Homeಕರ್ನಾಟಕಸಂವಿಧಾನ ಬದಲಿಸಬೇಕು ಎನ್ನುವವರಿಗೆ ಪಂಚಾಯತ್ ವ್ಯವಸ್ಥೆ ಬಗ್ಗೆ ನಂಬಿಕೆ ಇದೆಯಾ? - ಹರಿಪ್ರಸಾದ್ ಪ್ರಶ್ನೆ

ಸಂವಿಧಾನ ಬದಲಿಸಬೇಕು ಎನ್ನುವವರಿಗೆ ಪಂಚಾಯತ್ ವ್ಯವಸ್ಥೆ ಬಗ್ಗೆ ನಂಬಿಕೆ ಇದೆಯಾ? – ಹರಿಪ್ರಸಾದ್ ಪ್ರಶ್ನೆ

- Advertisement -
- Advertisement -

ಸಂವಿಧಾನವನ್ನೆ ಬದಲಿಸುವುದಾಗಿ ಹೇಳುವ ಬಿಜೆಪಿ ಪಕ್ಷದವರಿಗೆ ಪಂಚಾಯತ್ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲ. ಆ ಪಕ್ಷದವರಿಗೆ ಜನರ ಸಂಕಷ್ಟದ ಅರಿವಿಲ್ಲ. ಅಭಿವೃದ್ದಿ ಪರಿಕಲ್ಪನೆಗಳಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಅವರು ಮಂಗಳವಾರ ಭಟ್ಕಳದಲ್ಲಿ ನಡೆದ ಕಾಂಗ್ರೆಸ್‌ನ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತಾಡುತ್ತ ಕೇಂದ್ರ ಮತ್ತು ರಾಜ್ಯದಲ್ಲಿ ಜನವಿರೋಧಿ ನೀತಿಯ ಹೊಣೆಗೇಡಿ ಸರ್ಕಾರಗಳಿವೆಯೆಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ರೈತ ವಿರೋಧಿ ಕಾಯ್ದೆ ರದ್ದತಿಗಾಗಿ ಪ್ರತಿಭಟನೆ ನಡೆಸಿದ ರೈತರಲ್ಲಿ 700ಕೂ ಹೆಚ್ಚು ಮಂದಿ ಮೃತರಾದರೂ ಪ್ರಧಾನಿ ಮೋದಿ ಒಂದು ವಿಷಾಧವಾಗಲಿ, ಕ್ಷಮೆಯಾಗಲಿ ಕೇಳಲಿಲ್ಲ. ಜನರ ಸಮಸ್ಯೆ ಧಿಕ್ಕರಿಸಿ ಕೇಂದ್ರ ಸರ್ಕಾರ ಅಗತ್ಯ ವಸ್ತು, ತೈಲ ಬೆಲೆ ಏರಿಸುತ್ತಲೇ ಇದೆ. ಮೋದಿ ಸರ್ಕಾರ ಎಲ್ಲ ರಂಗದಲ್ಲೂ ಖಾಸಗೀಕರಣ ಮಾಡಲು ಹೊರಟಿದೆ. ರಾಜ್ಯ ಮತ್ತು ಕೇಂದ್ರ ಸರಕಾರಗಳ ಜನ ವಿರೋಧಿ ಧೋರಣೆಗೆ ಜನರು ಬೇಸತ್ತಿದ್ದು ಅದು ಸ್ಥಳಿಯಾಡಳಿತ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಈಗ ನಡೆಯುವ ಚುನಾವಣೆಯಲ್ಲಿ ಆಸ್ಪೋಟವಾಗಲಿದೆ ಎಂದು ಹರಿಪ್ರಸಾದ್ ಉತ್ತರ ಕನ್ನಡವೂ ಸೇರಿದಂತೆ ರಾಜ್ಯದ ಹೆಚ್ಚಿನ ಕಡೆ ಕಾಂಗ್ರೆಸ್ ಗೆಲ್ಲಲಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದರು.

ಭಟ್ಕಳದಲ್ಲಿ ಹಿಂದಿನ ಅವಧಿಯಲ್ಲಿ ಶಾಸಕರಾಗಿದ್ದ ಮಂಕಾಳ ವೈದ್ಯ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ದೊಡ್ಡ ಪ್ರಮಾಣದಲ್ಲಿ ಮಾಡಿದ್ದರು. ಆದರೆ ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಮರಣ ಹೊಂದಿದ್ದ ಪರೇಶ್ ಮೇಸ್ತ ಪ್ರಕರಣ ಕೋಮು ರಾಜಕಾರಣಕ್ಕೆ ಬಳಸಿಕೊಂಡು ಚುನಾವಣೆ ಗೆದ್ದಿತು. ಕೇಂದ್ರ ಹಾಗೂ ರಾಜ್ಯ ಎರಡು ಕಡೆ ಬಿಜೆಪಿಯವರೆ ಆಡಳಿತ ನಡೆಸುತ್ತಿದ್ದರೂ ಪರೇಶ್ ಸಾವಿನ ಕಾರಣವಾಗಲಿ, ಆರೋಪಿಗಳನ್ನಾಗಲಿ ಪತ್ತೆಹಚ್ಚಲಾಗಿಲ್ಲ. ಸರಿಯಾದ ತನಿಖೆ ನಡೆದರೆ ಆರ್‌ಎಸ್‌ಎಸ್ ಮತ್ತು ಬಿಜೆಪಿಯವರೆ ಸಿಕ್ಕಿಬೀಳಲಿದ್ದಾರೆಂದು ಹೇಳಿದ ಹರಿಪ್ರಸಾದ್ ಸುಪ್ರೀಮ್ ಕೋರ್ಟ್ ಮೇಲ್ವಿಚಾರಣೆಯಲ್ಲಿ ಪರೇಶ್ ಸಾವಿನ ತನಿಖೆ ನಡೆಸುವಂತೆ ಆಗ್ರಹಿಸಿದರು.


ಇದನ್ನೂ ಓದಿ: ವಿಧಾನ ಪರಿಷತ್‌ಗೆ ಟಿಕೆಟ್ ಪೈಪೋಟಿ; ಉತ್ತರ ಕನ್ನಡ ಬಿಜೆಪಿಯಲ್ಲಿ ಬೆಂಕಿ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...