Homeಕರ್ನಾಟಕಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ...

- Advertisement -
- Advertisement -

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇತ್ತೀಚೆಗೆ ತನ್ನ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಸುಮಾರು 16 ವಿವಿಧ ಅಕಾಡೆಮಿ ಹಾಗೂ ಅಧ್ಯಯನ ಕೇಂದ್ರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡಿತ್ತು. ಆದರೆ, ಹೀಗೆ ಸರ್ಕಾರದಿಂದ ಅಕಾಡೆಮಿಗೆ ಆಯ್ಕೆಯಾದ ಸದಸ್ಯರ ಪೈಕಿ ಬಹುತೇಕರು ಬಿಜೆಪಿ ಹಾಗೂ ಆರ್‍ಎಸ್‍ಎಸ್ ಭಟ್ಟಂಗಿಗಳು, ಅಕಾಡೆಮಿ ನೇಮಕಾತಿಯಲ್ಲಿ ಸಾಮಾಜಿಕ ಭೌಗೋಳಿಕ ನ್ಯಾಯ ಪಾಲಿಸಿಲ್ಲ ಎಂಬುದು ಕಾಂಗ್ರೆಸ್ ನಾಯಕರ ಆರೋಪ.

ರಾಜ್ಯದ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು-ಸದಸ್ಯರನ್ನು ನೇಮಕ ಮಾಡುವುದು ಹಾಗೂ ಈ ನೇಮಕಾತಿ ಹಿಂದೆಯೇ ಕೆಲವು ಅಪಸ್ವರಗಳು, ಟೀಕೆಟಿಪ್ಪಣಿಗಳು ಕೇಳಿಬರುವುದು ಸಾಹಿತ್ಯ ವಲಯದಲ್ಲಿ ತೀರಾ ಸಾಂಪ್ರದಾಯಿಕ ಮತ್ತು ವಾಡಿಕೆ. ಅಂತಹದ್ದೇ ವಾಡಿಕೆಯ ಟೀಕೆ ಈ ಬಾರಿಯೂ ಕೇಳಿಬಂದದ್ದು ಅಚ್ಚರಿ ಏನಲ್ಲ.

ಅಸಲಿಗೆ ಅಕಾಡೆಮಿ ಹಂತದ ಅಧ್ಯಕ್ಷರು ಸದಸ್ಯರ ಆಯ್ಕೆ ಕುರಿತ ಕಾಂಗ್ರೆಸ್ ನಾಯಕರ ಇಂತಹ ಟೀಕೆಗಳಿಗೆ ನಿಜಕ್ಕೂ ಅಷ್ಟಾಗಿ ಮಾನ್ಯತೆ ಸಿಕ್ಕಿರಲಿಲ್ಲ. ಅಕ್ಷರಶಃ ಕೆಲವು ದಿನ ಪತ್ರಿಕೆಗಳಲ್ಲಿ ಮಾತ್ರ ಈ ಹೇಳಿಕೆ ಮುದ್ರಣವಾಗಿತ್ತು. ಆ ಮುದ್ರಣವೂ ಕೇವಲ ಮೂರು ಸಾಲುಗಳಿಗಷ್ಟೇ ಮೀಸಲಾಗಿತ್ತು.

ಆದರೆ, ಹೀಗೆ ಮೂರು ಸಾಲಿಗೆ ಮಾತ್ರ ಮೀಸಲಾಗಿದ್ದ ಕಾಂಗ್ರೆಸ್ ನಾಯಕರ ಟೀಕೆಗೆ ಮತ್ತಷ್ಟು ಮೈಲೇಜ್ ಕೊಟ್ಟದ್ದು ಸಚಿವ ಸಿ.ಟಿ. ರವಿ ಅವರ ಆ ಒಂದು ಹೇಳಿಕೆ.

