Homeಕರ್ನಾಟಕಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ...

- Advertisement -
- Advertisement -

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇತ್ತೀಚೆಗೆ ತನ್ನ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಸುಮಾರು 16 ವಿವಿಧ ಅಕಾಡೆಮಿ ಹಾಗೂ ಅಧ್ಯಯನ ಕೇಂದ್ರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡಿತ್ತು. ಆದರೆ, ಹೀಗೆ ಸರ್ಕಾರದಿಂದ ಅಕಾಡೆಮಿಗೆ ಆಯ್ಕೆಯಾದ ಸದಸ್ಯರ ಪೈಕಿ ಬಹುತೇಕರು ಬಿಜೆಪಿ ಹಾಗೂ ಆರ್‍ಎಸ್‍ಎಸ್ ಭಟ್ಟಂಗಿಗಳು, ಅಕಾಡೆಮಿ ನೇಮಕಾತಿಯಲ್ಲಿ ಸಾಮಾಜಿಕ ಭೌಗೋಳಿಕ ನ್ಯಾಯ ಪಾಲಿಸಿಲ್ಲ ಎಂಬುದು ಕಾಂಗ್ರೆಸ್ ನಾಯಕರ ಆರೋಪ.

ರಾಜ್ಯದ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು-ಸದಸ್ಯರನ್ನು ನೇಮಕ ಮಾಡುವುದು ಹಾಗೂ ಈ ನೇಮಕಾತಿ ಹಿಂದೆಯೇ ಕೆಲವು ಅಪಸ್ವರಗಳು, ಟೀಕೆಟಿಪ್ಪಣಿಗಳು ಕೇಳಿಬರುವುದು ಸಾಹಿತ್ಯ ವಲಯದಲ್ಲಿ ತೀರಾ ಸಾಂಪ್ರದಾಯಿಕ ಮತ್ತು ವಾಡಿಕೆ. ಅಂತಹದ್ದೇ ವಾಡಿಕೆಯ ಟೀಕೆ ಈ ಬಾರಿಯೂ ಕೇಳಿಬಂದದ್ದು ಅಚ್ಚರಿ ಏನಲ್ಲ.

ಅಸಲಿಗೆ ಅಕಾಡೆಮಿ ಹಂತದ ಅಧ್ಯಕ್ಷರು ಸದಸ್ಯರ ಆಯ್ಕೆ ಕುರಿತ ಕಾಂಗ್ರೆಸ್ ನಾಯಕರ ಇಂತಹ ಟೀಕೆಗಳಿಗೆ ನಿಜಕ್ಕೂ ಅಷ್ಟಾಗಿ ಮಾನ್ಯತೆ ಸಿಕ್ಕಿರಲಿಲ್ಲ. ಅಕ್ಷರಶಃ ಕೆಲವು ದಿನ ಪತ್ರಿಕೆಗಳಲ್ಲಿ ಮಾತ್ರ ಈ ಹೇಳಿಕೆ ಮುದ್ರಣವಾಗಿತ್ತು. ಆ ಮುದ್ರಣವೂ ಕೇವಲ ಮೂರು ಸಾಲುಗಳಿಗಷ್ಟೇ ಮೀಸಲಾಗಿತ್ತು.

ಆದರೆ, ಹೀಗೆ ಮೂರು ಸಾಲಿಗೆ ಮಾತ್ರ ಮೀಸಲಾಗಿದ್ದ ಕಾಂಗ್ರೆಸ್ ನಾಯಕರ ಟೀಕೆಗೆ ಮತ್ತಷ್ಟು ಮೈಲೇಜ್ ಕೊಟ್ಟದ್ದು ಸಚಿವ ಸಿ.ಟಿ. ರವಿ ಅವರ ಆ ಒಂದು ಹೇಳಿಕೆ.

