Homeಕರ್ನಾಟಕತೇಜಸ್ವಿ ಸೂರ್ಯನನ್ನು ಸೋಲಿಸಲು ಬಿಜೆಪಿಯೊಳಗೆ ಅರ್ಧ ಪರಿವಾರ ಸಜ್ಜು

ತೇಜಸ್ವಿ ಸೂರ್ಯನನ್ನು ಸೋಲಿಸಲು ಬಿಜೆಪಿಯೊಳಗೆ ಅರ್ಧ ಪರಿವಾರ ಸಜ್ಜು

- Advertisement -
- Advertisement -

ಹೌದು, ಬಿಜೆಪಿ ಮತ್ತು ಸಂಘಪರಿವಾರದ ಒಳಗೆ ಇದೇನೂ ಗುಟ್ಟಿನ ವಿಷಯವಾಗುಳಿದಲ್ಲ. ಸೋಮಣ್ಣರ ಬಹಿರಂಗ ಅಸಮಾಧಾನ ಚಾನೆಲ್‍ಗಳಲ್ಲಿ ಸುದ್ದಿಯಾಗಿದೆ. ಆದರೆ, ಚಕ್ರವರ್ತಿ ಸೂಲಿಬೆಲೆ ಸ್ವತಃ ವಾಟ್ಸಾಪ್ ಸಂದೇಶ ಹರಿಬಿಟ್ಟಿರುವುದು ಮತ್ತು ಅವುಗಳ ಸ್ಕ್ರೀನ್‍ಷಾಟ್‍ಗಳೂ ಓಡಾಡುತ್ತಿರುವುದು ಇನ್ನೂ ಅವರ ವಲಯದೊಳಗೇ ಇದೆ. ಮೇ 23ರಂದು ತೇಜಸ್ವಿ ಹರಕೆಯ ಕುರಿಯಾದರೆ ಬಿಜೆಪಿ ಪರಿವಾರದೊಳಗಿನ ಆತನ ವಿರೋಧಿಗಳು ಸಂಪನ್ನರಾಗುವುದರಲ್ಲಿ ಸಂದೇಹವೇ ಇಲ್ಲ. ತೇಜಸ್ವಿನಿ ಅನಂತಕುಮಾರ್‍ರಿಗೆ ಟಿಕೆಟ್ ನಿರಾಕರಣೆಯಾಗಿದ್ದರಿಂದ, ಈಗಾಗಲೇ ಸೋಲಿನ ಸುಳಿಯಲ್ಲಿ ಸಿಕ್ಕಿಕೊಂಡಿರುವ ತೇಜಸ್ವಿ ಸೂರ್ಯನ ವಿರುದ್ಧ ಸಂಘಪರಿವಾರದ ಹುಡುಗರು ಮತ್ತು ಯುವ ಬ್ರಿಗೇಡ್ ಬಾಯ್ಸ್ ಸಹಾ ತೊಡೆತಟ್ಟಿದ್ದಾರೆ.

