Homeಕರ್ನಾಟಕಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ...

- Advertisement -
- Advertisement -

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇತ್ತೀಚೆಗೆ ತನ್ನ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಸುಮಾರು 16 ವಿವಿಧ ಅಕಾಡೆಮಿ ಹಾಗೂ ಅಧ್ಯಯನ ಕೇಂದ್ರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡಿತ್ತು. ಆದರೆ, ಹೀಗೆ ಸರ್ಕಾರದಿಂದ ಅಕಾಡೆಮಿಗೆ ಆಯ್ಕೆಯಾದ ಸದಸ್ಯರ ಪೈಕಿ ಬಹುತೇಕರು ಬಿಜೆಪಿ ಹಾಗೂ ಆರ್‍ಎಸ್‍ಎಸ್ ಭಟ್ಟಂಗಿಗಳು, ಅಕಾಡೆಮಿ ನೇಮಕಾತಿಯಲ್ಲಿ ಸಾಮಾಜಿಕ ಭೌಗೋಳಿಕ ನ್ಯಾಯ ಪಾಲಿಸಿಲ್ಲ ಎಂಬುದು ಕಾಂಗ್ರೆಸ್ ನಾಯಕರ ಆರೋಪ.

ರಾಜ್ಯದ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು-ಸದಸ್ಯರನ್ನು ನೇಮಕ ಮಾಡುವುದು ಹಾಗೂ ಈ ನೇಮಕಾತಿ ಹಿಂದೆಯೇ ಕೆಲವು ಅಪಸ್ವರಗಳು, ಟೀಕೆಟಿಪ್ಪಣಿಗಳು ಕೇಳಿಬರುವುದು ಸಾಹಿತ್ಯ ವಲಯದಲ್ಲಿ ತೀರಾ ಸಾಂಪ್ರದಾಯಿಕ ಮತ್ತು ವಾಡಿಕೆ. ಅಂತಹದ್ದೇ ವಾಡಿಕೆಯ ಟೀಕೆ ಈ ಬಾರಿಯೂ ಕೇಳಿಬಂದದ್ದು ಅಚ್ಚರಿ ಏನಲ್ಲ.

ಅಸಲಿಗೆ ಅಕಾಡೆಮಿ ಹಂತದ ಅಧ್ಯಕ್ಷರು ಸದಸ್ಯರ ಆಯ್ಕೆ ಕುರಿತ ಕಾಂಗ್ರೆಸ್ ನಾಯಕರ ಇಂತಹ ಟೀಕೆಗಳಿಗೆ ನಿಜಕ್ಕೂ ಅಷ್ಟಾಗಿ ಮಾನ್ಯತೆ ಸಿಕ್ಕಿರಲಿಲ್ಲ. ಅಕ್ಷರಶಃ ಕೆಲವು ದಿನ ಪತ್ರಿಕೆಗಳಲ್ಲಿ ಮಾತ್ರ ಈ ಹೇಳಿಕೆ ಮುದ್ರಣವಾಗಿತ್ತು. ಆ ಮುದ್ರಣವೂ ಕೇವಲ ಮೂರು ಸಾಲುಗಳಿಗಷ್ಟೇ ಮೀಸಲಾಗಿತ್ತು.

ಆದರೆ, ಹೀಗೆ ಮೂರು ಸಾಲಿಗೆ ಮಾತ್ರ ಮೀಸಲಾಗಿದ್ದ ಕಾಂಗ್ರೆಸ್ ನಾಯಕರ ಟೀಕೆಗೆ ಮತ್ತಷ್ಟು ಮೈಲೇಜ್ ಕೊಟ್ಟದ್ದು ಸಚಿವ ಸಿ.ಟಿ. ರವಿ ಅವರ ಆ ಒಂದು ಹೇಳಿಕೆ.

