Homeಅಂಕಣಗಳುಜ್ಯೋತಿಷ್ಯಿಯ ಮಾತು ಕೇಳಿ ತನ್ನ ಮಗನ ಕೊಂದ ಪಾಪಿ ! ಇತ್ಯಾದಿ…

ಜ್ಯೋತಿಷ್ಯಿಯ ಮಾತು ಕೇಳಿ ತನ್ನ ಮಗನ ಕೊಂದ ಪಾಪಿ ! ಇತ್ಯಾದಿ…

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಜ್ಯೋತಿಷ್ಯಿಯ ಮಾತು ಕೇಳಿಕೊಂಡು ಚಿಕ್ಕಮಗಳೂರು ಜಿಲ್ಲೆಯ ಬೂಚೇನಹಳ್ಳಿಯ ಯುವಕನೊಬ್ಬ ತನಗೆ ಹುಟ್ಟಿದ ಹೆಣ್ಣು ಮಗುವನ್ನು ಕತ್ತು ಹಿಸುಕಿ ಸಾಯಿಸಿದ ಘಟನೆ ಮನುಷ್ಯ ಸಮಾನವನ್ನು ಬೆಚ್ಚಿ ಬೀಳಿಸಿದೆ. ದಿನ ಬೆಳಗಾದರೆ ಟಿ.ವಿ.ಯಲ್ಲಿ ಒಕ್ಕರಿಸಿ ಕನ್ನಡ ನಾಡಿನ ಜನಗಳ ಬುದ್ಧಿಯ ಮೇಲೆ ಕಲ್ಲು ಚಪ್ಪಡಿ ಎಳೆಯುವ ಜ್ಯೋತಿಷ್ಯಿಗಾರರ ಕಾಟ ಅತಿಯಾಯಿತು ಎನ್ನದೆ ವಿಧಿ ಇಲ್ಲವಾಗಿದೆ. ಯಾರು , ಜ್ಯೋತಿಷ್ಯ, ಭವಿಷ್ಯ, ವಾಸ್ತುಗಳನ್ನು ನಂಬುತ್ತಾರೋ ಮೊದಲು ಅವರನ್ನು ಮಾನಸಿಕ ತಜ್ಞರ ಹತ್ತಿರ ಕರೆದುಕೊಂಡು ಹೋಗಿ ಎಂಬ ಸ್ವಾಮಿ ವಿವೇಕಾನಂದರ ಮಾತು ಇಂದು ಹೆಚ್ಚು ಪ್ರಸ್ತುತವೆನಿಸುತ್ತಿದೆ.

ಪ್ರತಿಯೊಬ್ಬರ ಬದುಕಿನಲ್ಲಿ ಬರಬಹುದಾದ ಸಂಕಟ ನೋವುಗಳಿಗೆ ಜ್ಯೋತಿಷ್ಯ ಪರಿಹಾರ ಅಲ್ಲವೇ ಅಲ್ಲ. ಯಾರೋ ಒಬ್ಬ ಮಾಂತ್ರಿಕ ಶಕ್ತಿ ಹೊಂದಿದ್ದೇನೆಂದು ಎಲ್ಲರ ನಂಬಿಸುತ್ತಿದ್ದವನೊಬ್ಬ ಹಸಿವಿನಿಂದ ಕಂಗಾಲಾಗಿ ಮನೆಯೊಂದಕ್ಕೆ ಹೋಗಿ ಬಿಕ್ಷೆ ಬೇಡುತ್ತ, “ ತಾಯಿ ನಾಲ್ಕಾರು ದಿನಗಳಿಂದ ಊಟ ಮಾಡಿಲ್ಲ, ಒಂದು ರೊಟ್ಟಿ ಕೊಡಿ ಎಂದು ಅಂಗಲಾಚಿದನಂತೆ. ಅದಕ್ಕೆ ಪ್ರತಿಕ್ರಿಯಿಸಿದ ಆ ಮನೆಯ ಒಡತಿ, ವಾಸ್ತವ ಅರ್ಥ ಮಾಡಿಕೊಳ್ಳದೆ “ ಓ ಮಹಾತ್ಮನೆ ನೀನು ನನಗೇನು ಕೊಡುತ್ತಿ ?” ಎಂದು ಕೇಳಿದ್ದೆ ತಡ ಆ ಪಾಕಡಾ ಆಸಾಮಿ “ ನಿನಗೆ ಹಸಿವಿಲ್ಲದ ಮಂತ್ರ ಕಲಿಸಿಕೊಡುತ್ತೇನೆ !?” ಎಂದು ಹೇಳಿದನಂತೆ. ಆ ಮಹಿಳೆ ಲಗುಬಗೆಯಿಂದ ತನ್ನ ಮನೆಯಲ್ಲಿದ್ದ ರೊಟ್ಟಿಯೊಂದನ್ನು ಕೊಟ್ಟು ನಂತರ ಯೋಚಿಸತೊಡಗಿದಳಂತೆ. ಹಸಿವಿಲ್ಲದ ಮಂತ್ರ ನನಗೆ ಕಲಿಸುವ ಬದಲು, ಆತನಗೆ ತನ್ನಷ್ಟಕ್ಕೆ ತಾನು ಹಸಿವೆ ಆಗದೆ ಇರುವ ಮಂತ್ರ ಹೇಳಿಕೊಂಡು ಹಸಿವು ನೀಗಿಸಿಕೊಳ್ಳಬಹುದಿತ್ತಲ್ಲ ! ಎಂದು.