ಟಿಕೆಟ್ ಘೋಷಣೆಯಾದ ತಕ್ಷಣ ನಿದ್ದೆ ಬರ್ತಿಲ್ಲ, ನಂಗೆ ನಿದ್ದೆ ಬರ್ತಿಲ್ಲ ಎಂದು ಟ್ವೀಟ್ ಮಾಡಿದ್ದ ಎಳಸು ವ್ಯಕ್ತಿ ಈತ. ಅಲ್ಲಿಂದಾಚೆಗೆ ಟ್ವಿಟ್ಟರ್‍ನಲ್ಲಿ ಕೆಲವರು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಅದಕ್ಕೆ ಉತ್ತರವಾಗಿ ತೇಜಸ್ವಿ ಸೂರ್ಯನಿಂದ ತಾನು ಮೋಸ ಹೋಗಿದ್ದಾಗಿ ಸೋಮ್ ದತ್ತ ಎಂಬ ಉದ್ಯಮಿ ಟ್ವೀಟ್ ಮಾಡಿದ್ದು ಎಲ್ಲೆಡೆ ಸುದ್ದಿಯಾಗಿದೆ. ಆದರೆ, ಆಕೆ ಹೇಳಿರುವ ಮತ್ತೊಂದು ಮಾತು ಈ ರೀತಿ ಮೋಸ ಹೋಗಿರುವುದರಲ್ಲಿ ತಾನು ಮೊದಲನೆಯವಳೂ ಅಲ್ಲ, ಕೊನೆಯವಳೂ ಅಲ್ಲ ಎಂದು. ಇದರ ಕುರಿತು ಹೊರಗಿನ ವಲಯಕ್ಕೆ ಹೆಚ್ಚು ಗೊತ್ತಿಲ್ಲದಿದ್ದರೂ, ಸಂಘಪರಿವಾರದ ವಾಟ್ಸಾಪ್ ಗುಂಪುಗಳಲ್ಲಿ ಹೆಚ್ಚಿನ ಸುದ್ದಿ ಹರಿದಾಡುತ್ತಿದೆ. ಪ್ರಮುಖವಾಗಿ ರಿಪಬ್ಲಿಕ್ ಟಿವಿಯ ಮತ್ತೊಂದು ಹುಡುಗಿಯ ಬಗ್ಗೆ ಸಹಾ ಸುದ್ದಿ ಓಡಾಡುತ್ತಿದೆ. ಅದರ ಸ್ಕ್ರೀನ್‍ಷಾಟ್‍ನಲ್ಲಿ ಹೆಸರು ಇತ್ಯಾದಿಗಳ ವಿವರವಿದೆಯಾದ್ದರಿಂದ ಇಲ್ಲಿ ಪ್ರಕಟಿಸುತ್ತಿಲ್ಲ.

ಅರಬ್ ಮುಸ್ಲಿಂ ಮಹಿಳೆಯರ ಲೈಂಗಿಕತೆಯ ಕುರಿತೆಲ್ಲಾ ಅಸಭ್ಯವಾಗಿ ಟ್ವೀಟ್ ಮಾಡಿದ್ದ ತೇಜಸ್ವಿಯ ಮನಸ್ಥಿತಿ ನೋಡಿದರೆ ಇಂತಹವು ಇನ್ನೂ ಹೆಚ್ಚಿರಬಹುದೆಂದು ಯಾರಿಗೂ ಗೊತ್ತಾಗುತ್ತದೆ. ಆತ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದಾಗಿನಿಂದ ಆತನ ವಿರುದ್ಧ ಸೋಷಿಯಲ್ ಮಿಡಿಯಾದಲ್ಲಿ ಟ್ರೋಲ್‍ಗಳ ಸುರಿಮಳೆಯಾಗಿದೆ. ಅಂಬೇಡ್ಕರ್ ಬಗ್ಗೆ ಹೇಳಿಕೆ, ಸಂವಿಧಾನ ಬದಲಿಸುವುದು, ಮಹಿಳೆಯರಿಗೆ ಮೀಸಲಾತಿ ನೀಡಬಾರದು ಎಂಬೆಲ್ಲಾ ವಿಷಯಗಳಲ್ಲಿ ಆತ ಹಿಂದೆ ಹೇಳಿದ್ದ ಮಾತು ವಿಡಿಯೋಗಳನ್ನೆಲ್ಲಾ ತಂದು ಸುರಿದು ಅಪಹಾಸ್ಯ ಮಾಡುತ್ತಿದ್ದಾರೆ. ಮಹಿಳೆಯರ ಕುರಿತ ಈತನ ಅಸಭ್ಯ ನಡವಳಿಕೆ ಹೇಸಿಗೆ ಹುಟ್ಟಿಸುವಂತಿದೆ. ಇನ್ನು ಮೋದಿ ಮೆಚ್ಚಿಸಲು ಕನ್ನಡ ವಿರೋಧಿ ಹಿಂದಿ ಹೇರಿಕೆಯನ್ನು ಸಮರ್ಥಿಸಿಕೊಂಡಿದ್ದನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಲಾಗಿದೆ.

