Homeಕರ್ನಾಟಕಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ...

- Advertisement -
- Advertisement -

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇತ್ತೀಚೆಗೆ ತನ್ನ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಸುಮಾರು 16 ವಿವಿಧ ಅಕಾಡೆಮಿ ಹಾಗೂ ಅಧ್ಯಯನ ಕೇಂದ್ರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡಿತ್ತು. ಆದರೆ, ಹೀಗೆ ಸರ್ಕಾರದಿಂದ ಅಕಾಡೆಮಿಗೆ ಆಯ್ಕೆಯಾದ ಸದಸ್ಯರ ಪೈಕಿ ಬಹುತೇಕರು ಬಿಜೆಪಿ ಹಾಗೂ ಆರ್‍ಎಸ್‍ಎಸ್ ಭಟ್ಟಂಗಿಗಳು, ಅಕಾಡೆಮಿ ನೇಮಕಾತಿಯಲ್ಲಿ ಸಾಮಾಜಿಕ ಭೌಗೋಳಿಕ ನ್ಯಾಯ ಪಾಲಿಸಿಲ್ಲ ಎಂಬುದು ಕಾಂಗ್ರೆಸ್ ನಾಯಕರ ಆರೋಪ.

ರಾಜ್ಯದ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು-ಸದಸ್ಯರನ್ನು ನೇಮಕ ಮಾಡುವುದು ಹಾಗೂ ಈ ನೇಮಕಾತಿ ಹಿಂದೆಯೇ ಕೆಲವು ಅಪಸ್ವರಗಳು, ಟೀಕೆಟಿಪ್ಪಣಿಗಳು ಕೇಳಿಬರುವುದು ಸಾಹಿತ್ಯ ವಲಯದಲ್ಲಿ ತೀರಾ ಸಾಂಪ್ರದಾಯಿಕ ಮತ್ತು ವಾಡಿಕೆ. ಅಂತಹದ್ದೇ ವಾಡಿಕೆಯ ಟೀಕೆ ಈ ಬಾರಿಯೂ ಕೇಳಿಬಂದದ್ದು ಅಚ್ಚರಿ ಏನಲ್ಲ.

ಅಸಲಿಗೆ ಅಕಾಡೆಮಿ ಹಂತದ ಅಧ್ಯಕ್ಷರು ಸದಸ್ಯರ ಆಯ್ಕೆ ಕುರಿತ ಕಾಂಗ್ರೆಸ್ ನಾಯಕರ ಇಂತಹ ಟೀಕೆಗಳಿಗೆ ನಿಜಕ್ಕೂ ಅಷ್ಟಾಗಿ ಮಾನ್ಯತೆ ಸಿಕ್ಕಿರಲಿಲ್ಲ. ಅಕ್ಷರಶಃ ಕೆಲವು ದಿನ ಪತ್ರಿಕೆಗಳಲ್ಲಿ ಮಾತ್ರ ಈ ಹೇಳಿಕೆ ಮುದ್ರಣವಾಗಿತ್ತು. ಆ ಮುದ್ರಣವೂ ಕೇವಲ ಮೂರು ಸಾಲುಗಳಿಗಷ್ಟೇ ಮೀಸಲಾಗಿತ್ತು.

ಆದರೆ, ಹೀಗೆ ಮೂರು ಸಾಲಿಗೆ ಮಾತ್ರ ಮೀಸಲಾಗಿದ್ದ ಕಾಂಗ್ರೆಸ್ ನಾಯಕರ ಟೀಕೆಗೆ ಮತ್ತಷ್ಟು ಮೈಲೇಜ್ ಕೊಟ್ಟದ್ದು ಸಚಿವ ಸಿ.ಟಿ. ರವಿ ಅವರ ಆ ಒಂದು ಹೇಳಿಕೆ.

