Homeಮುಖಪುಟ'ಬ್ರಿಟಿಷರೊಂದಿಗೆ ಮೈತ್ರಿ ಮಾಡಿಕೊಂಡಿದ್ದವರು ಯಾರು..?'; ಪ್ರಧಾನಿ ಮೋದಿಯ 'ಮುಸ್ಲಿಂ ಲೀಗ್' ಟೀಕೆಗೆ ರಾಹುಲ್ ತಿರುಗೇಟು

‘ಬ್ರಿಟಿಷರೊಂದಿಗೆ ಮೈತ್ರಿ ಮಾಡಿಕೊಂಡಿದ್ದವರು ಯಾರು..?’; ಪ್ರಧಾನಿ ಮೋದಿಯ ‘ಮುಸ್ಲಿಂ ಲೀಗ್’ ಟೀಕೆಗೆ ರಾಹುಲ್ ತಿರುಗೇಟು

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್ ಛಾಪು’ ಟೀಕೆಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ರಾಜಕೀಯ ವೇದಿಕೆಗಳಲ್ಲಿ ಸುಳ್ಳು ಹೇಳಿಕೆಗಳ ಹೊರತಾಗಿಯೂ ಇತಿಹಾಸವು ಬದಲಾಗದೆ ಉಳಿದಿದೆ’ ಎಂದು ಹೇಳಿದ್ದಾರೆ.

‘2024ರ ಲೋಕಸಭೆ ಚುನಾವಣೆಯು ಸಿದ್ಧಾಂತಗಳ ಘರ್ಷಣೆಯನ್ನು ಪ್ರತಿನಿಧಿಸುತ್ತದೆ. ಒಂದು ಕಡೆ ಭಾರತವನ್ನು ಏಕೀಕರಿಸುವಲ್ಲಿ ತನ್ನ ಪಾತ್ರಕ್ಕೆ ಹೆಸರುವಾಸಿಯಾದ ಕಾಂಗ್ರೆಸ್ ನಿಂತಿದ್ದರೆ, ಇನ್ನೊಂದು ಬದಿಯಲ್ಲಿ ವಿಭಜನೆಯನ್ನು ಶಾಶ್ವತಗೊಳಿಸುತ್ತಿರುವವರು’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಈ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧವಾಗಿದೆ! ಒಂದು ಕಡೆ, ಭಾರತವನ್ನು ಯಾವಾಗಲೂ ಒಗ್ಗೂಡಿಸುವ ಕಾಂಗ್ರೆಸ್ ಇದೆ, ಮತ್ತು ಇನ್ನೊಂದು ಬದಿಯಲ್ಲಿ ಯಾವಾಗಲೂ ಜನರನ್ನು ವಿಭಜಿಸಲು ಪ್ರಯತ್ನಿಸುವವರು” ಎಂದು ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ರಾಹುಲ್ ಹೇಳಿದ್ದಾರೆ.

ದೇಶವನ್ನು ವಿಭಜಿಸುವ ಗುರಿ ಹೊಂದಿರುವ ಶಕ್ತಿಗಳ ಪರವಾಗಿ ಯಾರು ಮತ್ತು ಅದರ ಏಕತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಯಾರು ಎಂದು ಐತಿಹಾಸಿಕ ಘಟನೆಗಳು ತೋರಿಸುತ್ತವೆ ಎಂದು ಅವರು ಹೇಳಿದರು.

“ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ, ಬ್ರಿಟಿಷರೊಂದಿಗೆ ಮೈತ್ರಿ ಮಾಡಿಕೊಂಡವರು ಯಾರು? ಭಾರತದ ಜೈಲುಗಳು ಕಾಂಗ್ರೆಸ್ ನಾಯಕರಿಂದ ತುಂಬಿದಾಗ, ದೇಶವನ್ನು ವಿಭಜಿಸುವ ಶಕ್ತಿಗಳೊಂದಿಗೆ ರಾಜ್ಯಗಳಲ್ಲಿ ಸರ್ಕಾರವನ್ನು ನಡೆಸುತ್ತಿದ್ದವರು ಯಾರು” ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ರಾಜಕೀಯ ವೇದಿಕೆಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದರೂ ಇತಿಹಾಸ ಬದಲಾಗದೆ ಉಳಿದಿದೆ ಎಂದರು.

‘ಕಾಂಗ್ರೆಸ್ ಪ್ರಣಾಳಿಕೆಯು ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನಿಂದ ಪ್ರೇರಿತವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪದೇ ಪದೇ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಪ್ರತಿಕ್ರಿಯೆ ನೀಡಿದ್ದಾರೆ.

“ಪ್ರತಿ ಪುಟವೂ ಭಾರತವನ್ನು ತುಂಡು ತುಂಡಾಗಿ ಒಡೆಯುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯು ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಅದೇ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ. ಇದು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆಯನ್ನು ಹೊಂದಿದೆ ಮತ್ತು ಉಳಿದಿರುವುದೂ ಸಂಪೂರ್ಣವಾಗಿ ಎಡಪಂಥೀಯರ ಪ್ರಾಬಲ್ಯವಾಗಿದೆ’ ಎಂದು, ಕಾಂಗ್ರೆಸ್‌ ಪಕ್ಷದ ಜಾತಿ ಗಣತಿ ಮತ್ತು ಸಂಪತ್ತಿನ ಮರು ಹಂಚಿಕೆಯ ಘೋಷಣೆಗಳನ್ನು ಟೀಕಿಸಿ ಮೋದಿ ಹೇಳಿಕೆ ನೀಡಿದ್ದರು.

ತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಳ ವಿರುದ್ಧ ಕಾಂಗ್ರೆಸ್ ಸೋಮವಾರ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದೆ.

ಇದನ್ನೂ ಓದಿ; ಅವಹೇಳನಕಾರಿ ಹೇಳಿಕೆ ಆರೋಪ; ತರೂರ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ರಾಜೀವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...