Homeಕರ್ನಾಟಕಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ...

- Advertisement -
- Advertisement -

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇತ್ತೀಚೆಗೆ ತನ್ನ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಸುಮಾರು 16 ವಿವಿಧ ಅಕಾಡೆಮಿ ಹಾಗೂ ಅಧ್ಯಯನ ಕೇಂದ್ರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡಿತ್ತು. ಆದರೆ, ಹೀಗೆ ಸರ್ಕಾರದಿಂದ ಅಕಾಡೆಮಿಗೆ ಆಯ್ಕೆಯಾದ ಸದಸ್ಯರ ಪೈಕಿ ಬಹುತೇಕರು ಬಿಜೆಪಿ ಹಾಗೂ ಆರ್‍ಎಸ್‍ಎಸ್ ಭಟ್ಟಂಗಿಗಳು, ಅಕಾಡೆಮಿ ನೇಮಕಾತಿಯಲ್ಲಿ ಸಾಮಾಜಿಕ ಭೌಗೋಳಿಕ ನ್ಯಾಯ ಪಾಲಿಸಿಲ್ಲ ಎಂಬುದು ಕಾಂಗ್ರೆಸ್ ನಾಯಕರ ಆರೋಪ.

ರಾಜ್ಯದ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು-ಸದಸ್ಯರನ್ನು ನೇಮಕ ಮಾಡುವುದು ಹಾಗೂ ಈ ನೇಮಕಾತಿ ಹಿಂದೆಯೇ ಕೆಲವು ಅಪಸ್ವರಗಳು, ಟೀಕೆಟಿಪ್ಪಣಿಗಳು ಕೇಳಿಬರುವುದು ಸಾಹಿತ್ಯ ವಲಯದಲ್ಲಿ ತೀರಾ ಸಾಂಪ್ರದಾಯಿಕ ಮತ್ತು ವಾಡಿಕೆ. ಅಂತಹದ್ದೇ ವಾಡಿಕೆಯ ಟೀಕೆ ಈ ಬಾರಿಯೂ ಕೇಳಿಬಂದದ್ದು ಅಚ್ಚರಿ ಏನಲ್ಲ.

ಅಸಲಿಗೆ ಅಕಾಡೆಮಿ ಹಂತದ ಅಧ್ಯಕ್ಷರು ಸದಸ್ಯರ ಆಯ್ಕೆ ಕುರಿತ ಕಾಂಗ್ರೆಸ್ ನಾಯಕರ ಇಂತಹ ಟೀಕೆಗಳಿಗೆ ನಿಜಕ್ಕೂ ಅಷ್ಟಾಗಿ ಮಾನ್ಯತೆ ಸಿಕ್ಕಿರಲಿಲ್ಲ. ಅಕ್ಷರಶಃ ಕೆಲವು ದಿನ ಪತ್ರಿಕೆಗಳಲ್ಲಿ ಮಾತ್ರ ಈ ಹೇಳಿಕೆ ಮುದ್ರಣವಾಗಿತ್ತು. ಆ ಮುದ್ರಣವೂ ಕೇವಲ ಮೂರು ಸಾಲುಗಳಿಗಷ್ಟೇ ಮೀಸಲಾಗಿತ್ತು.

ಆದರೆ, ಹೀಗೆ ಮೂರು ಸಾಲಿಗೆ ಮಾತ್ರ ಮೀಸಲಾಗಿದ್ದ ಕಾಂಗ್ರೆಸ್ ನಾಯಕರ ಟೀಕೆಗೆ ಮತ್ತಷ್ಟು ಮೈಲೇಜ್ ಕೊಟ್ಟದ್ದು ಸಚಿವ ಸಿ.ಟಿ. ರವಿ ಅವರ ಆ ಒಂದು ಹೇಳಿಕೆ.