ಮಹತ್ವದ ವಿಷಯವೆಂದರೆ ಚಕ್ರವರ್ತಿ ಸೂಲಿಬೆಲೆಗೂ ತೇಜಸ್ವಿ ಸೂಯರ್ಂಗೂ ಮೊದಲಿಂದಲೂ ಮುಸುಕಿನ ಜಗಳ ಒಳಗೊಳಗೆ ಮೊದಲಿಂದಲೂ ಇತ್ತು. ತೇಜಸ್ವಿಗೆ ಟಿಕೆಟ್ ಘೋಷಣೆಯಾದ ದಿನ ನಿದ್ದೆ ಬಾರದೇ ಇದ್ದುದು ತೇಜಸ್ವಿಗಲ್ಲ, ಸೂಲಿಬೆಲೆಗೆ ಎಂಬುದು ಪರಿವಾರದ ಒಳಗಿನ ಮಾತು. ಇವರಿಬ್ಬರ ನಡುವೆ ಪರಸ್ಪರ ಅವಕಾಶ ಕಸಿಯುವುದು, ತಪ್ಪಿಸುವುದು ಹಿಂದಿನಿಂದಲೂ ನಡೆದೇ ಇತ್ತು. ಸುಳ್ಳುಗಳನ್ನು ಹರಡುವುದರಲ್ಲಿ, ಭಾಷಣಗಳನ್ನು ಮಾಡುವುದರಲ್ಲಿ, ವಯಸ್ಸಿನಲ್ಲಿ ಎಲ್ಲಾ ರೀತಿಯಲ್ಲಿಯೂ ಮೇಲಾಗಿದ್ದ ಸೂಲಿಬೆಲೆಗೆ ಟಿಕೆಟ್ ಸಿಗದೇ ತೇಜಸ್ವಿಗೆ ದಕ್ಕಿದ್ದು ಸೂಲಿಬೆಲೆಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ವಾಸ್ತವದಲ್ಲಿ ಒಂದು ವರ್ಷಕ್ಕೂ ಹಿಂದಿನಿಂದಲೇ ಚಕ್ರವರ್ತಿ ಸೂಲಿಬೆಲೆ ಫಾರ್ ಸಿಎಂ ಎಂಬ ಪೇಜ್‍ಗಳೆಲ್ಲಾ ಇದ್ದು, ಅಂತಹ ಮಹತ್ವಾಕಾಂಕ್ಷೆ ಆತನಿಗೂ ಅತಿಯಾಗಿಯೇ ಇದೆ. ಅದಕ್ಕೆ ಸೂಜಿ ಚುಚ್ಚಿದಂತಾಗಿದ್ದು, ಸೂಲಿಬೆಲೆ ತನ್ನ ಭಾಷಣಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಮಂಡ್ಯವನ್ನು ಉಲ್ಲೇಖಿಸುತ್ತಿದ್ದಾನೇ ಹೊರತು ಅಪ್ಪಿತಪ್ಪಿಯೂ ತೇಜಸ್ವಿ ಕುರಿತು ಒಂದೂ ಮಾತಾಡಿಲ್ಲ.