ಮಂತ್ರ, ಶಾಸ್ತ್ರ, ಬೊಗಳೆ ಪುರಾಣಗಳಿಗೆ ಹಸಿವನ್ನು ನೀಗಿಸುವ ಶಕ್ತಿ ಇರಲು ಸಾಧ್ಯವೇ ಇಲ್ಲ. ಹಾಗೆಯೇ ಜ್ಯೋತಿಷ್ಯವೂ ಸಹ. ಜ್ಯೋತಿಷ್ಯದ ಹೆಸರಿನ ಮೇಲೆ ಇಂದು ಸಮಾಜದಲ್ಲಿ ನಡೆದಿರುವ ನಂಗಾನಾಚ ಹೇಸಿಗೆ ತರಿಸುತ್ತಿದೆ. ಬರಗೆಟ್ಟ ರಾಜಕಾರಣಿಗಳು, ಭ್ರಷ್ಟ ಅಧಿಕಾರಶಾಹಿ ಜನಗಳು, ಲಜ್ಜೆಗೆಟ್ಟ ಬಂಡವಾಳ ಶಾಹಿಗಳ ಹಾದರದ ಕೂಸೆ ಜ್ಯೋತಿಷ್ಯ , ವಾಸ್ತು, ಮಂತ್ರ, ತಂತ್ರ ಇತ್ಯಾದಿ. ‘ಮಂತ್ರಕ್ಕೆ ಮಾವಿನ ಕಾಯಿಯೂ ಉದರೊಲ್ಲ’ ಎಂಬುದು ಬಡಜನತೆಗೆ ಗೊತ್ತು. ಆದರೆ ಅವರು ತಮಗಿಂತಲೂ ದೊಡ್ಡವರು, ಶ್ಯಾಣ್ಯಾ ಜನ ಎಂದು ಕೊಂಡ ಶ್ರೀಮಂತರು, ರಾಜಕಾಣಿಗಳು ಹಾಗೂ ಅಧಿಕಾರಿಗಳ ನಡೆ ನುಡಿಗಳಿಂದ ಪ್ರಭಾವಿತಗೊಂಡಿರುತ್ತಾರೆ.
ನಮ್ಮನ್ನು ಆಳುವ ಸರಕಾರಗಳು ತಮ್ಮ ಕೈಯಲ್ಲಿಯೆ ಇರುವ ಮುಜರಾಯಿ ಇಲಾಖೆಯ ಮೂಲಕ ನಿತ್ಯ ದೇವರಿಗೆ ನಡೆಸುವ ಅಭಿಷೇಕ, ಕುಂಭಾಬಿಷೇಕ, ರುದ್ರಾಭಿಷೇಕ, ಕೋಟಿ ಬಿಲ್ವ ಅರ್ಚನೆ, ಪರ್ಜನ್ಯ ಜಪ ಮುಂತಾದ ಅರ್ಥಹೀನ ಕೆಲಸವನ್ನು ಯಾವ ನಾಚಿಕೆಯೂ ಇಲ್ಲದೆ ನಡೆಸುತ್ತಿದೆ. ಅದೇನೋ ಹೇಳುತ್ತಾರಲ್ಲ, ದೊಡ್ಡವರೆ ಓಡಾಡಿ ಮೂತ್ರ ಮಾಡುವಾಗ , ಇನ್ನು ಚಿಕ್ಕವರು ? ಶಾಲಾ ಕಾಲೇಜು ಓದಿ ಡಿಗ್ರಿಯ ಮೂಲಕ ಬಹುದೊಡ್ಡ ಹುದ್ದೆ ಹೊಂದಿದ್ದೇವೆ ಎಂಬುವವರೆ ಮಂತ್ರವಾದಿಗಳಿಗೆ ಪಿಗ್ಗಿ ಬಿದ್ದಿದ್ದಾರೆ. ಹೇಗಾದರೂ ಸೈ ಜನತೆಯ ಮನವನ್ನು ಗೆಲ್ಲಬೇಕು. ಅವರ ಮೌನಸಿಕ ದೌರ್ಬಲ್ಯವನ್ನು ಬೆಳೆಸಿಕೊಂಡು ಮೇಲೆ ಬರಬೇಕೆಂದು ಹೊಂಚು ಹಾಕಿದ ರಾಜಕಾಣಿಗಳಂತೂ ನಿತ್ಯವೂ ಗುಡಿ,ಮಸೀದಿ, ಚರ್ಚಗಳಿಗೆ ಎಡತಾಕುತ್ತಾರೆ. ಇದರಿಂದಾಗಿ ದುಡಿಯದೆ ದುಃಖ ಪಡದೆ ಆರಾಮ ಇರುವ ಮುಲ್ಲಾ, ಪಾದ್ರಿ, ಪುರೋಹಿತ ಇವರೆಲ್ಲರನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡು ಆಟ ಆಡುತ್ತಾನೆ.
ಇದನ್ನು ಓದಿ:  ಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