ಅಕಾಡೆಮಿಗಳಿಗೆ ಸದಸ್ಯರ ನೇಮಕ ವಿಚಾರ ಕುರಿತಂತೆ ಮಾಧ್ಯಮಗಳ ಎದುರು ಏಕಾಏಕಿ ಹೇಳಿಕೆ ನೀಡಿದ್ದ ಸಿ.ಟಿ. ರವಿ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡುವಾಗ ಮನೆಹಾಳು ಜನರನ್ನು ದೂರ ಇಡಲಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಕಟ್ಟಲು ನಾವು ಬದ್ಧರಿದ್ದೇವೆ. ಆದರೆ, ಈ ಕ್ಷೇತ್ರವನ್ನು ಕದಡುವ, ಒಡೆಯುವ ಮನಸ್ಥಿತಿ ಇರುವ ಜನರನ್ನು ನೇಮಕ ಮಾಡಿಲ್ಲ. ಈ ಸಲ ಮನೆಹಾಳು ಮಂದಿಗೆ ಅಧಿಕಾರ ಕೊಟ್ಟಿಲ್ಲ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸಚಿವರ ಈ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ಕಿಡಿ ಹೊತ್ತಿಸಿದೆ. ಈ ಹೇಳಿಕೆಯ ವಿರುದ್ಧ ಕನ್ನಡ ಸಾಹಿತ್ಯ ಲೋಕ ಇದೀಗ ಮುರಿದುಕೊಂಡು ಬಿದ್ದಿದೆ. ಸಿ.ಟಿ. ರವಿ ಅವರ ಈ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗೆ ಗುರಿಪಡಿಸಲಾಗುತ್ತಿದೆ.

ಬಿಜೆಪಿ ಸರ್ಕಾರ ಪ್ರಸ್ತುತ ಅಕಾಡೆಮಿ ಸದಸ್ಯರ ಆಯ್ಕೆ ವಿಚಾರದಲ್ಲಿ ಮನೆಹಾಳರನ್ನು ಅಧಿಕಾರದ ವ್ಯಾಪ್ತಿಗೆ ಬಿಟ್ಟುಕೊಂಡಿಲ್ಲ ಎಂದಾದರೆ ಈವರೆಗೆ ಅಕಾಡೆಮಿಯಲ್ಲಿ ಕೆಲಸ ನಿರ್ವಹಿಸಿದವರು ಮನೆಹಾಳು ಜನರೇ? ಸರಿ, ಸಚಿವರು ಹೇಳಿದಂತೆ ಹಿಂದೆಲ್ಲ ನೇಮಕಗೊಂಡ ಮನೆಹಾಳರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ಅಂತ ನೋಡೋಣ. ಬೇರೆ ಅಕ್ಯಾಡೆಮಿಗಳ ಮಾತಿರಲಿ, ಸಾಹಿತ್ಯ ಅಕಾಡೆಮಿಯನ್ನೇ ಪರಿಗಣಿಸುವುದಾದರೆ ಅ.ನ.ಕೃ, ಕೆ.ವಿ.ಶಂಕರೇಗೌಡ್ರು, ಹಾ.ಮಾ.ನಾಯಕ್, ನಿತ್ಯೋತ್ಸವ ಕವಿ ನಿಸಾರ್ ಅಹಮದ್, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ, ಬರಗೂರು ರಾಮಚಂದ್ರಪ್ಪ, ಗಿರಡ್ಡಿ ಗೋವಿಂದರಾಜರು, ಗೀತಾ ನಾಗಭೂಷಣ…. ಇಂತವರೆಲ್ಲ ಅಧ್ಯಕ್ಷರಾಗಿದ್ದಂತವರು. ಇಲ್ಲಿಯವರೆಗೆ ಇವರನ್ನೆಲ್ಲ ಕನ್ನಡದ, ಕರ್ನಾಟಕದ ಹೆಮ್ಮೆ ಎಂದೇ ನಾವೇ ಭಾವಿಸಿದ್ದೆವು. ಆದರೆ ಸಚಿವರ ಗೀತೋಪದೇಶದಿಂದ ಇವರೆಲ್ಲ ಅನಾಮತ್ತು `ಮನೆಹಾಳರ’ ಪಟ್ಟಿಗೆ ಸೇರಿದಂತಾಗಿದೆ. ಇಂತಹ ಹೇಳಿಕೆಗಳ ಮೂಲಕ ಸಚಿವ ಸಿ.ಟಿ. ರವಿ ಕನ್ನಡ ಸಾಹಿತಿಗಳನ್ನು ಅವಮಾನಿಸಿದ್ದಾರೆ ಎಂಬುದು ಟೀಕಾಕಾರದ ಪ್ರಬಲ ವಾದ.

