Homeಮುಖಪುಟ'ಬ್ರಿಟಿಷರೊಂದಿಗೆ ಮೈತ್ರಿ ಮಾಡಿಕೊಂಡಿದ್ದವರು ಯಾರು..?'; ಪ್ರಧಾನಿ ಮೋದಿಯ 'ಮುಸ್ಲಿಂ ಲೀಗ್' ಟೀಕೆಗೆ ರಾಹುಲ್ ತಿರುಗೇಟು

‘ಬ್ರಿಟಿಷರೊಂದಿಗೆ ಮೈತ್ರಿ ಮಾಡಿಕೊಂಡಿದ್ದವರು ಯಾರು..?’; ಪ್ರಧಾನಿ ಮೋದಿಯ ‘ಮುಸ್ಲಿಂ ಲೀಗ್’ ಟೀಕೆಗೆ ರಾಹುಲ್ ತಿರುಗೇಟು

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್ ಛಾಪು’ ಟೀಕೆಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ರಾಜಕೀಯ ವೇದಿಕೆಗಳಲ್ಲಿ ಸುಳ್ಳು ಹೇಳಿಕೆಗಳ ಹೊರತಾಗಿಯೂ ಇತಿಹಾಸವು ಬದಲಾಗದೆ ಉಳಿದಿದೆ’ ಎಂದು ಹೇಳಿದ್ದಾರೆ.

‘2024ರ ಲೋಕಸಭೆ ಚುನಾವಣೆಯು ಸಿದ್ಧಾಂತಗಳ ಘರ್ಷಣೆಯನ್ನು ಪ್ರತಿನಿಧಿಸುತ್ತದೆ. ಒಂದು ಕಡೆ ಭಾರತವನ್ನು ಏಕೀಕರಿಸುವಲ್ಲಿ ತನ್ನ ಪಾತ್ರಕ್ಕೆ ಹೆಸರುವಾಸಿಯಾದ ಕಾಂಗ್ರೆಸ್ ನಿಂತಿದ್ದರೆ, ಇನ್ನೊಂದು ಬದಿಯಲ್ಲಿ ವಿಭಜನೆಯನ್ನು ಶಾಶ್ವತಗೊಳಿಸುತ್ತಿರುವವರು’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಈ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧವಾಗಿದೆ! ಒಂದು ಕಡೆ, ಭಾರತವನ್ನು ಯಾವಾಗಲೂ ಒಗ್ಗೂಡಿಸುವ ಕಾಂಗ್ರೆಸ್ ಇದೆ, ಮತ್ತು ಇನ್ನೊಂದು ಬದಿಯಲ್ಲಿ ಯಾವಾಗಲೂ ಜನರನ್ನು ವಿಭಜಿಸಲು ಪ್ರಯತ್ನಿಸುವವರು” ಎಂದು ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ರಾಹುಲ್ ಹೇಳಿದ್ದಾರೆ.

ದೇಶವನ್ನು ವಿಭಜಿಸುವ ಗುರಿ ಹೊಂದಿರುವ ಶಕ್ತಿಗಳ ಪರವಾಗಿ ಯಾರು ಮತ್ತು ಅದರ ಏಕತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಯಾರು ಎಂದು ಐತಿಹಾಸಿಕ ಘಟನೆಗಳು ತೋರಿಸುತ್ತವೆ ಎಂದು ಅವರು ಹೇಳಿದರು.

“ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ, ಬ್ರಿಟಿಷರೊಂದಿಗೆ ಮೈತ್ರಿ ಮಾಡಿಕೊಂಡವರು ಯಾರು? ಭಾರತದ ಜೈಲುಗಳು ಕಾಂಗ್ರೆಸ್ ನಾಯಕರಿಂದ ತುಂಬಿದಾಗ, ದೇಶವನ್ನು ವಿಭಜಿಸುವ ಶಕ್ತಿಗಳೊಂದಿಗೆ ರಾಜ್ಯಗಳಲ್ಲಿ ಸರ್ಕಾರವನ್ನು ನಡೆಸುತ್ತಿದ್ದವರು ಯಾರು” ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ರಾಜಕೀಯ ವೇದಿಕೆಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದರೂ ಇತಿಹಾಸ ಬದಲಾಗದೆ ಉಳಿದಿದೆ ಎಂದರು.

‘ಕಾಂಗ್ರೆಸ್ ಪ್ರಣಾಳಿಕೆಯು ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನಿಂದ ಪ್ರೇರಿತವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪದೇ ಪದೇ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಪ್ರತಿಕ್ರಿಯೆ ನೀಡಿದ್ದಾರೆ.

“ಪ್ರತಿ ಪುಟವೂ ಭಾರತವನ್ನು ತುಂಡು ತುಂಡಾಗಿ ಒಡೆಯುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯು ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಅದೇ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ. ಇದು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆಯನ್ನು ಹೊಂದಿದೆ ಮತ್ತು ಉಳಿದಿರುವುದೂ ಸಂಪೂರ್ಣವಾಗಿ ಎಡಪಂಥೀಯರ ಪ್ರಾಬಲ್ಯವಾಗಿದೆ’ ಎಂದು, ಕಾಂಗ್ರೆಸ್‌ ಪಕ್ಷದ ಜಾತಿ ಗಣತಿ ಮತ್ತು ಸಂಪತ್ತಿನ ಮರು ಹಂಚಿಕೆಯ ಘೋಷಣೆಗಳನ್ನು ಟೀಕಿಸಿ ಮೋದಿ ಹೇಳಿಕೆ ನೀಡಿದ್ದರು.

ತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಳ ವಿರುದ್ಧ ಕಾಂಗ್ರೆಸ್ ಸೋಮವಾರ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದೆ.

ಇದನ್ನೂ ಓದಿ; ಅವಹೇಳನಕಾರಿ ಹೇಳಿಕೆ ಆರೋಪ; ತರೂರ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ರಾಜೀವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...