ಅಕಾಡೆಮಿಗಳಿಗೆ ಸದಸ್ಯರ ನೇಮಕ ವಿಚಾರ ಕುರಿತಂತೆ ಮಾಧ್ಯಮಗಳ ಎದುರು ಏಕಾಏಕಿ ಹೇಳಿಕೆ ನೀಡಿದ್ದ ಸಿ.ಟಿ. ರವಿ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡುವಾಗ ಮನೆಹಾಳು ಜನರನ್ನು ದೂರ ಇಡಲಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಕಟ್ಟಲು ನಾವು ಬದ್ಧರಿದ್ದೇವೆ. ಆದರೆ, ಈ ಕ್ಷೇತ್ರವನ್ನು ಕದಡುವ, ಒಡೆಯುವ ಮನಸ್ಥಿತಿ ಇರುವ ಜನರನ್ನು ನೇಮಕ ಮಾಡಿಲ್ಲ. ಈ ಸಲ ಮನೆಹಾಳು ಮಂದಿಗೆ ಅಧಿಕಾರ ಕೊಟ್ಟಿಲ್ಲ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸಚಿವರ ಈ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ಕಿಡಿ ಹೊತ್ತಿಸಿದೆ. ಈ ಹೇಳಿಕೆಯ ವಿರುದ್ಧ ಕನ್ನಡ ಸಾಹಿತ್ಯ ಲೋಕ ಇದೀಗ ಮುರಿದುಕೊಂಡು ಬಿದ್ದಿದೆ. ಸಿ.ಟಿ. ರವಿ ಅವರ ಈ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗೆ ಗುರಿಪಡಿಸಲಾಗುತ್ತಿದೆ.

ಬಿಜೆಪಿ ಸರ್ಕಾರ ಪ್ರಸ್ತುತ ಅಕಾಡೆಮಿ ಸದಸ್ಯರ ಆಯ್ಕೆ ವಿಚಾರದಲ್ಲಿ ಮನೆಹಾಳರನ್ನು ಅಧಿಕಾರದ ವ್ಯಾಪ್ತಿಗೆ ಬಿಟ್ಟುಕೊಂಡಿಲ್ಲ ಎಂದಾದರೆ ಈವರೆಗೆ ಅಕಾಡೆಮಿಯಲ್ಲಿ ಕೆಲಸ ನಿರ್ವಹಿಸಿದವರು ಮನೆಹಾಳು ಜನರೇ? ಸರಿ, ಸಚಿವರು ಹೇಳಿದಂತೆ ಹಿಂದೆಲ್ಲ ನೇಮಕಗೊಂಡ ಮನೆಹಾಳರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ಅಂತ ನೋಡೋಣ. ಬೇರೆ ಅಕ್ಯಾಡೆಮಿಗಳ ಮಾತಿರಲಿ, ಸಾಹಿತ್ಯ ಅಕಾಡೆಮಿಯನ್ನೇ ಪರಿಗಣಿಸುವುದಾದರೆ ಅ.ನ.ಕೃ, ಕೆ.ವಿ.ಶಂಕರೇಗೌಡ್ರು, ಹಾ.ಮಾ.ನಾಯಕ್, ನಿತ್ಯೋತ್ಸವ ಕವಿ ನಿಸಾರ್ ಅಹಮದ್, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ, ಬರಗೂರು ರಾಮಚಂದ್ರಪ್ಪ, ಗಿರಡ್ಡಿ ಗೋವಿಂದರಾಜರು, ಗೀತಾ ನಾಗಭೂಷಣ…. ಇಂತವರೆಲ್ಲ ಅಧ್ಯಕ್ಷರಾಗಿದ್ದಂತವರು. ಇಲ್ಲಿಯವರೆಗೆ ಇವರನ್ನೆಲ್ಲ ಕನ್ನಡದ, ಕರ್ನಾಟಕದ ಹೆಮ್ಮೆ ಎಂದೇ ನಾವೇ ಭಾವಿಸಿದ್ದೆವು. ಆದರೆ ಸಚಿವರ ಗೀತೋಪದೇಶದಿಂದ ಇವರೆಲ್ಲ ಅನಾಮತ್ತು `ಮನೆಹಾಳರ’ ಪಟ್ಟಿಗೆ ಸೇರಿದಂತಾಗಿದೆ. ಇಂತಹ ಹೇಳಿಕೆಗಳ ಮೂಲಕ ಸಚಿವ ಸಿ.ಟಿ. ರವಿ ಕನ್ನಡ ಸಾಹಿತಿಗಳನ್ನು ಅವಮಾನಿಸಿದ್ದಾರೆ ಎಂಬುದು ಟೀಕಾಕಾರದ ಪ್ರಬಲ ವಾದ.