ಆದರೆ, ಸಚಿವ ಸಿ.ಟಿ. ರವಿ ಹಾಗೂ ಅವರ ಟೀಕಾಕಾರರ ನಡುವಿನ ವಾಗ್ಯುದ್ಧ ಜೋರಾಗುತ್ತಿದ್ದಂತೆ ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಮಾತುಗಳು ಸರ್ಕಾರಕ್ಕೆ ಮತ್ತು ಸಚಿವರಿಗೆ ಮತ್ತಷ್ಟು ಇರಿಸುಮುರಿಸಿಗೆ ಕಾರಣವಾಗಿದೆ.

ಅಸಲಿಗೆ ಬ್ಯಾರಿ ಅಕಾಡೆಮಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿರುವ ಡಾ. ಮುನೀರ್ ಬಾವ, ಫಝಲ್ ಆಸೈಗೋಳಿ ಮತ್ತು ಸಿರಾಜುದ್ದೀನ್ ಮುಡಿಪು ಎಂಬ ಮೂವರೂ ಸಾಹಿತಿಗಳಲ್ಲ, ಕವಿಗಳೂ ಅಲ್ಲ, ಅಲ್ಲದೆ ಇವರಿಗೆ ಬ್ಯಾರಿ ಭಾಷೆಯೂ ಬರಲ್ಲ. ಈ ಮೂವರು ಇತ್ತೀಚೆಗೆ ಸ್ವತಃ ಮಾಧ್ಯಮಗಳ ಎದುರು ಬಹಿರಂಗ ಹೇಳಿಕೆ ನೀಡಿದ್ದು, “ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ. ಅಲ್ಲದೆ, ಈ ಹುದ್ದೆಗೆ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡುವಂತೆಯೂ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆ.

ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಈ ಮಾತುಗಳು ಹಾಗೂ ಗೊಂದಲ ಅಸಲಿಗೆ ಮನೆಹಾಳರು ಯಾರು? ಎಂಬ ಕುರಿತು ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಕಡೆಗೆ ಬೊಟ್ಟು ಮಾಡುತ್ತಿದೆ. ಅಸಲಿಗೆ ಬ್ಯಾರಿ ಅಕಾಡೆಮಿ ಕೆಲಸವೇನು? ಇತಿಹಾಸವೇನು? ಇಲ್ಲಿದೆ ಡೀಟೈಲ್ಸ್

ಏನದು ಬ್ಯಾರಿ ಅಕಾಡೆಮಿ ರಾದ್ಧಾಂತ?
ಕನ್ನಡ ರಾಜ್ಯದ ನಾಡಭಾಷೆಯಾದರೂ, ಕರ್ನಾಟಕ ಎಂಬುದು ವಿವಿಧ ಭಾಷೆ ಮತ್ತು ಶ್ರೀಮಂತ ಸಂಸ್ಕೃತಿಗಳ ಕಣಜ. ಪ್ರತಿ 40 ಕಿಮಿ ಗೂ ಭಾಷೆ ಮತ್ತು ಸಂಸ್ಕೃತಿಯಲ್ಲಿರುವ ಬದಲಾವಣೆ, ಜನರ ಬದುಕುವ ಕ್ರಮದಲ್ಲಿನ ವಿಭಿನ್ನತೆಯನ್ನು ನಾವಿಲ್ಲಿ ಕಾಣಬಹುದು.ಭಾಗಶಃ ಭಾರತದ ಬೇರೆ ಯಾವ ರಾಜ್ಯಕ್ಕೂ ಇಲ್ಲದಷ್ಟು ವಿವಿಧತೆಯ ಶ್ರೀಮಂತಿಕೆಯನ್ನು ಹೊಂದಿರುವ ರಾಜ್ಯ ಕರ್ನಾಟಕ ಎಂದರೆ ತಪ್ಪಾಗಲಾರದು.

ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ. ಕರ್ನಾಟಕ ಸಾಹಿತ್ಯ ಪರಿಷತ್ ಮೂಲಕ ಭಾಷೆಯ ಅಭಿವೃದ್ಧಿಗೆ, ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರೇರಣೆ ನೀಡಲಾಗುತ್ತಿದೆ. ಇದೇ ರೀತಿ ಕನ್ನಡದ ಸಹೋದರ ಭಾಷೆಯಾದ ತುಳು, ಕೊಂಕಣಿ, ಕೊಡವ ಭಾಷೆಗಳ ಅಭಿವೃದ್ಧಿಗೂ ಕರ್ನಾಟಕ ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಮೂಲಕ ಅಕಾಡೆಮಿ ರಚಿಸಲಾಗಿದೆ.
ಒಂದು ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ ಎಂದಾದರೆ ಆ ಭಾಷೆಗೆ ಸರ್ಕಾರದಿಂದ ಮಾನ್ಯತೆ ಸಿಕ್ಕಿದೆ ಎಂದೇ ಅರ್ಥ. ಕೊಂಕಣಿ, ಕೊಡವ ಹಾಗೂ ತುಳು ಭಾಷೆಯಂತೆ ಕರಾವಳಿ ಭಾಗದಲ್ಲಿ ಪ್ರಚಲಿತವಿರುವ ಮತ್ತೊಂದು ಭಾಷೆಯೇ ಬ್ಯಾರಿ. ಉರ್ದು ಬಾಷೆಗೂ ಅಕಾಡೆಮಿ ರಚಿಸಿರುವ ರಾಜ್ಯ ಸರ್ಕಾರ ತೀರಾ ಇತ್ತೀಚೆಗೆ ಬ್ಯಾರಿ ಭಾಷೆಗೂ ಒಂದು ಅಕಾಡೆಮಿ ರಚಿಸಿತ್ತು.
ಕರಾವಳಿ ಹಾಗೂ ಕೊಡಗು ಭಾಗದಲ್ಲಿ ಬಹುಪಾಲು ಇಸ್ಲಾಂ ಜನರಿಂದ ಬಳಕೆಯಾಗುತ್ತಿರುವ ಭಾಷೆಗಳಲ್ಲಿ ಬ್ಯಾರಿ ಎಂಬುದು ಚಿರಪರಿಚಿತ ಭಾಷೆ. ಕನ್ನಡ ಭಾಷೆಯಷ್ಟೇ ಪ್ರಾಚೀನ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯಲ್ಲಿ ಜನಪದ ಸಾಹಿತ್ಯದ ಭಂಡಾರವೇ ಇದೆ. ಬ್ಯಾರಿ ಜನರ ಮದುವೆ ಸಮಾರಂಭಗಳಲ್ಲಿ, ಹಬ್ಬದ ದಿನಗಳಲ್ಲಿ, ಧಾರ್ಮಿಕ ದಿನಾಚರಣೆಗಳ ಸಂದರ್ಭದಲ್ಲಿ ಹೆಂಗಸರು, ಮಕ್ಕಳು ಹಾಗೂ ಪುರುಷರು ಬ್ಯಾರಿ ಜನಪದ ಸಾಹಿತ್ಯವನ್ನು ಹಾಡಿ ಕುಣಿದು ಸಂತೋಷ ಪಡುತ್ತಾರೆ. ಆದರೆ, ಇಂತಹ ಬ್ಯಾರಿ ಜನಪದ ಸಾಹಿತ್ಯ ಇಂದು ನವ ನಾಗರಿಕತೆಯ ಸೆಳೆತಕ್ಕೆ ಸಿಲುಕಿ ಅಳಿವಿನ ಅಂಚಿಗೆ ಸರಿದಿದೆ.

 

 

ಹೀಗಾಗಿ ಇಂತಹ ಶ್ರೀಮಂತ ಜನಪದ ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಬ್ಯಾರಿ ಸಮಾಜದ ಪ್ರತಿಭಾವಂತ ಲೇಖಕರು, ಲೇಖಕಿಯರ ಪ್ರತಿಭೆಯನ್ನು ಪೋಷಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಈ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿತ್ತು. ಇದರ ಕೇಂದ್ರ ಕಚೇರಿ ಮಂಗಳೂರಿನಲ್ಲಿದೆ.

