Homeಕರ್ನಾಟಕಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ಅಕ್ಯಾಡೆಮಿ ಅಧ್ವಾನ : ಮನೆಹಾಳರು ಯಾರು?

ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ...

- Advertisement -
- Advertisement -

ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇತ್ತೀಚೆಗೆ ತನ್ನ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಸುಮಾರು 16 ವಿವಿಧ ಅಕಾಡೆಮಿ ಹಾಗೂ ಅಧ್ಯಯನ ಕೇಂದ್ರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡಿತ್ತು. ಆದರೆ, ಹೀಗೆ ಸರ್ಕಾರದಿಂದ ಅಕಾಡೆಮಿಗೆ ಆಯ್ಕೆಯಾದ ಸದಸ್ಯರ ಪೈಕಿ ಬಹುತೇಕರು ಬಿಜೆಪಿ ಹಾಗೂ ಆರ್‍ಎಸ್‍ಎಸ್ ಭಟ್ಟಂಗಿಗಳು, ಅಕಾಡೆಮಿ ನೇಮಕಾತಿಯಲ್ಲಿ ಸಾಮಾಜಿಕ ಭೌಗೋಳಿಕ ನ್ಯಾಯ ಪಾಲಿಸಿಲ್ಲ ಎಂಬುದು ಕಾಂಗ್ರೆಸ್ ನಾಯಕರ ಆರೋಪ.

ರಾಜ್ಯದ ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು-ಸದಸ್ಯರನ್ನು ನೇಮಕ ಮಾಡುವುದು ಹಾಗೂ ಈ ನೇಮಕಾತಿ ಹಿಂದೆಯೇ ಕೆಲವು ಅಪಸ್ವರಗಳು, ಟೀಕೆಟಿಪ್ಪಣಿಗಳು ಕೇಳಿಬರುವುದು ಸಾಹಿತ್ಯ ವಲಯದಲ್ಲಿ ತೀರಾ ಸಾಂಪ್ರದಾಯಿಕ ಮತ್ತು ವಾಡಿಕೆ. ಅಂತಹದ್ದೇ ವಾಡಿಕೆಯ ಟೀಕೆ ಈ ಬಾರಿಯೂ ಕೇಳಿಬಂದದ್ದು ಅಚ್ಚರಿ ಏನಲ್ಲ.

ಅಸಲಿಗೆ ಅಕಾಡೆಮಿ ಹಂತದ ಅಧ್ಯಕ್ಷರು ಸದಸ್ಯರ ಆಯ್ಕೆ ಕುರಿತ ಕಾಂಗ್ರೆಸ್ ನಾಯಕರ ಇಂತಹ ಟೀಕೆಗಳಿಗೆ ನಿಜಕ್ಕೂ ಅಷ್ಟಾಗಿ ಮಾನ್ಯತೆ ಸಿಕ್ಕಿರಲಿಲ್ಲ. ಅಕ್ಷರಶಃ ಕೆಲವು ದಿನ ಪತ್ರಿಕೆಗಳಲ್ಲಿ ಮಾತ್ರ ಈ ಹೇಳಿಕೆ ಮುದ್ರಣವಾಗಿತ್ತು. ಆ ಮುದ್ರಣವೂ ಕೇವಲ ಮೂರು ಸಾಲುಗಳಿಗಷ್ಟೇ ಮೀಸಲಾಗಿತ್ತು.

ಆದರೆ, ಹೀಗೆ ಮೂರು ಸಾಲಿಗೆ ಮಾತ್ರ ಮೀಸಲಾಗಿದ್ದ ಕಾಂಗ್ರೆಸ್ ನಾಯಕರ ಟೀಕೆಗೆ ಮತ್ತಷ್ಟು ಮೈಲೇಜ್ ಕೊಟ್ಟದ್ದು ಸಚಿವ ಸಿ.ಟಿ. ರವಿ ಅವರ ಆ ಒಂದು ಹೇಳಿಕೆ.

