Homeಅಂಕಣಗಳುಜ್ಯೋತಿಷ್ಯಿಯ ಮಾತು ಕೇಳಿ ತನ್ನ ಮಗನ ಕೊಂದ ಪಾಪಿ ! ಇತ್ಯಾದಿ…

ಜ್ಯೋತಿಷ್ಯಿಯ ಮಾತು ಕೇಳಿ ತನ್ನ ಮಗನ ಕೊಂದ ಪಾಪಿ ! ಇತ್ಯಾದಿ…

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಜ್ಯೋತಿಷ್ಯಿಯ ಮಾತು ಕೇಳಿಕೊಂಡು ಚಿಕ್ಕಮಗಳೂರು ಜಿಲ್ಲೆಯ ಬೂಚೇನಹಳ್ಳಿಯ ಯುವಕನೊಬ್ಬ ತನಗೆ ಹುಟ್ಟಿದ ಹೆಣ್ಣು ಮಗುವನ್ನು ಕತ್ತು ಹಿಸುಕಿ ಸಾಯಿಸಿದ ಘಟನೆ ಮನುಷ್ಯ ಸಮಾನವನ್ನು ಬೆಚ್ಚಿ ಬೀಳಿಸಿದೆ. ದಿನ ಬೆಳಗಾದರೆ ಟಿ.ವಿ.ಯಲ್ಲಿ ಒಕ್ಕರಿಸಿ ಕನ್ನಡ ನಾಡಿನ ಜನಗಳ ಬುದ್ಧಿಯ ಮೇಲೆ ಕಲ್ಲು ಚಪ್ಪಡಿ ಎಳೆಯುವ ಜ್ಯೋತಿಷ್ಯಿಗಾರರ ಕಾಟ ಅತಿಯಾಯಿತು ಎನ್ನದೆ ವಿಧಿ ಇಲ್ಲವಾಗಿದೆ. ಯಾರು , ಜ್ಯೋತಿಷ್ಯ, ಭವಿಷ್ಯ, ವಾಸ್ತುಗಳನ್ನು ನಂಬುತ್ತಾರೋ ಮೊದಲು ಅವರನ್ನು ಮಾನಸಿಕ ತಜ್ಞರ ಹತ್ತಿರ ಕರೆದುಕೊಂಡು ಹೋಗಿ ಎಂಬ ಸ್ವಾಮಿ ವಿವೇಕಾನಂದರ ಮಾತು ಇಂದು ಹೆಚ್ಚು ಪ್ರಸ್ತುತವೆನಿಸುತ್ತಿದೆ.

ಪ್ರತಿಯೊಬ್ಬರ ಬದುಕಿನಲ್ಲಿ ಬರಬಹುದಾದ ಸಂಕಟ ನೋವುಗಳಿಗೆ ಜ್ಯೋತಿಷ್ಯ ಪರಿಹಾರ ಅಲ್ಲವೇ ಅಲ್ಲ. ಯಾರೋ ಒಬ್ಬ ಮಾಂತ್ರಿಕ ಶಕ್ತಿ ಹೊಂದಿದ್ದೇನೆಂದು ಎಲ್ಲರ ನಂಬಿಸುತ್ತಿದ್ದವನೊಬ್ಬ ಹಸಿವಿನಿಂದ ಕಂಗಾಲಾಗಿ ಮನೆಯೊಂದಕ್ಕೆ ಹೋಗಿ ಬಿಕ್ಷೆ ಬೇಡುತ್ತ, “ ತಾಯಿ ನಾಲ್ಕಾರು ದಿನಗಳಿಂದ ಊಟ ಮಾಡಿಲ್ಲ, ಒಂದು ರೊಟ್ಟಿ ಕೊಡಿ ಎಂದು ಅಂಗಲಾಚಿದನಂತೆ. ಅದಕ್ಕೆ ಪ್ರತಿಕ್ರಿಯಿಸಿದ ಆ ಮನೆಯ ಒಡತಿ, ವಾಸ್ತವ ಅರ್ಥ ಮಾಡಿಕೊಳ್ಳದೆ “ ಓ ಮಹಾತ್ಮನೆ ನೀನು ನನಗೇನು ಕೊಡುತ್ತಿ ?” ಎಂದು ಕೇಳಿದ್ದೆ ತಡ ಆ ಪಾಕಡಾ ಆಸಾಮಿ “ ನಿನಗೆ ಹಸಿವಿಲ್ಲದ ಮಂತ್ರ ಕಲಿಸಿಕೊಡುತ್ತೇನೆ !?” ಎಂದು ಹೇಳಿದನಂತೆ. ಆ ಮಹಿಳೆ ಲಗುಬಗೆಯಿಂದ ತನ್ನ ಮನೆಯಲ್ಲಿದ್ದ ರೊಟ್ಟಿಯೊಂದನ್ನು ಕೊಟ್ಟು ನಂತರ ಯೋಚಿಸತೊಡಗಿದಳಂತೆ. ಹಸಿವಿಲ್ಲದ ಮಂತ್ರ ನನಗೆ ಕಲಿಸುವ ಬದಲು, ಆತನಗೆ ತನ್ನಷ್ಟಕ್ಕೆ ತಾನು ಹಸಿವೆ ಆಗದೆ ಇರುವ ಮಂತ್ರ ಹೇಳಿಕೊಂಡು ಹಸಿವು ನೀಗಿಸಿಕೊಳ್ಳಬಹುದಿತ್ತಲ್ಲ ! ಎಂದು.