ಅಕಾಡೆಮಿಗಳಿಗೆ ಸದಸ್ಯರ ನೇಮಕ ವಿಚಾರ ಕುರಿತಂತೆ ಮಾಧ್ಯಮಗಳ ಎದುರು ಏಕಾಏಕಿ ಹೇಳಿಕೆ ನೀಡಿದ್ದ ಸಿ.ಟಿ. ರವಿ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡುವಾಗ ಮನೆಹಾಳು ಜನರನ್ನು ದೂರ ಇಡಲಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಕಟ್ಟಲು ನಾವು ಬದ್ಧರಿದ್ದೇವೆ. ಆದರೆ, ಈ ಕ್ಷೇತ್ರವನ್ನು ಕದಡುವ, ಒಡೆಯುವ ಮನಸ್ಥಿತಿ ಇರುವ ಜನರನ್ನು ನೇಮಕ ಮಾಡಿಲ್ಲ. ಈ ಸಲ ಮನೆಹಾಳು ಮಂದಿಗೆ ಅಧಿಕಾರ ಕೊಟ್ಟಿಲ್ಲ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸಚಿವರ ಈ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ಕಿಡಿ ಹೊತ್ತಿಸಿದೆ. ಈ ಹೇಳಿಕೆಯ ವಿರುದ್ಧ ಕನ್ನಡ ಸಾಹಿತ್ಯ ಲೋಕ ಇದೀಗ ಮುರಿದುಕೊಂಡು ಬಿದ್ದಿದೆ. ಸಿ.ಟಿ. ರವಿ ಅವರ ಈ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗೆ ಗುರಿಪಡಿಸಲಾಗುತ್ತಿದೆ.

ಬಿಜೆಪಿ ಸರ್ಕಾರ ಪ್ರಸ್ತುತ ಅಕಾಡೆಮಿ ಸದಸ್ಯರ ಆಯ್ಕೆ ವಿಚಾರದಲ್ಲಿ ಮನೆಹಾಳರನ್ನು ಅಧಿಕಾರದ ವ್ಯಾಪ್ತಿಗೆ ಬಿಟ್ಟುಕೊಂಡಿಲ್ಲ ಎಂದಾದರೆ ಈವರೆಗೆ ಅಕಾಡೆಮಿಯಲ್ಲಿ ಕೆಲಸ ನಿರ್ವಹಿಸಿದವರು ಮನೆಹಾಳು ಜನರೇ? ಸರಿ, ಸಚಿವರು ಹೇಳಿದಂತೆ ಹಿಂದೆಲ್ಲ ನೇಮಕಗೊಂಡ ಮನೆಹಾಳರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ಅಂತ ನೋಡೋಣ. ಬೇರೆ ಅಕ್ಯಾಡೆಮಿಗಳ ಮಾತಿರಲಿ, ಸಾಹಿತ್ಯ ಅಕಾಡೆಮಿಯನ್ನೇ ಪರಿಗಣಿಸುವುದಾದರೆ ಅ.ನ.ಕೃ, ಕೆ.ವಿ.ಶಂಕರೇಗೌಡ್ರು, ಹಾ.ಮಾ.ನಾಯಕ್, ನಿತ್ಯೋತ್ಸವ ಕವಿ ನಿಸಾರ್ ಅಹಮದ್, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ, ಬರಗೂರು ರಾಮಚಂದ್ರಪ್ಪ, ಗಿರಡ್ಡಿ ಗೋವಿಂದರಾಜರು, ಗೀತಾ ನಾಗಭೂಷಣ…. ಇಂತವರೆಲ್ಲ ಅಧ್ಯಕ್ಷರಾಗಿದ್ದಂತವರು. ಇಲ್ಲಿಯವರೆಗೆ ಇವರನ್ನೆಲ್ಲ ಕನ್ನಡದ, ಕರ್ನಾಟಕದ ಹೆಮ್ಮೆ ಎಂದೇ ನಾವೇ ಭಾವಿಸಿದ್ದೆವು. ಆದರೆ ಸಚಿವರ ಗೀತೋಪದೇಶದಿಂದ ಇವರೆಲ್ಲ ಅನಾಮತ್ತು `ಮನೆಹಾಳರ’ ಪಟ್ಟಿಗೆ ಸೇರಿದಂತಾಗಿದೆ. ಇಂತಹ ಹೇಳಿಕೆಗಳ ಮೂಲಕ ಸಚಿವ ಸಿ.ಟಿ. ರವಿ ಕನ್ನಡ ಸಾಹಿತಿಗಳನ್ನು ಅವಮಾನಿಸಿದ್ದಾರೆ ಎಂಬುದು ಟೀಕಾಕಾರದ ಪ್ರಬಲ ವಾದ.