ಅಂದಿನ ರಾಜ ಮಹಾರಾಜರನ್ನೆ ತಮ್ಮ ಶಾಸ್ತ್ರದ ಬಲದಿಂದ ಪೋಜರಾಜರಂತೆ ಕುಣಿಸುತ್ತಿದ್ದರು. ಈಗಲೂ ಅವರು ಅಟಾಟೋಪ ನಿಂತಿಲ್ಲ. ಸುರಪುರದ ವೀರದೊರೆ ವೆಂಕಟಪ್ಪ ನಾಯಕರನ್ನು ಔರಂಗಜೇಬ ಕೂಡ ಸೋಲಿಸಲು ಸಾಧ್ಯವಾಗದೆ, ಆತನ ಶೌರ್ಯ ಪರಾಕ್ರಮವನ್ನು ನೋಡಿ ಬಿರುದು ಬಾವಲಿ ನೀಡಿ ಹೋದ. ಆದರೆ ಇಂಥ ಶೂರ ದೊರೆಯನ್ನು ಜ್ಯೋತಿಷ್ಯರು ಯಾವ ಮದ್ದು ಗುಂಡುಗಳನ್ನು ಬಳಸದೆ ಕೇವಲ ತಮ್ಮ ಶಾಸ್ತ್ರದ ಬಲದಿಂದ “ ರಾಜಾ ವೆಂಕಟಪ್ಪ ನಾಯಕ ಮುಂದಿನ ಯುದ್ಧದಲ್ಲಿ ಸೋತು ಹತನಾಗುತ್ತಾನೆ” ಎಂದು ಜ್ಯೋತಿಷ್ಯ ನುಡಿದರು. ಇದನ್ನು ಕೇಳಿ ಕಂಗಾಲಾದ ರಾಜ ಊರು ಬಿಟ್ಟು ಓಡಿ ಹೋಗಿಬಿಟ್ಟ. ವಾಸ್ತವವೆಂದರೆ ಮುಂದೆ ಯಾವ ಯುದ್ಧಗಳೂ ನಡೆಯೋದಿಲ್ಲ, ಆತ ಹತನಾಗುವ ಪ್ರಶ್ನೆಯೇ ಬರುತ್ತಿರಲಿಲ್ಲ. ಔರಂಗಜೇಬ ಸೋಲಿಸದೆ ಇರುವ ದೊರೆಯನ್ನು ಶಾಸ್ತ್ರಿಕರು ಸೋಲಿಸಿಬಿಟ್ಟರು.
ಹಲವು ವರ್ಷಗಳ ಹಿಂದೆ ಜ್ಯೋತಿಷ್ಯಿಯ ಮಾತು ಕೇಳಿ ಮದುವೆಯಾದ ನೇಪಾಳದ ದೊರೆ ಬೀರೇಂದ್ರ ನಾವೆಲ್ಲ ನೋಡ ನೋಡುತ್ತಲೆ ತನ್ನ ಇಡೀ ಪರಿವಾರವನ್ನು ಬಂದೂಕಿನಿಂದ ಹತ್ಯೆಗೈದು, ತಾನು ಹತನಾದ ದುರಂತ ಚಿತ್ರ ಕಣ್ಣ ಮುಂದೆಯೆ ಇದೆ. ಯಾರಲ್ಲಿ ಮನೋಬಲವಿಲ್ಲವೋ ಆತನ ಮಾತ್ರ ಜ್ಯೋತಿಷ್ಯರನ್ನು, ಕಣಿ ಹೇಳುವವರನ್ನು, ಪಂಚಾಂಗ ತಿರುವುವರನ್ನು ಭೇಟಿಯಾಗುತ್ತಾನೆ. ಯಾರಿಗೆ ತನ್ನ ಮೇಲೆ ತನಗೆ ನಂಬಿಕೆ ಇದೆಯೋ ಅವರು ಎಂದೂ ಜ್ಯೋತಿಷ್ಯಗಳೆಂಬ ಹಗಲುಗಳ್ಳರ ಹತ್ತಿರ ಕೂಡ ಸುಳಿಯಲಾರರು.
ಹಿಂದಿನ ಮಹಾತ್ಮ ಬುದ್ಧ, ಬಸವಣ್ಣನವರು ಸಹ ಈ ಜ್ಯೋತಿಷ್ಯಗಾರರಿಗೆ ಚಾಟಿ ಏಟು ಕೊಟ್ಟಿದ್ದಾರೆ. ಜಕ್ಕಣ್ಣಯ ಎಂಬ ಶರಣನೊಬ್ಬ

