಇದೆ. ಇನ್ನಾರ ಕೈಯಲ್ಲಿಯೂ ಅದು ಇಲ್ಲವೆ ಇಲ್ಲ. ಆದ್ದರಿಂದಲೆ ಮಹಾತ್ಮ ಬುದ್ಧ ‘ನಿನಗೆ ನೀನೇ ಬೆಳಕು’ ಎಂದು ಹೇಳಿದರು. ನಮಗೆ ನಾವೆ ಬೆಳಕಾಗಬೇಕೆ ವಿನಃ ಕೊಳಕರ ಮಾತು ಕೇಳಿಕೊಂಡು ಜನ ಸಾಮಾನ್ಯರು ಹೊಲಸಿನ ಹೊಂಡಕ್ಕೆ ಬೀಳಬಾರದು. ತಮ್ಮ ಬದುಕನ್ನು ಕೆಡಿಸಿಕೊಳ್ಳಬಾರದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...