ಕಳೆದ ಒಂದು ದಶಕದಿಂದ ಬ್ಯಾರಿ ಭಾಷೆ, ಸಾಹಿತ್ಯ ಕಲೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬ್ಯಾರಿ ಸಂಸ್ಕೃತಿಗೆ ಪೂರಕವಾಗಿ ಬ್ಯಾರಿಗಳ ವಿಶಿಷ್ಟ ಹಬ್ಬಗಳಾದ ಪೆರ್ನಾಲ್, ಸಂದೋಲ ಹಬ್ಬಗಳನ್ನು ಬ್ಯಾರಿ ಜನರ ನಡುವೆ ಸಡಗರದಿಂದ ಆಚರಿಸಲಾಗುತ್ತಿದೆ. ಬ್ಯಾರಿ ಜಾನಪದ ಸಂಗೀತ, ನಾಟಕಗಳಿಗೆ ಸಂಬಂಧಿಸಿದಂತೆ ಉತ್ಸವ, ಸಮಾವೇಶ, ಸಮ್ಮೇಳನ, ದಫ್ ಸ್ಪರ್ಧೆ, ಬ್ಯಾರಿ ನಾಟಕ ಸ್ಪರ್ಧೆ ಮತ್ತು ಬ್ಯಾರಿ ಜಾನಪದ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧೆಡೆಗಳಲ್ಲಿ ಬ್ಯಾರಿ ಅಕಾಡೆಮಿ ವತಿಯಿಂದ ಆಯೋಜಿಸಲಾಗುತ್ತಿದೆ.

ಅಳಿವಿನ ಅಂಚಿನಲ್ಲಿರುವ ಬ್ಯಾರಿ ಸಂಸ್ಕೃತಿಯನ್ನು ಭಾಷೆಯನ್ನು ಉಳಿಸಿಕೊಳ್ಳಲು ಇಂತಹ ಹತ್ತಾರು ಕಾರ್ಯಕ್ರಮಗಳ ಅಗತ್ಯ ಇರುವಂತೆ, ಇಂತಹ ಅಕಾಡೆಮಿಗಳಿಗೆ ಭಾಷೆಯ ಮೇಲೆ ಪ್ರೀತಿ ಇರುವ ಹಾಗೂ ಈ ಕ್ಷೇತ್ರದಲ್ಲಿ ವಿಫುಲ ಕೃಷಿ ಮಾಡಿರುವ ವ್ಯಕ್ತಿಗಳ ಅಗತ್ಯತೆಯೂ ಇದೆ. ಅಧಿಕಾರ ವಲಯದಲ್ಲಿ ಅಂತವರು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ.

ಆದರೆ, ಇಂತಹ ಅಕಾಡೆಮಿಗಳ ಜವಾಬ್ದಾರಿಯುತ ಹುದ್ದೆಗೆ ಆಡಳಿತದ ಚುಕ್ಕಾಣಿ ಹಿಡಿದಿರುವವರು ಅಷ್ಟೇ ಬೇಜವಾಬ್ದಾರಿಯಿಂದ ಬ್ಯಾರಿ ಭಾಷೆಯ ಕುರಿತು ಅರಿವಿಲ್ಲದ, ಸಾಹಿತಿಗಳಲ್ಲದ ಹಾಗೂ ಕೊನೆಗೆ ಈ ಹುದ್ದೆಯನ್ನು ಕೋರಿ ಅರ್ಜಿಯನ್ನೂ ಹಾಕದ ಅನಾಮಧೇಯ ಜನರನ್ನು ಆ ಸ್ಥಾನಗಳಿಗೆ ತಂದು ಕೂರಿಸಿರುವುದು ಯಾವ ಪುರುಷಾರ್ಥದ ಮನೆ ಉದ್ಧಾರಕ ಕೆಲಸ? ಎಂಬುದು ಪ್ರಸ್ತುತ ಸಾಹಿತ್ಯ ವಲಯದಲ್ಲಿ ಸಚಿವ ಸಿ.ಟಿ. ರವಿ ವಿರುದ್ಧ ಕೇಳಿಬರುತ್ತಿರುವ ಕಟುಪ್ರಶ್ನೆ. ಆದರೆ, ಈ ಕುರಿತ ಟೀಕೆಗೆ ಅವರು ಉತ್ತರಿಸಬೇಕು ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...