ವೇದ ದೊಡ್ಡದೆಂದು ನುಡಿವ ವದಿಯ ಮಾತ ಹೇಳಲಾಗದು
ಕೇಳಲಾಗದು, ಶಾಸ್ತ್ರ ದೊಡ್ಡದೆಂದು ನುಡಿವ ಪಾತಕನ ಮಾತ ಹೇಳಲಾಗದು ಕೇಳಲಾಗದು.
ಪುರಾಣ ದೊಡ್ಡದೆಂದು ನುಡಿದ ಪುಂಡರ ಮಾತ ಹೇಳಲಾಗದು ಕೇಳಲಾಗದು
ಆಗಮ ದೊಡ್ಡದೆಂದು ನುಡಿವ ಅಹಂಕಾರಿಯ ಮಾತ ಹೇಳಲಾಗದು, ಕೇಳಲಾಗದು
ಜ್ಯೋತಿಷ್ಯ ದೊಡ್ಡದೆಂದು ನುಡಿವ ಘಾತಕವ ಮಾತ ಹೇಳಲಾಗದು, ಕೇಳಲಾಗದು
ಇದನ್ನು ಓದಿ: ಜನರ ತಲೆಗೆ ಮೌಢ್ಯದ ‘ಚಿಪ್ಪು’!

ಎಂದು ಸ್ಪಷ್ಟವಾಗಿ ಇವರನ್ನು ಜಜ್ಜನೆ ಜರಿದಿದ್ದಾರೆ.
ಸೊಲ್ಲಾಪುರದ ಸಿದ್ಧರಾಮ ಶಿವಯೋಗಿಗಳು
ಲಗ್ನಕ್ಕೆ ವಿಘ್ನಬಾರದೆಂದು ಜ್ಯೋತಿಷ್ಯ ಕೇಳುವ ಅಣ್ಣಗಳಿರಾ
ಕೇಳಿರಯ್ಯಾ : ಅಂದೇಕೆ ವೀರಭದ್ರನ ಸೆರಗ ಸುಟ್ಟಿತ್ತು ?
ಅಂದೇಕೆ ಮಹಾದೇವಿಯವರ ಬಲಭುಜ ಹಾರಿತ್ತು ?
ಇಂದೇಕೆ ಎನ್ನ ವಾಮನೇತ್ರ ಚರಿಸಿತ್ತು ? ಕಪಿಲಸಿದ್ದಮಲ್ಲಿಕಾರ್ಜುನಾ