ಅಕಾಡೆಮಿಗಳಿಗೆ ಸದಸ್ಯರ ನೇಮಕ ವಿಚಾರ ಕುರಿತಂತೆ ಮಾಧ್ಯಮಗಳ ಎದುರು ಏಕಾಏಕಿ ಹೇಳಿಕೆ ನೀಡಿದ್ದ ಸಿ.ಟಿ. ರವಿ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡುವಾಗ ಮನೆಹಾಳು ಜನರನ್ನು ದೂರ ಇಡಲಾಗಿದೆ. ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಕಟ್ಟಲು ನಾವು ಬದ್ಧರಿದ್ದೇವೆ. ಆದರೆ, ಈ ಕ್ಷೇತ್ರವನ್ನು ಕದಡುವ, ಒಡೆಯುವ ಮನಸ್ಥಿತಿ ಇರುವ ಜನರನ್ನು ನೇಮಕ ಮಾಡಿಲ್ಲ. ಈ ಸಲ ಮನೆಹಾಳು ಮಂದಿಗೆ ಅಧಿಕಾರ ಕೊಟ್ಟಿಲ್ಲ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸಚಿವರ ಈ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ಕಿಡಿ ಹೊತ್ತಿಸಿದೆ. ಈ ಹೇಳಿಕೆಯ ವಿರುದ್ಧ ಕನ್ನಡ ಸಾಹಿತ್ಯ ಲೋಕ ಇದೀಗ ಮುರಿದುಕೊಂಡು ಬಿದ್ದಿದೆ. ಸಿ.ಟಿ. ರವಿ ಅವರ ಈ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗೆ ಗುರಿಪಡಿಸಲಾಗುತ್ತಿದೆ.

ಬಿಜೆಪಿ ಸರ್ಕಾರ ಪ್ರಸ್ತುತ ಅಕಾಡೆಮಿ ಸದಸ್ಯರ ಆಯ್ಕೆ ವಿಚಾರದಲ್ಲಿ ಮನೆಹಾಳರನ್ನು ಅಧಿಕಾರದ ವ್ಯಾಪ್ತಿಗೆ ಬಿಟ್ಟುಕೊಂಡಿಲ್ಲ ಎಂದಾದರೆ ಈವರೆಗೆ ಅಕಾಡೆಮಿಯಲ್ಲಿ ಕೆಲಸ ನಿರ್ವಹಿಸಿದವರು ಮನೆಹಾಳು ಜನರೇ? ಸರಿ, ಸಚಿವರು ಹೇಳಿದಂತೆ ಹಿಂದೆಲ್ಲ ನೇಮಕಗೊಂಡ ಮನೆಹಾಳರ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ ಅಂತ ನೋಡೋಣ. ಬೇರೆ ಅಕ್ಯಾಡೆಮಿಗಳ ಮಾತಿರಲಿ, ಸಾಹಿತ್ಯ ಅಕಾಡೆಮಿಯನ್ನೇ ಪರಿಗಣಿಸುವುದಾದರೆ ಅ.ನ.ಕೃ, ಕೆ.ವಿ.ಶಂಕರೇಗೌಡ್ರು, ಹಾ.ಮಾ.ನಾಯಕ್, ನಿತ್ಯೋತ್ಸವ ಕವಿ ನಿಸಾರ್ ಅಹಮದ್, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ, ಬರಗೂರು ರಾಮಚಂದ್ರಪ್ಪ, ಗಿರಡ್ಡಿ ಗೋವಿಂದರಾಜರು, ಗೀತಾ ನಾಗಭೂಷಣ…. ಇಂತವರೆಲ್ಲ ಅಧ್ಯಕ್ಷರಾಗಿದ್ದಂತವರು. ಇಲ್ಲಿಯವರೆಗೆ ಇವರನ್ನೆಲ್ಲ ಕನ್ನಡದ, ಕರ್ನಾಟಕದ ಹೆಮ್ಮೆ ಎಂದೇ ನಾವೇ ಭಾವಿಸಿದ್ದೆವು. ಆದರೆ ಸಚಿವರ ಗೀತೋಪದೇಶದಿಂದ ಇವರೆಲ್ಲ ಅನಾಮತ್ತು `ಮನೆಹಾಳರ’ ಪಟ್ಟಿಗೆ ಸೇರಿದಂತಾಗಿದೆ. ಇಂತಹ ಹೇಳಿಕೆಗಳ ಮೂಲಕ ಸಚಿವ ಸಿ.ಟಿ. ರವಿ ಕನ್ನಡ ಸಾಹಿತಿಗಳನ್ನು ಅವಮಾನಿಸಿದ್ದಾರೆ ಎಂಬುದು ಟೀಕಾಕಾರದ ಪ್ರಬಲ ವಾದ.