ಅಕಾಡೆಮಿಗಳಿಗೆ ಸದಸ್ಯರ ನೇಮಕ ವಿಚಾರ ಕುರಿತಂತೆ ಮಾಧ್ಯಮಗಳ ಎದುರು ಏಕಾಏಕಿ ಹೇಳಿಕೆ ನೀಡಿದ್ದ ಸಿ.ಟಿ. ರವಿ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡುವಾಗ ಮನೆಹಾಳು ಜನರನ್ನು ದೂರ ಇಡಲಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಕಟ್ಟಲು ನಾವು ಬದ್ಧರಿದ್ದೇವೆ. ಆದರೆ, ಈ ಕ್ಷೇತ್ರವನ್ನು ಕದಡುವ, ಒಡೆಯುವ ಮನಸ್ಥಿತಿ ಇರುವ ಜನರನ್ನು ನೇಮಕ ಮಾಡಿಲ್ಲ. ಈ ಸಲ ಮನೆಹಾಳು ಮಂದಿಗೆ ಅಧಿಕಾರ ಕೊಟ್ಟಿಲ್ಲ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸಚಿವರ ಈ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ಕಿಡಿ ಹೊತ್ತಿಸಿದೆ. ಈ ಹೇಳಿಕೆಯ ವಿರುದ್ಧ ಕನ್ನಡ ಸಾಹಿತ್ಯ ಲೋಕ ಇದೀಗ ಮುರಿದುಕೊಂಡು ಬಿದ್ದಿದೆ. ಸಿ.ಟಿ. ರವಿ ಅವರ ಈ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗೆ ಗುರಿಪಡಿಸಲಾಗುತ್ತಿದೆ.

ಬಿಜೆಪಿ ಸರ್ಕಾರ ಪ್ರಸ್ತುತ ಅಕಾಡೆಮಿ ಸದಸ್ಯರ ಆಯ್ಕೆ ವಿಚಾರದಲ್ಲಿ ಮನೆಹಾಳರನ್ನು ಅಧಿಕಾರದ ವ್ಯಾಪ್ತಿಗೆ ಬಿಟ್ಟುಕೊಂಡಿಲ್ಲ ಎಂದಾದರೆ ಈವರೆಗೆ ಅಕಾಡೆಮಿಯಲ್ಲಿ ಕೆಲಸ ನಿರ್ವಹಿಸಿದವರು ಮನೆಹಾಳು ಜನರೇ? ಸರಿ, ಸಚಿವರು ಹೇಳಿದಂತೆ ಹಿಂದೆಲ್ಲ ನೇಮಕಗೊಂಡ ಮನೆಹಾಳರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ಅಂತ ನೋಡೋಣ. ಬೇರೆ ಅಕ್ಯಾಡೆಮಿಗಳ ಮಾತಿರಲಿ, ಸಾಹಿತ್ಯ ಅಕಾಡೆಮಿಯನ್ನೇ ಪರಿಗಣಿಸುವುದಾದರೆ ಅ.ನ.ಕೃ, ಕೆ.ವಿ.ಶಂಕರೇಗೌಡ್ರು, ಹಾ.ಮಾ.ನಾಯಕ್, ನಿತ್ಯೋತ್ಸವ ಕವಿ ನಿಸಾರ್ ಅಹಮದ್, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ, ಬರಗೂರು ರಾಮಚಂದ್ರಪ್ಪ, ಗಿರಡ್ಡಿ ಗೋವಿಂದರಾಜರು, ಗೀತಾ ನಾಗಭೂಷಣ…. ಇಂತವರೆಲ್ಲ ಅಧ್ಯಕ್ಷರಾಗಿದ್ದಂತವರು. ಇಲ್ಲಿಯವರೆಗೆ ಇವರನ್ನೆಲ್ಲ ಕನ್ನಡದ, ಕರ್ನಾಟಕದ ಹೆಮ್ಮೆ ಎಂದೇ ನಾವೇ ಭಾವಿಸಿದ್ದೆವು. ಆದರೆ ಸಚಿವರ ಗೀತೋಪದೇಶದಿಂದ ಇವರೆಲ್ಲ ಅನಾಮತ್ತು `ಮನೆಹಾಳರ’ ಪಟ್ಟಿಗೆ ಸೇರಿದಂತಾಗಿದೆ. ಇಂತಹ ಹೇಳಿಕೆಗಳ ಮೂಲಕ ಸಚಿವ ಸಿ.ಟಿ. ರವಿ ಕನ್ನಡ ಸಾಹಿತಿಗಳನ್ನು ಅವಮಾನಿಸಿದ್ದಾರೆ ಎಂಬುದು ಟೀಕಾಕಾರದ ಪ್ರಬಲ ವಾದ.