ಆದರೆ, ಸಚಿವ ಸಿ.ಟಿ. ರವಿ ಹಾಗೂ ಅವರ ಟೀಕಾಕಾರರ ನಡುವಿನ ವಾಗ್ಯುದ್ಧ ಜೋರಾಗುತ್ತಿದ್ದಂತೆ ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಮಾತುಗಳು ಸರ್ಕಾರಕ್ಕೆ ಮತ್ತು ಸಚಿವರಿಗೆ ಮತ್ತಷ್ಟು ಇರಿಸುಮುರಿಸಿಗೆ ಕಾರಣವಾಗಿದೆ.

ಅಸಲಿಗೆ ಬ್ಯಾರಿ ಅಕಾಡೆಮಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿರುವ ಡಾ. ಮುನೀರ್ ಬಾವ, ಫಝಲ್ ಆಸೈಗೋಳಿ ಮತ್ತು ಸಿರಾಜುದ್ದೀನ್ ಮುಡಿಪು ಎಂಬ ಮೂವರೂ ಸಾಹಿತಿಗಳಲ್ಲ, ಕವಿಗಳೂ ಅಲ್ಲ, ಅಲ್ಲದೆ ಇವರಿಗೆ ಬ್ಯಾರಿ ಭಾಷೆಯೂ ಬರಲ್ಲ. ಈ ಮೂವರು ಇತ್ತೀಚೆಗೆ ಸ್ವತಃ ಮಾಧ್ಯಮಗಳ ಎದುರು ಬಹಿರಂಗ ಹೇಳಿಕೆ ನೀಡಿದ್ದು, “ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ. ಅಲ್ಲದೆ, ಈ ಹುದ್ದೆಗೆ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡುವಂತೆಯೂ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆ.

ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಈ ಮಾತುಗಳು ಹಾಗೂ ಗೊಂದಲ ಅಸಲಿಗೆ ಮನೆಹಾಳರು ಯಾರು? ಎಂಬ ಕುರಿತು ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಕಡೆಗೆ ಬೊಟ್ಟು ಮಾಡುತ್ತಿದೆ. ಅಸಲಿಗೆ ಬ್ಯಾರಿ ಅಕಾಡೆಮಿ ಕೆಲಸವೇನು? ಇತಿಹಾಸವೇನು? ಇಲ್ಲಿದೆ ಡೀಟೈಲ್ಸ್

ಏನದು ಬ್ಯಾರಿ ಅಕಾಡೆಮಿ ರಾದ್ಧಾಂತ?
ಕನ್ನಡ ರಾಜ್ಯದ ನಾಡಭಾಷೆಯಾದರೂ, ಕರ್ನಾಟಕ ಎಂಬುದು ವಿವಿಧ ಭಾಷೆ ಮತ್ತು ಶ್ರೀಮಂತ ಸಂಸ್ಕೃತಿಗಳ ಕಣಜ. ಪ್ರತಿ 40 ಕಿಮಿ ಗೂ ಭಾಷೆ ಮತ್ತು ಸಂಸ್ಕೃತಿಯಲ್ಲಿರುವ ಬದಲಾವಣೆ, ಜನರ ಬದುಕುವ ಕ್ರಮದಲ್ಲಿನ ವಿಭಿನ್ನತೆಯನ್ನು ನಾವಿಲ್ಲಿ ಕಾಣಬಹುದು.ಭಾಗಶಃ ಭಾರತದ ಬೇರೆ ಯಾವ ರಾಜ್ಯಕ್ಕೂ ಇಲ್ಲದಷ್ಟು ವಿವಿಧತೆಯ ಶ್ರೀಮಂತಿಕೆಯನ್ನು ಹೊಂದಿರುವ ರಾಜ್ಯ ಕರ್ನಾಟಕ ಎಂದರೆ ತಪ್ಪಾಗಲಾರದು.

ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ. ಕರ್ನಾಟಕ ಸಾಹಿತ್ಯ ಪರಿಷತ್ ಮೂಲಕ ಭಾಷೆಯ ಅಭಿವೃದ್ಧಿಗೆ, ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರೇರಣೆ ನೀಡಲಾಗುತ್ತಿದೆ. ಇದೇ ರೀತಿ ಕನ್ನಡದ ಸಹೋದರ ಭಾಷೆಯಾದ ತುಳು, ಕೊಂಕಣಿ, ಕೊಡವ ಭಾಷೆಗಳ ಅಭಿವೃದ್ಧಿಗೂ ಕರ್ನಾಟಕ ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಮೂಲಕ ಅಕಾಡೆಮಿ ರಚಿಸಲಾಗಿದೆ.
ಒಂದು ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ ಎಂದಾದರೆ ಆ ಭಾಷೆಗೆ ಸರ್ಕಾರದಿಂದ ಮಾನ್ಯತೆ ಸಿಕ್ಕಿದೆ ಎಂದೇ ಅರ್ಥ. ಕೊಂಕಣಿ, ಕೊಡವ ಹಾಗೂ ತುಳು ಭಾಷೆಯಂತೆ ಕರಾವಳಿ ಭಾಗದಲ್ಲಿ ಪ್ರಚಲಿತವಿರುವ ಮತ್ತೊಂದು ಭಾಷೆಯೇ ಬ್ಯಾರಿ. ಉರ್ದು ಬಾಷೆಗೂ ಅಕಾಡೆಮಿ ರಚಿಸಿರುವ ರಾಜ್ಯ ಸರ್ಕಾರ ತೀರಾ ಇತ್ತೀಚೆಗೆ ಬ್ಯಾರಿ ಭಾಷೆಗೂ ಒಂದು ಅಕಾಡೆಮಿ ರಚಿಸಿತ್ತು.
ಕರಾವಳಿ ಹಾಗೂ ಕೊಡಗು ಭಾಗದಲ್ಲಿ ಬಹುಪಾಲು ಇಸ್ಲಾಂ ಜನರಿಂದ ಬಳಕೆಯಾಗುತ್ತಿರುವ ಭಾಷೆಗಳಲ್ಲಿ ಬ್ಯಾರಿ ಎಂಬುದು ಚಿರಪರಿಚಿತ ಭಾಷೆ. ಕನ್ನಡ ಭಾಷೆಯಷ್ಟೇ ಪ್ರಾಚೀನ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯಲ್ಲಿ ಜನಪದ ಸಾಹಿತ್ಯದ ಭಂಡಾರವೇ ಇದೆ. ಬ್ಯಾರಿ ಜನರ ಮದುವೆ ಸಮಾರಂಭಗಳಲ್ಲಿ, ಹಬ್ಬದ ದಿನಗಳಲ್ಲಿ, ಧಾರ್ಮಿಕ ದಿನಾಚರಣೆಗಳ ಸಂದರ್ಭದಲ್ಲಿ ಹೆಂಗಸರು, ಮಕ್ಕಳು ಹಾಗೂ ಪುರುಷರು ಬ್ಯಾರಿ ಜನಪದ ಸಾಹಿತ್ಯವನ್ನು ಹಾಡಿ ಕುಣಿದು ಸಂತೋಷ ಪಡುತ್ತಾರೆ. ಆದರೆ, ಇಂತಹ ಬ್ಯಾರಿ ಜನಪದ ಸಾಹಿತ್ಯ ಇಂದು ನವ ನಾಗರಿಕತೆಯ ಸೆಳೆತಕ್ಕೆ ಸಿಲುಕಿ ಅಳಿವಿನ ಅಂಚಿಗೆ ಸರಿದಿದೆ.

 

 

ಹೀಗಾಗಿ ಇಂತಹ ಶ್ರೀಮಂತ ಜನಪದ ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಬ್ಯಾರಿ ಸಮಾಜದ ಪ್ರತಿಭಾವಂತ ಲೇಖಕರು, ಲೇಖಕಿಯರ ಪ್ರತಿಭೆಯನ್ನು ಪೋಷಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಈ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿತ್ತು. ಇದರ ಕೇಂದ್ರ ಕಚೇರಿ ಮಂಗಳೂರಿನಲ್ಲಿದೆ.