ಮಂತ್ರ, ಶಾಸ್ತ್ರ, ಬೊಗಳೆ ಪುರಾಣಗಳಿಗೆ ಹಸಿವನ್ನು ನೀಗಿಸುವ ಶಕ್ತಿ ಇರಲು ಸಾಧ್ಯವೇ ಇಲ್ಲ. ಹಾಗೆಯೇ ಜ್ಯೋತಿಷ್ಯವೂ ಸಹ. ಜ್ಯೋತಿಷ್ಯದ ಹೆಸರಿನ ಮೇಲೆ ಇಂದು ಸಮಾಜದಲ್ಲಿ ನಡೆದಿರುವ ನಂಗಾನಾಚ ಹೇಸಿಗೆ ತರಿಸುತ್ತಿದೆ. ಬರಗೆಟ್ಟ ರಾಜಕಾರಣಿಗಳು, ಭ್ರಷ್ಟ ಅಧಿಕಾರಶಾಹಿ ಜನಗಳು, ಲಜ್ಜೆಗೆಟ್ಟ ಬಂಡವಾಳ ಶಾಹಿಗಳ ಹಾದರದ ಕೂಸೆ ಜ್ಯೋತಿಷ್ಯ , ವಾಸ್ತು, ಮಂತ್ರ, ತಂತ್ರ ಇತ್ಯಾದಿ. ‘ಮಂತ್ರಕ್ಕೆ ಮಾವಿನ ಕಾಯಿಯೂ ಉದರೊಲ್ಲ’ ಎಂಬುದು ಬಡಜನತೆಗೆ ಗೊತ್ತು. ಆದರೆ ಅವರು ತಮಗಿಂತಲೂ ದೊಡ್ಡವರು, ಶ್ಯಾಣ್ಯಾ ಜನ ಎಂದು ಕೊಂಡ ಶ್ರೀಮಂತರು, ರಾಜಕಾಣಿಗಳು ಹಾಗೂ ಅಧಿಕಾರಿಗಳ ನಡೆ ನುಡಿಗಳಿಂದ ಪ್ರಭಾವಿತಗೊಂಡಿರುತ್ತಾರೆ.
ನಮ್ಮನ್ನು ಆಳುವ ಸರಕಾರಗಳು ತಮ್ಮ ಕೈಯಲ್ಲಿಯೆ ಇರುವ ಮುಜರಾಯಿ ಇಲಾಖೆಯ ಮೂಲಕ ನಿತ್ಯ ದೇವರಿಗೆ ನಡೆಸುವ ಅಭಿಷೇಕ, ಕುಂಭಾಬಿಷೇಕ, ರುದ್ರಾಭಿಷೇಕ, ಕೋಟಿ ಬಿಲ್ವ ಅರ್ಚನೆ, ಪರ್ಜನ್ಯ ಜಪ ಮುಂತಾದ ಅರ್ಥಹೀನ ಕೆಲಸವನ್ನು ಯಾವ ನಾಚಿಕೆಯೂ ಇಲ್ಲದೆ ನಡೆಸುತ್ತಿದೆ. ಅದೇನೋ ಹೇಳುತ್ತಾರಲ್ಲ, ದೊಡ್ಡವರೆ ಓಡಾಡಿ ಮೂತ್ರ ಮಾಡುವಾಗ , ಇನ್ನು ಚಿಕ್ಕವರು ? ಶಾಲಾ ಕಾಲೇಜು ಓದಿ ಡಿಗ್ರಿಯ ಮೂಲಕ ಬಹುದೊಡ್ಡ ಹುದ್ದೆ ಹೊಂದಿದ್ದೇವೆ ಎಂಬುವವರೆ ಮಂತ್ರವಾದಿಗಳಿಗೆ ಪಿಗ್ಗಿ ಬಿದ್ದಿದ್ದಾರೆ. ಹೇಗಾದರೂ ಸೈ ಜನತೆಯ ಮನವನ್ನು ಗೆಲ್ಲಬೇಕು. ಅವರ ಮೌನಸಿಕ ದೌರ್ಬಲ್ಯವನ್ನು ಬೆಳೆಸಿಕೊಂಡು ಮೇಲೆ ಬರಬೇಕೆಂದು ಹೊಂಚು ಹಾಕಿದ ರಾಜಕಾಣಿಗಳಂತೂ ನಿತ್ಯವೂ ಗುಡಿ,ಮಸೀದಿ, ಚರ್ಚಗಳಿಗೆ ಎಡತಾಕುತ್ತಾರೆ. ಇದರಿಂದಾಗಿ ದುಡಿಯದೆ ದುಃಖ ಪಡದೆ ಆರಾಮ ಇರುವ ಮುಲ್ಲಾ, ಪಾದ್ರಿ, ಪುರೋಹಿತ ಇವರೆಲ್ಲರನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡು ಆಟ ಆಡುತ್ತಾನೆ.
ಇದನ್ನು ಓದಿ:  ಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

