Homeಕರ್ನಾಟಕಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ...

- Advertisement -
- Advertisement -

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇತ್ತೀಚೆಗೆ ತನ್ನ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಸುಮಾರು 16 ವಿವಿಧ ಅಕಾಡೆಮಿ ಹಾಗೂ ಅಧ್ಯಯನ ಕೇಂದ್ರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡಿತ್ತು. ಆದರೆ, ಹೀಗೆ ಸರ್ಕಾರದಿಂದ ಅಕಾಡೆಮಿಗೆ ಆಯ್ಕೆಯಾದ ಸದಸ್ಯರ ಪೈಕಿ ಬಹುತೇಕರು ಬಿಜೆಪಿ ಹಾಗೂ ಆರ್‍ಎಸ್‍ಎಸ್ ಭಟ್ಟಂಗಿಗಳು, ಅಕಾಡೆಮಿ ನೇಮಕಾತಿಯಲ್ಲಿ ಸಾಮಾಜಿಕ ಭೌಗೋಳಿಕ ನ್ಯಾಯ ಪಾಲಿಸಿಲ್ಲ ಎಂಬುದು ಕಾಂಗ್ರೆಸ್ ನಾಯಕರ ಆರೋಪ.

ರಾಜ್ಯದ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು-ಸದಸ್ಯರನ್ನು ನೇಮಕ ಮಾಡುವುದು ಹಾಗೂ ಈ ನೇಮಕಾತಿ ಹಿಂದೆಯೇ ಕೆಲವು ಅಪಸ್ವರಗಳು, ಟೀಕೆಟಿಪ್ಪಣಿಗಳು ಕೇಳಿಬರುವುದು ಸಾಹಿತ್ಯ ವಲಯದಲ್ಲಿ ತೀರಾ ಸಾಂಪ್ರದಾಯಿಕ ಮತ್ತು ವಾಡಿಕೆ. ಅಂತಹದ್ದೇ ವಾಡಿಕೆಯ ಟೀಕೆ ಈ ಬಾರಿಯೂ ಕೇಳಿಬಂದದ್ದು ಅಚ್ಚರಿ ಏನಲ್ಲ.

ಅಸಲಿಗೆ ಅಕಾಡೆಮಿ ಹಂತದ ಅಧ್ಯಕ್ಷರು ಸದಸ್ಯರ ಆಯ್ಕೆ ಕುರಿತ ಕಾಂಗ್ರೆಸ್ ನಾಯಕರ ಇಂತಹ ಟೀಕೆಗಳಿಗೆ ನಿಜಕ್ಕೂ ಅಷ್ಟಾಗಿ ಮಾನ್ಯತೆ ಸಿಕ್ಕಿರಲಿಲ್ಲ. ಅಕ್ಷರಶಃ ಕೆಲವು ದಿನ ಪತ್ರಿಕೆಗಳಲ್ಲಿ ಮಾತ್ರ ಈ ಹೇಳಿಕೆ ಮುದ್ರಣವಾಗಿತ್ತು. ಆ ಮುದ್ರಣವೂ ಕೇವಲ ಮೂರು ಸಾಲುಗಳಿಗಷ್ಟೇ ಮೀಸಲಾಗಿತ್ತು.

ಆದರೆ, ಹೀಗೆ ಮೂರು ಸಾಲಿಗೆ ಮಾತ್ರ ಮೀಸಲಾಗಿದ್ದ ಕಾಂಗ್ರೆಸ್ ನಾಯಕರ ಟೀಕೆಗೆ ಮತ್ತಷ್ಟು ಮೈಲೇಜ್ ಕೊಟ್ಟದ್ದು ಸಚಿವ ಸಿ.ಟಿ. ರವಿ ಅವರ ಆ ಒಂದು ಹೇಳಿಕೆ.