ಕಳೆದ ಒಂದು ದಶಕದಿಂದ ಬ್ಯಾರಿ ಭಾಷೆ, ಸಾಹಿತ್ಯ ಕಲೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬ್ಯಾರಿ ಸಂಸ್ಕೃತಿಗೆ ಪೂರಕವಾಗಿ ಬ್ಯಾರಿಗಳ ವಿಶಿಷ್ಟ ಹಬ್ಬಗಳಾದ ಪೆರ್ನಾಲ್, ಸಂದೋಲ ಹಬ್ಬಗಳನ್ನು ಬ್ಯಾರಿ ಜನರ ನಡುವೆ ಸಡಗರದಿಂದ ಆಚರಿಸಲಾಗುತ್ತಿದೆ. ಬ್ಯಾರಿ ಜಾನಪದ ಸಂಗೀತ, ನಾಟಕಗಳಿಗೆ ಸಂಬಂಧಿಸಿದಂತೆ ಉತ್ಸವ, ಸಮಾವೇಶ, ಸಮ್ಮೇಳನ, ದಫ್ ಸ್ಪರ್ಧೆ, ಬ್ಯಾರಿ ನಾಟಕ ಸ್ಪರ್ಧೆ ಮತ್ತು ಬ್ಯಾರಿ ಜಾನಪದ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧೆಡೆಗಳಲ್ಲಿ ಬ್ಯಾರಿ ಅಕಾಡೆಮಿ ವತಿಯಿಂದ ಆಯೋಜಿಸಲಾಗುತ್ತಿದೆ.

ಅಳಿವಿನ ಅಂಚಿನಲ್ಲಿರುವ ಬ್ಯಾರಿ ಸಂಸ್ಕೃತಿಯನ್ನು ಭಾಷೆಯನ್ನು ಉಳಿಸಿಕೊಳ್ಳಲು ಇಂತಹ ಹತ್ತಾರು ಕಾರ್ಯಕ್ರಮಗಳ ಅಗತ್ಯ ಇರುವಂತೆ, ಇಂತಹ ಅಕಾಡೆಮಿಗಳಿಗೆ ಭಾಷೆಯ ಮೇಲೆ ಪ್ರೀತಿ ಇರುವ ಹಾಗೂ ಈ ಕ್ಷೇತ್ರದಲ್ಲಿ ವಿಫುಲ ಕೃಷಿ ಮಾಡಿರುವ ವ್ಯಕ್ತಿಗಳ ಅಗತ್ಯತೆಯೂ ಇದೆ. ಅಧಿಕಾರ ವಲಯದಲ್ಲಿ ಅಂತವರು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ.

ಆದರೆ, ಇಂತಹ ಅಕಾಡೆಮಿಗಳ ಜವಾಬ್ದಾರಿಯುತ ಹುದ್ದೆಗೆ ಆಡಳಿತದ ಚುಕ್ಕಾಣಿ ಹಿಡಿದಿರುವವರು ಅಷ್ಟೇ ಬೇಜವಾಬ್ದಾರಿಯಿಂದ ಬ್ಯಾರಿ ಭಾಷೆಯ ಕುರಿತು ಅರಿವಿಲ್ಲದ, ಸಾಹಿತಿಗಳಲ್ಲದ ಹಾಗೂ ಕೊನೆಗೆ ಈ ಹುದ್ದೆಯನ್ನು ಕೋರಿ ಅರ್ಜಿಯನ್ನೂ ಹಾಕದ ಅನಾಮಧೇಯ ಜನರನ್ನು ಆ ಸ್ಥಾನಗಳಿಗೆ ತಂದು ಕೂರಿಸಿರುವುದು ಯಾವ ಪುರುಷಾರ್ಥದ ಮನೆ ಉದ್ಧಾರಕ ಕೆಲಸ? ಎಂಬುದು ಪ್ರಸ್ತುತ ಸಾಹಿತ್ಯ ವಲಯದಲ್ಲಿ ಸಚಿವ ಸಿ.ಟಿ. ರವಿ ವಿರುದ್ಧ ಕೇಳಿಬರುತ್ತಿರುವ ಕಟುಪ್ರಶ್ನೆ. ಆದರೆ, ಈ ಕುರಿತ ಟೀಕೆಗೆ ಅವರು ಉತ್ತರಿಸಬೇಕು ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...