Homeಕರ್ನಾಟಕತೇಜಸ್ವಿ ಸೂರ್ಯನನ್ನು ಸೋಲಿಸಲು ಬಿಜೆಪಿಯೊಳಗೆ ಅರ್ಧ ಪರಿವಾರ ಸಜ್ಜು

ತೇಜಸ್ವಿ ಸೂರ್ಯನನ್ನು ಸೋಲಿಸಲು ಬಿಜೆಪಿಯೊಳಗೆ ಅರ್ಧ ಪರಿವಾರ ಸಜ್ಜು

- Advertisement -
- Advertisement -

ಹೌದು, ಬಿಜೆಪಿ ಮತ್ತು ಸಂಘಪರಿವಾರದ ಒಳಗೆ ಇದೇನೂ ಗುಟ್ಟಿನ ವಿಷಯವಾಗುಳಿದಲ್ಲ. ಸೋಮಣ್ಣರ ಬಹಿರಂಗ ಅಸಮಾಧಾನ ಚಾನೆಲ್‍ಗಳಲ್ಲಿ ಸುದ್ದಿಯಾಗಿದೆ. ಆದರೆ, ಚಕ್ರವರ್ತಿ ಸೂಲಿಬೆಲೆ ಸ್ವತಃ ವಾಟ್ಸಾಪ್ ಸಂದೇಶ ಹರಿಬಿಟ್ಟಿರುವುದು ಮತ್ತು ಅವುಗಳ ಸ್ಕ್ರೀನ್‍ಷಾಟ್‍ಗಳೂ ಓಡಾಡುತ್ತಿರುವುದು ಇನ್ನೂ ಅವರ ವಲಯದೊಳಗೇ ಇದೆ. ಮೇ 23ರಂದು ತೇಜಸ್ವಿ ಹರಕೆಯ ಕುರಿಯಾದರೆ ಬಿಜೆಪಿ ಪರಿವಾರದೊಳಗಿನ ಆತನ ವಿರೋಧಿಗಳು ಸಂಪನ್ನರಾಗುವುದರಲ್ಲಿ ಸಂದೇಹವೇ ಇಲ್ಲ. ತೇಜಸ್ವಿನಿ ಅನಂತಕುಮಾರ್‍ರಿಗೆ ಟಿಕೆಟ್ ನಿರಾಕರಣೆಯಾಗಿದ್ದರಿಂದ, ಈಗಾಗಲೇ ಸೋಲಿನ ಸುಳಿಯಲ್ಲಿ ಸಿಕ್ಕಿಕೊಂಡಿರುವ ತೇಜಸ್ವಿ ಸೂರ್ಯನ ವಿರುದ್ಧ ಸಂಘಪರಿವಾರದ ಹುಡುಗರು ಮತ್ತು ಯುವ ಬ್ರಿಗೇಡ್ ಬಾಯ್ಸ್ ಸಹಾ ತೊಡೆತಟ್ಟಿದ್ದಾರೆ.