ತೇಜಸ್ವಿ ಪಕ್ಕಾ ಸಂಘದ ಉತ್ಪನ್ನ. ಸಂತೋಷ್ ಜಿ ಬಿಟ್ರೆ ಸೂರ್ಯನೆ ಟಿಪಿಕಲ್ ಸಂಘಿ ರಾಜಕಾರಣಿ. ತೇಜಸ್ವಿ ಸೂರ್ಯ ಪಿಯುಸಿ ದಿನಗಳಲ್ಲೇ ಎಂ ಎಲ್ ಎ – ಎಂ ಪಿ ಆಗ್ಬೇಕು ಅಂತ ಮಹತ್ವಾಕಾಂಕ್ಷೆ ಇಟ್ಕೊಂಡಿದ್ದ. ಅದಕ್ಕಾಗಿ ಸಂಘದ ಬೇರೆ ಹುಡುಗರನ್ನು ತುಳಿದು ಮೇಲೆ ಬರದಂತೆ ತಡೀತಿದ್ದ ಅನ್ನೋ ಆರೋಪವಿದೆ. ಸಂಘ ಪರಿವಾರದ ಸಿದ್ಧಾಂತಕ್ಕೆ ತಕ್ಕಂತೆ ಸುಳ್ಳೋ, ನಿಜವೋ ಅದನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುವುದರಲ್ಲಿ ಈತನಿಗಿದ್ದ ಸಾಮಥ್ರ್ಯದ ಆಧಾರದ ಮೇಲೆ ಬಿಜೆಪಿ ಸೋಶಿಯಲ್ ಮೀಡಿಯಾ ಜವಾಬ್ದಾರಿ ವಹಿಸಲಾಗಿತ್ತು. ಹಸಿ ಸುಳ್ಳುಗಳ ತಯಾರಿಕೆಯ ಆರೋಪದಲ್ಲಿ ಮಹೇಶ್ ವಿಕ್ರಮ ಹೆಗಡೆ ಜೈಲುಪಾಲಾದಾಗ ಆತನ ಪರವಾಗಿ ವಕೀಲಿಕೆ ಮಾಡಿದವನು ಇದೇ ತೇಜಸ್ವಿ ಸೂರ್ಯ.

ಈತನ ಮಾತು ಮಾತ್ರ ಸನಾತನ. ಜೀವನಶೈಲಿ ಮಾತ್ರ ಗಾಬರಿಯಾಗಬಹುದಾದಷ್ಟು ಆಧುನಿಕ. ವಿಲಾಸಿ, ಸ್ವೇಚ್ಛೆ. ಇವೆಲ್ಲಾ ಕಾರಣಗಳಿಂದ ಈತನನ್ನು ಕಂಡರೆ 50% ಬಿಜೆಪಿಗರಿಗೆ ಆಗಲ್ಲ. ಇನ್ನು 50% ಬಿಜೆಪಿಗರಿಗೆ ಅವನ್ಯಾರೆಂದೇ ಗೊತ್ತಿಲ್ಲ. ಬೆಂಗಳೂರಿನಲ್ಲಿ ಸರಿಯಾದ ಕಾರಣ ಸಿಗುವವರೆಗೂ ಪ್ರಚಾರ ಮಾಡುವುದಿಲ್ಲವೆಂದು ಈಗಾಗಲೇ ವಿ. ಸೋಮಣ್ಣ ಬಂಡಾಯವೆದ್ದಿದಾಗಿದೆ. ಆರ್.ಅಶೋಕ್‍ಗಂತೂ ಮುಂದೆ ಈತ ಗೆದ್ದರೆ ಈತನೆದುರು ತಾವು ಕೈ ಕಟ್ಟಿ ನಿಲ್ಲುವ ಪರಿಸ್ಥಿತಿಯನ್ನು ಊಹಿಸಿಕೊಳ್ಳಲು ತಯಾರಿಲ್ಲ. ಅದಕ್ಕಾಗಿ ಈ ಬಾರಿ ತೇಜಸ್ವಿ ಸೂರ್ಯನನ್ನು ಸೋಲಿಸಲು ಸೂಲಿಬೆಲೆ, ಸೋಮಣ್ಣ, ಅಶೋಕ್‍ಆದಿಯಾಗಿ ಎಲ್ಲರೂ ನಾ ಮುಂದು, ತಾ ಮುಂದು ಎಂದು ಪೈಪೋಟಿಗಿಳಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...