ಆದರೆ, ಸಚಿವ ಸಿ.ಟಿ. ರವಿ ಹಾಗೂ ಅವರ ಟೀಕಾಕಾರರ ನಡುವಿನ ವಾಗ್ಯುದ್ಧ ಜೋರಾಗುತ್ತಿದ್ದಂತೆ ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಮಾತುಗಳು ಸರ್ಕಾರಕ್ಕೆ ಮತ್ತು ಸಚಿವರಿಗೆ ಮತ್ತಷ್ಟು ಇರಿಸುಮುರಿಸಿಗೆ ಕಾರಣವಾಗಿದೆ.

ಅಸಲಿಗೆ ಬ್ಯಾರಿ ಅಕಾಡೆಮಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿರುವ ಡಾ. ಮುನೀರ್ ಬಾವ, ಫಝಲ್ ಆಸೈಗೋಳಿ ಮತ್ತು ಸಿರಾಜುದ್ದೀನ್ ಮುಡಿಪು ಎಂಬ ಮೂವರೂ ಸಾಹಿತಿಗಳಲ್ಲ, ಕವಿಗಳೂ ಅಲ್ಲ, ಅಲ್ಲದೆ ಇವರಿಗೆ ಬ್ಯಾರಿ ಭಾಷೆಯೂ ಬರಲ್ಲ. ಈ ಮೂವರು ಇತ್ತೀಚೆಗೆ ಸ್ವತಃ ಮಾಧ್ಯಮಗಳ ಎದುರು ಬಹಿರಂಗ ಹೇಳಿಕೆ ನೀಡಿದ್ದು, “ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ. ಅಲ್ಲದೆ, ಈ ಹುದ್ದೆಗೆ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡುವಂತೆಯೂ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆ.

ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಈ ಮಾತುಗಳು ಹಾಗೂ ಗೊಂದಲ ಅಸಲಿಗೆ ಮನೆಹಾಳರು ಯಾರು? ಎಂಬ ಕುರಿತು ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಕಡೆಗೆ ಬೊಟ್ಟು ಮಾಡುತ್ತಿದೆ. ಅಸಲಿಗೆ ಬ್ಯಾರಿ ಅಕಾಡೆಮಿ ಕೆಲಸವೇನು? ಇತಿಹಾಸವೇನು? ಇಲ್ಲಿದೆ ಡೀಟೈಲ್ಸ್

ಏನದು ಬ್ಯಾರಿ ಅಕಾಡೆಮಿ ರಾದ್ಧಾಂತ?
ಕನ್ನಡ ರಾಜ್ಯದ ನಾಡಭಾಷೆಯಾದರೂ, ಕರ್ನಾಟಕ ಎಂಬುದು ವಿವಿಧ ಭಾಷೆ ಮತ್ತು ಶ್ರೀಮಂತ ಸಂಸ್ಕೃತಿಗಳ ಕಣಜ. ಪ್ರತಿ 40 ಕಿಮಿ ಗೂ ಭಾಷೆ ಮತ್ತು ಸಂಸ್ಕೃತಿಯಲ್ಲಿರುವ ಬದಲಾವಣೆ, ಜನರ ಬದುಕುವ ಕ್ರಮದಲ್ಲಿನ ವಿಭಿನ್ನತೆಯನ್ನು ನಾವಿಲ್ಲಿ ಕಾಣಬಹುದು.ಭಾಗಶಃ ಭಾರತದ ಬೇರೆ ಯಾವ ರಾಜ್ಯಕ್ಕೂ ಇಲ್ಲದಷ್ಟು ವಿವಿಧತೆಯ ಶ್ರೀಮಂತಿಕೆಯನ್ನು ಹೊಂದಿರುವ ರಾಜ್ಯ ಕರ್ನಾಟಕ ಎಂದರೆ ತಪ್ಪಾಗಲಾರದು.

ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ. ಕರ್ನಾಟಕ ಸಾಹಿತ್ಯ ಪರಿಷತ್ ಮೂಲಕ ಭಾಷೆಯ ಅಭಿವೃದ್ಧಿಗೆ, ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರೇರಣೆ ನೀಡಲಾಗುತ್ತಿದೆ. ಇದೇ ರೀತಿ ಕನ್ನಡದ ಸಹೋದರ ಭಾಷೆಯಾದ ತುಳು, ಕೊಂಕಣಿ, ಕೊಡವ ಭಾಷೆಗಳ ಅಭಿವೃದ್ಧಿಗೂ ಕರ್ನಾಟಕ ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಮೂಲಕ ಅಕಾಡೆಮಿ ರಚಿಸಲಾಗಿದೆ.
ಒಂದು ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ ಎಂದಾದರೆ ಆ ಭಾಷೆಗೆ ಸರ್ಕಾರದಿಂದ ಮಾನ್ಯತೆ ಸಿಕ್ಕಿದೆ ಎಂದೇ ಅರ್ಥ. ಕೊಂಕಣಿ, ಕೊಡವ ಹಾಗೂ ತುಳು ಭಾಷೆಯಂತೆ ಕರಾವಳಿ ಭಾಗದಲ್ಲಿ ಪ್ರಚಲಿತವಿರುವ ಮತ್ತೊಂದು ಭಾಷೆಯೇ ಬ್ಯಾರಿ. ಉರ್ದು ಬಾಷೆಗೂ ಅಕಾಡೆಮಿ ರಚಿಸಿರುವ ರಾಜ್ಯ ಸರ್ಕಾರ ತೀರಾ ಇತ್ತೀಚೆಗೆ ಬ್ಯಾರಿ ಭಾಷೆಗೂ ಒಂದು ಅಕಾಡೆಮಿ ರಚಿಸಿತ್ತು.
ಕರಾವಳಿ ಹಾಗೂ ಕೊಡಗು ಭಾಗದಲ್ಲಿ ಬಹುಪಾಲು ಇಸ್ಲಾಂ ಜನರಿಂದ ಬಳಕೆಯಾಗುತ್ತಿರುವ ಭಾಷೆಗಳಲ್ಲಿ ಬ್ಯಾರಿ ಎಂಬುದು ಚಿರಪರಿಚಿತ ಭಾಷೆ. ಕನ್ನಡ ಭಾಷೆಯಷ್ಟೇ ಪ್ರಾಚೀನ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯಲ್ಲಿ ಜನಪದ ಸಾಹಿತ್ಯದ ಭಂಡಾರವೇ ಇದೆ. ಬ್ಯಾರಿ ಜನರ ಮದುವೆ ಸಮಾರಂಭಗಳಲ್ಲಿ, ಹಬ್ಬದ ದಿನಗಳಲ್ಲಿ, ಧಾರ್ಮಿಕ ದಿನಾಚರಣೆಗಳ ಸಂದರ್ಭದಲ್ಲಿ ಹೆಂಗಸರು, ಮಕ್ಕಳು ಹಾಗೂ ಪುರುಷರು ಬ್ಯಾರಿ ಜನಪದ ಸಾಹಿತ್ಯವನ್ನು ಹಾಡಿ ಕುಣಿದು ಸಂತೋಷ ಪಡುತ್ತಾರೆ. ಆದರೆ, ಇಂತಹ ಬ್ಯಾರಿ ಜನಪದ ಸಾಹಿತ್ಯ ಇಂದು ನವ ನಾಗರಿಕತೆಯ ಸೆಳೆತಕ್ಕೆ ಸಿಲುಕಿ ಅಳಿವಿನ ಅಂಚಿಗೆ ಸರಿದಿದೆ.

 

 

ಹೀಗಾಗಿ ಇಂತಹ ಶ್ರೀಮಂತ ಜನಪದ ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಬ್ಯಾರಿ ಸಮಾಜದ ಪ್ರತಿಭಾವಂತ ಲೇಖಕರು, ಲೇಖಕಿಯರ ಪ್ರತಿಭೆಯನ್ನು ಪೋಷಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಈ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿತ್ತು. ಇದರ ಕೇಂದ್ರ ಕಚೇರಿ ಮಂಗಳೂರಿನಲ್ಲಿದೆ.