ಅಂದಿನ ರಾಜ ಮಹಾರಾಜರನ್ನೆ ತಮ್ಮ ಶಾಸ್ತ್ರದ ಬಲದಿಂದ ಪೋಜರಾಜರಂತೆ ಕುಣಿಸುತ್ತಿದ್ದರು. ಈಗಲೂ ಅವರು ಅಟಾಟೋಪ ನಿಂತಿಲ್ಲ. ಸುರಪುರದ ವೀರದೊರೆ ವೆಂಕಟಪ್ಪ ನಾಯಕರನ್ನು ಔರಂಗಜೇಬ ಕೂಡ ಸೋಲಿಸಲು ಸಾಧ್ಯವಾಗದೆ, ಆತನ ಶೌರ್ಯ ಪರಾಕ್ರಮವನ್ನು ನೋಡಿ ಬಿರುದು ಬಾವಲಿ ನೀಡಿ ಹೋದ. ಆದರೆ ಇಂಥ ಶೂರ ದೊರೆಯನ್ನು ಜ್ಯೋತಿಷ್ಯರು ಯಾವ ಮದ್ದು ಗುಂಡುಗಳನ್ನು ಬಳಸದೆ ಕೇವಲ ತಮ್ಮ ಶಾಸ್ತ್ರದ ಬಲದಿಂದ “ ರಾಜಾ ವೆಂಕಟಪ್ಪ ನಾಯಕ ಮುಂದಿನ ಯುದ್ಧದಲ್ಲಿ ಸೋತು ಹತನಾಗುತ್ತಾನೆ” ಎಂದು ಜ್ಯೋತಿಷ್ಯ ನುಡಿದರು. ಇದನ್ನು ಕೇಳಿ ಕಂಗಾಲಾದ ರಾಜ ಊರು ಬಿಟ್ಟು ಓಡಿ ಹೋಗಿಬಿಟ್ಟ. ವಾಸ್ತವವೆಂದರೆ ಮುಂದೆ ಯಾವ ಯುದ್ಧಗಳೂ ನಡೆಯೋದಿಲ್ಲ, ಆತ ಹತನಾಗುವ ಪ್ರಶ್ನೆಯೇ ಬರುತ್ತಿರಲಿಲ್ಲ. ಔರಂಗಜೇಬ ಸೋಲಿಸದೆ ಇರುವ ದೊರೆಯನ್ನು ಶಾಸ್ತ್ರಿಕರು ಸೋಲಿಸಿಬಿಟ್ಟರು.
ಹಲವು ವರ್ಷಗಳ ಹಿಂದೆ ಜ್ಯೋತಿಷ್ಯಿಯ ಮಾತು ಕೇಳಿ ಮದುವೆಯಾದ ನೇಪಾಳದ ದೊರೆ ಬೀರೇಂದ್ರ ನಾವೆಲ್ಲ ನೋಡ ನೋಡುತ್ತಲೆ ತನ್ನ ಇಡೀ ಪರಿವಾರವನ್ನು ಬಂದೂಕಿನಿಂದ ಹತ್ಯೆಗೈದು, ತಾನು ಹತನಾದ ದುರಂತ ಚಿತ್ರ ಕಣ್ಣ ಮುಂದೆಯೆ ಇದೆ. ಯಾರಲ್ಲಿ ಮನೋಬಲವಿಲ್ಲವೋ ಆತನ ಮಾತ್ರ ಜ್ಯೋತಿಷ್ಯರನ್ನು, ಕಣಿ ಹೇಳುವವರನ್ನು, ಪಂಚಾಂಗ ತಿರುವುವರನ್ನು ಭೇಟಿಯಾಗುತ್ತಾನೆ. ಯಾರಿಗೆ ತನ್ನ ಮೇಲೆ ತನಗೆ ನಂಬಿಕೆ ಇದೆಯೋ ಅವರು ಎಂದೂ ಜ್ಯೋತಿಷ್ಯಗಳೆಂಬ ಹಗಲುಗಳ್ಳರ ಹತ್ತಿರ ಕೂಡ ಸುಳಿಯಲಾರರು.
ಹಿಂದಿನ ಮಹಾತ್ಮ ಬುದ್ಧ, ಬಸವಣ್ಣನವರು ಸಹ ಈ ಜ್ಯೋತಿಷ್ಯಗಾರರಿಗೆ ಚಾಟಿ ಏಟು ಕೊಟ್ಟಿದ್ದಾರೆ. ಜಕ್ಕಣ್ಣಯ ಎಂಬ ಶರಣನೊಬ್ಬ