ಆದರೆ, ಸಚಿವ ಸಿ.ಟಿ. ರವಿ ಹಾಗೂ ಅವರ ಟೀಕಾಕಾರರ ನಡುವಿನ ವಾಗ್ಯುದ್ಧ ಜೋರಾಗುತ್ತಿದ್ದಂತೆ ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಮಾತುಗಳು ಸರ್ಕಾರಕ್ಕೆ ಮತ್ತು ಸಚಿವರಿಗೆ ಮತ್ತಷ್ಟು ಇರಿಸುಮುರಿಸಿಗೆ ಕಾರಣವಾಗಿದೆ.

ಅಸಲಿಗೆ ಬ್ಯಾರಿ ಅಕಾಡೆಮಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿರುವ ಡಾ. ಮುನೀರ್ ಬಾವ, ಫಝಲ್ ಆಸೈಗೋಳಿ ಮತ್ತು ಸಿರಾಜುದ್ದೀನ್ ಮುಡಿಪು ಎಂಬ ಮೂವರೂ ಸಾಹಿತಿಗಳಲ್ಲ, ಕವಿಗಳೂ ಅಲ್ಲ, ಅಲ್ಲದೆ ಇವರಿಗೆ ಬ್ಯಾರಿ ಭಾಷೆಯೂ ಬರಲ್ಲ. ಈ ಮೂವರು ಇತ್ತೀಚೆಗೆ ಸ್ವತಃ ಮಾಧ್ಯಮಗಳ ಎದುರು ಬಹಿರಂಗ ಹೇಳಿಕೆ ನೀಡಿದ್ದು, “ನಾವು ಆ ಹುದ್ದೆಗೆ ಅರ್ಹರೇ ಅಲ್ಲ. ಹುದ್ದೆ ಕೇಳಿ ಅರ್ಜಿಯೂ ಹಾಕಿಲ್ಲ. ನಮ್ಮನ್ನು ಏಕೆ ಆಯ್ಕೆ ಮಾಡಿದ್ದಾರೆ ಎಂಬುದೇ ಗೊತ್ತಿಲ್ಲ” ಎಂದು ಅಪಸ್ವರ ಎತ್ತಿದ್ದಾರೆ. ಅಲ್ಲದೆ, ಈ ಹುದ್ದೆಗೆ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡುವಂತೆಯೂ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆ.

ಬ್ಯಾರಿ ಅಕಾಡೆಮಿಯಿಂದ ಕೇಳಿಬರುತ್ತಿರುವ ಈ ಮಾತುಗಳು ಹಾಗೂ ಗೊಂದಲ ಅಸಲಿಗೆ ಮನೆಹಾಳರು ಯಾರು? ಎಂಬ ಕುರಿತು ಅಕಾಡೆಮಿಗಳಿಗೆ ಸದಸ್ಯರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಕಡೆಗೆ ಬೊಟ್ಟು ಮಾಡುತ್ತಿದೆ. ಅಸಲಿಗೆ ಬ್ಯಾರಿ ಅಕಾಡೆಮಿ ಕೆಲಸವೇನು? ಇತಿಹಾಸವೇನು? ಇಲ್ಲಿದೆ ಡೀಟೈಲ್ಸ್

ಏನದು ಬ್ಯಾರಿ ಅಕಾಡೆಮಿ ರಾದ್ಧಾಂತ?
ಕನ್ನಡ ರಾಜ್ಯದ ನಾಡಭಾಷೆಯಾದರೂ, ಕರ್ನಾಟಕ ಎಂಬುದು ವಿವಿಧ ಭಾಷೆ ಮತ್ತು ಶ್ರೀಮಂತ ಸಂಸ್ಕೃತಿಗಳ ಕಣಜ. ಪ್ರತಿ 40 ಕಿಮಿ ಗೂ ಭಾಷೆ ಮತ್ತು ಸಂಸ್ಕೃತಿಯಲ್ಲಿರುವ ಬದಲಾವಣೆ, ಜನರ ಬದುಕುವ ಕ್ರಮದಲ್ಲಿನ ವಿಭಿನ್ನತೆಯನ್ನು ನಾವಿಲ್ಲಿ ಕಾಣಬಹುದು.ಭಾಗಶಃ ಭಾರತದ ಬೇರೆ ಯಾವ ರಾಜ್ಯಕ್ಕೂ ಇಲ್ಲದಷ್ಟು ವಿವಿಧತೆಯ ಶ್ರೀಮಂತಿಕೆಯನ್ನು ಹೊಂದಿರುವ ರಾಜ್ಯ ಕರ್ನಾಟಕ ಎಂದರೆ ತಪ್ಪಾಗಲಾರದು.