ಅಕಾಡೆಮಿಗಳಿಗೆ ಸದಸ್ಯರ ನೇಮಕ ವಿಚಾರ ಕುರಿತಂತೆ ಮಾಧ್ಯಮಗಳ ಎದುರು ಏಕಾಏಕಿ ಹೇಳಿಕೆ ನೀಡಿದ್ದ ಸಿ.ಟಿ. ರವಿ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡುವಾಗ ಮನೆಹಾಳು ಜನರನ್ನು ದೂರ ಇಡಲಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಕಟ್ಟಲು ನಾವು ಬದ್ಧರಿದ್ದೇವೆ. ಆದರೆ, ಈ ಕ್ಷೇತ್ರವನ್ನು ಕದಡುವ, ಒಡೆಯುವ ಮನಸ್ಥಿತಿ ಇರುವ ಜನರನ್ನು ನೇಮಕ ಮಾಡಿಲ್ಲ. ಈ ಸಲ ಮನೆಹಾಳು ಮಂದಿಗೆ ಅಧಿಕಾರ ಕೊಟ್ಟಿಲ್ಲ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸಚಿವರ ಈ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ಕಿಡಿ ಹೊತ್ತಿಸಿದೆ. ಈ ಹೇಳಿಕೆಯ ವಿರುದ್ಧ ಕನ್ನಡ ಸಾಹಿತ್ಯ ಲೋಕ ಇದೀಗ ಮುರಿದುಕೊಂಡು ಬಿದ್ದಿದೆ. ಸಿ.ಟಿ. ರವಿ ಅವರ ಈ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗೆ ಗುರಿಪಡಿಸಲಾಗುತ್ತಿದೆ.

ಬಿಜೆಪಿ ಸರ್ಕಾರ ಪ್ರಸ್ತುತ ಅಕಾಡೆಮಿ ಸದಸ್ಯರ ಆಯ್ಕೆ ವಿಚಾರದಲ್ಲಿ ಮನೆಹಾಳರನ್ನು ಅಧಿಕಾರದ ವ್ಯಾಪ್ತಿಗೆ ಬಿಟ್ಟುಕೊಂಡಿಲ್ಲ ಎಂದಾದರೆ ಈವರೆಗೆ ಅಕಾಡೆಮಿಯಲ್ಲಿ ಕೆಲಸ ನಿರ್ವಹಿಸಿದವರು ಮನೆಹಾಳು ಜನರೇ? ಸರಿ, ಸಚಿವರು ಹೇಳಿದಂತೆ ಹಿಂದೆಲ್ಲ ನೇಮಕಗೊಂಡ ಮನೆಹಾಳರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ಅಂತ ನೋಡೋಣ. ಬೇರೆ ಅಕ್ಯಾಡೆಮಿಗಳ ಮಾತಿರಲಿ, ಸಾಹಿತ್ಯ ಅಕಾಡೆಮಿಯನ್ನೇ ಪರಿಗಣಿಸುವುದಾದರೆ ಅ.ನ.ಕೃ, ಕೆ.ವಿ.ಶಂಕರೇಗೌಡ್ರು, ಹಾ.ಮಾ.ನಾಯಕ್, ನಿತ್ಯೋತ್ಸವ ಕವಿ ನಿಸಾರ್ ಅಹಮದ್, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ, ಬರಗೂರು ರಾಮಚಂದ್ರಪ್ಪ, ಗಿರಡ್ಡಿ ಗೋವಿಂದರಾಜರು, ಗೀತಾ ನಾಗಭೂಷಣ…. ಇಂತವರೆಲ್ಲ ಅಧ್ಯಕ್ಷರಾಗಿದ್ದಂತವರು. ಇಲ್ಲಿಯವರೆಗೆ ಇವರನ್ನೆಲ್ಲ ಕನ್ನಡದ, ಕರ್ನಾಟಕದ ಹೆಮ್ಮೆ ಎಂದೇ ನಾವೇ ಭಾವಿಸಿದ್ದೆವು. ಆದರೆ ಸಚಿವರ ಗೀತೋಪದೇಶದಿಂದ ಇವರೆಲ್ಲ ಅನಾಮತ್ತು `ಮನೆಹಾಳರ’ ಪಟ್ಟಿಗೆ ಸೇರಿದಂತಾಗಿದೆ. ಇಂತಹ ಹೇಳಿಕೆಗಳ ಮೂಲಕ ಸಚಿವ ಸಿ.ಟಿ. ರವಿ ಕನ್ನಡ ಸಾಹಿತಿಗಳನ್ನು ಅವಮಾನಿಸಿದ್ದಾರೆ ಎಂಬುದು ಟೀಕಾಕಾರದ ಪ್ರಬಲ ವಾದ.