ಆದರೆ, ಸಚಿವ ಸಿ.ಟಿ. ರವಿ ಹಾಗೂ ಅವರ ಟೀಕಾಕಾರರ ನಡುವಿನ ವಾಗ್ಯುದ್ಧ ಜೋರಾಗುತ್ತಿದ್ದಂತೆ ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಮಾತುಗಳು ಸರ್ಕಾರಕ್ಕೆ ಮತ್ತು ಸಚಿವರಿಗೆ ಮತ್ತಷ್ಟು ಇರಿಸುಮುರಿಸಿಗೆ ಕಾರಣವಾಗಿದೆ.

ಅಸಲಿಗೆ ಬ್ಯಾರಿ ಅಕಾಡೆಮಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿರುವ ಡಾ. ಮುನೀರ್ ಬಾವ, ಫಝಲ್ ಆಸೈಗೋಳಿ ಮತ್ತು ಸಿರಾಜುದ್ದೀನ್ ಮುಡಿಪು ಎಂಬ ಮೂವರೂ ಸಾಹಿತಿಗಳಲ್ಲ, ಕವಿಗಳೂ ಅಲ್ಲ, ಅಲ್ಲದೆ ಇವರಿಗೆ ಬ್ಯಾರಿ ಭಾಷೆಯೂ ಬರಲ್ಲ. ಈ ಮೂವರು ಇತ್ತೀಚೆಗೆ ಸ್ವತಃ ಮಾಧ್ಯಮಗಳ ಎದುರು ಬಹಿರಂಗ ಹೇಳಿಕೆ ನೀಡಿದ್ದು, “ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ. ಅಲ್ಲದೆ, ಈ ಹುದ್ದೆಗೆ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡುವಂತೆಯೂ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆ.

ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಈ ಮಾತುಗಳು ಹಾಗೂ ಗೊಂದಲ ಅಸಲಿಗೆ ಮನೆಹಾಳರು ಯಾರು? ಎಂಬ ಕುರಿತು ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಕಡೆಗೆ ಬೊಟ್ಟು ಮಾಡುತ್ತಿದೆ. ಅಸಲಿಗೆ ಬ್ಯಾರಿ ಅಕಾಡೆಮಿ ಕೆಲಸವೇನು? ಇತಿಹಾಸವೇನು? ಇಲ್ಲಿದೆ ಡೀಟೈಲ್ಸ್

ಏನದು ಬ್ಯಾರಿ ಅಕಾಡೆಮಿ ರಾದ್ಧಾಂತ?
ಕನ್ನಡ ರಾಜ್ಯದ ನಾಡಭಾಷೆಯಾದರೂ, ಕರ್ನಾಟಕ ಎಂಬುದು ವಿವಿಧ ಭಾಷೆ ಮತ್ತು ಶ್ರೀಮಂತ ಸಂಸ್ಕೃತಿಗಳ ಕಣಜ. ಪ್ರತಿ 40 ಕಿಮಿ ಗೂ ಭಾಷೆ ಮತ್ತು ಸಂಸ್ಕೃತಿಯಲ್ಲಿರುವ ಬದಲಾವಣೆ, ಜನರ ಬದುಕುವ ಕ್ರಮದಲ್ಲಿನ ವಿಭಿನ್ನತೆಯನ್ನು ನಾವಿಲ್ಲಿ ಕಾಣಬಹುದು.ಭಾಗಶಃ ಭಾರತದ ಬೇರೆ ಯಾವ ರಾಜ್ಯಕ್ಕೂ ಇಲ್ಲದಷ್ಟು ವಿವಿಧತೆಯ ಶ್ರೀಮಂತಿಕೆಯನ್ನು ಹೊಂದಿರುವ ರಾಜ್ಯ ಕರ್ನಾಟಕ ಎಂದರೆ ತಪ್ಪಾಗಲಾರದು.

ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ. ಕರ್ನಾಟಕ ಸಾಹಿತ್ಯ ಪರಿಷತ್ ಮೂಲಕ ಭಾಷೆಯ ಅಭಿವೃದ್ಧಿಗೆ, ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರೇರಣೆ ನೀಡಲಾಗುತ್ತಿದೆ. ಇದೇ ರೀತಿ ಕನ್ನಡದ ಸಹೋದರ ಭಾಷೆಯಾದ ತುಳು, ಕೊಂಕಣಿ, ಕೊಡವ ಭಾಷೆಗಳ ಅಭಿವೃದ್ಧಿಗೂ ಕರ್ನಾಟಕ ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಮೂಲಕ ಅಕಾಡೆಮಿ ರಚಿಸಲಾಗಿದೆ.
ಒಂದು ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ ಎಂದಾದರೆ ಆ ಭಾಷೆಗೆ ಸರ್ಕಾರದಿಂದ ಮಾನ್ಯತೆ ಸಿಕ್ಕಿದೆ ಎಂದೇ ಅರ್ಥ. ಕೊಂಕಣಿ, ಕೊಡವ ಹಾಗೂ ತುಳು ಭಾಷೆಯಂತೆ ಕರಾವಳಿ ಭಾಗದಲ್ಲಿ ಪ್ರಚಲಿತವಿರುವ ಮತ್ತೊಂದು ಭಾಷೆಯೇ ಬ್ಯಾರಿ. ಉರ್ದು ಬಾಷೆಗೂ ಅಕಾಡೆಮಿ ರಚಿಸಿರುವ ರಾಜ್ಯ ಸರ್ಕಾರ ತೀರಾ ಇತ್ತೀಚೆಗೆ ಬ್ಯಾರಿ ಭಾಷೆಗೂ ಒಂದು ಅಕಾಡೆಮಿ ರಚಿಸಿತ್ತು.
ಕರಾವಳಿ ಹಾಗೂ ಕೊಡಗು ಭಾಗದಲ್ಲಿ ಬಹುಪಾಲು ಇಸ್ಲಾಂ ಜನರಿಂದ ಬಳಕೆಯಾಗುತ್ತಿರುವ ಭಾಷೆಗಳಲ್ಲಿ ಬ್ಯಾರಿ ಎಂಬುದು ಚಿರಪರಿಚಿತ ಭಾಷೆ. ಕನ್ನಡ ಭಾಷೆಯಷ್ಟೇ ಪ್ರಾಚೀನ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯಲ್ಲಿ ಜನಪದ ಸಾಹಿತ್ಯದ ಭಂಡಾರವೇ ಇದೆ. ಬ್ಯಾರಿ ಜನರ ಮದುವೆ ಸಮಾರಂಭಗಳಲ್ಲಿ, ಹಬ್ಬದ ದಿನಗಳಲ್ಲಿ, ಧಾರ್ಮಿಕ ದಿನಾಚರಣೆಗಳ ಸಂದರ್ಭದಲ್ಲಿ ಹೆಂಗಸರು, ಮಕ್ಕಳು ಹಾಗೂ ಪುರುಷರು ಬ್ಯಾರಿ ಜನಪದ ಸಾಹಿತ್ಯವನ್ನು ಹಾಡಿ ಕುಣಿದು ಸಂತೋಷ ಪಡುತ್ತಾರೆ. ಆದರೆ, ಇಂತಹ ಬ್ಯಾರಿ ಜನಪದ ಸಾಹಿತ್ಯ ಇಂದು ನವ ನಾಗರಿಕತೆಯ ಸೆಳೆತಕ್ಕೆ ಸಿಲುಕಿ ಅಳಿವಿನ ಅಂಚಿಗೆ ಸರಿದಿದೆ.

 

 

ಹೀಗಾಗಿ ಇಂತಹ ಶ್ರೀಮಂತ ಜನಪದ ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಬ್ಯಾರಿ ಸಮಾಜದ ಪ್ರತಿಭಾವಂತ ಲೇಖಕರು, ಲೇಖಕಿಯರ ಪ್ರತಿಭೆಯನ್ನು ಪೋಷಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಈ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿತ್ತು. ಇದರ ಕೇಂದ್ರ ಕಚೇರಿ ಮಂಗಳೂರಿನಲ್ಲಿದೆ.