ಎಂದು ಇತಿಹಾಸದ ಪುಟಗಳಲ್ಲಿ ನಡೆದ ಘಟನೆಗಳನ್ನು ಉದಾಹರಿಸಿ ನಮ್ಮ ಕಣ್ಣು ತೆರೆಸುತ್ತಾರೆ. ಜ್ಯೋತಿಷ್ಯ ನೋಡಿಯೆ ಮದುಯಾದ ಎಷ್ಟೋ ಜೋಡಿಗಳು ವರ್ಷ ತುಂಬುವಷ್ಟರಲ್ಲಿಯೆ ಡೈವೋರ್ಸ ಪಡೆದಿವೆ. ಜ್ಯೋತಿಷ್ಯ ನೋಡಿಯೇ ಪ್ರಧಾನಿಯ ಪಟ್ಟ ಮತ್ತೆ ಇನ್ನಷ್ಟು ದಿನ ಉಳಿಸಿಕೊಳ್ಳಬೇಕೆಂದ ದೇವೇಗೌಡರು ರಾಜ್ಯಕ್ಕೆ ಮರಳಿ ಬರಲಿಲ್ಲವೆ ? ಜ್ಯೋತಿಷ್ಯಿಯ ಮಾತು ಕೇಳಿ ಹದಿ ಹರೆಯದ ಹುಡುಗಿಯನ್ನು ನಗ್ನ ಮಾಡಿ ಪೂಜಿಸಿದ ಆಂದ್ರದ ಮುಖ್ಯ ಮಂತ್ರಿ ಎನ್.ಟಿ.ಆರ್. ಅಧಿಕಾರ ಶಾಶ್ವತವಾಗಿ ಉಳಿಯಿತೆ ?

ಗಿಳಿಯೋದಿ ಫಲವೇನು
ಬೆಕ್ಕು ಬಹುದ ಹೇಳಲರಿಯದು
ಜಗವೆಲ್ಲ ಕಾಬ ಕಣ್ಣು, ತನ್ನ ಕೊಂಬ ಕೊಲ್ಲೆಯ
ಕಾಣಲರಿಯದು.
ಇದಿರ ಗುಣವ ಬಲ್ಲೆವೆಂಬರು ತಮ್ಮ ಗುಣವನರಿಯರು
ಕೂಡಲಸಂಗಮದೇವಾ

ಮಡಿವಾಳ ಮಾಚಿದೇವನೆಂಬ ಶರಣರಂತು ‘ಗಿಳಿಯೋದಿ ತನ್ನ ಅಶುದ್ಧವ ತನ್ನ ಮೂಗಿನಲಿ ಕಚ್ಚಿ ತೆಗೆದಂತೆ’ ಜ್ಯೋತಿಷ್ಯ ಕಲಿತವರ ಹಣೆಬರಹ ಎಂದು ಹೇಳಿತ್ತಾರೆ.
ಒಟ್ಟಿನಲ್ಲಿ ನಮ್ಮ ಬದುಕು ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲಿಯೆ ಇದೆ. ಇನ್ನಾರ ಕೈಯಲ್ಲಿಯೂ ಅದು ಇಲ್ಲವೆ ಇಲ್ಲ. ಆದ್ದರಿಂದಲೆ ಮಹಾತ್ಮ ಬುದ್ಧ ‘ನಿನಗೆ ನೀನೇ ಬೆಳಕು’ ಎಂದು ಹೇಳಿದರು. ನಮಗೆ ನಾವೆ ಬೆಳಕಾಗಬೇಕೆ ವಿನಃ ಕೊಳಕರ ಮಾತು ಕೇಳಿಕೊಂಡು ಜನ ಸಾಮಾನ್ಯರು ಹೊಲಸಿನ ಹೊಂಡಕ್ಕೆ ಬೀಳಬಾರದು. ತಮ್ಮ ಬದುಕನ್ನು ಕೆಡಿಸಿಕೊಳ್ಳಬಾರದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...