ಟಿಕೆಟ್ ಘೋಷಣೆಯಾದ ತಕ್ಷಣ ನಿದ್ದೆ ಬರ್ತಿಲ್ಲ, ನಂಗೆ ನಿದ್ದೆ ಬರ್ತಿಲ್ಲ ಎಂದು ಟ್ವೀಟ್ ಮಾಡಿದ್ದ ಎಳಸು ವ್ಯಕ್ತಿ ಈತ. ಅಲ್ಲಿಂದಾಚೆಗೆ ಟ್ವಿಟ್ಟರ್‍ನಲ್ಲಿ ಕೆಲವರು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಅದಕ್ಕೆ ಉತ್ತರವಾಗಿ ತೇಜಸ್ವಿ ಸೂರ್ಯನಿಂದ ತಾನು ಮೋಸ ಹೋಗಿದ್ದಾಗಿ ಸೋಮ್ ದತ್ತ ಎಂಬ ಉದ್ಯಮಿ ಟ್ವೀಟ್ ಮಾಡಿದ್ದು ಎಲ್ಲೆಡೆ ಸುದ್ದಿಯಾಗಿದೆ. ಆದರೆ, ಆಕೆ ಹೇಳಿರುವ ಮತ್ತೊಂದು ಮಾತು ಈ ರೀತಿ ಮೋಸ ಹೋಗಿರುವುದರಲ್ಲಿ ತಾನು ಮೊದಲನೆಯವಳೂ ಅಲ್ಲ, ಕೊನೆಯವಳೂ ಅಲ್ಲ ಎಂದು. ಇದರ ಕುರಿತು ಹೊರಗಿನ ವಲಯಕ್ಕೆ ಹೆಚ್ಚು ಗೊತ್ತಿಲ್ಲದಿದ್ದರೂ, ಸಂಘಪರಿವಾರದ ವಾಟ್ಸಾಪ್ ಗುಂಪುಗಳಲ್ಲಿ ಹೆಚ್ಚಿನ ಸುದ್ದಿ ಹರಿದಾಡುತ್ತಿದೆ. ಪ್ರಮುಖವಾಗಿ ರಿಪಬ್ಲಿಕ್ ಟಿವಿಯ ಮತ್ತೊಂದು ಹುಡುಗಿಯ ಬಗ್ಗೆ ಸಹಾ ಸುದ್ದಿ ಓಡಾಡುತ್ತಿದೆ. ಅದರ ಸ್ಕ್ರೀನ್‍ಷಾಟ್‍ನಲ್ಲಿ ಹೆಸರು ಇತ್ಯಾದಿಗಳ ವಿವರವಿದೆಯಾದ್ದರಿಂದ ಇಲ್ಲಿ ಪ್ರಕಟಿಸುತ್ತಿಲ್ಲ.

ಅರಬ್ ಮುಸ್ಲಿಂ ಮಹಿಳೆಯರ ಲೈಂಗಿಕತೆಯ ಕುರಿತೆಲ್ಲಾ ಅಸಭ್ಯವಾಗಿ ಟ್ವೀಟ್ ಮಾಡಿದ್ದ ತೇಜಸ್ವಿಯ ಮನಸ್ಥಿತಿ ನೋಡಿದರೆ ಇಂತಹವು ಇನ್ನೂ ಹೆಚ್ಚಿರಬಹುದೆಂದು ಯಾರಿಗೂ ಗೊತ್ತಾಗುತ್ತದೆ. ಆತ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದಾಗಿನಿಂದ ಆತನ ವಿರುದ್ಧ ಸೋಷಿಯಲ್ ಮಿಡಿಯಾದಲ್ಲಿ ಟ್ರೋಲ್‍ಗಳ ಸುರಿಮಳೆಯಾಗಿದೆ. ಅಂಬೇಡ್ಕರ್ ಬಗ್ಗೆ ಹೇಳಿಕೆ, ಸಂವಿಧಾನ ಬದಲಿಸುವುದು, ಮಹಿಳೆಯರಿಗೆ ಮೀಸಲಾತಿ ನೀಡಬಾರದು ಎಂಬೆಲ್ಲಾ ವಿಷಯಗಳಲ್ಲಿ ಆತ ಹಿಂದೆ ಹೇಳಿದ್ದ ಮಾತು ವಿಡಿಯೋಗಳನ್ನೆಲ್ಲಾ ತಂದು ಸುರಿದು ಅಪಹಾಸ್ಯ ಮಾಡುತ್ತಿದ್ದಾರೆ. ಮಹಿಳೆಯರ ಕುರಿತ ಈತನ ಅಸಭ್ಯ ನಡವಳಿಕೆ ಹೇಸಿಗೆ ಹುಟ್ಟಿಸುವಂತಿದೆ. ಇನ್ನು ಮೋದಿ ಮೆಚ್ಚಿಸಲು ಕನ್ನಡ ವಿರೋಧಿ ಹಿಂದಿ ಹೇರಿಕೆಯನ್ನು ಸಮರ್ಥಿಸಿಕೊಂಡಿದ್ದನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಲಾಗಿದೆ.