ಆದರೆ, ಸಚಿವ ಸಿ.ಟಿ. ರವಿ ಹಾಗೂ ಅವರ ಟೀಕಾಕಾರರ ನಡುವಿನ ವಾಗ್ಯುದ್ಧ ಜೋರಾಗುತ್ತಿದ್ದಂತೆ ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಮಾತುಗಳು ಸರ್ಕಾರಕ್ಕೆ ಮತ್ತು ಸಚಿವರಿಗೆ ಮತ್ತಷ್ಟು ಇರಿಸುಮುರಿಸಿಗೆ ಕಾರಣವಾಗಿದೆ.

ಅಸಲಿಗೆ ಬ್ಯಾರಿ ಅಕಾಡೆಮಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿರುವ ಡಾ. ಮುನೀರ್ ಬಾವ, ಫಝಲ್ ಆಸೈಗೋಳಿ ಮತ್ತು ಸಿರಾಜುದ್ದೀನ್ ಮುಡಿಪು ಎಂಬ ಮೂವರೂ ಸಾಹಿತಿಗಳಲ್ಲ, ಕವಿಗಳೂ ಅಲ್ಲ, ಅಲ್ಲದೆ ಇವರಿಗೆ ಬ್ಯಾರಿ ಭಾಷೆಯೂ ಬರಲ್ಲ. ಈ ಮೂವರು ಇತ್ತೀಚೆಗೆ ಸ್ವತಃ ಮಾಧ್ಯಮಗಳ ಎದುರು ಬಹಿರಂಗ ಹೇಳಿಕೆ ನೀಡಿದ್ದು, “ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ. ಅಲ್ಲದೆ, ಈ ಹುದ್ದೆಗೆ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡುವಂತೆಯೂ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆ.

ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಈ ಮಾತುಗಳು ಹಾಗೂ ಗೊಂದಲ ಅಸಲಿಗೆ ಮನೆಹಾಳರು ಯಾರು? ಎಂಬ ಕುರಿತು ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಕಡೆಗೆ ಬೊಟ್ಟು ಮಾಡುತ್ತಿದೆ. ಅಸಲಿಗೆ ಬ್ಯಾರಿ ಅಕಾಡೆಮಿ ಕೆಲಸವೇನು? ಇತಿಹಾಸವೇನು? ಇಲ್ಲಿದೆ ಡೀಟೈಲ್ಸ್

ಏನದು ಬ್ಯಾರಿ ಅಕಾಡೆಮಿ ರಾದ್ಧಾಂತ?
ಕನ್ನಡ ರಾಜ್ಯದ ನಾಡಭಾಷೆಯಾದರೂ, ಕರ್ನಾಟಕ ಎಂಬುದು ವಿವಿಧ ಭಾಷೆ ಮತ್ತು ಶ್ರೀಮಂತ ಸಂಸ್ಕೃತಿಗಳ ಕಣಜ. ಪ್ರತಿ 40 ಕಿಮಿ ಗೂ ಭಾಷೆ ಮತ್ತು ಸಂಸ್ಕೃತಿಯಲ್ಲಿರುವ ಬದಲಾವಣೆ, ಜನರ ಬದುಕುವ ಕ್ರಮದಲ್ಲಿನ ವಿಭಿನ್ನತೆಯನ್ನು ನಾವಿಲ್ಲಿ ಕಾಣಬಹುದು.ಭಾಗಶಃ ಭಾರತದ ಬೇರೆ ಯಾವ ರಾಜ್ಯಕ್ಕೂ ಇಲ್ಲದಷ್ಟು ವಿವಿಧತೆಯ ಶ್ರೀಮಂತಿಕೆಯನ್ನು ಹೊಂದಿರುವ ರಾಜ್ಯ ಕರ್ನಾಟಕ ಎಂದರೆ ತಪ್ಪಾಗಲಾರದು.

ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ. ಕರ್ನಾಟಕ ಸಾಹಿತ್ಯ ಪರಿಷತ್ ಮೂಲಕ ಭಾಷೆಯ ಅಭಿವೃದ್ಧಿಗೆ, ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರೇರಣೆ ನೀಡಲಾಗುತ್ತಿದೆ. ಇದೇ ರೀತಿ ಕನ್ನಡದ ಸಹೋದರ ಭಾಷೆಯಾದ ತುಳು, ಕೊಂಕಣಿ, ಕೊಡವ ಭಾಷೆಗಳ ಅಭಿವೃದ್ಧಿಗೂ ಕರ್ನಾಟಕ ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಮೂಲಕ ಅಕಾಡೆಮಿ ರಚಿಸಲಾಗಿದೆ.
ಒಂದು ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ ಎಂದಾದರೆ ಆ ಭಾಷೆಗೆ ಸರ್ಕಾರದಿಂದ ಮಾನ್ಯತೆ ಸಿಕ್ಕಿದೆ ಎಂದೇ ಅರ್ಥ. ಕೊಂಕಣಿ, ಕೊಡವ ಹಾಗೂ ತುಳು ಭಾಷೆಯಂತೆ ಕರಾವಳಿ ಭಾಗದಲ್ಲಿ ಪ್ರಚಲಿತವಿರುವ ಮತ್ತೊಂದು ಭಾಷೆಯೇ ಬ್ಯಾರಿ. ಉರ್ದು ಬಾಷೆಗೂ ಅಕಾಡೆಮಿ ರಚಿಸಿರುವ ರಾಜ್ಯ ಸರ್ಕಾರ ತೀರಾ ಇತ್ತೀಚೆಗೆ ಬ್ಯಾರಿ ಭಾಷೆಗೂ ಒಂದು ಅಕಾಡೆಮಿ ರಚಿಸಿತ್ತು.
ಕರಾವಳಿ ಹಾಗೂ ಕೊಡಗು ಭಾಗದಲ್ಲಿ ಬಹುಪಾಲು ಇಸ್ಲಾಂ ಜನರಿಂದ ಬಳಕೆಯಾಗುತ್ತಿರುವ ಭಾಷೆಗಳಲ್ಲಿ ಬ್ಯಾರಿ ಎಂಬುದು ಚಿರಪರಿಚಿತ ಭಾಷೆ. ಕನ್ನಡ ಭಾಷೆಯಷ್ಟೇ ಪ್ರಾಚೀನ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯಲ್ಲಿ ಜನಪದ ಸಾಹಿತ್ಯದ ಭಂಡಾರವೇ ಇದೆ. ಬ್ಯಾರಿ ಜನರ ಮದುವೆ ಸಮಾರಂಭಗಳಲ್ಲಿ, ಹಬ್ಬದ ದಿನಗಳಲ್ಲಿ, ಧಾರ್ಮಿಕ ದಿನಾಚರಣೆಗಳ ಸಂದರ್ಭದಲ್ಲಿ ಹೆಂಗಸರು, ಮಕ್ಕಳು ಹಾಗೂ ಪುರುಷರು ಬ್ಯಾರಿ ಜನಪದ ಸಾಹಿತ್ಯವನ್ನು ಹಾಡಿ ಕುಣಿದು ಸಂತೋಷ ಪಡುತ್ತಾರೆ. ಆದರೆ, ಇಂತಹ ಬ್ಯಾರಿ ಜನಪದ ಸಾಹಿತ್ಯ ಇಂದು ನವ ನಾಗರಿಕತೆಯ ಸೆಳೆತಕ್ಕೆ ಸಿಲುಕಿ ಅಳಿವಿನ ಅಂಚಿಗೆ ಸರಿದಿದೆ.

 

 

ಹೀಗಾಗಿ ಇಂತಹ ಶ್ರೀಮಂತ ಜನಪದ ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಬ್ಯಾರಿ ಸಮಾಜದ ಪ್ರತಿಭಾವಂತ ಲೇಖಕರು, ಲೇಖಕಿಯರ ಪ್ರತಿಭೆಯನ್ನು ಪೋಷಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಈ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿತ್ತು. ಇದರ ಕೇಂದ್ರ ಕಚೇರಿ ಮಂಗಳೂರಿನಲ್ಲಿದೆ.