ಅಕಾಡೆಮಿಗಳಿಗೆ ಸದಸ್ಯರ ನೇಮಕ ವಿಚಾರ ಕುರಿತಂತೆ ಮಾಧ್ಯಮಗಳ ಎದುರು ಏಕಾಏಕಿ ಹೇಳಿಕೆ ನೀಡಿದ್ದ ಸಿ.ಟಿ. ರವಿ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡುವಾಗ ಮನೆಹಾಳು ಜನರನ್ನು ದೂರ ಇಡಲಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಕಟ್ಟಲು ನಾವು ಬದ್ಧರಿದ್ದೇವೆ. ಆದರೆ, ಈ ಕ್ಷೇತ್ರವನ್ನು ಕದಡುವ, ಒಡೆಯುವ ಮನಸ್ಥಿತಿ ಇರುವ ಜನರನ್ನು ನೇಮಕ ಮಾಡಿಲ್ಲ. ಈ ಸಲ ಮನೆಹಾಳು ಮಂದಿಗೆ ಅಧಿಕಾರ ಕೊಟ್ಟಿಲ್ಲ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸಚಿವರ ಈ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ಕಿಡಿ ಹೊತ್ತಿಸಿದೆ. ಈ ಹೇಳಿಕೆಯ ವಿರುದ್ಧ ಕನ್ನಡ ಸಾಹಿತ್ಯ ಲೋಕ ಇದೀಗ ಮುರಿದುಕೊಂಡು ಬಿದ್ದಿದೆ. ಸಿ.ಟಿ. ರವಿ ಅವರ ಈ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗೆ ಗುರಿಪಡಿಸಲಾಗುತ್ತಿದೆ.

ಬಿಜೆಪಿ ಸರ್ಕಾರ ಪ್ರಸ್ತುತ ಅಕಾಡೆಮಿ ಸದಸ್ಯರ ಆಯ್ಕೆ ವಿಚಾರದಲ್ಲಿ ಮನೆಹಾಳರನ್ನು ಅಧಿಕಾರದ ವ್ಯಾಪ್ತಿಗೆ ಬಿಟ್ಟುಕೊಂಡಿಲ್ಲ ಎಂದಾದರೆ ಈವರೆಗೆ ಅಕಾಡೆಮಿಯಲ್ಲಿ ಕೆಲಸ ನಿರ್ವಹಿಸಿದವರು ಮನೆಹಾಳು ಜನರೇ? ಸರಿ, ಸಚಿವರು ಹೇಳಿದಂತೆ ಹಿಂದೆಲ್ಲ ನೇಮಕಗೊಂಡ ಮನೆಹಾಳರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ಅಂತ ನೋಡೋಣ. ಬೇರೆ ಅಕ್ಯಾಡೆಮಿಗಳ ಮಾತಿರಲಿ, ಸಾಹಿತ್ಯ ಅಕಾಡೆಮಿಯನ್ನೇ ಪರಿಗಣಿಸುವುದಾದರೆ ಅ.ನ.ಕೃ, ಕೆ.ವಿ.ಶಂಕರೇಗೌಡ್ರು, ಹಾ.ಮಾ.ನಾಯಕ್, ನಿತ್ಯೋತ್ಸವ ಕವಿ ನಿಸಾರ್ ಅಹಮದ್, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ, ಬರಗೂರು ರಾಮಚಂದ್ರಪ್ಪ, ಗಿರಡ್ಡಿ ಗೋವಿಂದರಾಜರು, ಗೀತಾ ನಾಗಭೂಷಣ…. ಇಂತವರೆಲ್ಲ ಅಧ್ಯಕ್ಷರಾಗಿದ್ದಂತವರು. ಇಲ್ಲಿಯವರೆಗೆ ಇವರನ್ನೆಲ್ಲ ಕನ್ನಡದ, ಕರ್ನಾಟಕದ ಹೆಮ್ಮೆ ಎಂದೇ ನಾವೇ ಭಾವಿಸಿದ್ದೆವು. ಆದರೆ ಸಚಿವರ ಗೀತೋಪದೇಶದಿಂದ ಇವರೆಲ್ಲ ಅನಾಮತ್ತು `ಮನೆಹಾಳರ’ ಪಟ್ಟಿಗೆ ಸೇರಿದಂತಾಗಿದೆ. ಇಂತಹ ಹೇಳಿಕೆಗಳ ಮೂಲಕ ಸಚಿವ ಸಿ.ಟಿ. ರವಿ ಕನ್ನಡ ಸಾಹಿತಿಗಳನ್ನು ಅವಮಾನಿಸಿದ್ದಾರೆ ಎಂಬುದು ಟೀಕಾಕಾರದ ಪ್ರಬಲ ವಾದ.

