Homeಆರೋಗ್ಯಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

ಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

- Advertisement -
- Advertisement -

ಕೊರೋನಾ ವೈರಸ್‌ ಹರಡುತ್ತಿರುವ ಸಮಯದಲ್ಲಿ ಅದಕ್ಕಿಂತಲೂ ವೇಗವಾಗಿ ಅದರ ಕುರಿತ ಸುಳ್ಳು ಸುದ್ದಿಯಗಳು, ತಪ್ಪು ಅಭಿಪ್ರಾಯಗಳು ಹರಡುತ್ತಿವೆ. ಈ ಕುರಿತು ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದೆಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಒಂದಷ್ಟು ಸ್ಪಷ್ಟನೆಗಳನ್ನು ನೀಡಿದೆ. ಅವುಗಳೆಂದರೆ…

  • ಬೆಳ್ಳುಳ್ಳಿಯು ಆರೋಗ್ಯಕರ ಆಹಾರ; ಅದರಲ್ಲಿ ಹಲವು ಸೂಕ್ಷ್ಮಾಣುಗಳ ನಿರೋಧಕ ಶಕ್ತಿ ಇರಬಹುದು; ಆದರೆ ಅದನ್ನು ತಿನ್ನುವುದರಿಂದ ಹೊಸ ಕೊರೋನಾವೈರಸ್ ವಿರುದ್ಧ ರಕ್ಷಣೆ ಸಿಗುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ.
  • ಮೂಗನ್ನು ಪದೇ ಪದೇ ಸಲೈನ್‌ನಿಂದ (ಉಪ್ಪು ನೀರು, ಕ್ಷಾರ) ತೊಳೆಯುವುದರಿಂದ ಉಸಿರಾಟದ ಸೋಂಕು ತಡೆದ ಬಗ್ಗೆ ನಿದರ್ಶನಗಳಿಲ್ಲ.
  • ಚೀನಾದ ವಸ್ತುಗಳಿಂದ ಕೊರೋನಾವೈರಸ್ ಬರುತ್ತದೆ ಎಂದೇನಿಲ್ಲ; ಹಾಗಿದ್ದೂ ಚೀನಾದ ವಸ್ತುಗಳನ್ನು ಪಡೆಯುವಾಗ ಅದರ ಪೊಟ್ಟಣವನ್ನು ಶುಚಿಗೊಳಿಸಿ ಮತ್ತು ಅದನ್ನು ಮುಟ್ಟಿದ ಮೇಲೆ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತೊಳೆದುಕೊಳ್ಳಿರಿ.
  • ಹೊಸ ಕೊರೋನಾವೈರಸ್ ಉಷ್ಣ ಮತ್ತು ಶೀತ ಪ್ರದೇಶಗಳೆಂದು ಪರಿಗಣಿಸದೆ ಎಲ್ಲಾ ಪ್ರದೇಶಗಳಲ್ಲೂ ವರ್ಗಾವಣೆ ಆಗುತ್ತದೆ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಇದಕ್ಕಿರುವ ಅತ್ಯುತ್ತಮ ತಡೆ.
  • ಶೀತಗಾಳಿ ಮತ್ತು ಮಂಜಿನಿಂದ ಕೊರೋನಾವೈರಸ್ ಸಾಯುವುದಿಲ್ಲ.
  • ಬಿಸಿನೀರಿನ ಸ್ನಾನ ಮಾಡುವುದರಿಂದ ಹೊಸ ಕೊರೋನಾವೈರಸ್ ಕಾಯಿಲೆಯನ್ನು ತಡೆಯಲು ಆಗುವುದಿಲ್ಲ.