ರಾಜ್ಯದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ. ಕರ್ನಾಟಕ ಸಾಹಿತ್ಯ ಪರಿಷತ್ ಮೂಲಕ ಭಾಷೆಯ ಅಭಿವೃದ್ಧಿಗೆ, ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರೇರಣೆ ನೀಡಲಾಗುತ್ತಿದೆ. ಇದೇ ರೀತಿ ಕನ್ನಡದ ಸಹೋದರ ಭಾಷೆಯಾದ ತುಳು, ಕೊಂಕಣಿ, ಕೊಡವ ಭಾಷೆಗಳ ಅಭಿವೃದ್ಧಿಗೂ ಕರ್ನಾಟಕ ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಮೂಲಕ ಅಕಾಡೆಮಿ ರಚಿಸಲಾಗಿದೆ.
ಒಂದು ಭಾಷೆಯ ಅಭಿವೃದ್ಧಿಗೆ ಅಕಾಡೆಮಿ ರಚಿಸಲಾಗಿದೆ ಎಂದಾದರೆ ಆ ಭಾಷೆಗೆ ಸರ್ಕಾರದಿಂದ ಮಾನ್ಯತೆ ಸಿಕ್ಕಿದೆ ಎಂದೇ ಅರ್ಥ. ಕೊಂಕಣಿ, ಕೊಡವ ಹಾಗೂ ತುಳು ಭಾಷೆಯಂತೆ ಕರಾವಳಿ ಭಾಗದಲ್ಲಿ ಪ್ರಚಲಿತವಿರುವ ಮತ್ತೊಂದು ಭಾಷೆಯೇ ಬ್ಯಾರಿ. ಉರ್ದು ಬಾಷೆಗೂ ಅಕಾಡೆಮಿ ರಚಿಸಿರುವ ರಾಜ್ಯ ಸರ್ಕಾರ ತೀರಾ ಇತ್ತೀಚೆಗೆ ಬ್ಯಾರಿ ಭಾಷೆಗೂ ಒಂದು ಅಕಾಡೆಮಿ ರಚಿಸಿತ್ತು.
ಕರಾವಳಿ ಹಾಗೂ ಕೊಡಗು ಭಾಗದಲ್ಲಿ ಬಹುಪಾಲು ಇಸ್ಲಾಂ ಜನರಿಂದ ಬಳಕೆಯಾಗುತ್ತಿರುವ ಭಾಷೆಗಳಲ್ಲಿ ಬ್ಯಾರಿ ಎಂಬುದು ಚಿರಪರಿಚಿತ ಭಾಷೆ. ಕನ್ನಡ ಭಾಷೆಯಷ್ಟೇ ಪ್ರಾಚೀನ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಯಲ್ಲಿ ಜನಪದ ಸಾಹಿತ್ಯದ ಭಂಡಾರವೇ ಇದೆ. ಬ್ಯಾರಿ ಜನರ ಮದುವೆ ಸಮಾರಂಭಗಳಲ್ಲಿ, ಹಬ್ಬದ ದಿನಗಳಲ್ಲಿ, ಧಾರ್ಮಿಕ ದಿನಾಚರಣೆಗಳ ಸಂದರ್ಭದಲ್ಲಿ ಹೆಂಗಸರು, ಮಕ್ಕಳು ಹಾಗೂ ಪುರುಷರು ಬ್ಯಾರಿ ಜನಪದ ಸಾಹಿತ್ಯವನ್ನು ಹಾಡಿ ಕುಣಿದು ಸಂತೋಷ ಪಡುತ್ತಾರೆ. ಆದರೆ, ಇಂತಹ ಬ್ಯಾರಿ ಜನಪದ ಸಾಹಿತ್ಯ ಇಂದು ನವ ನಾಗರಿಕತೆಯ ಸೆಳೆತಕ್ಕೆ ಸಿಲುಕಿ ಅಳಿವಿನ ಅಂಚಿಗೆ ಸರಿದಿದೆ.

 

 

ಹೀಗಾಗಿ ಇಂತಹ ಶ್ರೀಮಂತ ಜನಪದ ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಬ್ಯಾರಿ ಸಮಾಜದ ಪ್ರತಿಭಾವಂತ ಲೇಖಕರು, ಲೇಖಕಿಯರ ಪ್ರತಿಭೆಯನ್ನು ಪೋಷಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಈ ಶ್ರೀಮಂತ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿತ್ತು. ಇದರ ಕೇಂದ್ರ ಕಚೇರಿ ಮಂಗಳೂರಿನಲ್ಲಿದೆ.