ಮಹತ್ವದ ವಿಷಯವೆಂದರೆ ಚಕ್ರವರ್ತಿ ಸೂಲಿಬೆಲೆಗೂ ತೇಜಸ್ವಿ ಸೂಯರ್ಂಗೂ ಮೊದಲಿಂದಲೂ ಮುಸುಕಿನ ಜಗಳ ಒಳಗೊಳಗೆ ಮೊದಲಿಂದಲೂ ಇತ್ತು. ತೇಜಸ್ವಿಗೆ ಟಿಕೆಟ್ ಘೋಷಣೆಯಾದ ದಿನ ನಿದ್ದೆ ಬಾರದೇ ಇದ್ದುದು ತೇಜಸ್ವಿಗಲ್ಲ, ಸೂಲಿಬೆಲೆಗೆ ಎಂಬುದು ಪರಿವಾರದ ಒಳಗಿನ ಮಾತು. ಇವರಿಬ್ಬರ ನಡುವೆ ಪರಸ್ಪರ ಅವಕಾಶ ಕಸಿಯುವುದು, ತಪ್ಪಿಸುವುದು ಹಿಂದಿನಿಂದಲೂ ನಡೆದೇ ಇತ್ತು. ಸುಳ್ಳುಗಳನ್ನು ಹರಡುವುದರಲ್ಲಿ, ಭಾಷಣಗಳನ್ನು ಮಾಡುವುದರಲ್ಲಿ, ವಯಸ್ಸಿನಲ್ಲಿ ಎಲ್ಲಾ ರೀತಿಯಲ್ಲಿಯೂ ಮೇಲಾಗಿದ್ದ ಸೂಲಿಬೆಲೆಗೆ ಟಿಕೆಟ್ ಸಿಗದೇ ತೇಜಸ್ವಿಗೆ ದಕ್ಕಿದ್ದು ಸೂಲಿಬೆಲೆಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ವಾಸ್ತವದಲ್ಲಿ ಒಂದು ವರ್ಷಕ್ಕೂ ಹಿಂದಿನಿಂದಲೇ ಚಕ್ರವರ್ತಿ ಸೂಲಿಬೆಲೆ ಫಾರ್ ಸಿಎಂ ಎಂಬ ಪೇಜ್‍ಗಳೆಲ್ಲಾ ಇದ್ದು, ಅಂತಹ ಮಹತ್ವಾಕಾಂಕ್ಷೆ ಆತನಿಗೂ ಅತಿಯಾಗಿಯೇ ಇದೆ. ಅದಕ್ಕೆ ಸೂಜಿ ಚುಚ್ಚಿದಂತಾಗಿದ್ದು, ಸೂಲಿಬೆಲೆ ತನ್ನ ಭಾಷಣಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಮಂಡ್ಯವನ್ನು ಉಲ್ಲೇಖಿಸುತ್ತಿದ್ದಾನೇ ಹೊರತು ಅಪ್ಪಿತಪ್ಪಿಯೂ ತೇಜಸ್ವಿ ಕುರಿತು ಒಂದೂ ಮಾತಾಡಿಲ್ಲ.