ಕಳೆದ ಒಂದು ದಶಕದಿಂದ ಬ್ಯಾರಿ ಭಾಷೆ, ಸಾಹಿತ್ಯ ಕಲೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬ್ಯಾರಿ ಸಂಸ್ಕೃತಿಗೆ ಪೂರಕವಾಗಿ ಬ್ಯಾರಿಗಳ ವಿಶಿಷ್ಟ ಹಬ್ಬಗಳಾದ ಪೆರ್ನಾಲ್, ಸಂದೋಲ ಹಬ್ಬಗಳನ್ನು ಬ್ಯಾರಿ ಜನರ ನಡುವೆ ಸಡಗರದಿಂದ ಆಚರಿಸಲಾಗುತ್ತಿದೆ. ಬ್ಯಾರಿ ಜಾನಪದ ಸಂಗೀತ, ನಾಟಕಗಳಿಗೆ ಸಂಬಂಧಿಸಿದಂತೆ ಉತ್ಸವ, ಸಮಾವೇಶ, ಸಮ್ಮೇಳನ, ದಫ್ ಸ್ಪರ್ಧೆ, ಬ್ಯಾರಿ ನಾಟಕ ಸ್ಪರ್ಧೆ ಮತ್ತು ಬ್ಯಾರಿ ಜಾನಪದ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧೆಡೆಗಳಲ್ಲಿ ಬ್ಯಾರಿ ಅಕಾಡೆಮಿ ವತಿಯಿಂದ ಆಯೋಜಿಸಲಾಗುತ್ತಿದೆ.

ಅಳಿವಿನ ಅಂಚಿನಲ್ಲಿರುವ ಬ್ಯಾರಿ ಸಂಸ್ಕೃತಿಯನ್ನು ಭಾಷೆಯನ್ನು ಉಳಿಸಿಕೊಳ್ಳಲು ಇಂತಹ ಹತ್ತಾರು ಕಾರ್ಯಕ್ರಮಗಳ ಅಗತ್ಯ ಇರುವಂತೆ, ಇಂತಹ ಅಕಾಡೆಮಿಗಳಿಗೆ ಭಾಷೆಯ ಮೇಲೆ ಪ್ರೀತಿ ಇರುವ ಹಾಗೂ ಈ ಕ್ಷೇತ್ರದಲ್ಲಿ ವಿಫುಲ ಕೃಷಿ ಮಾಡಿರುವ ವ್ಯಕ್ತಿಗಳ ಅಗತ್ಯತೆಯೂ ಇದೆ. ಅಧಿಕಾರ ವಲಯದಲ್ಲಿ ಅಂತವರು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ.

ಆದರೆ, ಇಂತಹ ಅಕಾಡೆಮಿಗಳ ಜವಾಬ್ದಾರಿಯುತ ಹುದ್ದೆಗೆ ಆಡಳಿತದ ಚುಕ್ಕಾಣಿ ಹಿಡಿದಿರುವವರು ಅಷ್ಟೇ ಬೇಜವಾಬ್ದಾರಿಯಿಂದ ಬ್ಯಾರಿ ಭಾಷೆಯ ಕುರಿತು ಅರಿವಿಲ್ಲದ, ಸಾಹಿತಿಗಳಲ್ಲದ ಹಾಗೂ ಕೊನೆಗೆ ಈ ಹುದ್ದೆಯನ್ನು ಕೋರಿ ಅರ್ಜಿಯನ್ನೂ ಹಾಕದ ಅನಾಮಧೇಯ ಜನರನ್ನು ಆ ಸ್ಥಾನಗಳಿಗೆ ತಂದು ಕೂರಿಸಿರುವುದು ಯಾವ ಪುರುಷಾರ್ಥದ ಮನೆ ಉದ್ಧಾರಕ ಕೆಲಸ? ಎಂಬುದು ಪ್ರಸ್ತುತ ಸಾಹಿತ್ಯ ವಲಯದಲ್ಲಿ ಸಚಿವ ಸಿ.ಟಿ. ರವಿ ವಿರುದ್ಧ ಕೇಳಿಬರುತ್ತಿರುವ ಕಟುಪ್ರಶ್ನೆ. ಆದರೆ, ಈ ಕುರಿತ ಟೀಕೆಗೆ ಅವರು ಉತ್ತರಿಸಬೇಕು ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...