ಕಳೆದ ಒಂದು ದಶಕದಿಂದ ಬ್ಯಾರಿ ಭಾಷೆ, ಸಾಹಿತ್ಯ ಕಲೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬ್ಯಾರಿ ಸಂಸ್ಕೃತಿಗೆ ಪೂರಕವಾಗಿ ಬ್ಯಾರಿಗಳ ವಿಶಿಷ್ಟ ಹಬ್ಬಗಳಾದ ಪೆರ್ನಾಲ್, ಸಂದೋಲ ಹಬ್ಬಗಳನ್ನು ಬ್ಯಾರಿ ಜನರ ನಡುವೆ ಸಡಗರದಿಂದ ಆಚರಿಸಲಾಗುತ್ತಿದೆ. ಬ್ಯಾರಿ ಜಾನಪದ ಸಂಗೀತ, ನಾಟಕಗಳಿಗೆ ಸಂಬಂಧಿಸಿದಂತೆ ಉತ್ಸವ, ಸಮಾವೇಶ, ಸಮ್ಮೇಳನ, ದಫ್ ಸ್ಪರ್ಧೆ, ಬ್ಯಾರಿ ನಾಟಕ ಸ್ಪರ್ಧೆ ಮತ್ತು ಬ್ಯಾರಿ ಜಾನಪದ ಕಾರ್ಯಕ್ರಮಗಳನ್ನು ರಾಜ್ಯದ ವಿವಿಧೆಡೆಗಳಲ್ಲಿ ಬ್ಯಾರಿ ಅಕಾಡೆಮಿ ವತಿಯಿಂದ ಆಯೋಜಿಸಲಾಗುತ್ತಿದೆ.

ಅಳಿವಿನ ಅಂಚಿನಲ್ಲಿರುವ ಬ್ಯಾರಿ ಸಂಸ್ಕೃತಿಯನ್ನು ಭಾಷೆಯನ್ನು ಉಳಿಸಿಕೊಳ್ಳಲು ಇಂತಹ ಹತ್ತಾರು ಕಾರ್ಯಕ್ರಮಗಳ ಅಗತ್ಯ ಇರುವಂತೆ, ಇಂತಹ ಅಕಾಡೆಮಿಗಳಿಗೆ ಭಾಷೆಯ ಮೇಲೆ ಪ್ರೀತಿ ಇರುವ ಹಾಗೂ ಈ ಕ್ಷೇತ್ರದಲ್ಲಿ ವಿಫುಲ ಕೃಷಿ ಮಾಡಿರುವ ವ್ಯಕ್ತಿಗಳ ಅಗತ್ಯತೆಯೂ ಇದೆ. ಅಧಿಕಾರ ವಲಯದಲ್ಲಿ ಅಂತವರು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ.

ಆದರೆ, ಇಂತಹ ಅಕಾಡೆಮಿಗಳ ಜವಾಬ್ದಾರಿಯುತ ಹುದ್ದೆಗೆ ಆಡಳಿತದ ಚುಕ್ಕಾಣಿ ಹಿಡಿದಿರುವವರು ಅಷ್ಟೇ ಬೇಜವಾಬ್ದಾರಿಯಿಂದ ಬ್ಯಾರಿ ಭಾಷೆಯ ಕುರಿತು ಅರಿವಿಲ್ಲದ, ಸಾಹಿತಿಗಳಲ್ಲದ ಹಾಗೂ ಕೊನೆಗೆ ಈ ಹುದ್ದೆಯನ್ನು ಕೋರಿ ಅರ್ಜಿಯನ್ನೂ ಹಾಕದ ಅನಾಮಧೇಯ ಜನರನ್ನು ಆ ಸ್ಥಾನಗಳಿಗೆ ತಂದು ಕೂರಿಸಿರುವುದು ಯಾವ ಪುರುಷಾರ್ಥದ ಮನೆ ಉದ್ಧಾರಕ ಕೆಲಸ? ಎಂಬುದು ಪ್ರಸ್ತುತ ಸಾಹಿತ್ಯ ವಲಯದಲ್ಲಿ ಸಚಿವ ಸಿ.ಟಿ. ರವಿ ವಿರುದ್ಧ ಕೇಳಿಬರುತ್ತಿರುವ ಕಟುಪ್ರಶ್ನೆ. ಆದರೆ, ಈ ಕುರಿತ ಟೀಕೆಗೆ ಅವರು ಉತ್ತರಿಸಬೇಕು ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...