ತೇಜಸ್ವಿ ಪಕ್ಕಾ ಸಂಘದ ಉತ್ಪನ್ನ. ಸಂತೋಷ್ ಜಿ ಬಿಟ್ರೆ ಸೂರ್ಯನೆ ಟಿಪಿಕಲ್ ಸಂಘಿ ರಾಜಕಾರಣಿ. ತೇಜಸ್ವಿ ಸೂರ್ಯ ಪಿಯುಸಿ ದಿನಗಳಲ್ಲೇ ಎಂ ಎಲ್ ಎ – ಎಂ ಪಿ ಆಗ್ಬೇಕು ಅಂತ ಮಹತ್ವಾಕಾಂಕ್ಷೆ ಇಟ್ಕೊಂಡಿದ್ದ. ಅದಕ್ಕಾಗಿ ಸಂಘದ ಬೇರೆ ಹುಡುಗರನ್ನು ತುಳಿದು ಮೇಲೆ ಬರದಂತೆ ತಡೀತಿದ್ದ ಅನ್ನೋ ಆರೋಪವಿದೆ. ಸಂಘ ಪರಿವಾರದ ಸಿದ್ಧಾಂತಕ್ಕೆ ತಕ್ಕಂತೆ ಸುಳ್ಳೋ, ನಿಜವೋ ಅದನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುವುದರಲ್ಲಿ ಈತನಿಗಿದ್ದ ಸಾಮಥ್ರ್ಯದ ಆಧಾರದ ಮೇಲೆ ಬಿಜೆಪಿ ಸೋಶಿಯಲ್ ಮೀಡಿಯಾ ಜವಾಬ್ದಾರಿ ವಹಿಸಲಾಗಿತ್ತು. ಹಸಿ ಸುಳ್ಳುಗಳ ತಯಾರಿಕೆಯ ಆರೋಪದಲ್ಲಿ ಮಹೇಶ್ ವಿಕ್ರಮ ಹೆಗಡೆ ಜೈಲುಪಾಲಾದಾಗ ಆತನ ಪರವಾಗಿ ವಕೀಲಿಕೆ ಮಾಡಿದವನು ಇದೇ ತೇಜಸ್ವಿ ಸೂರ್ಯ.

ಈತನ ಮಾತು ಮಾತ್ರ ಸನಾತನ. ಜೀವನಶೈಲಿ ಮಾತ್ರ ಗಾಬರಿಯಾಗಬಹುದಾದಷ್ಟು ಆಧುನಿಕ. ವಿಲಾಸಿ, ಸ್ವೇಚ್ಛೆ. ಇವೆಲ್ಲಾ ಕಾರಣಗಳಿಂದ ಈತನನ್ನು ಕಂಡರೆ 50% ಬಿಜೆಪಿಗರಿಗೆ ಆಗಲ್ಲ. ಇನ್ನು 50% ಬಿಜೆಪಿಗರಿಗೆ ಅವನ್ಯಾರೆಂದೇ ಗೊತ್ತಿಲ್ಲ. ಬೆಂಗಳೂರಿನಲ್ಲಿ ಸರಿಯಾದ ಕಾರಣ ಸಿಗುವವರೆಗೂ ಪ್ರಚಾರ ಮಾಡುವುದಿಲ್ಲವೆಂದು ಈಗಾಗಲೇ ವಿ. ಸೋಮಣ್ಣ ಬಂಡಾಯವೆದ್ದಿದಾಗಿದೆ. ಆರ್.ಅಶೋಕ್‍ಗಂತೂ ಮುಂದೆ ಈತ ಗೆದ್ದರೆ ಈತನೆದುರು ತಾವು ಕೈ ಕಟ್ಟಿ ನಿಲ್ಲುವ ಪರಿಸ್ಥಿತಿಯನ್ನು ಊಹಿಸಿಕೊಳ್ಳಲು ತಯಾರಿಲ್ಲ. ಅದಕ್ಕಾಗಿ ಈ ಬಾರಿ ತೇಜಸ್ವಿ ಸೂರ್ಯನನ್ನು ಸೋಲಿಸಲು ಸೂಲಿಬೆಲೆ, ಸೋಮಣ್ಣ, ಅಶೋಕ್‍ಆದಿಯಾಗಿ ಎಲ್ಲರೂ ನಾ ಮುಂದು, ತಾ ಮುಂದು ಎಂದು ಪೈಪೋಟಿಗಿಳಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...