ವೇದ ದೊಡ್ಡದೆಂದು ನುಡಿವ ವದಿಯ ಮಾತ ಹೇಳಲಾಗದು
ಕೇಳಲಾಗದು, ಶಾಸ್ತ್ರ ದೊಡ್ಡದೆಂದು ನುಡಿವ ಪಾತಕನ ಮಾತ ಹೇಳಲಾಗದು ಕೇಳಲಾಗದು.
ಪುರಾಣ ದೊಡ್ಡದೆಂದು ನುಡಿದ ಪುಂಡರ ಮಾತ ಹೇಳಲಾಗದು ಕೇಳಲಾಗದು
ಆಗಮ ದೊಡ್ಡದೆಂದು ನುಡಿವ ಅಹಂಕಾರಿಯ ಮಾತ ಹೇಳಲಾಗದು, ಕೇಳಲಾಗದು
ಜ್ಯೋತಿಷ್ಯ ದೊಡ್ಡದೆಂದು ನುಡಿವ ಘಾತಕವ ಮಾತ ಹೇಳಲಾಗದು, ಕೇಳಲಾಗದು
ಇದನ್ನು ಓದಿ: ಜನರ ತಲೆಗೆ ಮೌಢ್ಯದ ‘ಚಿಪ್ಪು’!

ಎಂದು ಸ್ಪಷ್ಟವಾಗಿ ಇವರನ್ನು ಜಜ್ಜನೆ ಜರಿದಿದ್ದಾರೆ.
ಸೊಲ್ಲಾಪುರದ ಸಿದ್ಧರಾಮ ಶಿವಯೋಗಿಗಳು
ಲಗ್ನಕ್ಕೆ ವಿಘ್ನಬಾರದೆಂದು ಜ್ಯೋತಿಷ್ಯ ಕೇಳುವ ಅಣ್ಣಗಳಿರಾ
ಕೇಳಿರಯ್ಯಾ : ಅಂದೇಕೆ ವೀರಭದ್ರನ ಸೆರಗ ಸುಟ್ಟಿತ್ತು ?
ಅಂದೇಕೆ ಮಹಾದೇವಿಯವರ ಬಲಭುಜ ಹಾರಿತ್ತು ?
ಇಂದೇಕೆ ಎನ್ನ ವಾಮನೇತ್ರ ಚರಿಸಿತ್ತು ? ಕಪಿಲಸಿದ್ದಮಲ್ಲಿಕಾರ್ಜುನಾ