ಆದರೆ, ಸಚಿವ ಸಿ.ಟಿ. ರವಿ ಹಾಗೂ ಅವರ ಟೀಕಾಕಾರರ ನಡುವಿನ ವಾಗ್ಯುದ್ಧ ಜೋರಾಗುತ್ತಿದ್ದಂತೆ ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಮಾತುಗಳು ಸರ್ಕಾರಕ್ಕೆ ಮತ್ತು ಸಚಿವರಿಗೆ ಮತ್ತಷ್ಟು ಇರಿಸುಮುರಿಸಿಗೆ ಕಾರಣವಾಗಿದೆ.

ಅಸಲಿಗೆ ಬ್ಯಾರಿ ಅಕಾಡೆಮಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿರುವ ಡಾ. ಮುನೀರ್ ಬಾವ, ಫಝಲ್ ಆಸೈಗೋಳಿ ಮತ್ತು ಸಿರಾಜುದ್ದೀನ್ ಮುಡಿಪು ಎಂಬ ಮೂವರೂ ಸಾಹಿತಿಗಳಲ್ಲ, ಕವಿಗಳೂ ಅಲ್ಲ, ಅಲ್ಲದೆ ಇವರಿಗೆ ಬ್ಯಾರಿ ಭಾಷೆಯೂ ಬರಲ್ಲ. ಈ ಮೂವರು ಇತ್ತೀಚೆಗೆ ಸ್ವತಃ ಮಾಧ್ಯಮಗಳ ಎದುರು ಬಹಿರಂಗ ಹೇಳಿಕೆ ನೀಡಿದ್ದು, “ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ. ಅಲ್ಲದೆ, ಈ ಹುದ್ದೆಗೆ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡುವಂತೆಯೂ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆ.

ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಈ ಮಾತುಗಳು ಹಾಗೂ ಗೊಂದಲ ಅಸಲಿಗೆ ಮನೆಹಾಳರು ಯಾರು? ಎಂಬ ಕುರಿತು ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಕಡೆಗೆ ಬೊಟ್ಟು ಮಾಡುತ್ತಿದೆ. ಅಸಲಿಗೆ ಬ್ಯಾರಿ ಅಕಾಡೆಮಿ ಕೆಲಸವೇನು? ಇತಿಹಾಸವೇನು? ಇಲ್ಲಿದೆ ಡೀಟೈಲ್ಸ್

ಏನದು ಬ್ಯಾರಿ ಅಕಾಡೆಮಿ ರಾದ್ಧಾಂತ?
ಕನ್ನಡ ರಾಜ್ಯದ ನಾಡಭಾಷೆಯಾದರೂ, ಕರ್ನಾಟಕ ಎಂಬುದು ವಿವಿಧ ಭಾಷೆ ಮತ್ತು ಶ್ರೀಮಂತ ಸಂಸ್ಕೃತಿಗಳ ಕಣಜ. ಪ್ರತಿ 40 ಕಿಮಿ ಗೂ ಭಾಷೆ ಮತ್ತು ಸಂಸ್ಕೃತಿಯಲ್ಲಿರುವ ಬದಲಾವಣೆ, ಜನರ ಬದುಕುವ ಕ್ರಮದಲ್ಲಿನ ವಿಭಿನ್ನತೆಯನ್ನು ನಾವಿಲ್ಲಿ ಕಾಣಬಹುದು.ಭಾಗಶಃ ಭಾರತದ ಬೇರೆ ಯಾವ ರಾಜ್ಯಕ್ಕೂ ಇಲ್ಲದಷ್ಟು ವಿವಿಧತೆಯ ಶ್ರೀಮಂತಿಕೆಯನ್ನು ಹೊಂದಿರುವ ರಾಜ್ಯ ಕರ್ನಾಟಕ ಎಂದರೆ ತಪ್ಪಾಗಲಾರದು.

ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ. ಕರ್ನಾಟಕ ಸಾಹಿತ್ಯ ಪರಿಷತ್ ಮೂಲಕ ಭಾಷೆಯ ಅಭಿವೃದ್ಧಿಗೆ, ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರೇರಣೆ ನೀಡಲಾಗುತ್ತಿದೆ. ಇದೇ ರೀತಿ ಕನ್ನಡದ ಸಹೋದರ ಭಾಷೆಯಾದ ತುಳು, ಕೊಂಕಣಿ, ಕೊಡವ ಭಾಷೆಗಳ ಅಭಿವೃದ್ಧಿಗೂ ಕರ್ನಾಟಕ ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಮೂಲಕ ಅಕಾಡೆಮಿ ರಚಿಸಲಾಗಿದೆ.
ಒಂದು ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ ಎಂದಾದರೆ ಆ ಭಾಷೆಗೆ ಸರ್ಕಾರದಿಂದ ಮಾನ್ಯತೆ ಸಿಕ್ಕಿದೆ ಎಂದೇ ಅರ್ಥ. ಕೊಂಕಣಿ, ಕೊಡವ ಹಾಗೂ ತುಳು ಭಾಷೆಯಂತೆ ಕರಾವಳಿ ಭಾಗದಲ್ಲಿ ಪ್ರಚಲಿತವಿರುವ ಮತ್ತೊಂದು ಭಾಷೆಯೇ ಬ್ಯಾರಿ. ಉರ್ದು ಬಾಷೆಗೂ ಅಕಾಡೆಮಿ ರಚಿಸಿರುವ ರಾಜ್ಯ ಸರ್ಕಾರ ತೀರಾ ಇತ್ತೀಚೆಗೆ ಬ್ಯಾರಿ ಭಾಷೆಗೂ ಒಂದು ಅಕಾಡೆಮಿ ರಚಿಸಿತ್ತು.
ಕರಾವಳಿ ಹಾಗೂ ಕೊಡಗು ಭಾಗದಲ್ಲಿ ಬಹುಪಾಲು ಇಸ್ಲಾಂ ಜನರಿಂದ ಬಳಕೆಯಾಗುತ್ತಿರುವ ಭಾಷೆಗಳಲ್ಲಿ ಬ್ಯಾರಿ ಎಂಬುದು ಚಿರಪರಿಚಿತ ಭಾಷೆ. ಕನ್ನಡ ಭಾಷೆಯಷ್ಟೇ ಪ್ರಾಚೀನ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯಲ್ಲಿ ಜನಪದ ಸಾಹಿತ್ಯದ ಭಂಡಾರವೇ ಇದೆ. ಬ್ಯಾರಿ ಜನರ ಮದುವೆ ಸಮಾರಂಭಗಳಲ್ಲಿ, ಹಬ್ಬದ ದಿನಗಳಲ್ಲಿ, ಧಾರ್ಮಿಕ ದಿನಾಚರಣೆಗಳ ಸಂದರ್ಭದಲ್ಲಿ ಹೆಂಗಸರು, ಮಕ್ಕಳು ಹಾಗೂ ಪುರುಷರು ಬ್ಯಾರಿ ಜನಪದ ಸಾಹಿತ್ಯವನ್ನು ಹಾಡಿ ಕುಣಿದು ಸಂತೋಷ ಪಡುತ್ತಾರೆ. ಆದರೆ, ಇಂತಹ ಬ್ಯಾರಿ ಜನಪದ ಸಾಹಿತ್ಯ ಇಂದು ನವ ನಾಗರಿಕತೆಯ ಸೆಳೆತಕ್ಕೆ ಸಿಲುಕಿ ಅಳಿವಿನ ಅಂಚಿಗೆ ಸರಿದಿದೆ.

 

 

ಹೀಗಾಗಿ ಇಂತಹ ಶ್ರೀಮಂತ ಜನಪದ ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಬ್ಯಾರಿ ಸಮಾಜದ ಪ್ರತಿಭಾವಂತ ಲೇಖಕರು, ಲೇಖಕಿಯರ ಪ್ರತಿಭೆಯನ್ನು ಪೋಷಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಈ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿತ್ತು. ಇದರ ಕೇಂದ್ರ ಕಚೇರಿ ಮಂಗಳೂರಿನಲ್ಲಿದೆ.