  • ಸೊಳ್ಳೆ ಕಡಿತದಿಂದ ಹೊಸ ಕೊರೋನಾವೈರಸ್ ಸೋಂಕು ಬರುವುದಿಲ್ಲ. ಇದು ಮುಖ್ಯತಃ ಶ್ವಾಸನಾಳದ ವೈರಸ್; ಸೋಂಕಿನ ವ್ಯಕ್ತಿ ಸೀನಿದಾಗ, ಕೆಮ್ಮಿದಾಗ ಹೊರಬೀಳುವ ಎಂಜಲಿನ ಕಣಗಳಿಂದ ಹರಡುತ್ತದೆ.
  • ಸಾಕುಪ್ರಾಣಿಗಳಿಗೆ ಕೊರೋನಾವೈರಸ್ ಬರುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ; ಆದಾಗ್ಯೂ ಅಂತಹ ಸಾಕುಪ್ರಾಣಿಗಳನ್ನು ಮುಟ್ಟಿದಾಗ ಚೆನ್ನಾಗಿ ಕೈ ತೊಳೆದುಕೊಳ್ಳಿ.
  • ಹೊಸ ಕೊರೋನಾವೈರಸ್ ಯಾವುದೇ ವಯಸ್ಸಿನ ವ್ಯಕ್ತಿಗೂ ಬರಬಹುದು.
  • ಆಂಟಿ-ಬಯಾಟಿಕ್‌ಗಳು ಕೇವಲ ಬ್ಯಾಕ್ಟೀರಿಯಾ ತಡೆಗೆ ನೆರವಾಗುತ್ತವೆಯೇ ಹೊರತು ಕೊರೋನಾವೈರಸ್ ವಿರುದ್ಧ ಬಳಕೆಗೆ ಬರುವುದಿಲ್ಲ.
  • ನ್ಯೂಮೋನಿಯ ಲಸಿಕೆಯು ಕೊರೋನಾವೈರಸ್ ಗೆ ಚಿಕಿತ್ಸೆ ಅಲ್ಲ. ಆದಾಗ್ಯೂ ನಿಮ್ಮ ಆರೋಗ್ಯಕ್ಕಾಗಿ ಉಸಿರಾಟ ಸಂಬಂಧಿ ಲಸಿಕೆ ಹಾಕಿಸಿಕೊಳ್ಳಬಹುದು.
  • ಥರ್ಮಲ್ ಸ್ಕಾನರ್‌ನಿಂದ ಜ್ವರ ಬಂದವರನ್ನು ಗುರುತಿಸಬಹುದೇ ಹೊರತು 10 ದಿನಗಳ ಒಳಗಿರುವ ಸೋಂಕು ಪೀಡಿತರನ್ನಲ್ಲ; ಅವರಲ್ಲಿ ಇನ್ನೂ ಜ್ವರ ಬರದೇ ಇರಲೂಬಹುದು. (ಸೋಂಕಿನಿಂದ ಜ್ವರ ಬರಲು ಎರಡರಿಂದ ಹತ್ತು ದಿನಗಳು ಬೇಕು).
  • ಹ್ಯಾಂಡ್ ಡ್ರೈಯರ್‌ಗಳಿಂದ ಈ ವೈರಸನ್ನು ಸಾಯಿಸಲು ಸಾಧ್ಯವಿಲ್ಲ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಸೂಕ್ತ ವಿಧಾನ.
  • ಅಲ್ಟ್ರಾವಯಲೆಟ್ ದೀಪದಿಂದ ಹೊಸ ಕೊರೋನಾವೈರಸ್‌ ಅನ್ನು ಸಾಯಿಸಲು ಬರುವುದಿಲ್ಲ. ಅದನ್ನು ಕೈ ಶುದ್ಧೀಕರಣಕ್ಕೆ ಬಳಸಬಾರದು.
  • ಹೊಸ ಕೊರೋನಾವೈರಸ್ಗೆ ಸದ್ಯಕ್ಕಂತೂ ಯಾವುದೇ ನಿರ್ದಿಷ್ಟ ಔಷಧ ಇಲ್ಲ. ಆದರೆ ಸೋಂಕು ಪೀಡಿತರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಮತ್ತು ಸೂಕ್ತ ಬೆಂಬಲ ನೀಡಬೇಕು.

ದೇಹದ ಮೇಲೆಲ್ಲ ಆಲ್ಕೋಹಾಲ್ ಅಥವಾ ಕ್ಲೋರಿನ್ ಸಿಂಪಡಣೆ ಮಾಡಿದರೆ ದೇಹದ ಒಳಗೆ ಅದಾಗಲೇ ಹೊಕ್ಕಿರಬಹುದಾದ ಹೊಸ ಕೊರೋನಾವೈರಸ್ ಸಾಯುವುದಿಲ್ಲ.

ಮೂಲ: ವಿಶ್ವ ಆರೋಗ್ಯ ಸಂಸ್ಥೆ ವೆಬ್‌ಸೈಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...