ಎಂದು ಇತಿಹಾಸದ ಪುಟಗಳಲ್ಲಿ ನಡೆದ ಘಟನೆಗಳನ್ನು ಉದಾಹರಿಸಿ ನಮ್ಮ ಕಣ್ಣು ತೆರೆಸುತ್ತಾರೆ. ಜ್ಯೋತಿಷ್ಯ ನೋಡಿಯೆ ಮದುಯಾದ ಎಷ್ಟೋ ಜೋಡಿಗಳು ವರ್ಷ ತುಂಬುವಷ್ಟರಲ್ಲಿಯೆ ಡೈವೋರ್ಸ ಪಡೆದಿವೆ. ಜ್ಯೋತಿಷ್ಯ ನೋಡಿಯೇ ಪ್ರಧಾನಿಯ ಪಟ್ಟ ಮತ್ತೆ ಇನ್ನಷ್ಟು ದಿನ ಉಳಿಸಿಕೊಳ್ಳಬೇಕೆಂದ ದೇವೇಗೌಡರು ರಾಜ್ಯಕ್ಕೆ ಮರಳಿ ಬರಲಿಲ್ಲವೆ ? ಜ್ಯೋತಿಷ್ಯಿಯ ಮಾತು ಕೇಳಿ ಹದಿ ಹರೆಯದ ಹುಡುಗಿಯನ್ನು ನಗ್ನ ಮಾಡಿ ಪೂಜಿಸಿದ ಆಂದ್ರದ ಮುಖ್ಯ ಮಂತ್ರಿ ಎನ್.ಟಿ.ಆರ್. ಅಧಿಕಾರ ಶಾಶ್ವತವಾಗಿ ಉಳಿಯಿತೆ ?

ಗಿಳಿಯೋದಿ ಫಲವೇನು
ಬೆಕ್ಕು ಬಹುದ ಹೇಳಲರಿಯದು
ಜಗವೆಲ್ಲ ಕಾಬ ಕಣ್ಣು, ತನ್ನ ಕೊಂಬ ಕೊಲ್ಲೆಯ
ಕಾಣಲರಿಯದು.
ಇದಿರ ಗುಣವ ಬಲ್ಲೆವೆಂಬರು ತಮ್ಮ ಗುಣವನರಿಯರು
ಕೂಡಲಸಂಗಮದೇವಾ

ಮಡಿವಾಳ ಮಾಚಿದೇವನೆಂಬ ಶರಣರಂತು ‘ಗಿಳಿಯೋದಿ ತನ್ನ ಅಶುದ್ಧವ ತನ್ನ ಮೂಗಿನಲಿ ಕಚ್ಚಿ ತೆಗೆದಂತೆ’ ಜ್ಯೋತಿಷ್ಯ ಕಲಿತವರ ಹಣೆಬರಹ ಎಂದು ಹೇಳಿತ್ತಾರೆ.
ಒಟ್ಟಿನಲ್ಲಿ ನಮ್ಮ ಬದುಕು ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲಿಯೆ ಇದೆ. ಇನ್ನಾರ ಕೈಯಲ್ಲಿಯೂ ಅದು ಇಲ್ಲವೆ ಇಲ್ಲ. ಆದ್ದರಿಂದಲೆ ಮಹಾತ್ಮ ಬುದ್ಧ ‘ನಿನಗೆ ನೀನೇ ಬೆಳಕು’ ಎಂದು ಹೇಳಿದರು. ನಮಗೆ ನಾವೆ ಬೆಳಕಾಗಬೇಕೆ ವಿನಃ ಕೊಳಕರ ಮಾತು ಕೇಳಿಕೊಂಡು ಜನ ಸಾಮಾನ್ಯರು ಹೊಲಸಿನ ಹೊಂಡಕ್ಕೆ ಬೀಳಬಾರದು. ತಮ್ಮ ಬದುಕನ್ನು ಕೆಡಿಸಿಕೊಳ್ಳಬಾರದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...