ಕಳೆದ ಒಂದು ದಶಕದಿಂದ ಬ್ಯಾರಿ ಭಾಷೆ, ಸಾಹಿತ್ಯ ಕಲೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬ್ಯಾರಿ ಸಂಸ್ಕೃತಿಗೆ ಪೂರಕವಾಗಿ ಬ್ಯಾರಿಗಳ ವಿಶಿಷ್ಟ ಹಬ್ಬಗಳಾದ ಪೆರ್ನಾಲ್, ಸಂದೋಲ ಹಬ್ಬಗಳನ್ನು ಬ್ಯಾರಿ ಜನರ ನಡುವೆ ಸಡಗರದಿಂದ ಆಚರಿಸಲಾಗುತ್ತಿದೆ. ಬ್ಯಾರಿ ಜಾನಪದ ಸಂಗೀತ, ನಾಟಕಗಳಿಗೆ ಸಂಬಂಧಿಸಿದಂತೆ ಉತ್ಸವ, ಸಮಾವೇಶ, ಸಮ್ಮೇಳನ, ದಫ್ ಸ್ಪರ್ಧೆ, ಬ್ಯಾರಿ ನಾಟಕ ಸ್ಪರ್ಧೆ ಮತ್ತು ಬ್ಯಾರಿ ಜಾನಪದ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧೆಡೆಗಳಲ್ಲಿ ಬ್ಯಾರಿ ಅಕಾಡೆಮಿ ವತಿಯಿಂದ ಆಯೋಜಿಸಲಾಗುತ್ತಿದೆ.

ಅಳಿವಿನ ಅಂಚಿನಲ್ಲಿರುವ ಬ್ಯಾರಿ ಸಂಸ್ಕೃತಿಯನ್ನು ಭಾಷೆಯನ್ನು ಉಳಿಸಿಕೊಳ್ಳಲು ಇಂತಹ ಹತ್ತಾರು ಕಾರ್ಯಕ್ರಮಗಳ ಅಗತ್ಯ ಇರುವಂತೆ, ಇಂತಹ ಅಕಾಡೆಮಿಗಳಿಗೆ ಭಾಷೆಯ ಮೇಲೆ ಪ್ರೀತಿ ಇರುವ ಹಾಗೂ ಈ ಕ್ಷೇತ್ರದಲ್ಲಿ ವಿಫುಲ ಕೃಷಿ ಮಾಡಿರುವ ವ್ಯಕ್ತಿಗಳ ಅಗತ್ಯತೆಯೂ ಇದೆ. ಅಧಿಕಾರ ವಲಯದಲ್ಲಿ ಅಂತವರು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ.

ಆದರೆ, ಇಂತಹ ಅಕಾಡೆಮಿಗಳ ಜವಾಬ್ದಾರಿಯುತ ಹುದ್ದೆಗೆ ಆಡಳಿತದ ಚುಕ್ಕಾಣಿ ಹಿಡಿದಿರುವವರು ಅಷ್ಟೇ ಬೇಜವಾಬ್ದಾರಿಯಿಂದ ಬ್ಯಾರಿ ಭಾಷೆಯ ಕುರಿತು ಅರಿವಿಲ್ಲದ, ಸಾಹಿತಿಗಳಲ್ಲದ ಹಾಗೂ ಕೊನೆಗೆ ಈ ಹುದ್ದೆಯನ್ನು ಕೋರಿ ಅರ್ಜಿಯನ್ನೂ ಹಾಕದ ಅನಾಮಧೇಯ ಜನರನ್ನು ಆ ಸ್ಥಾನಗಳಿಗೆ ತಂದು ಕೂರಿಸಿರುವುದು ಯಾವ ಪುರುಷಾರ್ಥದ ಮನೆ ಉದ್ಧಾರಕ ಕೆಲಸ? ಎಂಬುದು ಪ್ರಸ್ತುತ ಸಾಹಿತ್ಯ ವಲಯದಲ್ಲಿ ಸಚಿವ ಸಿ.ಟಿ. ರವಿ ವಿರುದ್ಧ ಕೇಳಿಬರುತ್ತಿರುವ ಕಟುಪ್ರಶ್ನೆ. ಆದರೆ, ಈ ಕುರಿತ ಟೀಕೆಗೆ ಅವರು ಉತ್ತರಿಸಬೇಕು ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...