ಕಳೆದ ಒಂದು ದಶಕದಿಂದ ಬ್ಯಾರಿ ಭಾಷೆ, ಸಾಹಿತ್ಯ ಕಲೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬ್ಯಾರಿ ಸಂಸ್ಕೃತಿಗೆ ಪೂರಕವಾಗಿ ಬ್ಯಾರಿಗಳ ವಿಶಿಷ್ಟ ಹಬ್ಬಗಳಾದ ಪೆರ್ನಾಲ್, ಸಂದೋಲ ಹಬ್ಬಗಳನ್ನು ಬ್ಯಾರಿ ಜನರ ನಡುವೆ ಸಡಗರದಿಂದ ಆಚರಿಸಲಾಗುತ್ತಿದೆ. ಬ್ಯಾರಿ ಜಾನಪದ ಸಂಗೀತ, ನಾಟಕಗಳಿಗೆ ಸಂಬಂಧಿಸಿದಂತೆ ಉತ್ಸವ, ಸಮಾವೇಶ, ಸಮ್ಮೇಳನ, ದಫ್ ಸ್ಪರ್ಧೆ, ಬ್ಯಾರಿ ನಾಟಕ ಸ್ಪರ್ಧೆ ಮತ್ತು ಬ್ಯಾರಿ ಜಾನಪದ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧೆಡೆಗಳಲ್ಲಿ ಬ್ಯಾರಿ ಅಕಾಡೆಮಿ ವತಿಯಿಂದ ಆಯೋಜಿಸಲಾಗುತ್ತಿದೆ.

ಅಳಿವಿನ ಅಂಚಿನಲ್ಲಿರುವ ಬ್ಯಾರಿ ಸಂಸ್ಕೃತಿಯನ್ನು ಭಾಷೆಯನ್ನು ಉಳಿಸಿಕೊಳ್ಳಲು ಇಂತಹ ಹತ್ತಾರು ಕಾರ್ಯಕ್ರಮಗಳ ಅಗತ್ಯ ಇರುವಂತೆ, ಇಂತಹ ಅಕಾಡೆಮಿಗಳಿಗೆ ಭಾಷೆಯ ಮೇಲೆ ಪ್ರೀತಿ ಇರುವ ಹಾಗೂ ಈ ಕ್ಷೇತ್ರದಲ್ಲಿ ವಿಫುಲ ಕೃಷಿ ಮಾಡಿರುವ ವ್ಯಕ್ತಿಗಳ ಅಗತ್ಯತೆಯೂ ಇದೆ. ಅಧಿಕಾರ ವಲಯದಲ್ಲಿ ಅಂತವರು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ.

ಆದರೆ, ಇಂತಹ ಅಕಾಡೆಮಿಗಳ ಜವಾಬ್ದಾರಿಯುತ ಹುದ್ದೆಗೆ ಆಡಳಿತದ ಚುಕ್ಕಾಣಿ ಹಿಡಿದಿರುವವರು ಅಷ್ಟೇ ಬೇಜವಾಬ್ದಾರಿಯಿಂದ ಬ್ಯಾರಿ ಭಾಷೆಯ ಕುರಿತು ಅರಿವಿಲ್ಲದ, ಸಾಹಿತಿಗಳಲ್ಲದ ಹಾಗೂ ಕೊನೆಗೆ ಈ ಹುದ್ದೆಯನ್ನು ಕೋರಿ ಅರ್ಜಿಯನ್ನೂ ಹಾಕದ ಅನಾಮಧೇಯ ಜನರನ್ನು ಆ ಸ್ಥಾನಗಳಿಗೆ ತಂದು ಕೂರಿಸಿರುವುದು ಯಾವ ಪುರುಷಾರ್ಥದ ಮನೆ ಉದ್ಧಾರಕ ಕೆಲಸ? ಎಂಬುದು ಪ್ರಸ್ತುತ ಸಾಹಿತ್ಯ ವಲಯದಲ್ಲಿ ಸಚಿವ ಸಿ.ಟಿ. ರವಿ ವಿರುದ್ಧ ಕೇಳಿಬರುತ್ತಿರುವ ಕಟುಪ್ರಶ್ನೆ. ಆದರೆ, ಈ ಕುರಿತ ಟೀಕೆಗೆ ಅವರು ಉತ್ತರಿಸಬೇಕು ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...