ಕಳೆದ ಒಂದು ದಶಕದಿಂದ ಬ್ಯಾರಿ ಭಾಷೆ, ಸಾಹಿತ್ಯ ಕಲೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬ್ಯಾರಿ ಸಂಸ್ಕೃತಿಗೆ ಪೂರಕವಾಗಿ ಬ್ಯಾರಿಗಳ ವಿಶಿಷ್ಟ ಹಬ್ಬಗಳಾದ ಪೆರ್ನಾಲ್, ಸಂದೋಲ ಹಬ್ಬಗಳನ್ನು ಬ್ಯಾರಿ ಜನರ ನಡುವೆ ಸಡಗರದಿಂದ ಆಚರಿಸಲಾಗುತ್ತಿದೆ. ಬ್ಯಾರಿ ಜಾನಪದ ಸಂಗೀತ, ನಾಟಕಗಳಿಗೆ ಸಂಬಂಧಿಸಿದಂತೆ ಉತ್ಸವ, ಸಮಾವೇಶ, ಸಮ್ಮೇಳನ, ದಫ್ ಸ್ಪರ್ಧೆ, ಬ್ಯಾರಿ ನಾಟಕ ಸ್ಪರ್ಧೆ ಮತ್ತು ಬ್ಯಾರಿ ಜಾನಪದ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧೆಡೆಗಳಲ್ಲಿ ಬ್ಯಾರಿ ಅಕಾಡೆಮಿ ವತಿಯಿಂದ ಆಯೋಜಿಸಲಾಗುತ್ತಿದೆ.

ಅಳಿವಿನ ಅಂಚಿನಲ್ಲಿರುವ ಬ್ಯಾರಿ ಸಂಸ್ಕೃತಿಯನ್ನು ಭಾಷೆಯನ್ನು ಉಳಿಸಿಕೊಳ್ಳಲು ಇಂತಹ ಹತ್ತಾರು ಕಾರ್ಯಕ್ರಮಗಳ ಅಗತ್ಯ ಇರುವಂತೆ, ಇಂತಹ ಅಕಾಡೆಮಿಗಳಿಗೆ ಭಾಷೆಯ ಮೇಲೆ ಪ್ರೀತಿ ಇರುವ ಹಾಗೂ ಈ ಕ್ಷೇತ್ರದಲ್ಲಿ ವಿಫುಲ ಕೃಷಿ ಮಾಡಿರುವ ವ್ಯಕ್ತಿಗಳ ಅಗತ್ಯತೆಯೂ ಇದೆ. ಅಧಿಕಾರ ವಲಯದಲ್ಲಿ ಅಂತವರು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ.

ಆದರೆ, ಇಂತಹ ಅಕಾಡೆಮಿಗಳ ಜವಾಬ್ದಾರಿಯುತ ಹುದ್ದೆಗೆ ಆಡಳಿತದ ಚುಕ್ಕಾಣಿ ಹಿಡಿದಿರುವವರು ಅಷ್ಟೇ ಬೇಜವಾಬ್ದಾರಿಯಿಂದ ಬ್ಯಾರಿ ಭಾಷೆಯ ಕುರಿತು ಅರಿವಿಲ್ಲದ, ಸಾಹಿತಿಗಳಲ್ಲದ ಹಾಗೂ ಕೊನೆಗೆ ಈ ಹುದ್ದೆಯನ್ನು ಕೋರಿ ಅರ್ಜಿಯನ್ನೂ ಹಾಕದ ಅನಾಮಧೇಯ ಜನರನ್ನು ಆ ಸ್ಥಾನಗಳಿಗೆ ತಂದು ಕೂರಿಸಿರುವುದು ಯಾವ ಪುರುಷಾರ್ಥದ ಮನೆ ಉದ್ಧಾರಕ ಕೆಲಸ? ಎಂಬುದು ಪ್ರಸ್ತುತ ಸಾಹಿತ್ಯ ವಲಯದಲ್ಲಿ ಸಚಿವ ಸಿ.ಟಿ. ರವಿ ವಿರುದ್ಧ ಕೇಳಿಬರುತ್ತಿರುವ ಕಟುಪ್ರಶ್ನೆ. ಆದರೆ, ಈ ಕುರಿತ ಟೀಕೆಗೆ ಅವರು ಉತ್ತರಿಸಬೇಕು ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...